Homeಮುಖಪುಟಲೋಕಸಭಾ ಚುನಾವಣೆ: ಮೈತ್ರಿ ಏಕೆ ಆಗಲಿಲ್ಲ? ದೆಹಲಿಯಲ್ಲಿ ಗೆಲ್ಲುವವರು ಯಾರು?

ಲೋಕಸಭಾ ಚುನಾವಣೆ: ಮೈತ್ರಿ ಏಕೆ ಆಗಲಿಲ್ಲ? ದೆಹಲಿಯಲ್ಲಿ ಗೆಲ್ಲುವವರು ಯಾರು?

- Advertisement -
- Advertisement -

ದೇಶದ ಆಡಳಿತ ಚುಕ್ಕಾಣಿ ಇರುವ ರಾಜಧಾನಿ ದೆಹಲಿಯಲ್ಲಿ ಮೇ 12ರಂದು ಮತದಾನ ನಡೆಯಲಿದೆ. ಪ್ರತಿ ಸಲ ಅಚ್ಚರಿಯ ಫಲಿತಾಂಶ ನೀಡುವ ದೆಹಲಿಯ 7 ಕ್ಷೇತ್ರಗಳಲ್ಲಿ ಈ ಸಲ ಭಾರೀ ಕುತೂಹಲ ಉಂಟು ಮಾಡಿದೆ. ಮೋದಿ ಅಲೆ, ಕೇಜ್ರಿವಾಲ್ ಕೆಲಸ ಮತ್ತು ರಾಹುಲ್ ವಿಶ್ವಾಸದಲ್ಲಿ ಯಾವುದನ್ನು ಅಲ್ಲಿಯ ಜನ ಕೈ ಹಿಡಿಯುತ್ತಾರೆ ನೋಡಬೇಕಿದೆ.

2014ರಲ್ಲಿ 7ಕ್ಕೆ 7 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಮತ್ತೆ ಅದೇ ವಿಶ್ವಾಸದಲ್ಲಿದೆ. ಬಿಜೆಪಿ ಮಣಿಸಲು ಕಾಂಗ್ರೆಸ್‍ನೊಡನೆ ಹೇಗಾದರೂ ಮಾಡಿ ಮೈತ್ರಿ ಮಾಡಿಕೊಳ್ಳಬೇಕೆಂದು ದೆಹಲಿ ಸಿಎಂ ಆಮ್ ಆದ್ಮಿ ಪಾರ್ಟಿಯ ಅರವಿಂದ್ ಕೇಜ್ರಿವಾಲ್ ಪಟ್ಟ ಶ್ರಮ ವ್ಯರ್ಥವಾಗಿದೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಎಲ್ಲಾ 7 ಕ್ಷೇತ್ರಗಳಲ್ಲಿ ಆಪ್ ಎರಡನೇ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳಲ್ಪಟ್ಟಿತ್ತು. ಕಾಂಗ್ರೆಸ್ ಮತ್ತು ಆಪ್ ನಡುವಿನ ಮತವಿಭಜನೆಯಿಂದಾಗಿ ಬಿಜೆಪಿ ಸ್ವೀಪ್ ಮಾಡಿತ್ತು.

ಆದರೆ ಲೋಕಸಭಾ ಚುನಾವಣೆ ಮುಗಿದ ಕೇವಲ 9 ತಿಂಗಳ ನಂತರ ನಡೆದ ದೆಹಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವೂ 70 ಕ್ಷೇತ್ರಗಳ ಪೈಕಿ 67ನ್ನು ತನ್ನದಾಗಿಸಿಕೊಳ್ಳುವ ಮೂಲಕ ಅಭೂತಪೂರ್ವ ಸಾಧನೆ ಮಾಡಿತ್ತು. ತದನಂತರ ನಡೆದ ಕಾರ್ಪೋರೇಷನ್ ಚುಣಾವಣೆಗಳಲ್ಲಿ ಮತ್ತೆ ಬಿಜೆಪಿ ಮೇಲುಗೈ ಸಾಧಿಸಿತ್ತು. ಈಗಿನ ಲೋಕಸಭಾ ಚುನಾವಣೆಗೆ ಪೂರ್ವ ದಿಲ್ಲಿಯಿಂದ ಬಿಜೆಪಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ದಕ್ಷಿಣದಿಂದ ಮೀನಾಕ್ಷಿ ಲೇಖಿಯವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‍ನಿಂದ ಕಪಿಲ್ ಸಿಬಲ್, ಶೀಲಾ ದೀಕ್ಷಿತ್, ಅಜಯ್ ಮಾಕನ್ ಆಕರ್ಷಣೆಯಾದರೆ ಆಪ್‍ನಿಂದ ದಿಲೀಪ್ ಪಾಂಡೆ, ಅತಿಶಿ ಮರ್ಲೀನಾ ಪ್ರಮುಖ ಸ್ಪರ್ಧಿಗಳಾಗಿದ್ದಾರೆ.

ಕಳೆದ 20 ವರ್ಷದ ನಾಲ್ಕು ಚುನವಣೆಯ ಫಲಿತಾಂಶಗಳನ್ನು ನೋಡಿದರೆ ಪೂರ್ತಿ ದೆಹಲಿ ಜನ ಒಂದೇ ರೀತಿ ಯೋಚಿಸುತ್ತಾರೆ ಮತ್ತು ಒಂದೇ ಪಕ್ಷವನ್ನು ಆರಿಸುತ್ತಾರೆ ಎನ್ನುವ ರೀತಿಯ ಮತದಾನ ನಡೆದಿದೆ. 1999ರಲ್ಲಿ 7ಕ್ಕೆ 7ನ್ನು ಬಿಜೆಪಿ ಗೆದ್ದಿತ್ತು. 2004ರಲ್ಲಿ 7ರಲ್ಲಿ 6 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು. ದಕ್ಷಿಣ ದೆಹಲಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ವಿಜಯ್‍ಕುಮಾರ್ ಮಲ್ಹೋತ್ರ 18 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇನ್ನುಳಿದ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದವು. 2009ರ ಚುನಾವಣೆಯಲ್ಲಿ ಎಲ್ಲಾ 7 ಸ್ಥಾನಗಳಲ್ಲಿ ಮತ್ತೆ ಕಾಂಗ್ರೆಸ್ ಗೆಲುವು ಸಾಧಿಸಿತು. 2014ರ ಚುನಾವಣೆಗೆ ಬಂದರೆ 7 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಹೀನಾಯವಾಗಿ ಸೋತು ಮೂರನೇ ಸ್ಥಾನಕ್ಕೆ ಕುಸಿದರೆ ಬಿಜೆಪಿ 7ನ್ನು ಗೆದ್ದಿತ್ತು. ಆಪ್ ಪೈಪೋಟಿ ನೀಡಿದರೂ ಒಂದನ್ನು ಗೆಲ್ಲಲಾಗಲಿಲ್ಲ.

ಈ ಬಾರಿ ಇಲ್ಲಿ ಮತ್ತೆ ಪೈಪೋಟಿ ನಡೆದಿದೆ. 2014ರಲ್ಲಿದ್ದ ಮೋದಿ ಅಲೆ ಈ ಬಾರಿ ಇದೆಯೇ ಇಲ್ಲವೇ ಎಂಬುದನ್ನು ಫಲಿತಾಂಶದ ದಿನ ಮಾತ್ರ ಗಮನಿಸಬಹುದಾಗಿದೆ. ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ದೇಶ-ವಿದೇಶ ಗಮನ ಸೆಳೆಯುವಂತಹ ಒಳ್ಳೆಯ ಕೆಲಸ ಮಾಡಿರುವ ಆಮ್ ಆದ್ಮಿ ಪಕ್ಷಕ್ಕೆ ಜನ ಬೆಂಬಲಿಸುತ್ತಾರಾ ಎಂಬುದೂ ಪರೀಕ್ಷೆಗೊಳಪಡಲಿದೆ. ದೆಹಲಿ ಸರ್ಕಾರಿ ಶಾಲೆಗಳು ಮತ್ತು ಮೊಹಲ್ಲಾ ಕ್ಲಿನಿಕ್‍ಗಳು ಸಾಕಷ್ಟು ಒಳ್ಳೆಯ ಹೆಸರನ್ನು ಪಡೆದಿವೆ. ಇನ್ನು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತಿಸ್‍ಘಡದಲ್ಲಿ ಗೆಲುವಿನ ನಗೆ ಬೀರಿರುವ ಕಾಂಗ್ರೆಸ್ ದೆಹಲಿ ಗೆದ್ದುಕೊಳ್ಳುವ ಹುಮ್ಮಸ್ಸಿನಲ್ಲಿದೆ.

ಆದರೆ ಹಿಂದಿನ ಟ್ರೆಂಡ್ ಗಮನಿಸಿದರೆ ಈ ಬಾರಿ ಮತ್ತೆ 7ಕ್ಕೆ 7ನ್ನು ಬಿಜೆಪಿ ಗೆದ್ದುಕೊಳ್ಳುವಂತೆ ಕಾಣುತ್ತಿದೆ. ಏಕೆಂದರೆ ಕಳೆದ ಸಾರಿ ಅಲ್ಲಿ ಬಿಜೆಪಿ 46.40% ರಷ್ಟು ಮತಗಳನ್ನು ಪಡೆದಿದ್ದರೆ ಆಪ್ ಮತ್ತು ಕಾಂಗ್ರೆಸ್ ಸೇರಿ 32.90% + 15.10% = 48.00%ರಷ್ಟನ್ನು ಮಾತ್ರ ಪಡೆದುಕೊಂಡಿದ್ದವು. ಈ ಬಾರಿ ಈ ಎರಡು ಪಕ್ಷಗಳು ಮೈತ್ರಿ ಕೂಡ ಮಾಡಿಕೊಳ್ಳದೇ ಪ್ರತ್ಯೇಕವಾಗಿ ಚುನಾವಣೆಗೆ ಹೋಗಿರುವುದು ಸಹ ಬಿಜೆಪಿಗೆ ಅನುಕೂಲ ಮಾಡಿಕೊಡುವಂತಿದೆ. ಒಂದು ವೇಳೆ ಇದು ಬದಲಾದರೆ ಮತದಾರರ ಮನಸ್ಥಿತಿ ಕೂಡ ಬದಲಾಗಿದೆ ಎಂತಲೂ ಅರ್ಥೈಸಿಕೊಳ್ಳಬಹುದಾಗಿದೆ. ಇದರ ಹೊರತಾಗಿ ಅಚ್ಚರಿಯ ಫಲಿತಾಂಶ ಬರುವುದಾದಲ್ಲಿ ಮೇ 23ರವರೆಗೆ ಕಾಯಬೇಕು.

ಮೈತ್ರಿ ಏಕೆ ಆಗದಿದ್ದುದಕ್ಕೆ ಕಾಂಗ್ರೆಸ್‍ಗಿಂತ ಆಪ್ ಕಾರಣ ಹೌದೇ?

ಸಾಮಾಜಿಕ ಜಾಲತಾಣಗಳಲ್ಲಿ ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್‍ಗೆ ಮೈತ್ರಿಯ ಆಹ್ವಾನ ನೀಡುವುದು, ಅದಕ್ಕೆ ಕಾಂಗ್ರೆಸ್‍ನಿಂದ ಯಾವ ಪ್ರತಿಕ್ರಿಯೆಯೂ ಕಾಣದಿರುವುದು ಅಥವಾ ಟಿವಿ ವರದಿಗಾರರಿಗೆ ಶೀಲಾ ದೀಕ್ಷಿತ್ ಮೈತ್ರಿ ಇಲ್ಲ ಎಂದು ಹೇಳುವುದು ಇದನ್ನು ಎಲ್ಲರೂ ನೋಡಿದ್ದಾರೆ. ವಾಸ್ತವವೇನೆಂದರೆ, ಮಾಧ್ಯಮಗಳ ಮೂಲಕ ಪದೇ ಪದೇ ಮೈತ್ರಿಯ ಆಹ್ವಾನ ನೀಡಿದ್ದ ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್ ನಾಯಕತ್ವದ ಜೊತೆಗೆ ಅಂತಹ ಪ್ರಯತ್ನವನ್ನು ಮಾಡಲಿಲ್ಲವೆಂದು ಮೂಲಗಳು ತಿಳಿಸುತ್ತವೆ. ತಾನು ಬಿಜೆಪಿ ವಿರುದ್ಧದ ಮೈತ್ರಿಗೆ ತುದಿಗಾಲಿನಲ್ಲಿದ್ದೇನೆಂದು ಹೇಳುವುದಕ್ಕೆ ಆಪ್ ಮಾಡಿದ ಪ್ರಯತ್ನ ಎಷ್ಟಿತ್ತೋ, ಅಷ್ಟು ಪ್ರಯತ್ನ ನಿಜಕ್ಕೂ ಕಾಂಗ್ರೆಸ್ ಜೊತೆಗೆ ಮಾತುಕತೆಗೆ ಇರಲಿಲ್ಲವೆಂಬುದು ದೆಹಲಿ ವರ್ತುಲದ ಬಹಳಷ್ಟು ಜನರ ಅಂಬೋಣ.

ಎರಡನೆಯದಾಗಿ, ತನ್ನ ನೆಲೆಯೇ ಇಲ್ಲದ ಇತರ ರಾಜ್ಯಗಳು ಮತ್ತು ದೆಹಲಿಗಳ ಮೈತ್ರಿ ಒಟ್ಟಿಗೇ ಆಗಬೇಕೆಂಬುದು ಆಪ್‍ನ ನಿಲುವಾಗಿತ್ತು. ಆದರೆ, ಕಾಂಗ್ರೆಸ್ ತಮ್ಮದು ರಾಜ್ಯವಾರು ಮೈತ್ರಿಯಾದ್ದರಿಂದ, ದೆಹಲಿಯ ಕುರಿತು ಮಾತ್ರ ಮಾತನಾಡಿ ಎಂದಿತು. ಇದನ್ನೇ ರಾಹುಲ್‍ಗಾಂಧಿ ಟ್ವಿಟ್ಟರ್ ಮೂಲಕ ಹೇಳಿದರು. ಆಪ್‍ಗೆ 4 ಮತ್ತು ಕಾಂಗ್ರೆಸ್‍ಗೆ 3 ಎಂಬುದು ಅವರ ಪ್ರಸ್ತಾಪವಾಗಿತ್ತು. ಇದನ್ನು ಆಪ್ ತಿರಸ್ಕರಿಸಿತ್ತು. ಒಂದು ರೀತಿಯಲ್ಲಿ ಇದು ಹೇಗಿತ್ತೆಂದರೆ ಜೆಡಿಎಸ್ ಪಕ್ಷವು ಕಾಂಗ್ರೆಸ್ ಜೊತೆಗಿನ ಕರ್ನಾಟಕದ ಮೈತ್ರಿಗೆ, ಆಂಧ್ರಪ್ರದೇಶದಲ್ಲೂ ನಾಲ್ಕು ಸೀಟು ಬಿಟ್ಟುಕೊಡುವ ಷರತ್ತು ಹಾಕಿದರೆ ಹೇಗಿರುತ್ತದೋ ಹಾಗೆ. ಒಟ್ಟಾರೆಯಾಗಿ ಮೈತ್ರಿ ಆಗಲಿಲ್ಲ.

ಸರಿಯಾದ ಮೈತ್ರಿ ಆಗಿದ್ದರೆ 7ಕ್ಕೆ 7 ಗೆಲ್ಲಬಹುದಾಗಿದ್ದ ಕಾಂಗ್ರೆಸ್-ಆಪ್ ಪಕ್ಷಗಳು ಈಗ ಹೆಚ್ಚೆಂದರೆ ಒಂದೆರಡನ್ನು ಗೆಲ್ಲಬಹುದು, ಇಲ್ಲವಾದರೆ ಅದೂ ಇಲ್ಲ ಎಂಬ ಪರಿಸ್ಥಿತಿಯನ್ನು ತಂದುಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತುಮಕೂರಿನಲ್ಲಿ ಮಲಹೊರುವ ಪದ್ದತಿ ಜೀವಂತ; ದಲಿತ ಕಾರ್ಮಿಕರನ್ನು ಶೌಚಗುಂಡಿ ಸ್ವಚ್ಛತೆಗೆ ನಿಯೋಜಿಸಿದ ಕೆಇಬಿ ಇಂಜಿನಿಯರ್ಸ್ ಸಂಘ

ದಶಕಗಳ ಹಿಂದೆಯೇ ತಲೆ ಮೇಲೆ ಮಲಹೊರುವ ಅನಿಷ್ಠ ಪದ್ಧತಿಯನ್ನು ದೇಶದಲ್ಲಿ ನಿಷೇಧಿಸಲಾಗಿದೆ. ಕಾನೂನಿನ ಪ್ರಕಾರ ಈ ಅಮಾನವೀಯ ಪದ್ಧತಿ ನಿಷೇದಗೊಂಡಿದ್ದರು ರಾಜ್ಯದಲ್ಲಿ ಮಾತ್ರ ಇನ್ನೂ ಜೀವಂತವಾಗಿರುವುದು ತುಮಕೂರಿನಲ್ಲಿ ಮತ್ತೊಮ್ಮೆ ಬಹಿರಂಗವಾಗಿದೆ. ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ್...

ವರ್ಷ ಪೂರೈಸಿದ ಎಸ್‌ಐಆರ್‌ ಪ್ರಕ್ರಿಯೆ; ಸುಮಾರು 6 ಕೋಟಿ ಹೆಸರುಗಳು ಡಿಲೀಟ್

ಸುಮಾರು ಆರು ಕೋಟಿ ಮತದಾರರನ್ನು ಅಳಿಸಲು ಕಾರಣವಾದ, ವಿರೋಧ ಪಕ್ಷಗಳು ಮತ್ತು ಚುನಾವಣಾ ಆಯೋಗದ ನಡುವೆ ಘರ್ಷಣೆಗೆ ಕಾರಣವಾದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು 19 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ...

ರಾಮ ಮಂದಿರ ಹಗರಣ | ಶಿವಸೇನೆ ಕೊಟ್ಟ 1 ಕೋಟಿ ರೂ.ಗೆ ರಸೀದಿ ಸಿಕ್ಕಿಲ್ಲ : ಸಂಜಯ್ ರಾವತ್

ಶ್ರೀ ರಾಮ ಜನ್ಮಭೂಮಿ ತೀರ್ಥ ಕ್ಷೇತ್ರಕ್ಕೆ ನೀಡಿದ 1 ಕೋಟಿ ರೂಪಾಯಿ ದೇಣಿಗೆಗೆ ತಮ್ಮ ಪಕ್ಷ ಶಿವಸೇನೆ (ಯುಬಿಟಿ) ರಸೀದಿಯನ್ನು ಸ್ವೀಕರಿಸಿಲ್ಲ ಎಂದು ಸಂಜಯ್ ರಾವತ್ ಶುಕ್ರವಾರ (ಜೂ.26) ಹೇಳಿದ್ದಾರೆ. ರಾಮ ಮಂದಿರದ ದೇಣಿಗೆ...

ರಾಮ ಮಂದಿರ ಹಗರಣ: ಶ್ರೀರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್ ಮತ್ತು ಟ್ರಸ್ಟಿ ಅನಿಲ್ ಮಿಶ್ರಾ ರಾಜೀನಾಮೆ

ಶ್ರೀ ರಾಮ ಜನ್ಮಭೂಮಿ ಟ್ರಸ್ಟ್‌ನ ಪ್ರಧಾನ ಕಾರ್ಯದರ್ಶಿ ಚಂಪತ್ ರಾಯ್, ರಾಮ ಮಂದಿರ ದೇಣಿಗೆ ಕಳ್ಳತನ ಪ್ರಕರಣಕ್ಕೆ ಸಂಬಂಧಿಸಿದಂತೆ ನೈತಿಕ ಹೊಣೆ ಹೊತ್ತು, ಸದಸ್ಯ ಟ್ರಸ್ಟಿ ಅನಿಲ್ ಮಿಶ್ರಾ ಅವರೊಂದಿಗೆ ಶುಕ್ರವಾರ ರಾಜೀನಾಮೆ...

‘ಕೂಡಿ ಹಾಕಿ ಥಳಿಸುತ್ತಿದ್ದರು, ತಪ್ಪಿಸಿಕೊಳ್ಳದಂತೆ ನಾಯಿ ಬಿಟ್ಟಿದ್ದರು’: ಭೀಕರ ಶೋಷಣೆಯಿಂದ 12 ಜೀತ ಕಾರ್ಮಿಕರ ರಕ್ಷಣೆ

ಮೂರು ತಿಂಗಳ ಕಾಲ 68 ವರ್ಷದ ಮೆಹರ್ಬಾನ್ ಶಾ ಅನಿಶ್ಚಿತತೆಯಲ್ಲಿ ಜೀವನ ನಡೆಸುತ್ತಿದ್ದರು. ದುಡಿಯಲು ಹೋಗಿದ್ದ ಅವರ ಕಿರಿಯ ಮಗ ದಿಲ್ಶಾದ್ ಮೊಹಮ್ಮದ್ ಜೀವಂತವಾಗಿದ್ದಾನಾ?, ಇಲ್ಲಾ ಮರಣ ಹೊಂದಿದ್ದಾನಾ? ಎಂಬುವುದು ಅವರಿಗೆ ಗೊತ್ತಿರಲಿಲ್ಲ. 24...

ಅಯ್ಯೋಧ್ಯೆ ರಾಮ ಮಂದಿರ ಹಗರಣ: ಎಂಟು ಜನರ ವಿರುದ್ಧ ಎಫ್‌ಐಆರ್; ಪ್ರಭಾವಿ ವ್ಯಕ್ತಿಗಳನ್ನು ರಕ್ಷಿಸಲಾಗಿದೆ ಎಂದು ಪ್ರತಿಪಕ್ಷಗಳ ಆರೋಪ 

ಅಯೋಧ್ಯೆ: ವಿಶ್ವದಾದ್ಯಂತ ಕೋಟ್ಯಂತರ ಭಕ್ತರ ಆರಾಧ್ಯ ದೈವವಾಗಿರುವ ಅಯೋಧ್ಯೆಯ ಶ್ರೀ ರಾಮ ಮಂದಿರದಲ್ಲಿ ಭಕ್ತರು ಸಮರ್ಪಿಸಿದ ನಗದು, ಚಿನ್ನಾಭರಣ ಸೇರಿದಂತೆ ಇತರೆ ಬೆಲೆಬಾಳುವ ಕಾಣಿಕೆಗಳ ಕಳ್ಳತನ ಮತ್ತು ಹಣ ದುರುಪಯೋಗದ ಗಂಭೀರ ಹಗರಣವೊಂದು...

ಪೋಕ್ಸೋ ಕೇಸ್ : ವಚನಾನಂದ ಸ್ವಾಮಿಯ ನಿರೀಕ್ಷಣಾ ಜಾಮೀನು ರದ್ದು

ಪೋಕ್ಸೋ ಪ್ರಕರಣದಲ್ಲಿ ವಚನಾನಂದ ಸ್ವಾಮಿಗೆ ಸೆಷನ್ಸ್ ಕೋರ್ಟ್ ನೀಡಿದ್ದ ನಿರೀಕ್ಷಣಾ ಜಾಮೀನನ್ನು ಹೈಕೋರ್ಟ್ ಗುರುವಾರ (ಜೂನ್ 25) ರದ್ದುಗೊಳಿಸಿದೆ. ಅಲ್ಲದೆ, ಸೆಷನ್ಸ್ ಕೋರ್ಟ್ ಜಾಮೀನು ನೀಡಿದ ರೀತಿಯ ಬಗ್ಗೆ ತೀವ್ರ ಕಳವಳ ಮತ್ತು...

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...