Homeಮುಖಪುಟಲೋಕಸಭಾ ಚುನಾವಣೆ: ಮೈತ್ರಿ ಏಕೆ ಆಗಲಿಲ್ಲ? ದೆಹಲಿಯಲ್ಲಿ ಗೆಲ್ಲುವವರು ಯಾರು?

ಲೋಕಸಭಾ ಚುನಾವಣೆ: ಮೈತ್ರಿ ಏಕೆ ಆಗಲಿಲ್ಲ? ದೆಹಲಿಯಲ್ಲಿ ಗೆಲ್ಲುವವರು ಯಾರು?

- Advertisement -
- Advertisement -

ದೇಶದ ಆಡಳಿತ ಚುಕ್ಕಾಣಿ ಇರುವ ರಾಜಧಾನಿ ದೆಹಲಿಯಲ್ಲಿ ಮೇ 12ರಂದು ಮತದಾನ ನಡೆಯಲಿದೆ. ಪ್ರತಿ ಸಲ ಅಚ್ಚರಿಯ ಫಲಿತಾಂಶ ನೀಡುವ ದೆಹಲಿಯ 7 ಕ್ಷೇತ್ರಗಳಲ್ಲಿ ಈ ಸಲ ಭಾರೀ ಕುತೂಹಲ ಉಂಟು ಮಾಡಿದೆ. ಮೋದಿ ಅಲೆ, ಕೇಜ್ರಿವಾಲ್ ಕೆಲಸ ಮತ್ತು ರಾಹುಲ್ ವಿಶ್ವಾಸದಲ್ಲಿ ಯಾವುದನ್ನು ಅಲ್ಲಿಯ ಜನ ಕೈ ಹಿಡಿಯುತ್ತಾರೆ ನೋಡಬೇಕಿದೆ.

2014ರಲ್ಲಿ 7ಕ್ಕೆ 7 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಮತ್ತೆ ಅದೇ ವಿಶ್ವಾಸದಲ್ಲಿದೆ. ಬಿಜೆಪಿ ಮಣಿಸಲು ಕಾಂಗ್ರೆಸ್‍ನೊಡನೆ ಹೇಗಾದರೂ ಮಾಡಿ ಮೈತ್ರಿ ಮಾಡಿಕೊಳ್ಳಬೇಕೆಂದು ದೆಹಲಿ ಸಿಎಂ ಆಮ್ ಆದ್ಮಿ ಪಾರ್ಟಿಯ ಅರವಿಂದ್ ಕೇಜ್ರಿವಾಲ್ ಪಟ್ಟ ಶ್ರಮ ವ್ಯರ್ಥವಾಗಿದೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಎಲ್ಲಾ 7 ಕ್ಷೇತ್ರಗಳಲ್ಲಿ ಆಪ್ ಎರಡನೇ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳಲ್ಪಟ್ಟಿತ್ತು. ಕಾಂಗ್ರೆಸ್ ಮತ್ತು ಆಪ್ ನಡುವಿನ ಮತವಿಭಜನೆಯಿಂದಾಗಿ ಬಿಜೆಪಿ ಸ್ವೀಪ್ ಮಾಡಿತ್ತು.

ಆದರೆ ಲೋಕಸಭಾ ಚುನಾವಣೆ ಮುಗಿದ ಕೇವಲ 9 ತಿಂಗಳ ನಂತರ ನಡೆದ ದೆಹಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವೂ 70 ಕ್ಷೇತ್ರಗಳ ಪೈಕಿ 67ನ್ನು ತನ್ನದಾಗಿಸಿಕೊಳ್ಳುವ ಮೂಲಕ ಅಭೂತಪೂರ್ವ ಸಾಧನೆ ಮಾಡಿತ್ತು. ತದನಂತರ ನಡೆದ ಕಾರ್ಪೋರೇಷನ್ ಚುಣಾವಣೆಗಳಲ್ಲಿ ಮತ್ತೆ ಬಿಜೆಪಿ ಮೇಲುಗೈ ಸಾಧಿಸಿತ್ತು. ಈಗಿನ ಲೋಕಸಭಾ ಚುನಾವಣೆಗೆ ಪೂರ್ವ ದಿಲ್ಲಿಯಿಂದ ಬಿಜೆಪಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ದಕ್ಷಿಣದಿಂದ ಮೀನಾಕ್ಷಿ ಲೇಖಿಯವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‍ನಿಂದ ಕಪಿಲ್ ಸಿಬಲ್, ಶೀಲಾ ದೀಕ್ಷಿತ್, ಅಜಯ್ ಮಾಕನ್ ಆಕರ್ಷಣೆಯಾದರೆ ಆಪ್‍ನಿಂದ ದಿಲೀಪ್ ಪಾಂಡೆ, ಅತಿಶಿ ಮರ್ಲೀನಾ ಪ್ರಮುಖ ಸ್ಪರ್ಧಿಗಳಾಗಿದ್ದಾರೆ.

ಕಳೆದ 20 ವರ್ಷದ ನಾಲ್ಕು ಚುನವಣೆಯ ಫಲಿತಾಂಶಗಳನ್ನು ನೋಡಿದರೆ ಪೂರ್ತಿ ದೆಹಲಿ ಜನ ಒಂದೇ ರೀತಿ ಯೋಚಿಸುತ್ತಾರೆ ಮತ್ತು ಒಂದೇ ಪಕ್ಷವನ್ನು ಆರಿಸುತ್ತಾರೆ ಎನ್ನುವ ರೀತಿಯ ಮತದಾನ ನಡೆದಿದೆ. 1999ರಲ್ಲಿ 7ಕ್ಕೆ 7ನ್ನು ಬಿಜೆಪಿ ಗೆದ್ದಿತ್ತು. 2004ರಲ್ಲಿ 7ರಲ್ಲಿ 6 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು. ದಕ್ಷಿಣ ದೆಹಲಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ವಿಜಯ್‍ಕುಮಾರ್ ಮಲ್ಹೋತ್ರ 18 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇನ್ನುಳಿದ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದವು. 2009ರ ಚುನಾವಣೆಯಲ್ಲಿ ಎಲ್ಲಾ 7 ಸ್ಥಾನಗಳಲ್ಲಿ ಮತ್ತೆ ಕಾಂಗ್ರೆಸ್ ಗೆಲುವು ಸಾಧಿಸಿತು. 2014ರ ಚುನಾವಣೆಗೆ ಬಂದರೆ 7 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಹೀನಾಯವಾಗಿ ಸೋತು ಮೂರನೇ ಸ್ಥಾನಕ್ಕೆ ಕುಸಿದರೆ ಬಿಜೆಪಿ 7ನ್ನು ಗೆದ್ದಿತ್ತು. ಆಪ್ ಪೈಪೋಟಿ ನೀಡಿದರೂ ಒಂದನ್ನು ಗೆಲ್ಲಲಾಗಲಿಲ್ಲ.

ಈ ಬಾರಿ ಇಲ್ಲಿ ಮತ್ತೆ ಪೈಪೋಟಿ ನಡೆದಿದೆ. 2014ರಲ್ಲಿದ್ದ ಮೋದಿ ಅಲೆ ಈ ಬಾರಿ ಇದೆಯೇ ಇಲ್ಲವೇ ಎಂಬುದನ್ನು ಫಲಿತಾಂಶದ ದಿನ ಮಾತ್ರ ಗಮನಿಸಬಹುದಾಗಿದೆ. ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ದೇಶ-ವಿದೇಶ ಗಮನ ಸೆಳೆಯುವಂತಹ ಒಳ್ಳೆಯ ಕೆಲಸ ಮಾಡಿರುವ ಆಮ್ ಆದ್ಮಿ ಪಕ್ಷಕ್ಕೆ ಜನ ಬೆಂಬಲಿಸುತ್ತಾರಾ ಎಂಬುದೂ ಪರೀಕ್ಷೆಗೊಳಪಡಲಿದೆ. ದೆಹಲಿ ಸರ್ಕಾರಿ ಶಾಲೆಗಳು ಮತ್ತು ಮೊಹಲ್ಲಾ ಕ್ಲಿನಿಕ್‍ಗಳು ಸಾಕಷ್ಟು ಒಳ್ಳೆಯ ಹೆಸರನ್ನು ಪಡೆದಿವೆ. ಇನ್ನು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತಿಸ್‍ಘಡದಲ್ಲಿ ಗೆಲುವಿನ ನಗೆ ಬೀರಿರುವ ಕಾಂಗ್ರೆಸ್ ದೆಹಲಿ ಗೆದ್ದುಕೊಳ್ಳುವ ಹುಮ್ಮಸ್ಸಿನಲ್ಲಿದೆ.

ಆದರೆ ಹಿಂದಿನ ಟ್ರೆಂಡ್ ಗಮನಿಸಿದರೆ ಈ ಬಾರಿ ಮತ್ತೆ 7ಕ್ಕೆ 7ನ್ನು ಬಿಜೆಪಿ ಗೆದ್ದುಕೊಳ್ಳುವಂತೆ ಕಾಣುತ್ತಿದೆ. ಏಕೆಂದರೆ ಕಳೆದ ಸಾರಿ ಅಲ್ಲಿ ಬಿಜೆಪಿ 46.40% ರಷ್ಟು ಮತಗಳನ್ನು ಪಡೆದಿದ್ದರೆ ಆಪ್ ಮತ್ತು ಕಾಂಗ್ರೆಸ್ ಸೇರಿ 32.90% + 15.10% = 48.00%ರಷ್ಟನ್ನು ಮಾತ್ರ ಪಡೆದುಕೊಂಡಿದ್ದವು. ಈ ಬಾರಿ ಈ ಎರಡು ಪಕ್ಷಗಳು ಮೈತ್ರಿ ಕೂಡ ಮಾಡಿಕೊಳ್ಳದೇ ಪ್ರತ್ಯೇಕವಾಗಿ ಚುನಾವಣೆಗೆ ಹೋಗಿರುವುದು ಸಹ ಬಿಜೆಪಿಗೆ ಅನುಕೂಲ ಮಾಡಿಕೊಡುವಂತಿದೆ. ಒಂದು ವೇಳೆ ಇದು ಬದಲಾದರೆ ಮತದಾರರ ಮನಸ್ಥಿತಿ ಕೂಡ ಬದಲಾಗಿದೆ ಎಂತಲೂ ಅರ್ಥೈಸಿಕೊಳ್ಳಬಹುದಾಗಿದೆ. ಇದರ ಹೊರತಾಗಿ ಅಚ್ಚರಿಯ ಫಲಿತಾಂಶ ಬರುವುದಾದಲ್ಲಿ ಮೇ 23ರವರೆಗೆ ಕಾಯಬೇಕು.

ಮೈತ್ರಿ ಏಕೆ ಆಗದಿದ್ದುದಕ್ಕೆ ಕಾಂಗ್ರೆಸ್‍ಗಿಂತ ಆಪ್ ಕಾರಣ ಹೌದೇ?

ಸಾಮಾಜಿಕ ಜಾಲತಾಣಗಳಲ್ಲಿ ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್‍ಗೆ ಮೈತ್ರಿಯ ಆಹ್ವಾನ ನೀಡುವುದು, ಅದಕ್ಕೆ ಕಾಂಗ್ರೆಸ್‍ನಿಂದ ಯಾವ ಪ್ರತಿಕ್ರಿಯೆಯೂ ಕಾಣದಿರುವುದು ಅಥವಾ ಟಿವಿ ವರದಿಗಾರರಿಗೆ ಶೀಲಾ ದೀಕ್ಷಿತ್ ಮೈತ್ರಿ ಇಲ್ಲ ಎಂದು ಹೇಳುವುದು ಇದನ್ನು ಎಲ್ಲರೂ ನೋಡಿದ್ದಾರೆ. ವಾಸ್ತವವೇನೆಂದರೆ, ಮಾಧ್ಯಮಗಳ ಮೂಲಕ ಪದೇ ಪದೇ ಮೈತ್ರಿಯ ಆಹ್ವಾನ ನೀಡಿದ್ದ ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್ ನಾಯಕತ್ವದ ಜೊತೆಗೆ ಅಂತಹ ಪ್ರಯತ್ನವನ್ನು ಮಾಡಲಿಲ್ಲವೆಂದು ಮೂಲಗಳು ತಿಳಿಸುತ್ತವೆ. ತಾನು ಬಿಜೆಪಿ ವಿರುದ್ಧದ ಮೈತ್ರಿಗೆ ತುದಿಗಾಲಿನಲ್ಲಿದ್ದೇನೆಂದು ಹೇಳುವುದಕ್ಕೆ ಆಪ್ ಮಾಡಿದ ಪ್ರಯತ್ನ ಎಷ್ಟಿತ್ತೋ, ಅಷ್ಟು ಪ್ರಯತ್ನ ನಿಜಕ್ಕೂ ಕಾಂಗ್ರೆಸ್ ಜೊತೆಗೆ ಮಾತುಕತೆಗೆ ಇರಲಿಲ್ಲವೆಂಬುದು ದೆಹಲಿ ವರ್ತುಲದ ಬಹಳಷ್ಟು ಜನರ ಅಂಬೋಣ.

ಎರಡನೆಯದಾಗಿ, ತನ್ನ ನೆಲೆಯೇ ಇಲ್ಲದ ಇತರ ರಾಜ್ಯಗಳು ಮತ್ತು ದೆಹಲಿಗಳ ಮೈತ್ರಿ ಒಟ್ಟಿಗೇ ಆಗಬೇಕೆಂಬುದು ಆಪ್‍ನ ನಿಲುವಾಗಿತ್ತು. ಆದರೆ, ಕಾಂಗ್ರೆಸ್ ತಮ್ಮದು ರಾಜ್ಯವಾರು ಮೈತ್ರಿಯಾದ್ದರಿಂದ, ದೆಹಲಿಯ ಕುರಿತು ಮಾತ್ರ ಮಾತನಾಡಿ ಎಂದಿತು. ಇದನ್ನೇ ರಾಹುಲ್‍ಗಾಂಧಿ ಟ್ವಿಟ್ಟರ್ ಮೂಲಕ ಹೇಳಿದರು. ಆಪ್‍ಗೆ 4 ಮತ್ತು ಕಾಂಗ್ರೆಸ್‍ಗೆ 3 ಎಂಬುದು ಅವರ ಪ್ರಸ್ತಾಪವಾಗಿತ್ತು. ಇದನ್ನು ಆಪ್ ತಿರಸ್ಕರಿಸಿತ್ತು. ಒಂದು ರೀತಿಯಲ್ಲಿ ಇದು ಹೇಗಿತ್ತೆಂದರೆ ಜೆಡಿಎಸ್ ಪಕ್ಷವು ಕಾಂಗ್ರೆಸ್ ಜೊತೆಗಿನ ಕರ್ನಾಟಕದ ಮೈತ್ರಿಗೆ, ಆಂಧ್ರಪ್ರದೇಶದಲ್ಲೂ ನಾಲ್ಕು ಸೀಟು ಬಿಟ್ಟುಕೊಡುವ ಷರತ್ತು ಹಾಕಿದರೆ ಹೇಗಿರುತ್ತದೋ ಹಾಗೆ. ಒಟ್ಟಾರೆಯಾಗಿ ಮೈತ್ರಿ ಆಗಲಿಲ್ಲ.

ಸರಿಯಾದ ಮೈತ್ರಿ ಆಗಿದ್ದರೆ 7ಕ್ಕೆ 7 ಗೆಲ್ಲಬಹುದಾಗಿದ್ದ ಕಾಂಗ್ರೆಸ್-ಆಪ್ ಪಕ್ಷಗಳು ಈಗ ಹೆಚ್ಚೆಂದರೆ ಒಂದೆರಡನ್ನು ಗೆಲ್ಲಬಹುದು, ಇಲ್ಲವಾದರೆ ಅದೂ ಇಲ್ಲ ಎಂಬ ಪರಿಸ್ಥಿತಿಯನ್ನು ತಂದುಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...