Homeಮುಖಪುಟಲೋಕಸಭಾ ಚುನಾವಣೆ: ಮೈತ್ರಿ ಏಕೆ ಆಗಲಿಲ್ಲ? ದೆಹಲಿಯಲ್ಲಿ ಗೆಲ್ಲುವವರು ಯಾರು?

ಲೋಕಸಭಾ ಚುನಾವಣೆ: ಮೈತ್ರಿ ಏಕೆ ಆಗಲಿಲ್ಲ? ದೆಹಲಿಯಲ್ಲಿ ಗೆಲ್ಲುವವರು ಯಾರು?

- Advertisement -
- Advertisement -

ದೇಶದ ಆಡಳಿತ ಚುಕ್ಕಾಣಿ ಇರುವ ರಾಜಧಾನಿ ದೆಹಲಿಯಲ್ಲಿ ಮೇ 12ರಂದು ಮತದಾನ ನಡೆಯಲಿದೆ. ಪ್ರತಿ ಸಲ ಅಚ್ಚರಿಯ ಫಲಿತಾಂಶ ನೀಡುವ ದೆಹಲಿಯ 7 ಕ್ಷೇತ್ರಗಳಲ್ಲಿ ಈ ಸಲ ಭಾರೀ ಕುತೂಹಲ ಉಂಟು ಮಾಡಿದೆ. ಮೋದಿ ಅಲೆ, ಕೇಜ್ರಿವಾಲ್ ಕೆಲಸ ಮತ್ತು ರಾಹುಲ್ ವಿಶ್ವಾಸದಲ್ಲಿ ಯಾವುದನ್ನು ಅಲ್ಲಿಯ ಜನ ಕೈ ಹಿಡಿಯುತ್ತಾರೆ ನೋಡಬೇಕಿದೆ.

2014ರಲ್ಲಿ 7ಕ್ಕೆ 7 ಸ್ಥಾನಗಳನ್ನು ಗೆದ್ದಿದ್ದ ಬಿಜೆಪಿ ಮತ್ತೆ ಅದೇ ವಿಶ್ವಾಸದಲ್ಲಿದೆ. ಬಿಜೆಪಿ ಮಣಿಸಲು ಕಾಂಗ್ರೆಸ್‍ನೊಡನೆ ಹೇಗಾದರೂ ಮಾಡಿ ಮೈತ್ರಿ ಮಾಡಿಕೊಳ್ಳಬೇಕೆಂದು ದೆಹಲಿ ಸಿಎಂ ಆಮ್ ಆದ್ಮಿ ಪಾರ್ಟಿಯ ಅರವಿಂದ್ ಕೇಜ್ರಿವಾಲ್ ಪಟ್ಟ ಶ್ರಮ ವ್ಯರ್ಥವಾಗಿದೆ. ಏಕೆಂದರೆ ಕಳೆದ ಚುನಾವಣೆಯಲ್ಲಿ ಎಲ್ಲಾ 7 ಕ್ಷೇತ್ರಗಳಲ್ಲಿ ಆಪ್ ಎರಡನೇ ಸ್ಥಾನದಲ್ಲಿದ್ದರೆ, ಕಾಂಗ್ರೆಸ್ ಮೂರನೇ ಸ್ಥಾನಕ್ಕೆ ತಳಲ್ಪಟ್ಟಿತ್ತು. ಕಾಂಗ್ರೆಸ್ ಮತ್ತು ಆಪ್ ನಡುವಿನ ಮತವಿಭಜನೆಯಿಂದಾಗಿ ಬಿಜೆಪಿ ಸ್ವೀಪ್ ಮಾಡಿತ್ತು.

ಆದರೆ ಲೋಕಸಭಾ ಚುನಾವಣೆ ಮುಗಿದ ಕೇವಲ 9 ತಿಂಗಳ ನಂತರ ನಡೆದ ದೆಹಲಿ ರಾಜ್ಯ ವಿಧಾನಸಭಾ ಚುನಾವಣೆಯಲ್ಲಿ ಆಮ್ ಆದ್ಮಿ ಪಕ್ಷವೂ 70 ಕ್ಷೇತ್ರಗಳ ಪೈಕಿ 67ನ್ನು ತನ್ನದಾಗಿಸಿಕೊಳ್ಳುವ ಮೂಲಕ ಅಭೂತಪೂರ್ವ ಸಾಧನೆ ಮಾಡಿತ್ತು. ತದನಂತರ ನಡೆದ ಕಾರ್ಪೋರೇಷನ್ ಚುಣಾವಣೆಗಳಲ್ಲಿ ಮತ್ತೆ ಬಿಜೆಪಿ ಮೇಲುಗೈ ಸಾಧಿಸಿತ್ತು. ಈಗಿನ ಲೋಕಸಭಾ ಚುನಾವಣೆಗೆ ಪೂರ್ವ ದಿಲ್ಲಿಯಿಂದ ಬಿಜೆಪಿ ಮಾಜಿ ಕ್ರಿಕೆಟಿಗ ಗೌತಮ್ ಗಂಭೀರ್, ದಕ್ಷಿಣದಿಂದ ಮೀನಾಕ್ಷಿ ಲೇಖಿಯವರನ್ನು ಕಣಕ್ಕಿಳಿಸಿದೆ. ಕಾಂಗ್ರೆಸ್‍ನಿಂದ ಕಪಿಲ್ ಸಿಬಲ್, ಶೀಲಾ ದೀಕ್ಷಿತ್, ಅಜಯ್ ಮಾಕನ್ ಆಕರ್ಷಣೆಯಾದರೆ ಆಪ್‍ನಿಂದ ದಿಲೀಪ್ ಪಾಂಡೆ, ಅತಿಶಿ ಮರ್ಲೀನಾ ಪ್ರಮುಖ ಸ್ಪರ್ಧಿಗಳಾಗಿದ್ದಾರೆ.

ಕಳೆದ 20 ವರ್ಷದ ನಾಲ್ಕು ಚುನವಣೆಯ ಫಲಿತಾಂಶಗಳನ್ನು ನೋಡಿದರೆ ಪೂರ್ತಿ ದೆಹಲಿ ಜನ ಒಂದೇ ರೀತಿ ಯೋಚಿಸುತ್ತಾರೆ ಮತ್ತು ಒಂದೇ ಪಕ್ಷವನ್ನು ಆರಿಸುತ್ತಾರೆ ಎನ್ನುವ ರೀತಿಯ ಮತದಾನ ನಡೆದಿದೆ. 1999ರಲ್ಲಿ 7ಕ್ಕೆ 7ನ್ನು ಬಿಜೆಪಿ ಗೆದ್ದಿತ್ತು. 2004ರಲ್ಲಿ 7ರಲ್ಲಿ 6 ಕ್ಷೇತ್ರಗಳನ್ನು ಕಾಂಗ್ರೆಸ್ ಗೆದ್ದುಕೊಂಡಿತ್ತು. ದಕ್ಷಿಣ ದೆಹಲಿ ಒಂದು ಕ್ಷೇತ್ರದಲ್ಲಿ ಮಾತ್ರ ಬಿಜೆಪಿ ವಿಜಯ್‍ಕುಮಾರ್ ಮಲ್ಹೋತ್ರ 18 ಸಾವಿರ ಮತಗಳ ಅಂತರದಿಂದ ಗೆಲುವು ಸಾಧಿಸಿದ್ದರು. ಇನ್ನುಳಿದ ಕ್ಷೇತ್ರಗಳು ಕಾಂಗ್ರೆಸ್ ಪಾಲಾಗಿದ್ದವು. 2009ರ ಚುನಾವಣೆಯಲ್ಲಿ ಎಲ್ಲಾ 7 ಸ್ಥಾನಗಳಲ್ಲಿ ಮತ್ತೆ ಕಾಂಗ್ರೆಸ್ ಗೆಲುವು ಸಾಧಿಸಿತು. 2014ರ ಚುನಾವಣೆಗೆ ಬಂದರೆ 7 ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಹೀನಾಯವಾಗಿ ಸೋತು ಮೂರನೇ ಸ್ಥಾನಕ್ಕೆ ಕುಸಿದರೆ ಬಿಜೆಪಿ 7ನ್ನು ಗೆದ್ದಿತ್ತು. ಆಪ್ ಪೈಪೋಟಿ ನೀಡಿದರೂ ಒಂದನ್ನು ಗೆಲ್ಲಲಾಗಲಿಲ್ಲ.

ಈ ಬಾರಿ ಇಲ್ಲಿ ಮತ್ತೆ ಪೈಪೋಟಿ ನಡೆದಿದೆ. 2014ರಲ್ಲಿದ್ದ ಮೋದಿ ಅಲೆ ಈ ಬಾರಿ ಇದೆಯೇ ಇಲ್ಲವೇ ಎಂಬುದನ್ನು ಫಲಿತಾಂಶದ ದಿನ ಮಾತ್ರ ಗಮನಿಸಬಹುದಾಗಿದೆ. ಸಾರ್ವಜನಿಕ ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರಗಳಲ್ಲಿ ದೇಶ-ವಿದೇಶ ಗಮನ ಸೆಳೆಯುವಂತಹ ಒಳ್ಳೆಯ ಕೆಲಸ ಮಾಡಿರುವ ಆಮ್ ಆದ್ಮಿ ಪಕ್ಷಕ್ಕೆ ಜನ ಬೆಂಬಲಿಸುತ್ತಾರಾ ಎಂಬುದೂ ಪರೀಕ್ಷೆಗೊಳಪಡಲಿದೆ. ದೆಹಲಿ ಸರ್ಕಾರಿ ಶಾಲೆಗಳು ಮತ್ತು ಮೊಹಲ್ಲಾ ಕ್ಲಿನಿಕ್‍ಗಳು ಸಾಕಷ್ಟು ಒಳ್ಳೆಯ ಹೆಸರನ್ನು ಪಡೆದಿವೆ. ಇನ್ನು ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತಿಸ್‍ಘಡದಲ್ಲಿ ಗೆಲುವಿನ ನಗೆ ಬೀರಿರುವ ಕಾಂಗ್ರೆಸ್ ದೆಹಲಿ ಗೆದ್ದುಕೊಳ್ಳುವ ಹುಮ್ಮಸ್ಸಿನಲ್ಲಿದೆ.

ಆದರೆ ಹಿಂದಿನ ಟ್ರೆಂಡ್ ಗಮನಿಸಿದರೆ ಈ ಬಾರಿ ಮತ್ತೆ 7ಕ್ಕೆ 7ನ್ನು ಬಿಜೆಪಿ ಗೆದ್ದುಕೊಳ್ಳುವಂತೆ ಕಾಣುತ್ತಿದೆ. ಏಕೆಂದರೆ ಕಳೆದ ಸಾರಿ ಅಲ್ಲಿ ಬಿಜೆಪಿ 46.40% ರಷ್ಟು ಮತಗಳನ್ನು ಪಡೆದಿದ್ದರೆ ಆಪ್ ಮತ್ತು ಕಾಂಗ್ರೆಸ್ ಸೇರಿ 32.90% + 15.10% = 48.00%ರಷ್ಟನ್ನು ಮಾತ್ರ ಪಡೆದುಕೊಂಡಿದ್ದವು. ಈ ಬಾರಿ ಈ ಎರಡು ಪಕ್ಷಗಳು ಮೈತ್ರಿ ಕೂಡ ಮಾಡಿಕೊಳ್ಳದೇ ಪ್ರತ್ಯೇಕವಾಗಿ ಚುನಾವಣೆಗೆ ಹೋಗಿರುವುದು ಸಹ ಬಿಜೆಪಿಗೆ ಅನುಕೂಲ ಮಾಡಿಕೊಡುವಂತಿದೆ. ಒಂದು ವೇಳೆ ಇದು ಬದಲಾದರೆ ಮತದಾರರ ಮನಸ್ಥಿತಿ ಕೂಡ ಬದಲಾಗಿದೆ ಎಂತಲೂ ಅರ್ಥೈಸಿಕೊಳ್ಳಬಹುದಾಗಿದೆ. ಇದರ ಹೊರತಾಗಿ ಅಚ್ಚರಿಯ ಫಲಿತಾಂಶ ಬರುವುದಾದಲ್ಲಿ ಮೇ 23ರವರೆಗೆ ಕಾಯಬೇಕು.

ಮೈತ್ರಿ ಏಕೆ ಆಗದಿದ್ದುದಕ್ಕೆ ಕಾಂಗ್ರೆಸ್‍ಗಿಂತ ಆಪ್ ಕಾರಣ ಹೌದೇ?

ಸಾಮಾಜಿಕ ಜಾಲತಾಣಗಳಲ್ಲಿ ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್‍ಗೆ ಮೈತ್ರಿಯ ಆಹ್ವಾನ ನೀಡುವುದು, ಅದಕ್ಕೆ ಕಾಂಗ್ರೆಸ್‍ನಿಂದ ಯಾವ ಪ್ರತಿಕ್ರಿಯೆಯೂ ಕಾಣದಿರುವುದು ಅಥವಾ ಟಿವಿ ವರದಿಗಾರರಿಗೆ ಶೀಲಾ ದೀಕ್ಷಿತ್ ಮೈತ್ರಿ ಇಲ್ಲ ಎಂದು ಹೇಳುವುದು ಇದನ್ನು ಎಲ್ಲರೂ ನೋಡಿದ್ದಾರೆ. ವಾಸ್ತವವೇನೆಂದರೆ, ಮಾಧ್ಯಮಗಳ ಮೂಲಕ ಪದೇ ಪದೇ ಮೈತ್ರಿಯ ಆಹ್ವಾನ ನೀಡಿದ್ದ ಆಮ್‍ಆದ್ಮಿ ಪಕ್ಷವು ಕಾಂಗ್ರೆಸ್ ನಾಯಕತ್ವದ ಜೊತೆಗೆ ಅಂತಹ ಪ್ರಯತ್ನವನ್ನು ಮಾಡಲಿಲ್ಲವೆಂದು ಮೂಲಗಳು ತಿಳಿಸುತ್ತವೆ. ತಾನು ಬಿಜೆಪಿ ವಿರುದ್ಧದ ಮೈತ್ರಿಗೆ ತುದಿಗಾಲಿನಲ್ಲಿದ್ದೇನೆಂದು ಹೇಳುವುದಕ್ಕೆ ಆಪ್ ಮಾಡಿದ ಪ್ರಯತ್ನ ಎಷ್ಟಿತ್ತೋ, ಅಷ್ಟು ಪ್ರಯತ್ನ ನಿಜಕ್ಕೂ ಕಾಂಗ್ರೆಸ್ ಜೊತೆಗೆ ಮಾತುಕತೆಗೆ ಇರಲಿಲ್ಲವೆಂಬುದು ದೆಹಲಿ ವರ್ತುಲದ ಬಹಳಷ್ಟು ಜನರ ಅಂಬೋಣ.

ಎರಡನೆಯದಾಗಿ, ತನ್ನ ನೆಲೆಯೇ ಇಲ್ಲದ ಇತರ ರಾಜ್ಯಗಳು ಮತ್ತು ದೆಹಲಿಗಳ ಮೈತ್ರಿ ಒಟ್ಟಿಗೇ ಆಗಬೇಕೆಂಬುದು ಆಪ್‍ನ ನಿಲುವಾಗಿತ್ತು. ಆದರೆ, ಕಾಂಗ್ರೆಸ್ ತಮ್ಮದು ರಾಜ್ಯವಾರು ಮೈತ್ರಿಯಾದ್ದರಿಂದ, ದೆಹಲಿಯ ಕುರಿತು ಮಾತ್ರ ಮಾತನಾಡಿ ಎಂದಿತು. ಇದನ್ನೇ ರಾಹುಲ್‍ಗಾಂಧಿ ಟ್ವಿಟ್ಟರ್ ಮೂಲಕ ಹೇಳಿದರು. ಆಪ್‍ಗೆ 4 ಮತ್ತು ಕಾಂಗ್ರೆಸ್‍ಗೆ 3 ಎಂಬುದು ಅವರ ಪ್ರಸ್ತಾಪವಾಗಿತ್ತು. ಇದನ್ನು ಆಪ್ ತಿರಸ್ಕರಿಸಿತ್ತು. ಒಂದು ರೀತಿಯಲ್ಲಿ ಇದು ಹೇಗಿತ್ತೆಂದರೆ ಜೆಡಿಎಸ್ ಪಕ್ಷವು ಕಾಂಗ್ರೆಸ್ ಜೊತೆಗಿನ ಕರ್ನಾಟಕದ ಮೈತ್ರಿಗೆ, ಆಂಧ್ರಪ್ರದೇಶದಲ್ಲೂ ನಾಲ್ಕು ಸೀಟು ಬಿಟ್ಟುಕೊಡುವ ಷರತ್ತು ಹಾಕಿದರೆ ಹೇಗಿರುತ್ತದೋ ಹಾಗೆ. ಒಟ್ಟಾರೆಯಾಗಿ ಮೈತ್ರಿ ಆಗಲಿಲ್ಲ.

ಸರಿಯಾದ ಮೈತ್ರಿ ಆಗಿದ್ದರೆ 7ಕ್ಕೆ 7 ಗೆಲ್ಲಬಹುದಾಗಿದ್ದ ಕಾಂಗ್ರೆಸ್-ಆಪ್ ಪಕ್ಷಗಳು ಈಗ ಹೆಚ್ಚೆಂದರೆ ಒಂದೆರಡನ್ನು ಗೆಲ್ಲಬಹುದು, ಇಲ್ಲವಾದರೆ ಅದೂ ಇಲ್ಲ ಎಂಬ ಪರಿಸ್ಥಿತಿಯನ್ನು ತಂದುಕೊಂಡಿವೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...

2029ರ ವೇಳೆಗೆ 21 NDA ಆಡಳಿತದ ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ ಜಾರಿ: ಮುಂಬೈನಲ್ಲಿ ಗೃಹ ಸಚಿವ ಅಮಿತ್ ಶಾ ಘೋಷಣೆ

ವಿವಾಹ, ವಿಚ್ಛೇದನ, ಪಿತ್ರಾರ್ಜಿತ ಆಸ್ತಿ ಮತ್ತು ದತ್ತು ಸ್ವೀಕಾರದಂತಹ ವೈಯಕ್ತಿಕ ಕಾನೂನುಗಳಲ್ಲಿ ಧರ್ಮಾತೀತವಾಗಿ ಏಕರೂಪತೆ ತರುವ 'ಏಕರೂಪ ನಾಗರಿಕ ಸಂಹಿತೆ'ಯನ್ನು (UCC) 2029ರ ವೇಳೆಗೆ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21...

KPSC ಯನ್ನು ರದ್ದು ಮಾಡುತ್ತಾ ಸರ್ಕಾರ? ಹೊಸ ಚರ್ಚೆ ಹುಟ್ಟುಹಾಕಿದ ಸಚಿವ ಈಶ್ವರ್ ಖಂಡ್ರೆ ಹೇಳಿಕೆ

ಕರ್ನಾಟಕ ಲೋಕಸೇವಾ ಆಯೋಗವನ್ನು (KPSC) ಮುಚ್ಚುವ ಅಥವಾ ಸಂಪೂರ್ಣವಾಗಿ ರದ್ದುಗೊಳಿಸುವ ಕುರಿತು ಅರಣ್ಯ ಹಾಗೂ ಜೀವಿಶಾಸ್ತ್ರ ಸಚಿವ ಈಶ್ವರ್ ಖಂಡ್ರೆ ನೀಡಿರುವ ಹೇಳಿಕೆಯು ರಾಜ್ಯ ರಾಜಕಾರಣದಲ್ಲಿ ತೀವ್ರ ಸಂಚಲನ ಮೂಡಿಸಿದ್ದು, ಲಕ್ಷಾಂತರ ಸ್ಪರ್ಧಾತ್ಮಕ...

ಹುಬ್ಬಳ್ಳಿಯಲ್ಲಿ ಗಣೇಶ ಮೆರವಣಿಗೆ ವೇಳೆ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಹುಬ್ಬಳ್ಳಿಯಲ್ಲಿ ಗಣೇಶೋತ್ಸವದ ಮೂರ್ತಿ ತರುವ ಸಂಭ್ರಮದ ಮೆರವಣಿಗೆಯನ್ನೇ ನೆಪವಾಗಿಸಿಕೊಂಡು ಅಪರಿಚಿತ ಕಿಡಿಗೇಡಿಗಳು ಮಹಿಳೆಯರ ಜೊತೆ ಅಸಭ್ಯವಾಗಿ ವರ್ತಿಸಿದ ಆಘಾತಕಾರಿ ಘಟನೆ ಬೆಳಕಿಗೆ ಬಂದಿದೆ. ಹಬ್ಬದ ನೆಪದಲ್ಲಿ ಸಾರ್ವಜನಿಕ ಸೌಹಾರ್ದತೆ ಮತ್ತು ಮಹಿಳೆಯರ ಸುರಕ್ಷತೆಗೆ...

ಗಣಪತಿ ಹಬ್ಬದ ನೆಪದಲ್ಲಿ ಮೈಸೂರಿನಲ್ಲಿ ಸೌಹಾರ್ದತೆ ಕೆಡಿಸಲು ಯತ್ನ? ಭದ್ರತಾ ನಿಯಮಗಳನ್ನೇ ಧಿಕ್ಕರಿಸಿದ BJP ನಾಯಕರು

ಗಣೇಶೋತ್ಸವದ ಮೆರವಣಿಗೆಗಳನ್ನು ನೆಪವಾಗಿಸಿಕೊಂಡು ಕೋಮು ಸೌಹಾರ್ದತೆಗೆ ಧಕ್ಕೆ ತರುವ, ಸೂಕ್ಷ್ಮ ಪ್ರದೇಶಗಳಲ್ಲಿ ಪ್ರಚೋದನಾಕಾರಿ ಘೋಷಣೆಗಳನ್ನು ಕೂಗಿ ಗಲಭೆಗೆ ಪ್ರೇರೇಪಿಸುವ ರಕ್ತದಾಹಿ ಕೃತ್ಯಗಳಿಗೆ ಬ್ರೇಕ್ ಹಾಕಲು ಪೊಲೀಸ್ ಇಲಾಖೆ ಕಟ್ಟುನಿಟ್ಟಿನ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಂಡಿದೆ....

SIR: ವಿಶೇಷ ತೀವ್ರ ಪರಿಷ್ಕರಣೆ’ ಎಂಬ ಪ್ರಹಸನ, ಆಯೋಗದ ತಪ್ಪುಗಳಿಗೆ ಮತದಾರರು ಪ್ರಾಯಶ್ಚಿತ್ತ ಪಡಬೇಕೇ?

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಹೆಸರಿನಲ್ಲಿ ರಾಜ್ಯಾದ್ಯಂತ ಮತದಾರರನ್ನು 2002ರ ಮತದಾರರ ಪಟ್ಟಿಯೊಂದಿಗೆ ‘ಮ್ಯಾಪಿಂಗ್’ ಮಾಡುವ ಬೃಹತ್ ಪ್ರಕ್ರಿಯೆಯನ್ನು ಚುನಾವಣಾ ಆಯೋಗವು ಕೈಗೆತ್ತಿಕೊಂಡಿದೆ. 2002ರಲ್ಲಿದ್ದ ದತ್ತಾಂಶವನ್ನು ಇಂದಿನ ಪಟ್ಟಿಯೊಂದಿಗೆ ಹೋಲಿಸಿ,...