Homeಮುಖಪುಟಯಾರು ಗೋವಾವನ್ನು ಗೆಲ್ಲುತ್ತಾರೊ, ಅವರು ಮುಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಾರೆ: ಪಿ. ಚಿದಂಬರಂ

ಯಾರು ಗೋವಾವನ್ನು ಗೆಲ್ಲುತ್ತಾರೊ, ಅವರು ಮುಂದೆ ಕೇಂದ್ರದಲ್ಲಿ ಅಧಿಕಾರಕ್ಕೆ ಬರುತ್ತಾರೆ: ಪಿ. ಚಿದಂಬರಂ

- Advertisement -
- Advertisement -

ಗೋವಾವನ್ನು ಗೆಲ್ಲುವವರು ಮುಂದಿನ ಲೋಕಸಭಾ ಚುನಾವಣೆಯಲ್ಲಿ ಒಕ್ಕೂಟ ಸರ್ಕಾರವಾಗಿ ಅಧಿಕಾರ ಹಿಡಿಯುತ್ತಾರೆ ಎಂದು ಮಾಜಿ ಕೇಂದ್ರ ಹಣಕಾಸು ಸಚಿವ ಮತ್ತು 2022 ರ ಗೋವಾ ವಿಧಾನಸಭಾ ಚುನಾವಣೆಯ ಕಾಂಗ್ರೆಸ್‌ ಪಕ್ಷದ ಹಿರಿಯ ವೀಕ್ಷಕ ಪಿ. ಚಿದಂಬರಂ ಗುರುವಾರ ಹೇಳಿದ್ದಾರೆ.

ಪಣಜಿಯಲ್ಲಿ ಪಕ್ಷದ ಚುನಾವಣಾ ಕಚೇರಿಯನ್ನು ಉದ್ಘಾಟಿಸಿ ಮಾತನಾಡಿದ ಅವರು, “ಇತಿಹಾಸದ ಬಗ್ಗೆ ಒಂದು ವಿಷಯವನ್ನು ಹೇಳುತ್ತೇನೆ. ಯಾರು ಗೋವಾವನ್ನು ಗೆಲ್ಲುತ್ತಾರೋ ಅವರು ಮುಂದೆ ದೆಹಲಿಯನ್ನು ಗೆಲ್ಲುತ್ತಾರೆ” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: ‘ಪಕ್ಷ ನನಗೆ ದ್ರೋಹ ಮಾಡುತ್ತಿದೆ’: ರಾಜೀನಾಮೆಗೆ ಸಜ್ಜಾದ ಬಿಜೆಪಿ ಶಾಸಕ ಮಸಾಲೆ ಜಯರಾಮ

“2007 ರಲ್ಲಿ ನಾವು ಗೋವಾವನ್ನು ಗೆದ್ದೆವು, ನಂತರ 2009 ರಲ್ಲಿ ನಾವು ದೆಹಲಿಯನ್ನು ಗೆದ್ದೆವು. 2012 ರಲ್ಲಿ ನಾವು ದುರದೃಷ್ಟವಶಾತ್ ಗೋವನ್ನು ಕಳೆದುಕೊಂಡೆವು, ಇದರ ಜೊತೆಗೆ 2014 ರಲ್ಲಿ ನಾವು ದೆಹಲಿಯನ್ನು ಕಳೆದುಕೊಂಡೆವು” ಎಂದು ಅವರು ಹೇಳಿದ್ದಾರೆ.

“2017 ರಲ್ಲಿ ಕಾಂಗ್ರೆಸ್‌ ಗೋವನ್ನು ಗೆದ್ದಿತ್ತಾದರೂ, ನಾವು ಅಧಿಕಾರ ಹಿಡಿಯಲು ಆಗದೆ ರಾಜ್ಯವನ್ನು ಕಳೆದುಕೊಂಡರು. ಅದೇ ರೀತಿ 2019 ರಲ್ಲಿ ನಾವು ದೆಹಲಿಯನ್ನು ಕಳೆದುಕೊಂಡೆವು” ಎಂದು ಚಿದಂಬರಂ ಹೇಳಿದ್ದಾರೆ.

ತೃಣಮೂಲ ಕಾಂಗ್ರೆಸ್, ಬಿಜೆಪಿ ಮತ್ತು ಆಮ್ ಆದ್ಮಿ ಪಕ್ಷದಂತಹ ಪ್ರತಿಸ್ಪರ್ಧಿಗಳನ್ನು ಉಲ್ಲೇಖಿಸಿದ ಅವರು, ಗೋವಾವು ಇತರರಿಂದ ಆಕ್ರಮಣ ಮಾಡಲು ಇದು ‘ವಸಾಹತು’ ಅಲ್ಲ ಎಂದು ಅವರು ಪ್ರತಿಪಾದಿಸಿದ್ದಾರೆ.

“2022 ರಲ್ಲಿ ಗೋವಾವನ್ನು ಗೆಲ್ಲಲು ಮತ್ತು 2024 ರಲ್ಲಿ ರಾಷ್ಟ್ರದ ಆಡಳಿತ ಪಕ್ಷವಾಗಿ ಕಾಂಗ್ರೆಸ್‌ ಅನ್ನು ನೋಡಲು, ಪಕ್ಷವು ಇಲ್ಲಿಯ ಜನರ ಮನಸ್ಸನ್ನು ಗೆಲ್ಲುವುದು ಬಹಳ ಮುಖ್ಯ” ಎಂದು ಅವರು ಹೇಳಿದ್ದಾರೆ.

“ಗೋವಾ ಯಾವುದೇ ಆಕ್ರಮಣಕಾರರ ರಾಜಕೀಯ ವಸಾಹತು ಆಗಬಾರದು. ಗೋವಾವನ್ನು ಗೋವಾನ್ನರು ನಿಯಂತ್ರಿಸಬೇಕು. ಗೋವಾವನ್ನು, ಗೋವಾದ ಜನರು, ಗೋವಾದ ಜನರಿಗಾಗಿ ಅಧಿಕಾರ ನಡೆಸಬೇಕು” ಎಂದು ಅವರು ಹೇಳಿದ್ದಾರೆ.

ಇದನ್ನೂ ಓದಿ: 2024ಕ್ಕೆ ರಾವಣನನ್ನು ಸಂಪೂರ್ಣವಾಗಿ ಸುಡುತ್ತೇವೆ: ಶಿವಸೇನೆ ಸಂಸದ ಸಂಜಯ್ ರಾವತ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...