Homeಮುಖಪುಟ’ನೀವು ಯಾರನ್ನು ಬೆಂಬಲಿಸುತ್ತೀರಿ’: ಪತ್ರಕರ್ತರ ಮೇಲೆ ಕೋಪಗೊಂಡು ಪ್ರಶ್ನಿಸಿದ ಮುಖ್ಯಮಂತ್ರಿ

’ನೀವು ಯಾರನ್ನು ಬೆಂಬಲಿಸುತ್ತೀರಿ’: ಪತ್ರಕರ್ತರ ಮೇಲೆ ಕೋಪಗೊಂಡು ಪ್ರಶ್ನಿಸಿದ ಮುಖ್ಯಮಂತ್ರಿ

- Advertisement -
- Advertisement -

ಇಂಡಿಗೊ ಏರ್‌ಲೈನ್ ವ್ಯವಸ್ಥಾಪಕ ರೂಪೇಶ್ ಕುಮಾರ್‌ ಸಿಂಗ್ ಹತ್ಯೆಗೆ ಸಂಬಂಧಿಸಿ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ತಬ್ಬಿಬ್ಬಾದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌, ”ನೀವು ತಪ್ಪಾದ ಮತ್ತು ಸೂಕ್ತವಲ್ಲದ ಪ್ರಶ್ನೆಗಳನ್ನು ಕೇಳುತ್ತಿದ್ದೀರಿ. ಅಷ್ಟಕ್ಕೂ ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ” ಎಂದು ಕೋಪಗೊಂಡು ಪತ್ರಕರ್ತರಿಗೆ ವಾಪಾಸು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪತ್ರಕರ್ತರೊಂದಿಗೆ, “ಪೊಲೀಸರು ಸರಿಯಾಗಿ ತನಿಖೆ ಮಾಡುತ್ತಿದ್ದಾರೆ. ಹತ್ಯೆಯ ಬಗ್ಗೆ ನಿಮಗೆ ಯಾವುದೇ ಸುಳಿವು ಇದ್ದರೆ, ದಯವಿಟ್ಟು ಪೊಲೀಸರೊಂದಿಗೆ ಹಂಚಿಕೊಳ್ಳಿ” ಎಂದು ಅವರು ಪತ್ರಕರ್ತರಿಗೆ ಹೇಳಿದ್ದಾರೆ.

ಇದನ್ನೂ ಓದಿ: RJD ಗೆ ಸೇರುವ JDU ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೇರಲಿದೆ: ನಿತೀಶ್‌ಗೆ ಮತ್ತೊಂದು ಶಾಕ್!

“ನೀವು ತುಂಬಾ ಒಳ್ಳೆಯವರು. ನಾನು ನಿಮ್ಮನ್ನು ನೇರವಾಗಿ ಕೇಳುತ್ತಿದ್ದೇನೆ, ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ?. 15 ವರ್ಷಗಳ ಕಾಲ ಆಳಿದ, ಗಂಡ-ಹೆಂಡತಿ ಜೋಡಿಯ ಆಡಳಿತದಲ್ಲಿ ತುಂಬಾ ಅಪರಾಧಗಳು ನಡೆದಿವೆ. ನೀವು ಅದನ್ನು ಯಾಕೆ ಹೈಲೈಟ್ ಮಾಡಬಾರದು?” ಎಂದು 1990 ರ ದಶಕದಲ್ಲಿ ಬಿಹಾರದ ಮುಖ್ಯಮಂತ್ರಿಗಳಾಗಿದ್ದ ಲಾಲು ಯಾದವ್ ಮತ್ತು ಅವರ ಪತ್ನಿ ರಾಬ್ರಿ ದೇವಿ ಇಬ್ಬರ ಹೆಸರನ್ನೂ ಉಲ್ಲೇಖಿಸದೆ ಹೇಳಿದರು.

ಮಂಗಳವಾರ ಸಂಜೆ,  ಇಂಡಿಗೊ ಏರ್‌ಲೈನ್ ವ್ಯವಸ್ಥಾಪಕ ರೂಪೇಶ್ ಸಿಂಗ್ ಅವರನ್ನು, ಬೈಕ್‌ನಲ್ಲಿ ಬಂದ ಆಗಂತುಕರಿಬ್ಬರು ಅವರ ಮನೆಯ ಗೇಟ್‌ ಹೊರಗಡೆ ಗುಂಡಿಕ್ಕಿ ಕೊಂದಿದ್ದರು. ಈ ಘಟನೆಯು ಮುಖ್ಯಮಂತ್ರಿಯ ಮನೆಯಿಂದ ಕೇವಲ 2 ಕಿ.ಮೀ ದೂರದಲ್ಲಿ ನಡೆದಿದೆ.

ಮುಖ್ಯಮಂತ್ರಿಯ ವರ್ತನೆಯನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್‌, “ದುರದೃಷ್ಟಕರ ಬ್ರೇಕಿಂಗ್ ನ್ಯೂಸ್. ಮುಖ್ಯಮಂತ್ರಿ ನಿತೀಶ್ ಕುಮಾರ್ ಅಪರಾಧಿಗಳ ಮುಂದೆ ಶರಣರಾದರು. ಅವರ ಹೇಳಿಕೆಗಳು ಅಪರಾಧವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂಬಂತಾಗಿದೆ. ಹರಪ್ಪನ್ ಕಾಲದಲ್ಲಿಯೂ ಅಪರಾಧಗಳು ನಡೆದಿವೆ, ಅದಕ್ಕೂ ಹೋಲಿಕೆ ಮಾಡಿ” ಎಂದು ವ್ಯಂಗ್ಯವಾಡಿದ್ದಾರೆ.

“ನೀವು ಅಪರಾಧವನ್ನು ನಿಲ್ಲಿಸುವುದನ್ನು ಬಿಟ್ಟು ಪತ್ರಕರ್ತರನ್ನು ಪ್ರಶ್ನಿಸುತ್ತಿದ್ದೀರಿ. ಅಪರಾಧಿಗಳು ಯಾರು ಮತ್ತು ಅವರು ಯಾಕೆ ಅಪರಾಧಗಳನ್ನು ಮಾಡುತ್ತಾರೆಂದು ನಿಮಗೆ ತಿಳಿದಿದೆಯೇ?” ಎಂದು ತೇಜಸ್ವಿ ಕೇಳಿದ್ದಾರೆ.

ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...