Homeಮುಖಪುಟ’ನೀವು ಯಾರನ್ನು ಬೆಂಬಲಿಸುತ್ತೀರಿ’: ಪತ್ರಕರ್ತರ ಮೇಲೆ ಕೋಪಗೊಂಡು ಪ್ರಶ್ನಿಸಿದ ಮುಖ್ಯಮಂತ್ರಿ

’ನೀವು ಯಾರನ್ನು ಬೆಂಬಲಿಸುತ್ತೀರಿ’: ಪತ್ರಕರ್ತರ ಮೇಲೆ ಕೋಪಗೊಂಡು ಪ್ರಶ್ನಿಸಿದ ಮುಖ್ಯಮಂತ್ರಿ

- Advertisement -
- Advertisement -

ಇಂಡಿಗೊ ಏರ್‌ಲೈನ್ ವ್ಯವಸ್ಥಾಪಕ ರೂಪೇಶ್ ಕುಮಾರ್‌ ಸಿಂಗ್ ಹತ್ಯೆಗೆ ಸಂಬಂಧಿಸಿ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ತಬ್ಬಿಬ್ಬಾದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌, ”ನೀವು ತಪ್ಪಾದ ಮತ್ತು ಸೂಕ್ತವಲ್ಲದ ಪ್ರಶ್ನೆಗಳನ್ನು ಕೇಳುತ್ತಿದ್ದೀರಿ. ಅಷ್ಟಕ್ಕೂ ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ” ಎಂದು ಕೋಪಗೊಂಡು ಪತ್ರಕರ್ತರಿಗೆ ವಾಪಾಸು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪತ್ರಕರ್ತರೊಂದಿಗೆ, “ಪೊಲೀಸರು ಸರಿಯಾಗಿ ತನಿಖೆ ಮಾಡುತ್ತಿದ್ದಾರೆ. ಹತ್ಯೆಯ ಬಗ್ಗೆ ನಿಮಗೆ ಯಾವುದೇ ಸುಳಿವು ಇದ್ದರೆ, ದಯವಿಟ್ಟು ಪೊಲೀಸರೊಂದಿಗೆ ಹಂಚಿಕೊಳ್ಳಿ” ಎಂದು ಅವರು ಪತ್ರಕರ್ತರಿಗೆ ಹೇಳಿದ್ದಾರೆ.

ಇದನ್ನೂ ಓದಿ: RJD ಗೆ ಸೇರುವ JDU ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೇರಲಿದೆ: ನಿತೀಶ್‌ಗೆ ಮತ್ತೊಂದು ಶಾಕ್!

“ನೀವು ತುಂಬಾ ಒಳ್ಳೆಯವರು. ನಾನು ನಿಮ್ಮನ್ನು ನೇರವಾಗಿ ಕೇಳುತ್ತಿದ್ದೇನೆ, ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ?. 15 ವರ್ಷಗಳ ಕಾಲ ಆಳಿದ, ಗಂಡ-ಹೆಂಡತಿ ಜೋಡಿಯ ಆಡಳಿತದಲ್ಲಿ ತುಂಬಾ ಅಪರಾಧಗಳು ನಡೆದಿವೆ. ನೀವು ಅದನ್ನು ಯಾಕೆ ಹೈಲೈಟ್ ಮಾಡಬಾರದು?” ಎಂದು 1990 ರ ದಶಕದಲ್ಲಿ ಬಿಹಾರದ ಮುಖ್ಯಮಂತ್ರಿಗಳಾಗಿದ್ದ ಲಾಲು ಯಾದವ್ ಮತ್ತು ಅವರ ಪತ್ನಿ ರಾಬ್ರಿ ದೇವಿ ಇಬ್ಬರ ಹೆಸರನ್ನೂ ಉಲ್ಲೇಖಿಸದೆ ಹೇಳಿದರು.

ಮಂಗಳವಾರ ಸಂಜೆ,  ಇಂಡಿಗೊ ಏರ್‌ಲೈನ್ ವ್ಯವಸ್ಥಾಪಕ ರೂಪೇಶ್ ಸಿಂಗ್ ಅವರನ್ನು, ಬೈಕ್‌ನಲ್ಲಿ ಬಂದ ಆಗಂತುಕರಿಬ್ಬರು ಅವರ ಮನೆಯ ಗೇಟ್‌ ಹೊರಗಡೆ ಗುಂಡಿಕ್ಕಿ ಕೊಂದಿದ್ದರು. ಈ ಘಟನೆಯು ಮುಖ್ಯಮಂತ್ರಿಯ ಮನೆಯಿಂದ ಕೇವಲ 2 ಕಿ.ಮೀ ದೂರದಲ್ಲಿ ನಡೆದಿದೆ.

ಮುಖ್ಯಮಂತ್ರಿಯ ವರ್ತನೆಯನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್‌, “ದುರದೃಷ್ಟಕರ ಬ್ರೇಕಿಂಗ್ ನ್ಯೂಸ್. ಮುಖ್ಯಮಂತ್ರಿ ನಿತೀಶ್ ಕುಮಾರ್ ಅಪರಾಧಿಗಳ ಮುಂದೆ ಶರಣರಾದರು. ಅವರ ಹೇಳಿಕೆಗಳು ಅಪರಾಧವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂಬಂತಾಗಿದೆ. ಹರಪ್ಪನ್ ಕಾಲದಲ್ಲಿಯೂ ಅಪರಾಧಗಳು ನಡೆದಿವೆ, ಅದಕ್ಕೂ ಹೋಲಿಕೆ ಮಾಡಿ” ಎಂದು ವ್ಯಂಗ್ಯವಾಡಿದ್ದಾರೆ.

“ನೀವು ಅಪರಾಧವನ್ನು ನಿಲ್ಲಿಸುವುದನ್ನು ಬಿಟ್ಟು ಪತ್ರಕರ್ತರನ್ನು ಪ್ರಶ್ನಿಸುತ್ತಿದ್ದೀರಿ. ಅಪರಾಧಿಗಳು ಯಾರು ಮತ್ತು ಅವರು ಯಾಕೆ ಅಪರಾಧಗಳನ್ನು ಮಾಡುತ್ತಾರೆಂದು ನಿಮಗೆ ತಿಳಿದಿದೆಯೇ?” ಎಂದು ತೇಜಸ್ವಿ ಕೇಳಿದ್ದಾರೆ.

ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...