Homeಮುಖಪುಟ’ನೀವು ಯಾರನ್ನು ಬೆಂಬಲಿಸುತ್ತೀರಿ’: ಪತ್ರಕರ್ತರ ಮೇಲೆ ಕೋಪಗೊಂಡು ಪ್ರಶ್ನಿಸಿದ ಮುಖ್ಯಮಂತ್ರಿ

’ನೀವು ಯಾರನ್ನು ಬೆಂಬಲಿಸುತ್ತೀರಿ’: ಪತ್ರಕರ್ತರ ಮೇಲೆ ಕೋಪಗೊಂಡು ಪ್ರಶ್ನಿಸಿದ ಮುಖ್ಯಮಂತ್ರಿ

- Advertisement -
- Advertisement -

ಇಂಡಿಗೊ ಏರ್‌ಲೈನ್ ವ್ಯವಸ್ಥಾಪಕ ರೂಪೇಶ್ ಕುಮಾರ್‌ ಸಿಂಗ್ ಹತ್ಯೆಗೆ ಸಂಬಂಧಿಸಿ ಪತ್ರಕರ್ತರು ಕೇಳಿದ ಪ್ರಶ್ನೆಗಳಿಗೆ ತಬ್ಬಿಬ್ಬಾದ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್‌, ”ನೀವು ತಪ್ಪಾದ ಮತ್ತು ಸೂಕ್ತವಲ್ಲದ ಪ್ರಶ್ನೆಗಳನ್ನು ಕೇಳುತ್ತಿದ್ದೀರಿ. ಅಷ್ಟಕ್ಕೂ ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ” ಎಂದು ಕೋಪಗೊಂಡು ಪತ್ರಕರ್ತರಿಗೆ ವಾಪಾಸು ಪ್ರಶ್ನಿಸಿದ್ದಾರೆ.

ಈ ಬಗ್ಗೆ ಪತ್ರಕರ್ತರೊಂದಿಗೆ, “ಪೊಲೀಸರು ಸರಿಯಾಗಿ ತನಿಖೆ ಮಾಡುತ್ತಿದ್ದಾರೆ. ಹತ್ಯೆಯ ಬಗ್ಗೆ ನಿಮಗೆ ಯಾವುದೇ ಸುಳಿವು ಇದ್ದರೆ, ದಯವಿಟ್ಟು ಪೊಲೀಸರೊಂದಿಗೆ ಹಂಚಿಕೊಳ್ಳಿ” ಎಂದು ಅವರು ಪತ್ರಕರ್ತರಿಗೆ ಹೇಳಿದ್ದಾರೆ.

ಇದನ್ನೂ ಓದಿ: RJD ಗೆ ಸೇರುವ JDU ಶಾಸಕರ ಸಂಖ್ಯೆ ಶೀಘ್ರವೇ 28 ಕ್ಕೇರಲಿದೆ: ನಿತೀಶ್‌ಗೆ ಮತ್ತೊಂದು ಶಾಕ್!

“ನೀವು ತುಂಬಾ ಒಳ್ಳೆಯವರು. ನಾನು ನಿಮ್ಮನ್ನು ನೇರವಾಗಿ ಕೇಳುತ್ತಿದ್ದೇನೆ, ನೀವು ಯಾರನ್ನು ಬೆಂಬಲಿಸುತ್ತಿದ್ದೀರಿ?. 15 ವರ್ಷಗಳ ಕಾಲ ಆಳಿದ, ಗಂಡ-ಹೆಂಡತಿ ಜೋಡಿಯ ಆಡಳಿತದಲ್ಲಿ ತುಂಬಾ ಅಪರಾಧಗಳು ನಡೆದಿವೆ. ನೀವು ಅದನ್ನು ಯಾಕೆ ಹೈಲೈಟ್ ಮಾಡಬಾರದು?” ಎಂದು 1990 ರ ದಶಕದಲ್ಲಿ ಬಿಹಾರದ ಮುಖ್ಯಮಂತ್ರಿಗಳಾಗಿದ್ದ ಲಾಲು ಯಾದವ್ ಮತ್ತು ಅವರ ಪತ್ನಿ ರಾಬ್ರಿ ದೇವಿ ಇಬ್ಬರ ಹೆಸರನ್ನೂ ಉಲ್ಲೇಖಿಸದೆ ಹೇಳಿದರು.

ಮಂಗಳವಾರ ಸಂಜೆ,  ಇಂಡಿಗೊ ಏರ್‌ಲೈನ್ ವ್ಯವಸ್ಥಾಪಕ ರೂಪೇಶ್ ಸಿಂಗ್ ಅವರನ್ನು, ಬೈಕ್‌ನಲ್ಲಿ ಬಂದ ಆಗಂತುಕರಿಬ್ಬರು ಅವರ ಮನೆಯ ಗೇಟ್‌ ಹೊರಗಡೆ ಗುಂಡಿಕ್ಕಿ ಕೊಂದಿದ್ದರು. ಈ ಘಟನೆಯು ಮುಖ್ಯಮಂತ್ರಿಯ ಮನೆಯಿಂದ ಕೇವಲ 2 ಕಿ.ಮೀ ದೂರದಲ್ಲಿ ನಡೆದಿದೆ.

ಮುಖ್ಯಮಂತ್ರಿಯ ವರ್ತನೆಯನ್ನು ಖಂಡಿಸಿರುವ ವಿರೋಧ ಪಕ್ಷದ ನಾಯಕ ತೇಜಸ್ವಿ ಯಾದವ್‌, “ದುರದೃಷ್ಟಕರ ಬ್ರೇಕಿಂಗ್ ನ್ಯೂಸ್. ಮುಖ್ಯಮಂತ್ರಿ ನಿತೀಶ್ ಕುಮಾರ್ ಅಪರಾಧಿಗಳ ಮುಂದೆ ಶರಣರಾದರು. ಅವರ ಹೇಳಿಕೆಗಳು ಅಪರಾಧವನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ ಎಂಬಂತಾಗಿದೆ. ಹರಪ್ಪನ್ ಕಾಲದಲ್ಲಿಯೂ ಅಪರಾಧಗಳು ನಡೆದಿವೆ, ಅದಕ್ಕೂ ಹೋಲಿಕೆ ಮಾಡಿ” ಎಂದು ವ್ಯಂಗ್ಯವಾಡಿದ್ದಾರೆ.

“ನೀವು ಅಪರಾಧವನ್ನು ನಿಲ್ಲಿಸುವುದನ್ನು ಬಿಟ್ಟು ಪತ್ರಕರ್ತರನ್ನು ಪ್ರಶ್ನಿಸುತ್ತಿದ್ದೀರಿ. ಅಪರಾಧಿಗಳು ಯಾರು ಮತ್ತು ಅವರು ಯಾಕೆ ಅಪರಾಧಗಳನ್ನು ಮಾಡುತ್ತಾರೆಂದು ನಿಮಗೆ ತಿಳಿದಿದೆಯೇ?” ಎಂದು ತೇಜಸ್ವಿ ಕೇಳಿದ್ದಾರೆ.

ಇದನ್ನೂ ಓದಿ: ‘ರೈತರಿಗಾಗಿ ಗಲ್ಲಿಗೇರಲು ಸಿದ್ಧ- ತಾಕತ್ತಿದ್ದರೆ ಬಂಧಿಸಿ’: ನಿತೀಶ್‌ಗೆ ತೇಜಸ್ವಿ ಯಾದವ್ ಸವಾಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...