Homeಮುಖಪುಟಮಣಿಪುರದಲ್ಲಿ ಯಾರ ಸರ್ಕಾರವಿದೆ? ಮೋದಿ 36 ಸೆಕೆಂಡ್ ಮಾತನಾಡಿದರೆ ಸಾಕೆ? - ಕಾಂಗ್ರೆಸ್ ಪ್ರಶ್ನೆ

ಮಣಿಪುರದಲ್ಲಿ ಯಾರ ಸರ್ಕಾರವಿದೆ? ಮೋದಿ 36 ಸೆಕೆಂಡ್ ಮಾತನಾಡಿದರೆ ಸಾಕೆ? – ಕಾಂಗ್ರೆಸ್ ಪ್ರಶ್ನೆ

- Advertisement -
- Advertisement -

ಮಣಿಪುರದ ಮಹಿಳೆಯರ ಬೆತ್ತಲೆ ಮೆರವಣಿಗೆ ಮತ್ತು ಸಾಮೂಹಿಕ ಅತ್ಯಾಚಾರ ವಿಡಿಯೋ ಕುರಿತು ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ ಎಂಬ ಪ್ರಧಾನಿ ಮೋದಿಯವರ ಹೇಳಿಕೆ ಕುರಿತು ಕಾಂಗ್ರೆಸ್ ಆಕ್ಷೇಪ ವ್ಯಕ್ತಪಡಿಸಿದೆ. ಪ್ರಧಾನಿ ಮೋದಿಯವರು 8 ನಿಮಿಷ 25 ಸೆಕೆಂಡ್ ಭಾಷಣ ಮಾಡಿದ್ದು ಅದರಲ್ಲಿ ಮಣಿಪುರದ ಬಗ್ಗೆ ಕೇವಲ 36 ಸೆಕೆಂಡ್ ಮಾತನಾಡಿದ್ದಾರೆ. ಮಾತ್ರವಲ್ಲದೇ ಅದರೊಟ್ಟಿಗೆ ರಾಜಸ್ಥಾನ ಮತ್ತು ಚತ್ತೀಸ್‌ಘಡ ರಾಜ್ಯಗಳನ್ನು ಉಲ್ಲೇಖಿಸಿದ್ದು ಏಕೆ? ಮಣಿಪುರದಲ್ಲಿ ಯಾರ ಸರ್ಕಾರವಿದೆ ಎಂದು ಕಾಂಗ್ರೆಸ್ ವಕ್ತಾರೆ ಸುಪ್ರಿಯಾ ಶ್ರೀನಾಠೆ ಪ್ರಶ್ನಿಸಿದ್ದಾರೆ.

ಮಣಿಪುರದ ವಿಡಿಯೋ ನೋಡಿ ನನಗೆ ನೋವಾಗಿದೆ ಎಂದು ಪ್ರಧಾನಿ ಮೋದಿ ಹೇಳಿದ್ದಾರೆ. ಈ ವಿಡಿಯೋ 140 ಕೋಟಿ ಭಾರತೀಯರನ್ನು ಘಾಸಿಗೊಳಿಸಿದೆ ಎಂದು ಹೇಳಿದ್ದೀರಿ. ತದನಂತರ ನೀವು ಮಣಿಪುರದ ವಿಷಯಕ್ಕೆ ಕೇವಲ 36 ಸೆಕೆಂಡುಗಳನ್ನು ಮೀಸಲಿಟ್ಟಿದ್ದೀರಾ? ಛತ್ತೀಸ್‌ಗಢ ಮತ್ತು ರಾಜಸ್ಥಾನದ ಬಗ್ಗೆಯೂ ಅವಹೇಳನಕಾರಿಯಾಗಿ ಮಾತನಾಡಿದ್ದೀರಿ. ಇದಕ್ಕೆ ನಿಮ್ಮ ಸರ್ಕಾರವೇ ಹೊಣೆ. ನೀವು ಈ ಹಿಂದೆಯೇ ಮಣಿಪುರದ ಬಗ್ಗೆ ಮಾತನಾಡಿದ್ದರೆ, 77 ದಿನಗಳ ಹಳೆಯ ವೀಡಿಯೊವನ್ನು ನೋಡಿ ರಾಷ್ಟ್ರವು ಸ್ತಬ್ಧವಾಗಬೇಕಾಗಿರಲಿಲ್ಲ ಎಂದು ಅವರು ಹೇಳಿದ್ದಾರೆ.

ನಿಮ್ಮ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆಯೇ? ನಿಮಗೆ ಪೊಲೀಸ್ ಬಲ ಇದೆ, ನಿಮಗೆ ತನಿಖಾ ಏಜೆನ್ಸಿಗಳಿವೆ. ಆದರೂ ಹಿಂಸಾಚಾರ ನಿಗ್ರಹಿಸಲಿಲ್ಲ. ನೀವು ಮುಖ್ಯಮಂತ್ರಿ ಎನ್ ಬಿರೇನ್ ಸಿಂಗ್ ಅವರನ್ನು ಏಕೆ ವಜಾ ಮಾಡುತ್ತಿಲ್ಲ? ಘಟನೆ ನಡೆದು ಎರಡೂವರೆ ತಿಂಗಳಾಗಿದೆ. ವೀಡಿಯೊ ವೈರಲ್ ಆದ ನಂತರ ಮೊದಲ ಬಂಧನ ಮಾಡಿರುವುದು ನಾಚಿಕೆಗೇಡಿನ ಸಂಗತಿಯಾಗಿದೆ. ಆ ವೀಡಿಯೊವನ್ನು ನೋಡುತ್ತಿರುವಾಗ, ಪ್ರತಿಯೊಬ್ಬ ಮಹಿಳೆ ಬೆದರಿಕೆಗೆ ಒಳಗಾಗುತ್ತಿದ್ದಾಳೆ” ಎಂದು ಶ್ರೀನಾಠೆ ಹೇಳಿದ್ದಾರೆ.

1800 ಗಂಟೆಗಳಿಗೂ ಹೆಚ್ಚು ಕಾಲ ಗ್ರಹಿಸಲಾಗದ ಮತ್ತು ಕ್ಷಮಿಸಲಾಗದ ಮೌನದ ನಂತರ, ಪ್ರಧಾನಮಂತ್ರಿ ಅಂತಿಮವಾಗಿ ಒಟ್ಟು 30 ಸೆಕೆಂಡುಗಳ ಕಾಲ ಮಣಿಪುರದ ಕುರಿತು ಮಾತನಾಡಿದರು. ಅದರ ನಂತರ, ಇತರ ರಾಜ್ಯಗಳಲ್ಲಿನ ವಿಶೇಷವಾಗಿ ಪ್ರತಿಪಕ್ಷಗಳು ಆಡಳಿತ ನಡೆಸುತ್ತಿರುವ ರಾಜ್ಯಗಳಲ್ಲಿನ ಮಹಿಳೆಯರ ಮೇಲಿನ ಅಪರಾಧಗಳನ್ನು ಸಮೀಕರಿಸುವ ಮೂಲಕ ಮಣಿಪುರದ ಬೃಹತ್ ಆಡಳಿತ ವೈಫಲ್ಯಗಳು ಮತ್ತು ಮಾನವೀಯ ದುರಂತದಿಂದ ಗಮನವನ್ನು ಬೇರೆಡೆಗೆ ಸೆಳೆಯಲು ಪ್ರಧಾನಮಂತ್ರಿ ಪ್ರಯತ್ನಿಸಿದರು. ಯುಪಿ ಮತ್ತು ಗುಜರಾತ್‌ನಂತಹ ರಾಜ್ಯಗಳಲ್ಲಿ ಮಹಿಳೆಯರ ಮೇಲಿನ ದೌರ್ಜನ್ಯಗಳನ್ನು ನಿರ್ಲಕ್ಷಿಸಿದರು ಎಂದು ಕಾಂಗ್ರೆಸ್ ಮಾಧ್ಯಮ ಸಂಚಾಲಕ ಜೈರಾಂ ರಮೇಶ್ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಎಷ್ಟೇ ಟೀಕೆಗಳು ಬಂದರೂ ಮೌನಹಿಸಿದ್ದ ಪ್ರಧಾನಿ ಮೋದಿಯವರು 77 ದಿನಗಳ ನಂತರ ಮೌನ ಮುರಿದಿದ್ದು, “ಈ ಘಟನೆಗಳಿಂದ ನನ್ನ ಹೃದಯವು ನೋವು ಮತ್ತು ಕೋಪದಿಂದ ತುಂಬಿದೆ. ಮಣಿಪುರದ ಘಟನೆಯು ಮುನ್ನೆಲೆಗೆ ಬಂದಿರುವುದು ಯಾವುದೇ ನಾಗರಿಕತೆಗೆ ನಾಚಿಕೆಗೇಡಿನ ಸಂಗತಿಯಾಗಿದೆ. ದೇಶ ನಾಚಿಕೆಪಡುವಂತಾಗಿದೆ. ಅಪರಾಧದ ವಿರುದ್ಧ ವಿಶೇಷವಾಗಿ ಮಹಿಳೆಯರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಲು ಕಾನೂನುಗಳನ್ನು ಬಲಪಡಿಸುವಂತೆ ನಾನು ಎಲ್ಲ ಮುಖ್ಯಮಂತ್ರಿಗಳಿಗೆ ಮನವಿ ಮಾಡುತ್ತೇನೆ. ಘಟನೆಯು ರಾಜಸ್ಥಾನ, ಛತ್ತೀಸ್‌ಗಢ ಅಥವಾ ಮಣಿಪುರದಿಂದ ಆಗಿರಬಹುದು, ಅಪರಾಧಿ ದೇಶದ ಯಾವುದೇ ಮೂಲೆಯಲ್ಲಿ ಇದ್ದರೂ ಶಿಕ್ಷೆಯಿಂದ ಮುಕ್ತವಾಗಬಾರದು” ಎಂದು ಪ್ರಧಾನಿ ಮೋದಿ ಹೇಳಿದ್ದರು.

ಇದನ್ನೂ ಓದಿ: 77 ದಿನಗಳ ನಂತರ ಮಣಿಪುರದ ಹಿಂಸಾಚಾರದ ಕುರಿತು ಮೌನ ಮುರಿದ ಪ್ರಧಾನಿ ಮೋದಿ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಂತರ್ ಮಂತರ್ ಉಪವಾಸ ಸತ್ಯಾಗ್ರಹ ಸ್ಥಳಕ್ಕೆ ಕೇಜ್ರಿವಾಲ್ ಭೇಟಿ

ದೇಶಾದ್ಯಂತ ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿರುವ ನೀಟ್ (NEET) ಪರೀಕ್ಷಾ ಅಕ್ರಮ ಹಾಗೂ ಪ್ರಶ್ನೆ ಪತ್ರಿಕೆ ಸೋರಿಕೆ ಖಂಡಿಸಿ ಜಂತರ್ ಮಂತರ್‌ನಲ್ಲಿ ಆಮರಣಾಂತ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಖ್ಯಾತ ಶಿಕ್ಷಣ ತಜ್ಞ ಹಾಗೂ ಪರಿಸರ...

E20 ಪೆಟ್ರೋಲ್ ಪ್ರಕರಣ : ‘ಗ್ರ್ಯಾಂಡ್ ವಿಟಾರಾ’ ಕಾರು ಬದಲಾಯಿಸಿ ಕೊಡಲು ಮಾರುತಿ ಸುಝುಕಿಗೆ ಗ್ರಾಹಕ ನ್ಯಾಯಾಲಯ ಆದೇಶ

ಛತ್ತೀಸ್‌ಗಢದ ರಾಯ್‌ಪುರದ ಜಿಲ್ಲಾ ಗ್ರಾಹಕ ವಿವಾದಗಳ ಪರಿಹಾರ ಆಯೋಗವು (ಡಿಸಿಡಿಆರ್‌ಸಿ), E20 ಇಂಧನ (ಪೆಟ್ರೋಲ್) ಬಳಕೆಯಿಂದಾಗಿ ಕಾರು ಕೆಟ್ಟುಹೋಗಿದೆ ಎಂದು ಆರೋಪಿಸಿದ ವ್ಯಕ್ತಿಗೆ ಹೊಸ 'ಗ್ರಾಂಡ್ ವಿಟಾರಾ' ಕಾರನ್ನು ನೀಡುವಂತೆ ಕಾರು ತಯಾರಿಕಾ...

ಸಿಜೆಪಿ ಶಾಂತಿಯುತ ಪ್ರತಿಭಟನೆಗೆ ನಿರಂತರ ಪೊಲೀಸ್ ಕಣ್ಗಾವಲು ಪ್ರಶ್ನಿಸಿ ದೆಹಲಿ ಹೈಕೋರ್ಟ್‌ಗೆ ಅರ್ಜಿ

ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್‌ನಲ್ಲಿ ಜಿರಳೆ ಜನತಾ ಪಕ್ಷ (ಸಿಜೆಪಿ) ಆಯೋಜಿಸಿರುವ ಶಾಂತಿಯುತ ಧರಣಿ ಮತ್ತು ಉಪವಾಸ ಸತ್ಯಾಗ್ರಹದಲ್ಲಿ ಭಾಗವಹಿಸುವ ನಾಗರಿಕರ ಮೇಲೆ ದೆಹಲಿ ಪೊಲೀಸರು ನಿರಂತರ ಮತ್ತು ವ್ಯಾಪಕ ಕಣ್ಗಾವಲು...

IAS ಆಗುವ ಮುನ್ನ ‘ಪರಿಪೂರ್ಣ ತಾಯಿ’ಯಾಗಿ ಎಂದ ರಾಜ್ಯಪಾಲರ ಸಲಹೆ ಪುರುಷ ಪ್ರಾಧ್ಯಾನ್ಯತೆಯ ಮುಂದುವರೆದ ಆಚರಣೆ ಅಲ್ಲವೆ?

ಇತ್ತೀಚೆಗೆ ಉತ್ತರ ಪ್ರದೇಶದ ರಾಜ್ಯಪಾಲರಾದ ಆನಂದಿಬೆನ್ ಪಟೇಲ್ ಅವರು, "ಮಹಿಳೆಯರು IAS ಅಧಿಕಾರಿ ಅಥವಾ ಶಿಕ್ಷಕಿಯಾಗುವ ಕನಸು ಕಾಣುವ ಮೊದಲು 'ಪರಿಣಿತ ತಾಯಿ' ಆಗುವುದನ್ನು ಕಲಿಯಬೇಕು ಎಂದು ಸಲಹೆ ನೀಡಿದ್ದರು. ಕಾನ್ಪುರದ ಛತ್ರಪತಿ...

ಹಿಂದಿನ ಮದುವೆ, ಮಗು ವಿಚಾರ ಮುಚ್ಚಿಟ್ಟಿದ್ದಕ್ಕೆ ಸಹೋದರನೊಂದಿಗಿನ ಸಂಬಂಧ ಮುರಿದುಕೊಂಡಿದ್ದ ಕಾನೂನು ವಿದ್ಯಾರ್ಥಿನಿಯನ್ನು ಇರಿದು ಕೊಂದ ತಮ್ಮ

ಬೆಂಗಳೂರು: ಮೊದಲ ಮದುವೆ ಹಾಗೂ ಮಗುವಿದ್ದ ವಿಷಯವನ್ನು ಮುಚ್ಚಿಟ್ಟು ವಂಚಿಸಿದ್ದ ಪ್ರಿಯಕರನೊಂದಿಗಿನ ಸಂಬಂಧವನ್ನು ಮುರಿದುಕೊಂಡ ಕಾರಣಕ್ಕೆ, ಆತನ ಸಹೋದರನಿಂದಲೇ ಚಾಕು ಇರಿತಕ್ಕೊಳಗಾಗಿದ್ದ ಕಾನೂನು ವಿದ್ಯಾರ್ಥಿನಿಯೊಬ್ಬಳು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿರುವ ಘಟನೆ ಸಿಲಿಕಾನ್ ಸಿಟಿಯಲ್ಲಿ...

ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ಅಮೆರಿಕ ದಾಳಿಗೆ ಇರಾನ್‌ನಿಂದ ಪ್ರತೀಕಾರ

ಕಳೆದ ಗುರುವಾರ (ಜು.16) ಖುಜೆಸ್ತಾನ್ ಪ್ರಾಂತ್ಯದಲ್ಲಿರುವ ಮಕ್ಕಳ ಕ್ಯಾನ್ಸರ್ ಆಸ್ಪತ್ರೆಯ ಮೇಲೆ ನಡೆದ ದಾಳಿಗೆ ಪ್ರತೀಕಾರವಾಗಿ, ಕುವೈತ್ ಮತ್ತು ಬಹ್ರೇನ್ ಸೇರಿದಂತೆ ಗಲ್ಫ್ ರಾಷ್ಟ್ರಗಳಲ್ಲಿರುವ ಅಮೆರಿಕದ ವಾಯು ನೆಲೆಗಳ ಮೇಲೆ ಇರಾನ್ ಪ್ರತಿದಾಳಿ...

Lazarus To World Leaks : ಆತಂಕ ಸೃಷ್ಟಿಸಿದ ಕೂಡಂಕುಳಂ ಸೈಬರ್ ದಾಳಿಗಳು

ಭಾರತದ ಅತಿ ದೊಡ್ಡ ಪರಮಾಣು ವಿದ್ಯುತ್ ಕೇಂದ್ರವಾದ ತಮಿಳುನಾಡಿನ  ತಿರುನೆಲ್ವೇಲಿಯ ಕೂಡಂಕುಳಂ, ಕಳೆದ ಏಳು ವರ್ಷಗಳ ಅವಧಿಯಲ್ಲಿ ಎರಡು ಬಾರಿ ಪ್ರಮುಖ ಸೈಬರ್ ಭದ್ರತಾ ಆತಂಕಗಳಿಗೆ ಕೇಂದ್ರ ಬಿಂದುವಾಗಿದೆ. 2019ರ ಮೊದಲ ಘಟನೆಯು...

ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ: ಪ್ರಶ್ನೆಗಳನ್ನು ಖರೀದಿಸಲು 5 ಲಕ್ಷ ರೂ. ಪಾವತಿಸಿದ್ದ ಲಾತೂರ್ ಕೋಚಿಂಗ್ ಮಾಲೀಕ: ನ್ಯಾಯಾಲಯಕ್ಕೆ ಸಿಬಿಐ ಮಾಹಿತಿ

ದೇಶಾದ್ಯಂತ ಕೋಟ್ಯಂತರ ವಿದ್ಯಾರ್ಥಿಗಳ ಭವಿಷ್ಯವನ್ನು ಕತ್ತಲಿಗೆ ತಳ್ಳಿದ ನೀಟ್ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣದಲ್ಲಿ ದಿನಕ್ಕೊಂದು ಆಘಾತಕಾರಿ ಸತ್ಯಗಳು ಹೊರಬರುತ್ತಿದ್ದು, ಇಡೀ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಈ ದಂಧೆಯ ಆಳ ಎಷ್ಟು...

ನಾನು ಸತ್ತರೂ ಪರ್ವಾಗಿಲ್ಲ, ಉಪವಾಸ ಹಿಂಪಡೆಯಲ್ಲ: ಜುಲೈ 20ರ ಸಂಸತ್ ಚಲೋಗೆ ವಾಂಗ್‌ಚುಕ್ ಕರೆ

ದೇಶದ ಶಿಕ್ಷಣ ವ್ಯವಸ್ಥೆಯಲ್ಲಿನ ಸರಣಿ ಪರೀಕ್ಷಾ ಅಕ್ರಮ ಹಾಗೂ ನೀಟ್ (NEET) ಹಗರಣದ ವಿರುದ್ಧ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ನಡೆಯುತ್ತಿರುವ ಆಮರಣಾಂತ ಉಪವಾಸ ಸತ್ಯಾಗ್ರಹವನ್ನು ತಕ್ಷಣವೇ...

ಉತ್ತರ ಪ್ರದೇಶ : ಮೊಹಮ್ಮದ್ ಅಲಿ ಜೌಹರ್ ವಿವಿಯ 38 ಕಟ್ಟಡಗಳನ್ನು ಕೆಡವಲು ಮುಂದಾದ ಸರ್ಕಾರ!

ಸಮಾಜವಾದಿ ಪಕ್ಷದ (ಎಸ್‌ಪಿ) ಮುಖಂಡ ಆಝಂ ಖಾನ್ ಅವರಿಗೆ ಸೇರಿದ ಮೊಹಮ್ಮದ್ ಅಲಿ ಜೌಹರ್ ವಿಶ್ವವಿದ್ಯಾಲಯದ 38 ಕಟ್ಟಡಗಳನ್ನು ಕೆಡವಲು ಉತ್ತರ ಪ್ರದೇಶದ ರಾಂಪುರ ನಗರಾಭಿವೃದ್ಧಿ ಪ್ರಾಧಿಕಾರ (ಆರ್‌ಡಿಎ) ಆದೇಶಿಸಿದೆ ಎಂದು ಬುಧವಾರ...