Homeಮುಖಪುಟಹೈಕೋರ್ಟ್‌ ನ್ಯಾಯಾಧೀಶರು ಬಿಜೆಪಿ ಸೇರ್ಪಡೆ: ನ್ಯಾಯಾಂಗದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿರುವುದೇಕೆ?

ಹೈಕೋರ್ಟ್‌ ನ್ಯಾಯಾಧೀಶರು ಬಿಜೆಪಿ ಸೇರ್ಪಡೆ: ನ್ಯಾಯಾಂಗದ ಸ್ವಾತಂತ್ರ್ಯದ ಪ್ರಶ್ನೆ ಉದ್ಭವಿಸಿರುವುದೇಕೆ?

- Advertisement -
- Advertisement -

ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ತಮ್ಮ ಹುದ್ದೆಗೆ ನಿನ್ನೆ ರಾಜೀನಾಮೆ ನೀಡಿದ್ದರು. ಆ ಬಳಿಕ ಅವರು ಬಿಜೆಪಿ ಸೇರ್ಪಡೆಯಾಗುವುದಾಗಿ ಘೋಷಿಸಿದ್ದರು. ತಮ್ಮ ಕೆಲವು ತೀರ್ಪುಗಳು ಮತ್ತು ಅವಲೋಕನಗಳಿಗಾಗಿ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್‌ನಿಂದ ತೀವ್ರ ಟೀಕೆಗಳನ್ನು ಎದುರಿಸಿದ್ದ ಕಲ್ಕತ್ತಾ ಹೈಕೋರ್ಟ್ ನ್ಯಾಯಾಧೀಶ ಅಭಿಜಿತ್ ಗಂಗೋಪಾಧ್ಯಾಯ ರಾಜಕೀಯ ಎಂಟ್ರಿ ಭಾರೀ ಪ್ರಶ್ನೆಯನ್ನು ಹುಟ್ಟು ಹಾಕಿದೆ.

ಗಂಗೋಪಾಧ್ಯಾಯ ಅವರು ಸಾಂವಿಧಾನಿಕ ಹುದ್ದೆಯಿಂದ ಪಕ್ಷ ರಾಜಕೀಯಕ್ಕೆ  ಪ್ರವೇಶಿಸಿದ್ದ ಮೊದಲ ನ್ಯಾಯಾಧೀಶರಲ್ಲ. ಆದರೆ ನ್ಯಾಯಾಂಗದಿಂದ ರಾಜಕೀಯಕ್ಕೆ ಪರಿವರ್ತನೆಗೊಳ್ಳುವ ರೀತಿ, ಪೀಠಕ್ಕೆ ರಾಜೀನಾಮೆ ನೀಡುವ ಮೊದಲು ತಮ್ಮ ನಿರ್ಧಾರವನ್ನು ಸಾರ್ವಜನಿಕವಾಗಿ ಘೋಷಿಸುವುದು, ನ್ಯಾಯಾಧೀಶರಾಗಿದ್ದಾಗ ಬಂಗಾಳದ ಆಡಳಿತ ಪಕ್ಷದ ವಿರುದ್ಧ ಮಾಡಿರುವ ಟೀಕೆ ನ್ಯಾಯಾಂಗ ನಿಷ್ಪಕ್ಷಪಾತದ ಪ್ರಶ್ನೆ ಉದ್ಭವಿಸಲು ಕಾರಣವಾಗಿದೆ.

ಗಂಗೋಪಾಧ್ಯಾಯ ಅವರು ನ್ಯಾಯಾಧೀಶರಾಗಿದ್ದಾಗ ಬಿಜೆಪಿಯೊಂದಿಗೆ ಸಂಪರ್ಕದಲ್ಲಿದ್ದರು ಎಂದು ಹೇಳಿಕೊಂಡಿದ್ದಾರೆ. ನಾನು ಬಿಜೆಪಿಯನ್ನು ಸಂಪರ್ಕಿಸಿದ್ದೇನೆ, ಬಿಜೆಪಿಗೆ ನನ್ನೊಂದಿಗೆ ಸಂಪರ್ಕ ಇದೆ ಎಂದು ಹೇಳಿದ್ದರು. ಪ್ರತ್ಯಕ್ಷವಾಗಿ ಅಥವಾ ಪರೋಕ್ಷವಾಗಿ ಸಹಕಾರಿಯಾಗುವ ರೀತಿ ಆದೇಶಗಳನ್ನು ನೀಡಿದ ರಾಜಕೀಯ ಪಕ್ಷಕ್ಕೆ ಈಗ ಸೇರಿರುವ ನ್ಯಾಯಾಧೀಶರು ಈ ಪೀಠದಲ್ಲಿದ್ದಾಗ ನಿಷ್ಪಕ್ಷಪಾತಿ ಎಂದು ನಂಬುವುದು ಮೂರ್ಖತನ ಎಂದು ಕಾನೂನು ವಿದ್ವಾಂಸ ಮತ್ತು ಲೇಖಕ ಸೈಫ್ ಮಹಮೂದ್ ಅವರು ಹೇಳಿದ್ದಾರೆ.

ಇದು ಗಂಗೋಪಾಧ್ಯಾಯ ಅವರ ಅತ್ಯಂತ ಅನುಚಿತ ವರ್ತನೆ ಎಂದು ಸುಪ್ರೀಂ ಕೋರ್ಟ್‌ನ ಮಾಜಿ ನ್ಯಾಯಾಧೀಶ ಮಾರ್ಕಂಡೇಯ ಕಾಟ್ಜು ಹೇಳಿದ್ದು, ರಾಜೀನಾಮೆಗೆ ಮೊದಲು ನ್ಯಾಯಾಧೀಶರು ಚುನಾವಣೆಯಲ್ಲಿ ಸ್ಪರ್ಧಿಸುವುದಾಗಿ ಹೇಳಬಾರದಿತ್ತು, ಅವರ ಹೇಳಿಕೆಗಳು ತೃಣಮೂಲ ಕಾಂಗ್ರೆಸ್ ವಿರುದ್ಧ ಪೂರ್ವಾಗ್ರಹದ ಅನಿಸಿಕೆಗಳನ್ನು ಸೃಷ್ಟಿಸುತ್ತವೆ ಎಂದು ಹೇಳಿದ್ದಾರೆ.

ನ್ಯಾಯಾಂಗದ ವಿಶ್ವಾಸಾರ್ಹತೆಯು, ನ್ಯಾಯೋಚಿತತೆ ಮತ್ತು ನಿಷ್ಪಕ್ಷಪಾತದ ಸಾರ್ವಜನಿಕ ಗ್ರಹಿಕೆಯನ್ನು ಅವಲಂಬಿಸಿದೆ. ನ್ಯಾಯಾಧೀಶರ ನಿವೃತ್ತಿಯ ನಂತರದ ರಾಜಕೀಯ ಪಕ್ಷದೊಂದಿಗಿನ ಸಂಬಂಧವು ನ್ಯಾಯಾಧೀಶರ ನಿಜವಾದ ಉದ್ದೇಶಗಳನ್ನು ಲೆಕ್ಕಿಸದೆ ಪಕ್ಷಪಾತದ ಬಲವಾದ ಗ್ರಹಿಕೆಯನ್ನು ಸೃಷ್ಟಿಸುತ್ತದೆ. ನ್ಯಾಯಾಧೀಶರು ತಟಸ್ಥ ಮತ್ತು ನಿಷ್ಪಕ್ಷಪಾತವಾಗಿದ್ದಾರೆಂದು ಹೇಳುವುದು ಮಾತ್ರವಲ್ಲ ಅದರಂತೆ ನಡೆದುಕೊಳ್ಳಬೇಕು ಎಂದು ಕಾಟ್ಜು ಒತ್ತಿ ಹೇಳಿದರು. ಇತ್ತೀಚಿನ ದಿನಗಳಲ್ಲಿ ರಾಜಕೀಯ ಒಲವನ್ನು ಹೊಂದಿದ್ದ ಮತ್ತು ನಿವೃತ್ತಿಯ ನಂತರ ಸರ್ಕಾರಿ ನೇಮಕಾತಿಗಳನ್ನು ಪಡೆದ ಅನೇಕ ನ್ಯಾಯಾಧೀಶರನ್ನು ನೆನಪಿಸಬಹುದು. ಈ ಬೆಳವಣಿಗೆಗಳು ನ್ಯಾಯಾಂಗವು ಸ್ವತಂತ್ರವಾಗಿಲ್ಲ ಎಂಬ ಭಾವನೆಯನ್ನು ಸೃಷ್ಟಿಸುತ್ತದೆ ಎಂದು ಹೇಳಿದ್ದಾರೆ.

ನ್ಯಾಯಾಧೀಶರು ತಮ್ಮ ನ್ಯಾಯಾಂಗ ಕಚೇರಿಯನ್ನು ತ್ಯಜಿಸುವ ಮತ್ತು ರಾಜಕೀಯಕ್ಕೆ ಪ್ರವೇಶಿಸುವ ಅಥವಾ ಯಾವುದೇ ಇತರ ಸರ್ಕಾರಿ ನೇಮಕಾತಿಯನ್ನು ಸ್ವೀಕರಿಸುವ ಬಗ್ಗೆ ಮಾತನಾಡಿದ ಮಾರ್ಕಂಡೇಯ ಕಾಟ್ಜು, ನ್ಯಾಯಾಧೀಶರು ಆಟದಲ್ಲಿ ರೆಫರಿ ಇದ್ದಂತೆ. ಅವರು ಸೇರಲು ಸಾಧ್ಯವಿಲ್ಲ, ಅವರು ಅದನ್ನು ನ್ಯಾಯಯುತವಾಗಿ ನಡೆಸುತ್ತಾರೆ ಎಂದು ಮಾತ್ರ ನೋಡಬೇಕು ಎಂದು ಹೇಳಿದ್ದಾರೆ.

ಮಹಮೂದ್ ಪ್ರಕಾರ, ನ್ಯಾಯಾಧೀಶರು ಸಂವಿಧಾನವನ್ನು ಎತ್ತಿ ಹಿಡಿಯುವ ಬಾಧ್ಯತೆ ಹೊಂದಿದ್ದಾರೆ. ಈ ಕಾರಣಕ್ಕಾಗಿಯೇ ಹೈಕೋರ್ಟ್‌ಗಳು ಮತ್ತು ಸುಪ್ರೀಂ ಕೋರ್ಟ್‌ಗಳ ನ್ಯಾಯಾಧೀಶರು ಚುನಾವಣೆಯಲ್ಲಿ ಸ್ಪರ್ಧಿಸಲು ಸಂಪೂರ್ಣ ನಿರ್ಬಂಧವನ್ನು ಬೆಂಬಲಿಸಿದರು. ಜಡ್ಜ್‌ಗಳ ನಿವೃತ್ತಿಯ ನಂತರದ ರಾಜಕೀಯ ಸಂಬಂಧ, ನ್ಯಾಯಾಂಗದ ಸ್ವಾತಂತ್ರ್ಯದ ಮೇಲೆ ನಿರ್ದಾಕ್ಷಿಣ್ಯವಾಗಿ ಅಡ್ಡಿಪಡಿಸುತ್ತದೆ ಎಂದು ಹೇಳಿದ್ದಾರೆ.

2018ರಲ್ಲಿ ಹೆಚ್ಚುವರಿ ನ್ಯಾಯಾಧೀಶರಾಗಿ ಹೈಕೋರ್ಟ್‌ಗೆ ನೇಮಕಗೊಂಡಿದ್ದ 62 ವರ್ಷದ ಗಂಗೋಪಾಧ್ಯಾಯ ಜುಲೈ 2020ರಲ್ಲಿ ಖಾಯಂ ನ್ಯಾಯಾಧೀಶರಾಗಿ ನೇಮಕಗೊಂಡಿದ್ದರು, ಅವರು ಜುಲೈನಲ್ಲಿ ನಿವೃತ್ತಿ ಪಡೆಯಲಿದ್ದರು. ಅವರು ಪಶ್ಚಿಮ ಬಂಗಾಳ ಸಿವಿಲ್ ಸರ್ವಿಸ್ ಅಧಿಕಾರಿಯಾಗಿದ್ದರು ಆದರೆ ವಕೀಲರಾಗಲು 10 ವರ್ಷಗಳ ಹಿಂದೆ ತಮ್ಮ ಸಿವಿಲ್‌ ಸರ್ವಿಸ್‌ ಹುದ್ದೆಯನ್ನು ತೊರೆದಿದ್ದರು.

ಏಪ್ರಿಲ್ 2023ರಲ್ಲಿ, ಶಾಲಾ ನೇಮಕಾತಿ ಹಗರಣಕ್ಕೆ ಸಂಬಂಧಿಸಿದ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದ ನ್ಯಾ. ಗಂಗೋಪಾಧ್ಯಾಯ ಅವರು, ಈ ಹಗರಣದಲ್ಲಿ ಟಿಎಂಸಿ ನಾಯಕ ಅಭಿಷೇಕ್ ಬ್ಯಾನರ್ಜಿ ಅವರ ಪಾತ್ರದ ಬಗ್ಗೆ ಸ್ಥಳೀಯ ಬಂಗಾಳಿ ಸುದ್ದಿ ವಾಹಿನಿಗೆ ಸಂದರ್ಶನ ನೀಡಿದ್ದರು. ಇದಕ್ಕೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದ ಸುಪ್ರೀಂ ಕೋರ್ಟ್, ಟಿವಿ ಚಾನೆಲ್‌ಗಳಿಗೆ ಸಂದರ್ಶನ ನೀಡುವುದು ಹಾಲಿ ನ್ಯಾಯಮೂರ್ತಿಗಳ ಕೆಲಸವಲ್ಲ ಎಂದಿತ್ತು.ನ್ಯಾ. ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದಾರೆಯೇ ಅಥವಾ ಇಲ್ಲವೇ ಎಂಬುದನ್ನು ಪರಿಶೀಲಿಸಲು ಕಲ್ಕತ್ತಾ ಹೈಕೋರ್ಟ್‌ ರಿಜಿಸ್ಟ್ರಾರ್ ಜನರಲ್ ಅವರಿಂದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್ ನೇತೃತ್ವದ ಸುಪ್ರೀಂ ಕೋರ್ಟ್ ಪೀಠ ವರದಿ ಕೇಳಿತ್ತು.

ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಸಂದರ್ಶನ ನೀಡಿದ್ದು ನಿಜವಾಗಿದ್ದರೆ, ಅರ್ಜಿಗಳ ವಿಚಾರಣೆ ಮುಂದುವರಿಸಲು ಅವರಿಗೆ ಅವಕಾಶ ನೀಡುವುದಿಲ್ಲ ಎಂದು ಸರ್ವೋಚ್ಚ ನ್ಯಾಯಾಲಯ ಸ್ಪಷ್ಟಪಡಿಸಿತ್ತು. ಅಲ್ಲದೆ, ಪ್ರಕರಣವನ್ನು ಮತ್ತೊಂದು ಪೀಠಕ್ಕೆ ನಿಯೋಜಿಸುವಂತೆ ಕಲ್ಕತ್ತಾ ಹೈಕೋರ್ಟ್‌ನ ಮುಖ್ಯ ನ್ಯಾಯಮೂರ್ತಿಯವರಿಗೆ ಸಿಜೆಐ ಆದೇಶಿಸಿದ್ದರು. ಸುಪ್ರೀಂ ಕೋರ್ಟ್ ಆದೇಶ ನೀಡಿದ ಕೆಲವೇ ಗಂಟೆಗಳಲ್ಲಿ, ನ್ಯಾಯಮೂರ್ತಿ ಗಂಗೋಪಾಧ್ಯಾಯ ಅವರು ಬಂಗಾಳಿ ಮಾಧ್ಯಮಗಳಿಗೆ ನೀಡಿದ ಸಂದರ್ಶನದ ವರದಿ ಮತ್ತು ಅಧಿಕೃತ ಅನುವಾದವನ್ನು ತಮ್ಮೆದುರು ಹಾಜರುಪಡಿಸುವಂತೆ ಸುಪ್ರೀಂ ಕೋರ್ಟ್ ಪ್ರಧಾನ ಕಾರ್ಯದರ್ಶಿಗೆ ನಿರ್ದೇಶನ ನೀಡಿತ್ತು.

ಇದನ್ನು ಓದಿ: ರೈತರ ನೂರಾರು ಸಾಮಾಜಿಕ ಮಾದ್ಯಮ ಖಾತೆಗಳಿಗೆ ನಿರ್ಬಂಧ: ದೆಹಲಿ ಚಲೋ ಪ್ರತಿಭಟನೆಗೆ ಬೆದರಿದ ಕೇಂದ್ರ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...