Homeಕರ್ನಾಟಕ‘ನಾನೇಕೆ ಹಿಂದೂ ಅಲ್ಲ’: ನಟ, ಚಿಂತಕ ಕಿರಣ್‌ ಶ್ರೀನಿವಾಸ ಪತ್ರ

‘ನಾನೇಕೆ ಹಿಂದೂ ಅಲ್ಲ’: ನಟ, ಚಿಂತಕ ಕಿರಣ್‌ ಶ್ರೀನಿವಾಸ ಪತ್ರ

- Advertisement -
- Advertisement -

“ನಾನೇಕೆ ಹಿಂದೂವಲ್ಲ ಮತ್ತು ಹಿಂದೂಯಿಸಂಗೆ ಅದರಿಂದ ಅಪಚಾರವಾಗುವುದಿಲ್ಲ ಏಕೆ?” ಎಂಬ ಶೀರ್ಷಿಕೆಯಲ್ಲಿ ಚಿಂತಕ, ನಟ ಕಿರಣ್‌ ಶ್ರೀನಿವಾಸ ಅವರು ಪತ್ರ ಬರೆದಿದ್ದಾರೆ. “ನಿಜವಾದ ಹಿಂದೂವಾಗಿಲ್ಲದಿದ್ದರೆ ಅದಕ್ಕಾಗಿ ಹೋರಾಡುವುದನ್ನು ನಿಲ್ಲಿಸಿ” ಎಂದು ಮನವಿಯನ್ನೂ ಮಾಡಿದ್ದಾರೆ.

ಫೇಸ್‌ಬು‌ಕ್‌ನಲ್ಲಿ ಈ ಕುರಿತು ಎರಡು ಪುಟಗಳ ಟಿಪ್ಪಣಿಯನ್ನು ಅವರು ಪೋಸ್ಟ್‌ ಮಾಡಿದ್ದಾರೆ.

ಕಿರಣ್ ಶ್ರೀನಿವಾಸ್ ಅವರ ಪತ್ರ:

ಪ್ರೀತಿಯ ಹಿಂದೂಗಳೇ,

ನಾನು ಹಿಂದೂ ಅಲ್ಲ ಎಂದು ಆಸಕ್ತಿ ಅಥವಾ ಕಾಳಜಿ ಇರುವ ಯಾರಿಗಾದರೂ ತಿಳಿಸಲು ನಾನು ಇದನ್ನು ಬರೆಯುತ್ತಿದ್ದೇನೆ. ನಾನು ಹಿಂದೂ ಅಲ್ಲ ಎಂದು ನಾನು ಭಾವಿಸಲು ಇರುವ ಕಾರಣಗಳನ್ನು ಪಟ್ಟಿ ಮಾಡುತ್ತೇನೆ. ನಾನು ಪಟ್ಟಿ ಮಾಡುತ್ತಿರುವ ಕಾರಣಗಳನ್ನು ಚೆನ್ನಾಗಿ ಚಿಂತಿಸಿದ್ದೇನೆ, ಸೂಕ್ಷ್ಮವಾಗಿ, ತರ್ಕಬದ್ಧ ವಿಚಾರಣೆಯ ಮೂಲಕ ಪರಿಶೀಲಿಸಿದ್ದೇನೆ. ನೀವು ಇದನ್ನು ಓದಿದ ನಂತರ, ನೀವು ಹಿಂದೂ ಆಗಿರಲು ಅರ್ಹರಾಗಿದ್ದೀರಾ, ಇಲ್ಲವಾ ಎಂದು ಪರಿಶೀಲಿಸುವಂತೆ ನನ್ನ ವಿನಮ್ರ ಮತ್ತು ಪ್ರಾಮಾಣಿಕ ಮನವಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನನ್ನ ಅಭಿಪ್ರಾಯದಲ್ಲಿ ಹಿಂದೂ ಆಗಿರುವುದು ಎಂದರೆ ಗೀತೆ, ವೇದ, ಉಪನಿಷತ್‌, ಪುರಾಣ ಪವಿತ್ರ ಗ್ರಂಥಗಳನ್ನು ಅಥವಾ ಹಿಂದೂ ಧರ್ಮದ ಪವಿತ್ರ ತತ್ವಗಳನ್ನು ಪಾಲಿಸುವವನು ಎಂದರ್ಥ. ಹಿಂದೂ ಆಗಿರಲು ಬೇಕಾದ ಮೂಲ, ಪ್ರವೇಶ ಮಟ್ಟದ ಅರ್ಹತೆ ಇದೆಂದು ನಾನು ಭಾವಿಸುತ್ತೇನೆ.

ನಾನು ಹಿಂದೂ ಕುಟುಂಬದಲ್ಲಿ ಜನಿಸಿದರೂ, ನನ್ನ ಪೂರ್ವಜರೆಲ್ಲರೂ ಮೇಲೆ ತಿಳಿಸಿದ ಎಲ್ಲಾ ಸಾಹಿತ್ಯವನ್ನು ಓದದ ಹೊರತು ನಾನು ನಿಜವಾದ ಹಿಂದೂ ಎನ್ನಲು ಸಾಧ್ಯವಿಲ್ಲ. ನನ್ನ ತಂದೆ ತಾಯಿಯರಿಬ್ಬರೂ ಇದನ್ನು ಮಾಡಿಲ್ಲವೆಂದು ನನಗೆ ಚೆನ್ನಾಗಿ ತಿಳಿದಿದೆ. ನಾನು ಈ ಗ್ರಂಥಗಳನ್ನು ಸಂಪೂರ್ಣವಾಗಿ ಓದಿಲ್ಲ. ಇದರಿಂದಾಗಿ ನಾನು ಹಿಂದೂ ಅಲ್ಲ ಎಂದು ಸ್ವಯಂ ಭಾವಿಸುತ್ತೇನೆ.

ಹಿಂದೂ ಎಂಬ ನಿಜವಾದ ಸಾರವನ್ನು ವಿವರಿಸಲು ಪ್ರಯತ್ನಿಸುವ ಬಹಳಷ್ಟು ವ್ಯಾಖ್ಯಾನಗಳಿವೆ. ಇದು ನೀವು ಯಾರನ್ನು ಕೇಳುತ್ತಿದ್ದೀರಿ ಮತ್ತು ಅದರ ಹಿಂದಿನ ಅಜೆಂಡಾವನ್ನು ಅವಲಂಬಿಸಿರುತ್ತದೆ. ಆದರೆ ಹಿಂದೂ ಎಂಬ ಒಂದೇ ಒಂದು ಮಾರ್ಗವಿದೆ ಎಂದು ನಾನು ಪ್ರಾಮಾಣಿಕವಾಗಿ ನಂಬುತ್ತೇನೆ. ಅದು ಆಳವಾದ, ಅರ್ಥಪೂರ್ಣ, ಆಧ್ಯಾತ್ಮಿಕ, ಸಂಕೀರ್ಣ, ಧಾರ್ಮಿಕ ಮತ್ತು ಚಿಂತನಾ ಪ್ರಚೋದಕ ಜೀವನ ಕಲ್ಪನೆಗಳಲ್ಲಿ ಸಂಪೂರ್ಣವಾಗಿ ಅಂತರ್ಗತವಾಗಿರುವ ಜೀವನ ವಿಧಾನವನ್ನು ಮುನ್ನಡೆಸುತ್ತದೆ. ಆದ್ದರಿಂದ “ಹಿಂದೂ ಧರ್ಮ ಒಂದು ಜೀವನ ವಿಧಾನ” ಮತ್ತು ಆದ್ದರಿಂದ ನಾನು ಇಲ್ಲಿ ಪ್ರಾಮಾಣಿಕವಾಗಿರಬೇಕು. ನಾನು ಹಿಂದೂ ಅಲ್ಲ ಎಂದು ಒಪ್ಪಿಕೊಳ್ಳಬೇಕು.

…ಸತ್ಯವಾಗಿ ನಡೆದುಕೊಂಡಿರುವ ಎಲ್ಲ ಹಿಂದೂಗಳ ಬಗ್ಗೆ ನನಗೆ ಅತ್ಯುನ್ನತ ಗೌರವ ಹೊರತುಪಡಿಸಿ ಬೇರೇನೂ ಇಲ್ಲ. ನಾನು ಈ ಹಿಂದೆ ಹೇಳಿರುವ ಯಾವುದೇ ಅಸೂಕ್ಷ್ಮ, ಅಪಹಾಸ್ಯ, ನೋವುಂಟುಮಾಡುವ ವಿಷಯಗಳಿಗಾಗಿ ನಿಜವಾದ ಹಿಂದೂಗಳಲ್ಲಿ (ಪವಿತ್ರ ಗ್ರಂಥಗಳನ್ನು ಓದಿದವರಲ್ಲಿ) ಕ್ಷಮೆಯಾಚಿಸುತ್ತೇನೆ. ನನ್ನ ಅಜ್ಞಾನಕ್ಕಾಗಿ ನೀವೆಲ್ಲರೂ ನನ್ನನ್ನು ಕ್ಷಮಿಸುತ್ತೀರಿ ಎಂದು ನನಗೆ ತಿಳಿದಿದೆ.

ಇದನ್ನೂ ಓದಿರಿ: ಬೆಂಗಳೂರಿನ ಗುಂಡಿಗಳನ್ನು ತುಂಬುವಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲ: ರಾಜ್ಯ ಹೈಕೋರ್ಟ್ ಕಿಡಿ

ಹಾಗಾದರೆ ಈಗ ಉಳಿದಿರುವುದು ಈ ಪ್ರಶ್ನೆಯನ್ನು ನೀವೇ ಕೇಳಿಕೊಳ್ಳುವುದು. ನೀವು ಹಿಂದೂ ಧರ್ಮದ ಎಲ್ಲಾ ಪವಿತ್ರ ಪುಸ್ತಕಗಳನ್ನು ಓದಿದ್ದೀರಾ? ಏಕೆಂದರೆ ಅಲ್ಲಿಯೇ ಮೊದಲ ಹೆಜ್ಜೆ ಪ್ರಾರಂಭವಾಗುತ್ತದೆ. ಅದು ಹಿಂದೂವಾಗಲು ಅಥವಾ ಹಿಂದೂ ಜೀವನ ವಿಧಾನವನ್ನು ಮುನ್ನಡೆಸಲು ಇರುವ ಪ್ರವೇಶವಾಗಿದೆ. ಈ ಮೂಲಭೂತ ಹಂತಗಳನ್ನು ಹಾದುಹೋಗದಿದ್ದರೆ ಉಳಿದವುಗಳು ನಗಣ್ಯ. ಆದ್ದರಿಂದ ನಿಲ್ಲಿಸಿ, ಅದರ ಬಗ್ಗೆ ಯೋಚಿಸಿ. ನಾನು ಇಲ್ಲಿ ಹೇಗೆ ಇದ್ದೇನೆಯೋ ಹಾಗೆ ನೀವು ನಿಮ್ಮ ಬಗ್ಗೆ ಪ್ರಾಮಾಣಿಕರಾಗಿದ್ದರೆ, ನೀವು ಒಂದು ತೀರ್ಮಾನಕ್ಕೆ ಬರುತ್ತೀರಿ. ನೀವು ನಿಜವಾದ ಹಿಂದೂ ಆಗಿದ್ದರೆ ನಿಮಗೆ ಗೌರವ, ಪ್ರೀತಿ ಮತ್ತು ವಂದನೆಗಳು. ಆದರೆ ನೀವು ಹಿಂದೂವಾಗಿಲ್ಲದಿದ್ದರೆ ಅದಕ್ಕಾಗಿ ಹೋರಾಡುವುದನ್ನು ನಿಲ್ಲಿಸಿ, ಅದನ್ನು ಉಳಿಸುವುದನ್ನು ನಿಲ್ಲಿಸಿ, ಅದನ್ನು ರಾಜಕೀಯಗೊಳಿಸುವುದನ್ನು ನಿಲ್ಲಿಸಿ, ಅದರೊಳಗೆ ಕೋಮುವಾದ ಮಾಡುವುದನ್ನು ನಿಲ್ಲಿಸಿ! ಈಗಲೇ ನಿಲ್ಲಿಸಿ. ಏಕೆಂದರೆ ನೀವು ಹಿಂದೂ ಎಂಬ ಹೆಸರಿನಲ್ಲಿ ಸಂಪೂರ್ಣವಾಗಿ ಹಿಂದೂ ವಿರೋಧಿ ಕೆಲಸಗಳನ್ನು ಮಾಡುತ್ತಿದ್ದೀರಿ.

-ನಿಮ್ಮ ವಿಶ್ವಾಸಿ,
ಕಿರಣ್ ಶ್ರೀನಿವಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...