Homeಕರ್ನಾಟಕ‘ನಾನೇಕೆ ಹಿಂದೂ ಅಲ್ಲ’: ನಟ, ಚಿಂತಕ ಕಿರಣ್‌ ಶ್ರೀನಿವಾಸ ಪತ್ರ

‘ನಾನೇಕೆ ಹಿಂದೂ ಅಲ್ಲ’: ನಟ, ಚಿಂತಕ ಕಿರಣ್‌ ಶ್ರೀನಿವಾಸ ಪತ್ರ

- Advertisement -
- Advertisement -

“ನಾನೇಕೆ ಹಿಂದೂವಲ್ಲ ಮತ್ತು ಹಿಂದೂಯಿಸಂಗೆ ಅದರಿಂದ ಅಪಚಾರವಾಗುವುದಿಲ್ಲ ಏಕೆ?” ಎಂಬ ಶೀರ್ಷಿಕೆಯಲ್ಲಿ ಚಿಂತಕ, ನಟ ಕಿರಣ್‌ ಶ್ರೀನಿವಾಸ ಅವರು ಪತ್ರ ಬರೆದಿದ್ದಾರೆ. “ನಿಜವಾದ ಹಿಂದೂವಾಗಿಲ್ಲದಿದ್ದರೆ ಅದಕ್ಕಾಗಿ ಹೋರಾಡುವುದನ್ನು ನಿಲ್ಲಿಸಿ” ಎಂದು ಮನವಿಯನ್ನೂ ಮಾಡಿದ್ದಾರೆ.

ಫೇಸ್‌ಬು‌ಕ್‌ನಲ್ಲಿ ಈ ಕುರಿತು ಎರಡು ಪುಟಗಳ ಟಿಪ್ಪಣಿಯನ್ನು ಅವರು ಪೋಸ್ಟ್‌ ಮಾಡಿದ್ದಾರೆ.

ಕಿರಣ್ ಶ್ರೀನಿವಾಸ್ ಅವರ ಪತ್ರ:

ಪ್ರೀತಿಯ ಹಿಂದೂಗಳೇ,

ನಾನು ಹಿಂದೂ ಅಲ್ಲ ಎಂದು ಆಸಕ್ತಿ ಅಥವಾ ಕಾಳಜಿ ಇರುವ ಯಾರಿಗಾದರೂ ತಿಳಿಸಲು ನಾನು ಇದನ್ನು ಬರೆಯುತ್ತಿದ್ದೇನೆ. ನಾನು ಹಿಂದೂ ಅಲ್ಲ ಎಂದು ನಾನು ಭಾವಿಸಲು ಇರುವ ಕಾರಣಗಳನ್ನು ಪಟ್ಟಿ ಮಾಡುತ್ತೇನೆ. ನಾನು ಪಟ್ಟಿ ಮಾಡುತ್ತಿರುವ ಕಾರಣಗಳನ್ನು ಚೆನ್ನಾಗಿ ಚಿಂತಿಸಿದ್ದೇನೆ, ಸೂಕ್ಷ್ಮವಾಗಿ, ತರ್ಕಬದ್ಧ ವಿಚಾರಣೆಯ ಮೂಲಕ ಪರಿಶೀಲಿಸಿದ್ದೇನೆ. ನೀವು ಇದನ್ನು ಓದಿದ ನಂತರ, ನೀವು ಹಿಂದೂ ಆಗಿರಲು ಅರ್ಹರಾಗಿದ್ದೀರಾ, ಇಲ್ಲವಾ ಎಂದು ಪರಿಶೀಲಿಸುವಂತೆ ನನ್ನ ವಿನಮ್ರ ಮತ್ತು ಪ್ರಾಮಾಣಿಕ ಮನವಿ.
ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
₹100 ₹200 ₹500 ₹1000 Others

ನನ್ನ ಅಭಿಪ್ರಾಯದಲ್ಲಿ ಹಿಂದೂ ಆಗಿರುವುದು ಎಂದರೆ ಗೀತೆ, ವೇದ, ಉಪನಿಷತ್‌, ಪುರಾಣ ಪವಿತ್ರ ಗ್ರಂಥಗಳನ್ನು ಅಥವಾ ಹಿಂದೂ ಧರ್ಮದ ಪವಿತ್ರ ತತ್ವಗಳನ್ನು ಪಾಲಿಸುವವನು ಎಂದರ್ಥ. ಹಿಂದೂ ಆಗಿರಲು ಬೇಕಾದ ಮೂಲ, ಪ್ರವೇಶ ಮಟ್ಟದ ಅರ್ಹತೆ ಇದೆಂದು ನಾನು ಭಾವಿಸುತ್ತೇನೆ.

ನಾನು ಹಿಂದೂ ಕುಟುಂಬದಲ್ಲಿ ಜನಿಸಿದರೂ, ನನ್ನ ಪೂರ್ವಜರೆಲ್ಲರೂ ಮೇಲೆ ತಿಳಿಸಿದ ಎಲ್ಲಾ ಸಾಹಿತ್ಯವನ್ನು ಓದದ ಹೊರತು ನಾನು ನಿಜವಾದ ಹಿಂದೂ ಎನ್ನಲು ಸಾಧ್ಯವಿಲ್ಲ. ನನ್ನ ತಂದೆ ತಾಯಿಯರಿಬ್ಬರೂ ಇದನ್ನು ಮಾಡಿಲ್ಲವೆಂದು ನನಗೆ ಚೆನ್ನಾಗಿ ತಿಳಿದಿದೆ. ನಾನು ಈ ಗ್ರಂಥಗಳನ್ನು ಸಂಪೂರ್ಣವಾಗಿ ಓದಿಲ್ಲ. ಇದರಿಂದಾಗಿ ನಾನು ಹಿಂದೂ ಅಲ್ಲ ಎಂದು ಸ್ವಯಂ ಭಾವಿಸುತ್ತೇನೆ.

ಹಿಂದೂ ಎಂಬ ನಿಜವಾದ ಸಾರವನ್ನು ವಿವರಿಸಲು ಪ್ರಯತ್ನಿಸುವ ಬಹಳಷ್ಟು ವ್ಯಾಖ್ಯಾನಗಳಿವೆ. ಇದು ನೀವು ಯಾರನ್ನು ಕೇಳುತ್ತಿದ್ದೀರಿ ಮತ್ತು ಅದರ ಹಿಂದಿನ ಅಜೆಂಡಾವನ್ನು ಅವಲಂಬಿಸಿರುತ್ತದೆ. ಆದರೆ ಹಿಂದೂ ಎಂಬ ಒಂದೇ ಒಂದು ಮಾರ್ಗವಿದೆ ಎಂದು ನಾನು ಪ್ರಾಮಾಣಿಕವಾಗಿ ನಂಬುತ್ತೇನೆ. ಅದು ಆಳವಾದ, ಅರ್ಥಪೂರ್ಣ, ಆಧ್ಯಾತ್ಮಿಕ, ಸಂಕೀರ್ಣ, ಧಾರ್ಮಿಕ ಮತ್ತು ಚಿಂತನಾ ಪ್ರಚೋದಕ ಜೀವನ ಕಲ್ಪನೆಗಳಲ್ಲಿ ಸಂಪೂರ್ಣವಾಗಿ ಅಂತರ್ಗತವಾಗಿರುವ ಜೀವನ ವಿಧಾನವನ್ನು ಮುನ್ನಡೆಸುತ್ತದೆ. ಆದ್ದರಿಂದ “ಹಿಂದೂ ಧರ್ಮ ಒಂದು ಜೀವನ ವಿಧಾನ” ಮತ್ತು ಆದ್ದರಿಂದ ನಾನು ಇಲ್ಲಿ ಪ್ರಾಮಾಣಿಕವಾಗಿರಬೇಕು. ನಾನು ಹಿಂದೂ ಅಲ್ಲ ಎಂದು ಒಪ್ಪಿಕೊಳ್ಳಬೇಕು.

…ಸತ್ಯವಾಗಿ ನಡೆದುಕೊಂಡಿರುವ ಎಲ್ಲ ಹಿಂದೂಗಳ ಬಗ್ಗೆ ನನಗೆ ಅತ್ಯುನ್ನತ ಗೌರವ ಹೊರತುಪಡಿಸಿ ಬೇರೇನೂ ಇಲ್ಲ. ನಾನು ಈ ಹಿಂದೆ ಹೇಳಿರುವ ಯಾವುದೇ ಅಸೂಕ್ಷ್ಮ, ಅಪಹಾಸ್ಯ, ನೋವುಂಟುಮಾಡುವ ವಿಷಯಗಳಿಗಾಗಿ ನಿಜವಾದ ಹಿಂದೂಗಳಲ್ಲಿ (ಪವಿತ್ರ ಗ್ರಂಥಗಳನ್ನು ಓದಿದವರಲ್ಲಿ) ಕ್ಷಮೆಯಾಚಿಸುತ್ತೇನೆ. ನನ್ನ ಅಜ್ಞಾನಕ್ಕಾಗಿ ನೀವೆಲ್ಲರೂ ನನ್ನನ್ನು ಕ್ಷಮಿಸುತ್ತೀರಿ ಎಂದು ನನಗೆ ತಿಳಿದಿದೆ.

ಇದನ್ನೂ ಓದಿರಿ: ಬೆಂಗಳೂರಿನ ಗುಂಡಿಗಳನ್ನು ತುಂಬುವಲ್ಲಿ ಬಿಬಿಎಂಪಿ ಸಂಪೂರ್ಣ ವಿಫಲ: ರಾಜ್ಯ ಹೈಕೋರ್ಟ್ ಕಿಡಿ

ಹಾಗಾದರೆ ಈಗ ಉಳಿದಿರುವುದು ಈ ಪ್ರಶ್ನೆಯನ್ನು ನೀವೇ ಕೇಳಿಕೊಳ್ಳುವುದು. ನೀವು ಹಿಂದೂ ಧರ್ಮದ ಎಲ್ಲಾ ಪವಿತ್ರ ಪುಸ್ತಕಗಳನ್ನು ಓದಿದ್ದೀರಾ? ಏಕೆಂದರೆ ಅಲ್ಲಿಯೇ ಮೊದಲ ಹೆಜ್ಜೆ ಪ್ರಾರಂಭವಾಗುತ್ತದೆ. ಅದು ಹಿಂದೂವಾಗಲು ಅಥವಾ ಹಿಂದೂ ಜೀವನ ವಿಧಾನವನ್ನು ಮುನ್ನಡೆಸಲು ಇರುವ ಪ್ರವೇಶವಾಗಿದೆ. ಈ ಮೂಲಭೂತ ಹಂತಗಳನ್ನು ಹಾದುಹೋಗದಿದ್ದರೆ ಉಳಿದವುಗಳು ನಗಣ್ಯ. ಆದ್ದರಿಂದ ನಿಲ್ಲಿಸಿ, ಅದರ ಬಗ್ಗೆ ಯೋಚಿಸಿ. ನಾನು ಇಲ್ಲಿ ಹೇಗೆ ಇದ್ದೇನೆಯೋ ಹಾಗೆ ನೀವು ನಿಮ್ಮ ಬಗ್ಗೆ ಪ್ರಾಮಾಣಿಕರಾಗಿದ್ದರೆ, ನೀವು ಒಂದು ತೀರ್ಮಾನಕ್ಕೆ ಬರುತ್ತೀರಿ. ನೀವು ನಿಜವಾದ ಹಿಂದೂ ಆಗಿದ್ದರೆ ನಿಮಗೆ ಗೌರವ, ಪ್ರೀತಿ ಮತ್ತು ವಂದನೆಗಳು. ಆದರೆ ನೀವು ಹಿಂದೂವಾಗಿಲ್ಲದಿದ್ದರೆ ಅದಕ್ಕಾಗಿ ಹೋರಾಡುವುದನ್ನು ನಿಲ್ಲಿಸಿ, ಅದನ್ನು ಉಳಿಸುವುದನ್ನು ನಿಲ್ಲಿಸಿ, ಅದನ್ನು ರಾಜಕೀಯಗೊಳಿಸುವುದನ್ನು ನಿಲ್ಲಿಸಿ, ಅದರೊಳಗೆ ಕೋಮುವಾದ ಮಾಡುವುದನ್ನು ನಿಲ್ಲಿಸಿ! ಈಗಲೇ ನಿಲ್ಲಿಸಿ. ಏಕೆಂದರೆ ನೀವು ಹಿಂದೂ ಎಂಬ ಹೆಸರಿನಲ್ಲಿ ಸಂಪೂರ್ಣವಾಗಿ ಹಿಂದೂ ವಿರೋಧಿ ಕೆಲಸಗಳನ್ನು ಮಾಡುತ್ತಿದ್ದೀರಿ.

-ನಿಮ್ಮ ವಿಶ್ವಾಸಿ,
ಕಿರಣ್ ಶ್ರೀನಿವಾಸ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...