Homeಅಂತರಾಷ್ಟ್ರೀಯಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

- Advertisement -
- Advertisement -

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಮಾ.15ರೊಳಗೆ ಭಾರತ ತನ್ನ ಮಿಲಿಟರಿ ಸಿಬ್ಬಂದಿಯನ್ನು ವಾಪಾಸ್ಸು ಕರೆಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ. ಭಾರತೀಯ ಸೇನಾ ಸಿಬ್ಬಂದಿ ಮಾಲ್ಡೀವ್ಸ್‌ನಲ್ಲಿ ಇರುವಂತಿಲ್ಲ. ಇದು ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು ಮತ್ತು ಸರಕಾರದ ನೀತಿಯಾಗಿದೆ ಎಂದು ಅಧ್ಯಕ್ಷರ ಕಚೇರಿಯ ಸಾರ್ವಜನಿಕ ನೀತಿ ಕಾರ್ಯದರ್ಶಿ ಅಬ್ದುಲ್ಲಾ ನಜೀಮ್ ಇಬ್ರಾಹಿಂ ಹೇಳಿದ್ದಾರೆ.

ಮಾಲ್ಡೀವ್ಸ್ ಮತ್ತು ಭಾರತವು ಸೈನ್ಯವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತುಕತೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಿವೆ. ಭಾನುವಾರ ಬೆಳಗ್ಗೆ ಮಾಲ್ಡಿವ್ಸ್‌ನ ಮಾಲೆಯಲ್ಲಿರುವ ವಿದೇಶಾಂಗ ಸಚಿವಾಲಯದ ಪ್ರಧಾನ ಕಚೇರಿಯಲ್ಲಿ ಈ ಸಮಿತಿ ತನ್ನ ಮೊದಲ ಸಭೆಯನ್ನು ನಡೆಸಿದೆ. ಸಭೆಯಲ್ಲಿ ಭಾರತೀಯ ಹೈಕಮಿಷನರ್ ಮುನು ಮಹಾವರ್ ಕೂಡ ಭಾಗವಹಿಸಿದ್ದರು ಎಂದು ಮಾಲ್ಡೀವಿಯನ್ ಮಾದ್ಯಮ ವರದಿಗಳು ತಿಳಿಸಿವೆ. ಆದರೆ ತಕ್ಷಣಕ್ಕೆ ಈ ಬಗ್ಗೆ ಭಾರತೀಯ ಮಾದ್ಯಮಗಳು ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಮಾಲ್ಡೀವ್ಸ್‌ ದ್ವೀಪದಲ್ಲಿ ಭಾರತೀಯ ಸೈನಿಕರ ಯಾವುದೇ ದೊಡ್ಡ ತುಕಡಿ ಇರುವುದಿಲ್ಲ. ಇತ್ತೀಚಿನ ಸರ್ಕಾರಿ ಅಂಕಿಅಂಶಗಳ ಪ್ರಕಾರ ಮಾಲ್ಡೀವ್ಸ್‌ನಲ್ಲಿ 88 ಭಾರತೀಯ ಸೇನಾ ಸಿಬ್ಬಂದಿಗಳು ಇದ್ದಾರೆ. ಮಾಲ್ಡೀವ್ಸ್ ಸೈನಿಕರಿಗೆ ಯುದ್ಧ ತರಭೇತಿ ಮತ್ತು ರಕ್ಷಣಾತ್ಮಕ ಕಾರ್ಯಾಚರಣೆ ಬಗ್ಗೆ ತರಭೇತಿ ನೀಡಲು ಅವರನ್ನು ಕಳುಹಿಸಲಾಗಿದೆ. ಆದರೆ ಮಾಲ್ಡೀವಿಯನ್ ಕೆಲ ಪ್ರಜೆಗಳು, ರಾಜಕಾರಣಿಗಳು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸುತ್ತಾ ಬಂದಿದ್ದಾರೆ. ‘ಇಂಡಿಯಾ ಔಟ್’ ಅಭಿಯಾನವು ಕೂಡ ನಡೆದಿದೆ. ಭಾರತದ ಸೈನಿಕರು ಮಾಲ್ಡಿವ್ಸ್‌ನಲ್ಲಿರುವುದು ದೇಶದ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಮಾಲ್ಡೀವ್ಸ್‌ನ ಕೆಲ ವಿಶ್ಲೇಷಕರು ಕೂಡ ಹೇಳುತ್ತಾರೆ.

ಮಾಲ್ಡೀವ್ಸ್‌ನಲ್ಲಿ ಇತ್ತೀಚೆಗೆ ನಡೆದ ಅಧ್ಯಕ್ಷೀಯ ಚುನಾವಣೆಯ ಸಂದರ್ಭದಲ್ಲಿ ಭಾರತ-ವಿರೋಧಿ ಬೆಳವಣಿಗೆಗಳು ಮತ್ತಷ್ಟು ಉಲ್ಬಣಗೊಂಡಿದ್ದವು. ಅಲ್ಲಿ ಭಾರತದ ವಿರುದ್ಧದ ಅಭಿಪ್ರಾಯ ಹೆಚ್ಚಳವಾಗಿತ್ತು. ಇಬ್ರಾಹಿಂ ಮೊಹಮ್ಮದ್ ಸೋಲಿಹ್ ನೇತೃತ್ವದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಕ್ಷವು ಭಾರತದ ಜೊತೆ ಆಪ್ತವಾಗಿತ್ತು.  ಪೀಪಲ್ಸ್ ನ್ಯಾಶನಲ್ ಕಾಂಗ್ರೆಸ್ ಮತ್ತು ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ ಪಕ್ಷದ ಒಕ್ಕೂಟವು 2023ರ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವನ್ನು ಕಂಡಿತ್ತು. ಮಾಲ್ಡಿವ್ಸ್‌ನ ಹಾಲಿ ಅಧ್ಯಕ್ಷ ಮುಯಿಝು ಚೀನಾ ಜೊತೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಮಾಲ್ಡೀವ್ಸ್‌ನ ಹೊಸ ಸರ್ಕಾರ ಭಾರತದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ಚೀನಾದತ್ತ ಒಲವು ತೋರಿಸಿದೆ. ಇತ್ತೀಚೆಗೆ ಭಾರತ ಮತ್ತು ಮಾಲ್ಡೀವ್ಸ್‌ ನಡುವೆ ಶೀತಲ ಸಮರ ನಡೆಯುತ್ತಿದ್ದಾಗಲೇ ಮಾಲ್ಡೀವ್ಸ್‌ ಅಧ್ಯಕ್ಷ ಮುಯಿಝು ಅವರು ಚೀನಾಗೆ ಭೇಟಿ ನೀಡಿದ್ದರು. ಈ ವೇಳೆ ಮಾಲ್ಡೀವ್ಸ್‌ ರಾಜಧಾನಿ ಮಾಲೆಯ ಅಭಿವೃದ್ಧಿಗೆ 130 ಮಿಲಿಯನ್ ಡಾಲರ್ ನೆರವು ನೀಡಲು ಚೀನಾ ಒಪ್ಪಿಕೊಂಡಿದೆ. ಉಭಯ ದೇಶಗಳು ಕೃಷಿ ಸಹಕಾರ ಒಪ್ಪಂದಕ್ಕೂ ಸಹಿ ಹಾಕಿವೆ.

ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ಭಾರತ, ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ಗೆ ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುದೀರ್ಘ ಕಾಲದಿಂದ ಸಹಾಯವನ್ನು ಮಾಡುತ್ತಾ ಬಂದಿದೆ. ಭಾರತದ ಸೈನಿಕರು ನಿಜವಾದ ಮಿಲಿಟರಿ ಕಾರ್ಯಾಚರಣೆಗಾಗಿ ದ್ವೀಪವನ್ನು ಪ್ರವೇಶಿಸಿದ್ದು ನವೆಂಬರ್ 1988ರಲ್ಲಿ. ಆಗಿನ ಅಧ್ಯಕ್ಷ ಮೌಮೂನ್ ಅಬ್ದುಲ್ ಗಯೂಮ್ ಅವರ ಸರ್ಕಾರದ ಕೋರಿಕೆಯ ಮೇರೆಗೆ ದಂಗೆಯನ್ನು ವಿಫಲಗೊಳಿಸಲು ಭಾರತದ ಮಿಲಿಟರಿ ಪಡೆಯು ದ್ವೀಪವನ್ನು ಪ್ರವೇಶಿಸಿತ್ತು. ತ್ವರಿತ ಕಾರ್ಯಾಚರಣೆ ನಡೆಸಿ ಭಾರತೀಯ ಪಡೆಗಳು ಅಧ್ಯಕ್ಷರನ್ನು ರಕ್ಷಿಸಲು ಮತ್ತು ಬಂಡುಕೋರರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದವು.

ಮಾಲ್ಡಿವ್ಸ್‌ನಲ್ಲಿ ‘ಇಂಡಿಯಾ ಔಟ್’ ಅಭಿಯಾನವು 2020ರ ನಂತರ ಪ್ರಾರಂಭವಾಗಿತ್ತು. ಚೀನಾ ಪರ ಒಲವನ್ನು ಹೊಂದಿರುವ ಪ್ರಗತಿಶೀಲ ಪಕ್ಷದ (ಪಿಪಿಎಂ) ಅಬ್ದುಲ್ಲಾ ಯಮೀನ್ ಅಬ್ದುಲ್ ಗಯೂಮ್ ಅವರು 2013ರಲ್ಲಿ ಅಧ್ಯಕ್ಷರಾದಾಗಿನಿಂದಲೂ ಭಾರತದ ವಿರುದ್ಧ ಮಾಲ್ಡಿವ್ಸ್‌ನಲ್ಲಿ ಅಸಮಾಧಾನವು ಭುಗಿಲೆದ್ದಿತ್ತು.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ನಿಯಮಗಳ ಪ್ರಕಾರ, ಮಾಲ್ಡೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆಗೆ ತರಬೇತಿ ನೀಡಲು ಭಾರತೀಯ ಅಧಿಕಾರಿಗಳನ್ನು ಮಾಲ್ಡೀವ್ಸ್‌ಗೆ ಕಳುಹಿಸಲಾಗಿದೆ. ಅವರ ನೇತೃತ್ವದಲ್ಲಿ ಈ ಹೆಲಿಕಾಪ್ಟರ್‌ಗಳು ಕಾರ್ಯನಿರ್ವಹಿಸುತ್ತವೆ. ಭಾರತ ಮತ್ತು ಮಾಲ್ಡಿವ್ಸ್‌ ನಡುವೆ ವಿವಿಧ ವಿಚಾರಗಳಲ್ಲಿ ರಾಜತಾಂತ್ರಿಕ ಒಪ್ಪಂದವು ನಡೆಯುತ್ತಿದೆ.

ಪ್ರಧಾನಿ ಮೋದಿ ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದರು. ಇದಕ್ಕೆ ಮಾಲ್ಡೀವ್ಸ್‌ ಸಚಿವರು ಟೀಕೆ ವ್ಯಕ್ತಪಡಿಸಿದ್ದರು. ಈ ವಿಚಾರ ಭಾರತ ಮತ್ತು ಮಾಲ್ಡೀವ್ಸ್ ನಡುವೆ ರಾಜತಾಂತ್ರಿಕ ಸಂಬಂಧ ಹದೆಗೆಡುವಂತೆ ಮಾಡಿತ್ತು. ಪ್ರಧಾನಿ ಮೋದಿಯನ್ನು ಟೀಕಿಸಿದ ಮೂವರು ಸಚಿವರನ್ನು ಮಾಲ್ಡೀವ್ಸ್‌ ಸರ್ಕಾರ ಸಂಪುಟದಿಂದ ವಜಾ ಮಾಡಿತ್ತು.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...