Homeಅಂತರಾಷ್ಟ್ರೀಯಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

- Advertisement -
- Advertisement -

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಮಾ.15ರೊಳಗೆ ಭಾರತ ತನ್ನ ಮಿಲಿಟರಿ ಸಿಬ್ಬಂದಿಯನ್ನು ವಾಪಾಸ್ಸು ಕರೆಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ. ಭಾರತೀಯ ಸೇನಾ ಸಿಬ್ಬಂದಿ ಮಾಲ್ಡೀವ್ಸ್‌ನಲ್ಲಿ ಇರುವಂತಿಲ್ಲ. ಇದು ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು ಮತ್ತು ಸರಕಾರದ ನೀತಿಯಾಗಿದೆ ಎಂದು ಅಧ್ಯಕ್ಷರ ಕಚೇರಿಯ ಸಾರ್ವಜನಿಕ ನೀತಿ ಕಾರ್ಯದರ್ಶಿ ಅಬ್ದುಲ್ಲಾ ನಜೀಮ್ ಇಬ್ರಾಹಿಂ ಹೇಳಿದ್ದಾರೆ.

ಮಾಲ್ಡೀವ್ಸ್ ಮತ್ತು ಭಾರತವು ಸೈನ್ಯವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತುಕತೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಿವೆ. ಭಾನುವಾರ ಬೆಳಗ್ಗೆ ಮಾಲ್ಡಿವ್ಸ್‌ನ ಮಾಲೆಯಲ್ಲಿರುವ ವಿದೇಶಾಂಗ ಸಚಿವಾಲಯದ ಪ್ರಧಾನ ಕಚೇರಿಯಲ್ಲಿ ಈ ಸಮಿತಿ ತನ್ನ ಮೊದಲ ಸಭೆಯನ್ನು ನಡೆಸಿದೆ. ಸಭೆಯಲ್ಲಿ ಭಾರತೀಯ ಹೈಕಮಿಷನರ್ ಮುನು ಮಹಾವರ್ ಕೂಡ ಭಾಗವಹಿಸಿದ್ದರು ಎಂದು ಮಾಲ್ಡೀವಿಯನ್ ಮಾದ್ಯಮ ವರದಿಗಳು ತಿಳಿಸಿವೆ. ಆದರೆ ತಕ್ಷಣಕ್ಕೆ ಈ ಬಗ್ಗೆ ಭಾರತೀಯ ಮಾದ್ಯಮಗಳು ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಮಾಲ್ಡೀವ್ಸ್‌ ದ್ವೀಪದಲ್ಲಿ ಭಾರತೀಯ ಸೈನಿಕರ ಯಾವುದೇ ದೊಡ್ಡ ತುಕಡಿ ಇರುವುದಿಲ್ಲ. ಇತ್ತೀಚಿನ ಸರ್ಕಾರಿ ಅಂಕಿಅಂಶಗಳ ಪ್ರಕಾರ ಮಾಲ್ಡೀವ್ಸ್‌ನಲ್ಲಿ 88 ಭಾರತೀಯ ಸೇನಾ ಸಿಬ್ಬಂದಿಗಳು ಇದ್ದಾರೆ. ಮಾಲ್ಡೀವ್ಸ್ ಸೈನಿಕರಿಗೆ ಯುದ್ಧ ತರಭೇತಿ ಮತ್ತು ರಕ್ಷಣಾತ್ಮಕ ಕಾರ್ಯಾಚರಣೆ ಬಗ್ಗೆ ತರಭೇತಿ ನೀಡಲು ಅವರನ್ನು ಕಳುಹಿಸಲಾಗಿದೆ. ಆದರೆ ಮಾಲ್ಡೀವಿಯನ್ ಕೆಲ ಪ್ರಜೆಗಳು, ರಾಜಕಾರಣಿಗಳು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸುತ್ತಾ ಬಂದಿದ್ದಾರೆ. ‘ಇಂಡಿಯಾ ಔಟ್’ ಅಭಿಯಾನವು ಕೂಡ ನಡೆದಿದೆ. ಭಾರತದ ಸೈನಿಕರು ಮಾಲ್ಡಿವ್ಸ್‌ನಲ್ಲಿರುವುದು ದೇಶದ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಮಾಲ್ಡೀವ್ಸ್‌ನ ಕೆಲ ವಿಶ್ಲೇಷಕರು ಕೂಡ ಹೇಳುತ್ತಾರೆ.

ಮಾಲ್ಡೀವ್ಸ್‌ನಲ್ಲಿ ಇತ್ತೀಚೆಗೆ ನಡೆದ ಅಧ್ಯಕ್ಷೀಯ ಚುನಾವಣೆಯ ಸಂದರ್ಭದಲ್ಲಿ ಭಾರತ-ವಿರೋಧಿ ಬೆಳವಣಿಗೆಗಳು ಮತ್ತಷ್ಟು ಉಲ್ಬಣಗೊಂಡಿದ್ದವು. ಅಲ್ಲಿ ಭಾರತದ ವಿರುದ್ಧದ ಅಭಿಪ್ರಾಯ ಹೆಚ್ಚಳವಾಗಿತ್ತು. ಇಬ್ರಾಹಿಂ ಮೊಹಮ್ಮದ್ ಸೋಲಿಹ್ ನೇತೃತ್ವದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಕ್ಷವು ಭಾರತದ ಜೊತೆ ಆಪ್ತವಾಗಿತ್ತು.  ಪೀಪಲ್ಸ್ ನ್ಯಾಶನಲ್ ಕಾಂಗ್ರೆಸ್ ಮತ್ತು ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ ಪಕ್ಷದ ಒಕ್ಕೂಟವು 2023ರ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವನ್ನು ಕಂಡಿತ್ತು. ಮಾಲ್ಡಿವ್ಸ್‌ನ ಹಾಲಿ ಅಧ್ಯಕ್ಷ ಮುಯಿಝು ಚೀನಾ ಜೊತೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಮಾಲ್ಡೀವ್ಸ್‌ನ ಹೊಸ ಸರ್ಕಾರ ಭಾರತದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ಚೀನಾದತ್ತ ಒಲವು ತೋರಿಸಿದೆ. ಇತ್ತೀಚೆಗೆ ಭಾರತ ಮತ್ತು ಮಾಲ್ಡೀವ್ಸ್‌ ನಡುವೆ ಶೀತಲ ಸಮರ ನಡೆಯುತ್ತಿದ್ದಾಗಲೇ ಮಾಲ್ಡೀವ್ಸ್‌ ಅಧ್ಯಕ್ಷ ಮುಯಿಝು ಅವರು ಚೀನಾಗೆ ಭೇಟಿ ನೀಡಿದ್ದರು. ಈ ವೇಳೆ ಮಾಲ್ಡೀವ್ಸ್‌ ರಾಜಧಾನಿ ಮಾಲೆಯ ಅಭಿವೃದ್ಧಿಗೆ 130 ಮಿಲಿಯನ್ ಡಾಲರ್ ನೆರವು ನೀಡಲು ಚೀನಾ ಒಪ್ಪಿಕೊಂಡಿದೆ. ಉಭಯ ದೇಶಗಳು ಕೃಷಿ ಸಹಕಾರ ಒಪ್ಪಂದಕ್ಕೂ ಸಹಿ ಹಾಕಿವೆ.

ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ಭಾರತ, ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ಗೆ ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುದೀರ್ಘ ಕಾಲದಿಂದ ಸಹಾಯವನ್ನು ಮಾಡುತ್ತಾ ಬಂದಿದೆ. ಭಾರತದ ಸೈನಿಕರು ನಿಜವಾದ ಮಿಲಿಟರಿ ಕಾರ್ಯಾಚರಣೆಗಾಗಿ ದ್ವೀಪವನ್ನು ಪ್ರವೇಶಿಸಿದ್ದು ನವೆಂಬರ್ 1988ರಲ್ಲಿ. ಆಗಿನ ಅಧ್ಯಕ್ಷ ಮೌಮೂನ್ ಅಬ್ದುಲ್ ಗಯೂಮ್ ಅವರ ಸರ್ಕಾರದ ಕೋರಿಕೆಯ ಮೇರೆಗೆ ದಂಗೆಯನ್ನು ವಿಫಲಗೊಳಿಸಲು ಭಾರತದ ಮಿಲಿಟರಿ ಪಡೆಯು ದ್ವೀಪವನ್ನು ಪ್ರವೇಶಿಸಿತ್ತು. ತ್ವರಿತ ಕಾರ್ಯಾಚರಣೆ ನಡೆಸಿ ಭಾರತೀಯ ಪಡೆಗಳು ಅಧ್ಯಕ್ಷರನ್ನು ರಕ್ಷಿಸಲು ಮತ್ತು ಬಂಡುಕೋರರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದವು.

ಮಾಲ್ಡಿವ್ಸ್‌ನಲ್ಲಿ ‘ಇಂಡಿಯಾ ಔಟ್’ ಅಭಿಯಾನವು 2020ರ ನಂತರ ಪ್ರಾರಂಭವಾಗಿತ್ತು. ಚೀನಾ ಪರ ಒಲವನ್ನು ಹೊಂದಿರುವ ಪ್ರಗತಿಶೀಲ ಪಕ್ಷದ (ಪಿಪಿಎಂ) ಅಬ್ದುಲ್ಲಾ ಯಮೀನ್ ಅಬ್ದುಲ್ ಗಯೂಮ್ ಅವರು 2013ರಲ್ಲಿ ಅಧ್ಯಕ್ಷರಾದಾಗಿನಿಂದಲೂ ಭಾರತದ ವಿರುದ್ಧ ಮಾಲ್ಡಿವ್ಸ್‌ನಲ್ಲಿ ಅಸಮಾಧಾನವು ಭುಗಿಲೆದ್ದಿತ್ತು.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ನಿಯಮಗಳ ಪ್ರಕಾರ, ಮಾಲ್ಡೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆಗೆ ತರಬೇತಿ ನೀಡಲು ಭಾರತೀಯ ಅಧಿಕಾರಿಗಳನ್ನು ಮಾಲ್ಡೀವ್ಸ್‌ಗೆ ಕಳುಹಿಸಲಾಗಿದೆ. ಅವರ ನೇತೃತ್ವದಲ್ಲಿ ಈ ಹೆಲಿಕಾಪ್ಟರ್‌ಗಳು ಕಾರ್ಯನಿರ್ವಹಿಸುತ್ತವೆ. ಭಾರತ ಮತ್ತು ಮಾಲ್ಡಿವ್ಸ್‌ ನಡುವೆ ವಿವಿಧ ವಿಚಾರಗಳಲ್ಲಿ ರಾಜತಾಂತ್ರಿಕ ಒಪ್ಪಂದವು ನಡೆಯುತ್ತಿದೆ.

ಪ್ರಧಾನಿ ಮೋದಿ ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದರು. ಇದಕ್ಕೆ ಮಾಲ್ಡೀವ್ಸ್‌ ಸಚಿವರು ಟೀಕೆ ವ್ಯಕ್ತಪಡಿಸಿದ್ದರು. ಈ ವಿಚಾರ ಭಾರತ ಮತ್ತು ಮಾಲ್ಡೀವ್ಸ್ ನಡುವೆ ರಾಜತಾಂತ್ರಿಕ ಸಂಬಂಧ ಹದೆಗೆಡುವಂತೆ ಮಾಡಿತ್ತು. ಪ್ರಧಾನಿ ಮೋದಿಯನ್ನು ಟೀಕಿಸಿದ ಮೂವರು ಸಚಿವರನ್ನು ಮಾಲ್ಡೀವ್ಸ್‌ ಸರ್ಕಾರ ಸಂಪುಟದಿಂದ ವಜಾ ಮಾಡಿತ್ತು.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ ನಿಧನ

ಖ್ಯಾತ ಪರಿಸರ ವಿಜ್ಞಾನಿ ಮಾಧವ ಗಾಡ್ಗೀಳ್ (82 ವರ್ಷ) ಅವರು ಬುಧವಾರ (ಜನವರಿ 7, 2026) ತಡರಾತ್ರಿ ಪುಣೆಯಲ್ಲಿರುವ ತಮ್ಮ ಮನೆಯಲ್ಲಿ ಅಲ್ಪಕಾಲದ ಅನಾರೋಗ್ಯದ ನಂತರ ನಿಧನರಾದರು. ಈ ಕುರಿತು ಗಾಡ್ಗೀಳ್ ಅವರ...

ಅಪರಾಧದ ಸ್ವರೂಪ ಏನೇ ಇರಲಿ, ತ್ವರಿತ ವಿಚಾರಣೆಯ ಹಕ್ಕು ಅನ್ವಯಿಸುತ್ತದೆ: ಸುಪ್ರೀಂ ಕೋರ್ಟ್

ಸಂವಿಧಾನದ 21 ನೇ ವಿಧಿಯ ಅಡಿಯಲ್ಲಿ ತ್ವರಿತ ವಿಚಾರಣೆಯ ಹಕ್ಕು ಅಪರಾಧದ ಗಂಭೀರತೆ ಅಥವಾ ಸ್ವರೂಪವನ್ನು ಲೆಕ್ಕಿಸದೆ ಅನ್ವಯಿಸುತ್ತದೆ ಎಂದು ಸುಪ್ರೀಂ ಕೋರ್ಟ್ ಮಂಗಳವಾರ ಪುನರುಚ್ಚರಿಸಿದೆ. 2002 ರ ಹಣ ವರ್ಗಾವಣೆ ತಡೆ ಕಾಯ್ದೆಯ...

ಬಾಂಗ್ಲಾದೇಶ: ಗುಂಪು ದಾಳಿಯಿಂದ ತಪ್ಪಿಸಿಕೊಳ್ಳಲು ಕಾಲುವೆಗೆ ಹಾರಿದ ಹಿಂದೂ ವ್ಯಕ್ತಿ ಸಾವು

ಬಾಂಗ್ಲಾದೇಶದಲ್ಲಿ ಅಲ್ಪಸಂಖ್ಯಾತರ ವಿರುದ್ಧ ಹಿಂಸಾಚಾರ ಸುದ್ದಿಗಳು ನಿರಂತರವಾಗಿ ವರದಿಯಾಗುತ್ತಿರುವ ನಡುವೆಯೇ, ನೌಗಾಂವ್ ಜಿಲ್ಲೆಯ ಮೊಹದೇವ್‌ಪುರ ಉಪಜಿಲ್ಲಾದಲ್ಲಿ ದರೋಡೆ ಆರೋಪ ಹೊರಿಸಿದ ಗುಂಪಿನಿಂದ ತಪ್ಪಿಸಿಕೊಳ್ಳಲು ಯತ್ನಿಸುತ್ತಿದ್ದ 25 ವರ್ಷದ ಹಿಂದೂ ವ್ಯಕ್ತಿ ಕಾಲುವೆಗೆ ಹಾರಿ...