Homeಅಂತರಾಷ್ಟ್ರೀಯಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

- Advertisement -
- Advertisement -

ಮಾಲ್ಡೀವ್ಸ್ ಅಧ್ಯಕ್ಷ ಮೊಹಮ್ಮದ್ ಮುಯಿಝು ಅವರು ಮಾ.15ರೊಳಗೆ ಭಾರತ ತನ್ನ ಮಿಲಿಟರಿ ಸಿಬ್ಬಂದಿಯನ್ನು ವಾಪಾಸ್ಸು ಕರೆಸಿಕೊಳ್ಳುವಂತೆ ಕೇಳಿಕೊಂಡಿದ್ದಾರೆ. ಭಾರತೀಯ ಸೇನಾ ಸಿಬ್ಬಂದಿ ಮಾಲ್ಡೀವ್ಸ್‌ನಲ್ಲಿ ಇರುವಂತಿಲ್ಲ. ಇದು ಅಧ್ಯಕ್ಷ ಡಾ.ಮೊಹಮ್ಮದ್ ಮುಯಿಝು ಮತ್ತು ಸರಕಾರದ ನೀತಿಯಾಗಿದೆ ಎಂದು ಅಧ್ಯಕ್ಷರ ಕಚೇರಿಯ ಸಾರ್ವಜನಿಕ ನೀತಿ ಕಾರ್ಯದರ್ಶಿ ಅಬ್ದುಲ್ಲಾ ನಜೀಮ್ ಇಬ್ರಾಹಿಂ ಹೇಳಿದ್ದಾರೆ.

ಮಾಲ್ಡೀವ್ಸ್ ಮತ್ತು ಭಾರತವು ಸೈನ್ಯವನ್ನು ಹಿಂತೆಗೆದುಕೊಳ್ಳುವ ಬಗ್ಗೆ ಮಾತುಕತೆಗೆ ಉನ್ನತ ಮಟ್ಟದ ಸಮಿತಿಯನ್ನು ರಚಿಸಿವೆ. ಭಾನುವಾರ ಬೆಳಗ್ಗೆ ಮಾಲ್ಡಿವ್ಸ್‌ನ ಮಾಲೆಯಲ್ಲಿರುವ ವಿದೇಶಾಂಗ ಸಚಿವಾಲಯದ ಪ್ರಧಾನ ಕಚೇರಿಯಲ್ಲಿ ಈ ಸಮಿತಿ ತನ್ನ ಮೊದಲ ಸಭೆಯನ್ನು ನಡೆಸಿದೆ. ಸಭೆಯಲ್ಲಿ ಭಾರತೀಯ ಹೈಕಮಿಷನರ್ ಮುನು ಮಹಾವರ್ ಕೂಡ ಭಾಗವಹಿಸಿದ್ದರು ಎಂದು ಮಾಲ್ಡೀವಿಯನ್ ಮಾದ್ಯಮ ವರದಿಗಳು ತಿಳಿಸಿವೆ. ಆದರೆ ತಕ್ಷಣಕ್ಕೆ ಈ ಬಗ್ಗೆ ಭಾರತೀಯ ಮಾದ್ಯಮಗಳು ಯಾವುದೇ ಪ್ರತಿಕ್ರಿಯೆಯನ್ನು ನೀಡಿಲ್ಲ.

ಮಾಲ್ಡೀವ್ಸ್‌ ದ್ವೀಪದಲ್ಲಿ ಭಾರತೀಯ ಸೈನಿಕರ ಯಾವುದೇ ದೊಡ್ಡ ತುಕಡಿ ಇರುವುದಿಲ್ಲ. ಇತ್ತೀಚಿನ ಸರ್ಕಾರಿ ಅಂಕಿಅಂಶಗಳ ಪ್ರಕಾರ ಮಾಲ್ಡೀವ್ಸ್‌ನಲ್ಲಿ 88 ಭಾರತೀಯ ಸೇನಾ ಸಿಬ್ಬಂದಿಗಳು ಇದ್ದಾರೆ. ಮಾಲ್ಡೀವ್ಸ್ ಸೈನಿಕರಿಗೆ ಯುದ್ಧ ತರಭೇತಿ ಮತ್ತು ರಕ್ಷಣಾತ್ಮಕ ಕಾರ್ಯಾಚರಣೆ ಬಗ್ಗೆ ತರಭೇತಿ ನೀಡಲು ಅವರನ್ನು ಕಳುಹಿಸಲಾಗಿದೆ. ಆದರೆ ಮಾಲ್ಡೀವಿಯನ್ ಕೆಲ ಪ್ರಜೆಗಳು, ರಾಜಕಾರಣಿಗಳು ಇದಕ್ಕೆ ವಿರೋಧವನ್ನು ವ್ಯಕ್ತಪಡಿಸುತ್ತಾ ಬಂದಿದ್ದಾರೆ. ‘ಇಂಡಿಯಾ ಔಟ್’ ಅಭಿಯಾನವು ಕೂಡ ನಡೆದಿದೆ. ಭಾರತದ ಸೈನಿಕರು ಮಾಲ್ಡಿವ್ಸ್‌ನಲ್ಲಿರುವುದು ದೇಶದ ರಾಷ್ಟ್ರೀಯ ಭದ್ರತೆಗೆ ಬೆದರಿಕೆ ಎಂದು ಮಾಲ್ಡೀವ್ಸ್‌ನ ಕೆಲ ವಿಶ್ಲೇಷಕರು ಕೂಡ ಹೇಳುತ್ತಾರೆ.

ಮಾಲ್ಡೀವ್ಸ್‌ನಲ್ಲಿ ಇತ್ತೀಚೆಗೆ ನಡೆದ ಅಧ್ಯಕ್ಷೀಯ ಚುನಾವಣೆಯ ಸಂದರ್ಭದಲ್ಲಿ ಭಾರತ-ವಿರೋಧಿ ಬೆಳವಣಿಗೆಗಳು ಮತ್ತಷ್ಟು ಉಲ್ಬಣಗೊಂಡಿದ್ದವು. ಅಲ್ಲಿ ಭಾರತದ ವಿರುದ್ಧದ ಅಭಿಪ್ರಾಯ ಹೆಚ್ಚಳವಾಗಿತ್ತು. ಇಬ್ರಾಹಿಂ ಮೊಹಮ್ಮದ್ ಸೋಲಿಹ್ ನೇತೃತ್ವದ ಮಾಲ್ಡೀವಿಯನ್ ಡೆಮಾಕ್ರಟಿಕ್ ಪಕ್ಷವು ಭಾರತದ ಜೊತೆ ಆಪ್ತವಾಗಿತ್ತು.  ಪೀಪಲ್ಸ್ ನ್ಯಾಶನಲ್ ಕಾಂಗ್ರೆಸ್ ಮತ್ತು ಪ್ರೋಗ್ರೆಸ್ಸಿವ್ ಪಾರ್ಟಿ ಆಫ್ ಮಾಲ್ಡೀವ್ಸ್ ಪಕ್ಷದ ಒಕ್ಕೂಟವು 2023ರ ಅಧ್ಯಕ್ಷೀಯ ಚುನಾವಣೆಯಲ್ಲಿ ಗೆಲುವನ್ನು ಕಂಡಿತ್ತು. ಮಾಲ್ಡಿವ್ಸ್‌ನ ಹಾಲಿ ಅಧ್ಯಕ್ಷ ಮುಯಿಝು ಚೀನಾ ಜೊತೆ ಉತ್ತಮ ಬಾಂಧವ್ಯವನ್ನು ಹೊಂದಿದ್ದಾರೆ. ಮಾಲ್ಡೀವ್ಸ್‌ನ ಹೊಸ ಸರ್ಕಾರ ಭಾರತದ ಮೇಲಿನ ಅವಲಂಬನೆಯನ್ನು ಕಡಿಮೆ ಮಾಡಿ ಚೀನಾದತ್ತ ಒಲವು ತೋರಿಸಿದೆ. ಇತ್ತೀಚೆಗೆ ಭಾರತ ಮತ್ತು ಮಾಲ್ಡೀವ್ಸ್‌ ನಡುವೆ ಶೀತಲ ಸಮರ ನಡೆಯುತ್ತಿದ್ದಾಗಲೇ ಮಾಲ್ಡೀವ್ಸ್‌ ಅಧ್ಯಕ್ಷ ಮುಯಿಝು ಅವರು ಚೀನಾಗೆ ಭೇಟಿ ನೀಡಿದ್ದರು. ಈ ವೇಳೆ ಮಾಲ್ಡೀವ್ಸ್‌ ರಾಜಧಾನಿ ಮಾಲೆಯ ಅಭಿವೃದ್ಧಿಗೆ 130 ಮಿಲಿಯನ್ ಡಾಲರ್ ನೆರವು ನೀಡಲು ಚೀನಾ ಒಪ್ಪಿಕೊಂಡಿದೆ. ಉಭಯ ದೇಶಗಳು ಕೃಷಿ ಸಹಕಾರ ಒಪ್ಪಂದಕ್ಕೂ ಸಹಿ ಹಾಕಿವೆ.

ಭಾರತದ ಸೈನಿಕರು ಯಾಕೆ ಮಾಲ್ಡಿವ್ಸ್‌ನಲ್ಲಿದ್ದಾರೆ?

ಭಾರತ, ದ್ವೀಪ ರಾಷ್ಟ್ರವಾದ ಮಾಲ್ಡೀವ್ಸ್‌ಗೆ ರಕ್ಷಣೆ ಸೇರಿದಂತೆ ವಿವಿಧ ಕ್ಷೇತ್ರಗಳಲ್ಲಿ ಸುದೀರ್ಘ ಕಾಲದಿಂದ ಸಹಾಯವನ್ನು ಮಾಡುತ್ತಾ ಬಂದಿದೆ. ಭಾರತದ ಸೈನಿಕರು ನಿಜವಾದ ಮಿಲಿಟರಿ ಕಾರ್ಯಾಚರಣೆಗಾಗಿ ದ್ವೀಪವನ್ನು ಪ್ರವೇಶಿಸಿದ್ದು ನವೆಂಬರ್ 1988ರಲ್ಲಿ. ಆಗಿನ ಅಧ್ಯಕ್ಷ ಮೌಮೂನ್ ಅಬ್ದುಲ್ ಗಯೂಮ್ ಅವರ ಸರ್ಕಾರದ ಕೋರಿಕೆಯ ಮೇರೆಗೆ ದಂಗೆಯನ್ನು ವಿಫಲಗೊಳಿಸಲು ಭಾರತದ ಮಿಲಿಟರಿ ಪಡೆಯು ದ್ವೀಪವನ್ನು ಪ್ರವೇಶಿಸಿತ್ತು. ತ್ವರಿತ ಕಾರ್ಯಾಚರಣೆ ನಡೆಸಿ ಭಾರತೀಯ ಪಡೆಗಳು ಅಧ್ಯಕ್ಷರನ್ನು ರಕ್ಷಿಸಲು ಮತ್ತು ಬಂಡುಕೋರರನ್ನು ಸೆರೆಹಿಡಿಯುವಲ್ಲಿ ಯಶಸ್ವಿಯಾಗಿದ್ದವು.

ಮಾಲ್ಡಿವ್ಸ್‌ನಲ್ಲಿ ‘ಇಂಡಿಯಾ ಔಟ್’ ಅಭಿಯಾನವು 2020ರ ನಂತರ ಪ್ರಾರಂಭವಾಗಿತ್ತು. ಚೀನಾ ಪರ ಒಲವನ್ನು ಹೊಂದಿರುವ ಪ್ರಗತಿಶೀಲ ಪಕ್ಷದ (ಪಿಪಿಎಂ) ಅಬ್ದುಲ್ಲಾ ಯಮೀನ್ ಅಬ್ದುಲ್ ಗಯೂಮ್ ಅವರು 2013ರಲ್ಲಿ ಅಧ್ಯಕ್ಷರಾದಾಗಿನಿಂದಲೂ ಭಾರತದ ವಿರುದ್ಧ ಮಾಲ್ಡಿವ್ಸ್‌ನಲ್ಲಿ ಅಸಮಾಧಾನವು ಭುಗಿಲೆದ್ದಿತ್ತು.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಒಪ್ಪಂದಗಳ ನಿಯಮಗಳ ಪ್ರಕಾರ, ಮಾಲ್ಡೀವ್ಸ್ ರಾಷ್ಟ್ರೀಯ ರಕ್ಷಣಾ ಪಡೆಗೆ ತರಬೇತಿ ನೀಡಲು ಭಾರತೀಯ ಅಧಿಕಾರಿಗಳನ್ನು ಮಾಲ್ಡೀವ್ಸ್‌ಗೆ ಕಳುಹಿಸಲಾಗಿದೆ. ಅವರ ನೇತೃತ್ವದಲ್ಲಿ ಈ ಹೆಲಿಕಾಪ್ಟರ್‌ಗಳು ಕಾರ್ಯನಿರ್ವಹಿಸುತ್ತವೆ. ಭಾರತ ಮತ್ತು ಮಾಲ್ಡಿವ್ಸ್‌ ನಡುವೆ ವಿವಿಧ ವಿಚಾರಗಳಲ್ಲಿ ರಾಜತಾಂತ್ರಿಕ ಒಪ್ಪಂದವು ನಡೆಯುತ್ತಿದೆ.

ಪ್ರಧಾನಿ ಮೋದಿ ಇತ್ತೀಚೆಗೆ ಲಕ್ಷದ್ವೀಪಕ್ಕೆ ಭೇಟಿ ನೀಡಿದ್ದ ಫೋಟೋಗಳನ್ನು ಹಂಚಿಕೊಂಡಿದ್ದರು. ಇದಕ್ಕೆ ಮಾಲ್ಡೀವ್ಸ್‌ ಸಚಿವರು ಟೀಕೆ ವ್ಯಕ್ತಪಡಿಸಿದ್ದರು. ಈ ವಿಚಾರ ಭಾರತ ಮತ್ತು ಮಾಲ್ಡೀವ್ಸ್ ನಡುವೆ ರಾಜತಾಂತ್ರಿಕ ಸಂಬಂಧ ಹದೆಗೆಡುವಂತೆ ಮಾಡಿತ್ತು. ಪ್ರಧಾನಿ ಮೋದಿಯನ್ನು ಟೀಕಿಸಿದ ಮೂವರು ಸಚಿವರನ್ನು ಮಾಲ್ಡೀವ್ಸ್‌ ಸರ್ಕಾರ ಸಂಪುಟದಿಂದ ವಜಾ ಮಾಡಿತ್ತು.

ಇದನ್ನು ಓದಿ: ಧಾರ್ಮಿಕ, ಆಧ್ಯಾತ್ಮಿಕ ಕ್ಷೇತ್ರಗಳಲ್ಲಿ ರಾಜಕೀಯ ಹಸ್ತಕ್ಷೇಪ ಸರಿಯಲ್ಲ: ಪುರಿ ಶಂಕರಾಚಾರ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...