Homeಕರೋನಾ ತಲ್ಲಣಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

- Advertisement -
- Advertisement -

ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಅರಿತು ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಹಾಗಾದಾಗ ಅದು ಎಲ್ಲಾ ರಾಜ್ಯಗಳಿಗೆ ಸಮಾನ ಪ್ರಮಾಣದಲ್ಲಿ ಹಂಚಬಹುದಲ್ಲವೇ ಎಂದು ಸುಪ್ರೀಂ ಕೋರ್ಟ್ ನಿನ್ನೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಕೋವಿಡ್ ಲಸಿಕೆಯ ಉತ್ಪಾದನೆ, ದರನಿಗಧಿ ಮತ್ತು ವಿತರಣೆಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಸ್ವಯಂ ವಿಚಾರಣೆಯನ್ನು ಕೈಗತ್ತಿಕೊಂಡಿರುವ ಜಸ್ಟೀಸ್ ಚಂದ್ರಚೂಡ್‌ರವರ ನೇತೃತ್ವದ ಪೀಠ ಹಲವು ವಿಚಾರದಲ್ಲಿ ಕೇಂದ್ರ ಸರ್ಕಾರ ಎಡವುತ್ತಿರುವುದನ್ನು ಬೊಟ್ಟು ಮಾಡಿ ತೋರಿಸಿದೆ.

ಲಸಿಕೆಯ ದರನಿಗಧಿ ಮತ್ತು ವಿತರಣೆಯ ನಿರ್ಧಾರವನ್ನು ತಯಾರಿಕ ಕಂಪನಿಗಳಿಗೆ ಬಿಡಬಾರದು. ಸಾರ್ವಜನಿಕ ಹಿತಾಸಕ್ತಿಯ ಕಾರಣದಿಂದ ಈ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು ಮತ್ತು ತನ್ನ ಅಧಿಕಾರ ಬಳಸಿ ಕಾರ್ಯಗತಗೊಳಿಸಬೇಕು ಎಂದು ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರಿಗೆ ಜಸ್ಟೀಸ್ ಚಂದ್ರಚೂಡ್‌ ತಿಳಿಸಿದ್ದಾರೆ.

ಅಸ್ಟ್ರಜನಕಾ ಕಂಪನಿಯು ಅಮೆರಿಕದ ನಾಗರಿಕರಿಗೆ ಅತಿ ಕಡಿಮೆ ಬೆಲೆಗೆ ಲಸಿಕೆ ನೀಡುತ್ತಿದೆ. ಆದರೆ ನಾವು ಮಾತ್ರ ಏಕೆ ಹೆಚ್ಚು ಪಾವತಿ ಮಾಡಬೇಕು? ತಯಾರಕರು ಕೇಂದ್ರ ಸರ್ಕಾರಕ್ಕೆ ಅಂದರೆ ನಿಮಗೆ 150ರೂ ಡೋಸ್ ನೀಡುತ್ತಾರೆ. ಆದರೆ ರಾಜ್ಯಗಳು 300 ಅಥವಾ 400 ರೂ ಭರಿಸಬೇಕು. ದೇಶವೇಕೆ ಇಷ್ಟು ಹಣ ಪಾವತಿ ಮಾಡಬೇಕು ಎಂದು ಜಸ್ಟೀಸ್ ರವೀಂದ್ರ ಭಟ್ ಪ್ರಶ್ನಿಸಿದ್ದಾರೆ.

“ಲಸಿಕೆಯ ಬೆಲೆ ಸಮಸ್ಯೆಗಳು ತೀರಾ ಗಂಭೀರವಾದ ವಿಷಯವಾಗಿದೆ. ಈ ದೇಶದ ಬಹುಸಂಖ್ಯಾತರು ಬಡವರು ಮತ್ತು ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳಾಗಿವೆ. ನಮ್ಮಲ್ಲಿ ಖಾಸಗಿ ವಲಯದ ಮಾದರಿ ಸಾಧ್ಯವಿಲ್ಲ. ಹಾಗಾಗಿ ನಾವು ರಾಷ್ಟ್ರೀಯ ರೋಗನಿರೋಧಕ ಮಾದರಿಯನ್ನು ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

ರೆಮ್ಡೆಸಿವಿರ್, ಫಾಸಿಪುರಾವಿರ್ ಮತ್ತು ಟೊಸಿಲಿಜುಮಾಬ್ ಮುಂತಾದ ಔಷಧಗಳ ವಿಷಯದಲ್ಲಿ ಪೇಟೆಂಟ್ ಕಾಯ್ದೆಯ ಸೆಕ್ಷನ್ 100 ರ ಅಡಿಯಲ್ಲಿ ಸರ್ಕಾರಿ ಉದ್ದೇಶಗಳಿಗಾಗಿ ಪೇಟೆಂಟ್ ಬಳಸಲು ಉನ್ನತ ನ್ಯಾಯಾಲಯ ಏಕೆ ಅಧಿಕಾರ ನೀಡಬಾರದು? ಅಥವಾ ಪೇಟೆಂಟ್ ಕಾಯ್ದೆಯ ಸೆಕ್ಷನ್ 92 ರ ಅಡಿಯಲ್ಲಿ ಕಡ್ಡಾಯ ಪರವಾನಗಿಗಳನ್ನು ಏಕೆ ನೀಡಬಾರದು? ವಿಶೇಷವಾಗಿ ಅಂತಹ ನಿರ್ದೇಶನವು ಕಾನೂನು ಕ್ರಮಗಳ ಭಯವಿಲ್ಲದೆ ಈ ಔ ಷಧಿಗಳನ್ನು ತಯಾರಿಸಲು ಜೆನೆರಿಕ್ಸ್‌ಗೆ ಅನುವು ಮಾಡಿಕೊಡುತ್ತದೆ ಎಂದು ಸುಪ್ರೀಂ ತಿಳಿಸಿದೆ.

ಕೇಂದ್ರ ಸರ್ಕಾರವು ಖರೀದಿಸುವ ಶೇ.50 ರಷ್ಟು ಲಸಿಕೆಗಳನ್ನು ರಾಜ್ಯಗಳಿಗೆ ಯಾವಾಗ ನೀಡುತ್ತೀರಿ? ಅಲ್ಲದೇ ಕೇಂದ್ರ ಮತ್ತು ರಾಜ್ಯಗಳಿಗೆ ಲಸಿಕೆ ಬೆಲೆಯಲ್ಲಿನ ವ್ಯತ್ಯಾಸಕ್ಕೆ ತರ್ಕವೇನು? ಎಂದು ಕೋರ್ಟ್ ಕೇಂದ್ರವನ್ನು ಪ್ರಶ್ನಿಸಿದೆ.

ಮುಂದಿನ ಆರು ತಿಂಗಳುಗಳವರೆಗೆ ಲಸಿಕೆ ದಾಸ್ತಾನುಗಳ ಪ್ರಸ್ತುತ ಮತ್ತು ಯೋಜಿತ ಲಭ್ಯತೆಯನ್ನು ಕೇಂದ್ರ ಮತ್ತು ರಾಜ್ಯಗಳು ಸೂಚಿಸಬಹುದೇ? ರಾಜ್ಯಗಳಿಗೆ ಸಮಾನವಾಗಿ ಲಸಿಕೆ ಸಿಗುತ್ತದೆಯೇ? ಏಕೆಂದರೆ ಕೆಲ ರಾಜ್ಯಗಳು ಒಮ್ಮೆಗೆ ಹೆಚ್ಚು ಆರ್ಡರ್ ಮಾಡಿದರೆ ಉಳಿದ ರಾಜ್ಯಗಳು ಕಾಯುತ್ತಾ ಕೂರಬೇಕೆ? ಇದನ್ನು ಕೇಂದ್ರ ಸರ್ಕಾರ ಮೇಲ್ವಿಚಾರಣೆ ನಡೆಸುತ್ತದೆಯೇ? ಈಗಾಗಲೇ 45 ವ‍ರ್ಷ ಮೇಲ್ಪಟ್ಟವರಿಗೆ ಲಸಿಕೆ ಕೊರತೆಯಾಗುತ್ತಿದೆ ಎಂಬ ಪ್ರಶ್ನೆಗಳಿಗೆ ಉತ್ತರವೇನು ಎಂದು ಪ್ರಶ್ನಿಸಿದೆ.

18-44 ವಯಸ್ಸಿನವರಿಗೆ ಯಾವಾಗ ಲಸಿಕೆ ನೀಡಲಾಗುತ್ತದೆ? ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು. ಈ ಕುರಿತು ಅಫಿಡವಿಟ್ ಸಲ್ಲಿಸುತ್ತೀರಾ ಎಂದು ಪ್ರಶ್ನಿಸಿರುವ ಕೋರ್ಟ್, ಅನಕ್ಷರಸ್ಥ ಅಥವಾ ಇಂಟರ್ನೆಟ್ ಲಭ್ಯತೆ ಇಲ್ಲದ ವ್ಯಕ್ತಿಗಳಿಗೆ ಲಸಿಕೆ ನೋಂದಣಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೇಗೆ ಶಕ್ತಗೊಳಿಸುತ್ತವೆ ಎಂದಿದೆ.

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 10 ರಂದು ನಡೆಸುತ್ತೇವೆ ಎಂದು ಕೋರ್ಟ್ ತಿಳಿಸಿದೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಕಾಲ್ತುಳಿತ: ಎಂಟು ಮಹಿಳೆಯರು ಸಾವು; ಹಲವು ಮಂದಿಗೆ ಗಾಯ 

ಬಿಹಾರದ ನಳಂದ ಜಿಲ್ಲೆಯ ಶೀತ್ಲಾ ದೇವಸ್ಥಾನದಲ್ಲಿ ಮಂಗಳವಾರ ಸಂಭವಿಸಿದ ಕಾಲ್ತುಳಿತದಲ್ಲಿ ಕನಿಷ್ಠ ಎಂಟು ಮಹಿಳೆಯರು ಸಾವನ್ನಪ್ಪಿದ್ದು, ಹಲವಾರು ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.  ಪೂಜೆಗಾಗಿ ದೇವಾಲಯದಲ್ಲಿ ಹೆಚ್ಚಿನ ಸಂಖ್ಯೆಯ ಭಕ್ತರು ಜಮಾಯಿಸಿದಾಗ ಈ ಘಟನೆ ಸಂಭವಿಸಿದ್ದು,...

ದಲಿತ ಕ್ರೈಸ್ತರ ಎಸ್‌ಸಿ ಸ್ಥಾನಮಾನ ರದ್ದು ಆದೇಶ; ಸುಪ್ರೀಂ ಕೋರ್ಟ್ ತೀರ್ಪು ಖಂಡಿಸಿದ ಮಂದಕೃಷ್ಣ ಮಾದಿಗ

ದಲಿತರು ಕ್ರೈಸ್ತರಾದರೆ ಅವರ ಎಸ್‌ಸಿ ಸ್ಥಾನಮಾನ ರದ್ದುಗೊಳ್ಳಲಿದೆ ಎಂಬ ಸುಪ್ರೀಂ ಕೋರ್ಟ್ ತೀರ್ಪನ್ನು ಬಲವಾಗಿ ಖಂಡಿಸುತ್ತೇವೆ ಎಂದು ಎಂಆರ್‌ಪಿಎಸ್ ಫೌಂಡೇಶನ್ ಅಧ್ಯಕ್ಷ ಮಂದಕೃಷ್ಣ ಮಾದಿಗ ಹೇಳಿದರು. "ದೇಶದಲ್ಲಿ ಜಾತಿ ವ್ಯವಸ್ಥೆಯನ್ನು ನಿರ್ಮೂಲನೆ ಮಾಡಬೇಕು,...

ಜಾರ್ಖಂಡ್: ರಾಮನವಮಿ ಘರ್ಷಣೆಗೆ ಸಂಬಂಧಿಸಿದ 19 ಜನರನ್ನು ಬಂಧಿಸಿ, ಕೈಕೋಳ ಹಾಕಿ ಸಾರ್ವಜನಿಕ ಮೆರವಣಿಗೆ ಮಾಡಿದ ಪೊಲೀಸರು

ಜಾರ್ಖಂಡ್‌ನ ಗರ್ವಾ ಜಿಲ್ಲೆಯಲ್ಲಿ ರಾಮನವಮಿ ಮೆರವಣಿಗೆಯ ಸಂದರ್ಭದಲ್ಲಿ ಎರಡು ಸಮುದಾಯಗಳ ನಡುವೆ ನಡೆದ ಘರ್ಷಣೆಯ ನಂತರ ಕನಿಷ್ಠ 19 ಜನರನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.  ಭದ್ರತಾ ಪಡೆಗಳನ್ನು ಭಾರೀ ಪ್ರಮಾಣದಲ್ಲಿ ನಿಯೋಜಿಸಿದ ನಂತರ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ : ಹೊಸ ಮಸೂದೆ ಅಂಗೀಕರಿಸಿದ ಇಸ್ರೇಲ್ ಸಂಸತ್ತು

ಇಸ್ರೇಲ್ ಸಂಸತ್ತು ಸೋಮವಾರ (ಮಾರ್ಚ್ 30, 2026) ಹೊಸ ಮಸೂದೆಯೊಂದನ್ನು ಅಂಗೀಕರಿಸಿದೆ. ಇದರ ಪ್ರಕಾರ, ಮಿಲಿಟರಿ ನ್ಯಾಯಾಲಯದಲ್ಲಿ ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಲಾಗಿದೆ. ಪ್ರಧಾನಿ ಬೆಂಜಮಿನ್...

ಇರಾನ್ ಮೇಲೆ ದಾಳಿ : ಅಮೆರಿಕ ವಿಮಾನಗಳಿಗೆ ತನ್ನ ವಾಯುಪ್ರದೇಶ ಮುಚ್ಚಿದ ಸ್ಪೇನ್

ಇರಾನ್ ಮೇಲಿನ ದಾಳಿಗಳಲ್ಲಿ ಭಾಗಿಯಾಗಿರುವ ಅಮೆರಿಕದ ವಿಮಾನಗಳಿಗೆ ಸ್ಪೇನ್ ತನ್ನ ವಾಯುಪ್ರದೇಶವನ್ನು ನಿರ್ಬಂಧಿಸಿದೆ ಎಂದು ರಕ್ಷಣಾ ಸಚಿವೆ ಮಾರ್ಗರಿಟಾ ರೋಬಲ್ಸ್ (ಮಾ.30) ಸೋಮವಾರ ತಿಳಿಸಿದ್ದಾರೆ. ಜಂಟಿಯಾಗಿ ನಿರ್ವಹಿಸುವ ಸೇನಾ ನೆಲೆಗಳನ್ನು ಬಳಸಲು ಈ...

ಜನಗಣತಿ-2027 : ‘ಸ್ಥಿರ’ ಲಿವ್-ಇನ್ ಜೋಡಿಗೆ ವೈವಾಹಿಕ ಸ್ಥಾನಮಾನ

ತಮ್ಮ ಸಂಬಂಧ 'ಸ್ಥಿರ' ಎಂದು ಹೇಳಿಕೊಳ್ಳುವ ಲಿವ್-ಇನ್ ಜೋಡಿಗಳನ್ನು 2027ರ ಜನಗಣತಿಯಲ್ಲಿ ವಿವಾಹಿತ ದಂಪತಿಯೆಂದು ಪರಿಗಣಿಸಲಾಗುತ್ತದೆ ಎಂದು ವರದಿಯಾಗಿದೆ. ಜನಗಣತಿ ವೆಬ್‌ಸೈಟ್‌ನ FAQ (ಪದೇ ಪದೇ ಕೇಳಲಾಗುವ ಪ್ರಶ್ನೆಗಳು) ವಿಭಾಗದಲ್ಲಿ ಈ ಬಗ್ಗೆ ಸ್ಪಷ್ಟನೆ...