Homeಕರೋನಾ ತಲ್ಲಣಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

- Advertisement -
- Advertisement -

ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಅರಿತು ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಹಾಗಾದಾಗ ಅದು ಎಲ್ಲಾ ರಾಜ್ಯಗಳಿಗೆ ಸಮಾನ ಪ್ರಮಾಣದಲ್ಲಿ ಹಂಚಬಹುದಲ್ಲವೇ ಎಂದು ಸುಪ್ರೀಂ ಕೋರ್ಟ್ ನಿನ್ನೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಕೋವಿಡ್ ಲಸಿಕೆಯ ಉತ್ಪಾದನೆ, ದರನಿಗಧಿ ಮತ್ತು ವಿತರಣೆಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಸ್ವಯಂ ವಿಚಾರಣೆಯನ್ನು ಕೈಗತ್ತಿಕೊಂಡಿರುವ ಜಸ್ಟೀಸ್ ಚಂದ್ರಚೂಡ್‌ರವರ ನೇತೃತ್ವದ ಪೀಠ ಹಲವು ವಿಚಾರದಲ್ಲಿ ಕೇಂದ್ರ ಸರ್ಕಾರ ಎಡವುತ್ತಿರುವುದನ್ನು ಬೊಟ್ಟು ಮಾಡಿ ತೋರಿಸಿದೆ.

ಲಸಿಕೆಯ ದರನಿಗಧಿ ಮತ್ತು ವಿತರಣೆಯ ನಿರ್ಧಾರವನ್ನು ತಯಾರಿಕ ಕಂಪನಿಗಳಿಗೆ ಬಿಡಬಾರದು. ಸಾರ್ವಜನಿಕ ಹಿತಾಸಕ್ತಿಯ ಕಾರಣದಿಂದ ಈ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು ಮತ್ತು ತನ್ನ ಅಧಿಕಾರ ಬಳಸಿ ಕಾರ್ಯಗತಗೊಳಿಸಬೇಕು ಎಂದು ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರಿಗೆ ಜಸ್ಟೀಸ್ ಚಂದ್ರಚೂಡ್‌ ತಿಳಿಸಿದ್ದಾರೆ.

ಅಸ್ಟ್ರಜನಕಾ ಕಂಪನಿಯು ಅಮೆರಿಕದ ನಾಗರಿಕರಿಗೆ ಅತಿ ಕಡಿಮೆ ಬೆಲೆಗೆ ಲಸಿಕೆ ನೀಡುತ್ತಿದೆ. ಆದರೆ ನಾವು ಮಾತ್ರ ಏಕೆ ಹೆಚ್ಚು ಪಾವತಿ ಮಾಡಬೇಕು? ತಯಾರಕರು ಕೇಂದ್ರ ಸರ್ಕಾರಕ್ಕೆ ಅಂದರೆ ನಿಮಗೆ 150ರೂ ಡೋಸ್ ನೀಡುತ್ತಾರೆ. ಆದರೆ ರಾಜ್ಯಗಳು 300 ಅಥವಾ 400 ರೂ ಭರಿಸಬೇಕು. ದೇಶವೇಕೆ ಇಷ್ಟು ಹಣ ಪಾವತಿ ಮಾಡಬೇಕು ಎಂದು ಜಸ್ಟೀಸ್ ರವೀಂದ್ರ ಭಟ್ ಪ್ರಶ್ನಿಸಿದ್ದಾರೆ.

“ಲಸಿಕೆಯ ಬೆಲೆ ಸಮಸ್ಯೆಗಳು ತೀರಾ ಗಂಭೀರವಾದ ವಿಷಯವಾಗಿದೆ. ಈ ದೇಶದ ಬಹುಸಂಖ್ಯಾತರು ಬಡವರು ಮತ್ತು ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳಾಗಿವೆ. ನಮ್ಮಲ್ಲಿ ಖಾಸಗಿ ವಲಯದ ಮಾದರಿ ಸಾಧ್ಯವಿಲ್ಲ. ಹಾಗಾಗಿ ನಾವು ರಾಷ್ಟ್ರೀಯ ರೋಗನಿರೋಧಕ ಮಾದರಿಯನ್ನು ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

ರೆಮ್ಡೆಸಿವಿರ್, ಫಾಸಿಪುರಾವಿರ್ ಮತ್ತು ಟೊಸಿಲಿಜುಮಾಬ್ ಮುಂತಾದ ಔಷಧಗಳ ವಿಷಯದಲ್ಲಿ ಪೇಟೆಂಟ್ ಕಾಯ್ದೆಯ ಸೆಕ್ಷನ್ 100 ರ ಅಡಿಯಲ್ಲಿ ಸರ್ಕಾರಿ ಉದ್ದೇಶಗಳಿಗಾಗಿ ಪೇಟೆಂಟ್ ಬಳಸಲು ಉನ್ನತ ನ್ಯಾಯಾಲಯ ಏಕೆ ಅಧಿಕಾರ ನೀಡಬಾರದು? ಅಥವಾ ಪೇಟೆಂಟ್ ಕಾಯ್ದೆಯ ಸೆಕ್ಷನ್ 92 ರ ಅಡಿಯಲ್ಲಿ ಕಡ್ಡಾಯ ಪರವಾನಗಿಗಳನ್ನು ಏಕೆ ನೀಡಬಾರದು? ವಿಶೇಷವಾಗಿ ಅಂತಹ ನಿರ್ದೇಶನವು ಕಾನೂನು ಕ್ರಮಗಳ ಭಯವಿಲ್ಲದೆ ಈ ಔ ಷಧಿಗಳನ್ನು ತಯಾರಿಸಲು ಜೆನೆರಿಕ್ಸ್‌ಗೆ ಅನುವು ಮಾಡಿಕೊಡುತ್ತದೆ ಎಂದು ಸುಪ್ರೀಂ ತಿಳಿಸಿದೆ.

ಕೇಂದ್ರ ಸರ್ಕಾರವು ಖರೀದಿಸುವ ಶೇ.50 ರಷ್ಟು ಲಸಿಕೆಗಳನ್ನು ರಾಜ್ಯಗಳಿಗೆ ಯಾವಾಗ ನೀಡುತ್ತೀರಿ? ಅಲ್ಲದೇ ಕೇಂದ್ರ ಮತ್ತು ರಾಜ್ಯಗಳಿಗೆ ಲಸಿಕೆ ಬೆಲೆಯಲ್ಲಿನ ವ್ಯತ್ಯಾಸಕ್ಕೆ ತರ್ಕವೇನು? ಎಂದು ಕೋರ್ಟ್ ಕೇಂದ್ರವನ್ನು ಪ್ರಶ್ನಿಸಿದೆ.

ಮುಂದಿನ ಆರು ತಿಂಗಳುಗಳವರೆಗೆ ಲಸಿಕೆ ದಾಸ್ತಾನುಗಳ ಪ್ರಸ್ತುತ ಮತ್ತು ಯೋಜಿತ ಲಭ್ಯತೆಯನ್ನು ಕೇಂದ್ರ ಮತ್ತು ರಾಜ್ಯಗಳು ಸೂಚಿಸಬಹುದೇ? ರಾಜ್ಯಗಳಿಗೆ ಸಮಾನವಾಗಿ ಲಸಿಕೆ ಸಿಗುತ್ತದೆಯೇ? ಏಕೆಂದರೆ ಕೆಲ ರಾಜ್ಯಗಳು ಒಮ್ಮೆಗೆ ಹೆಚ್ಚು ಆರ್ಡರ್ ಮಾಡಿದರೆ ಉಳಿದ ರಾಜ್ಯಗಳು ಕಾಯುತ್ತಾ ಕೂರಬೇಕೆ? ಇದನ್ನು ಕೇಂದ್ರ ಸರ್ಕಾರ ಮೇಲ್ವಿಚಾರಣೆ ನಡೆಸುತ್ತದೆಯೇ? ಈಗಾಗಲೇ 45 ವ‍ರ್ಷ ಮೇಲ್ಪಟ್ಟವರಿಗೆ ಲಸಿಕೆ ಕೊರತೆಯಾಗುತ್ತಿದೆ ಎಂಬ ಪ್ರಶ್ನೆಗಳಿಗೆ ಉತ್ತರವೇನು ಎಂದು ಪ್ರಶ್ನಿಸಿದೆ.

18-44 ವಯಸ್ಸಿನವರಿಗೆ ಯಾವಾಗ ಲಸಿಕೆ ನೀಡಲಾಗುತ್ತದೆ? ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು. ಈ ಕುರಿತು ಅಫಿಡವಿಟ್ ಸಲ್ಲಿಸುತ್ತೀರಾ ಎಂದು ಪ್ರಶ್ನಿಸಿರುವ ಕೋರ್ಟ್, ಅನಕ್ಷರಸ್ಥ ಅಥವಾ ಇಂಟರ್ನೆಟ್ ಲಭ್ಯತೆ ಇಲ್ಲದ ವ್ಯಕ್ತಿಗಳಿಗೆ ಲಸಿಕೆ ನೋಂದಣಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೇಗೆ ಶಕ್ತಗೊಳಿಸುತ್ತವೆ ಎಂದಿದೆ.

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 10 ರಂದು ನಡೆಸುತ್ತೇವೆ ಎಂದು ಕೋರ್ಟ್ ತಿಳಿಸಿದೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬೆಂಗಳೂರಿನ ಅಪಾರ್ಟ್‌ಮೆಂಟ್‌ನಲ್ಲಿ ಪತ್ನಿಯ ಕತ್ತು ಹಿಸುಕಿ ಕೊಂದ ನಿವೃತ್ತ ಇಸ್ರೋ ಉದ್ಯೋಗಿ ಬಂಧನ

ಬೆಂಗಳೂರು: ಆಘಾತಕಾರಿ ಘಟನೆಯೊಂದರಲ್ಲಿ, 72 ವರ್ಷದ ನಿವೃತ್ತ ಇಸ್ರೋ ಉದ್ಯೋಗಿಯೊಬ್ಬರು ವೈಟ್‌ಫೀಲ್ಡ್ ವಿಭಾಗದ ಆವಲಹಳ್ಳಿ ಪೊಲೀಸ್ ಠಾಣೆ ವ್ಯಾಪ್ತಿಯ ತಮ್ಮ ಅಪಾರ್ಟ್‌ಮೆಂಟ್‌ನಲ್ಲಿ ಬುಧವಾರ ಪತ್ನಿಯನ್ನು ಕತ್ತು ಹಿಸುಕಿ ಕೊಂದಿರುವುದಾಗಿ ವರದಿಯಾಗಿದೆ.  ಬೊಮ್ಮನಹಳ್ಳಿಯ ಅಪಾರ್ಟ್‌ಮೆಂಟ್‌ನಲ್ಲಿ ಬೆಳಿಗ್ಗೆ...

ಮಧ್ಯಪ್ರದೇಶದಲ್ಲಿ ಶಾಸಕ ರಾಜಾ ಸಿಂಗ್‌ನಿಂದ ದ್ವೇಷ ಭಾಷಣ; ಪ್ರಚೋದನಕಾರಿ ‘ಶಿರಚ್ಛೇದನ’ ಹೇಳಿಕೆಗೆ ವಿರೋಧ

ತಮ್ಮ ಪ್ರಚೋದನಕಾರಿ ಹೇಳಿಕೆಗಳಿಂದಲೇ ಕುಖ್ಯಾತರಾಗಿರುವ ಹೈದರಾಬಾದ್‌ನ ಗೋಶಮಹಲ್ ಶಾಸಕ ಟಿ ರಾಜಾ ಸಿಂಗ್ ಸಾರ್ವಜನಿಕ ರ‍್ಯಾಲಿಯಲ್ಲಿ ಮತ್ತೊಮ್ಮೆ ಪ್ರಚೋದನಕಾರಿ ಹೇಳಿಕೆಗಳನ್ನು ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಅವರು ಆಡಿದ ಮಾತುಗಳು ವಿವಾದಕ್ಕೆ ಕಾರಣವಾಗಿದೆ. "ಪ್ರತಿಯೊಬ್ಬ ಬಜರಂಗಿಗಳು...

ಪಂಜಾಬ್ ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಆರೋಪ; ‘ಬಡ್ತಿ ವಿಳಂಬವಾಗಿದೆ..’; ಎಂದ ದಲಿತ ಪ್ರಾಧ್ಯಾಪಕ

ಪಂಜಾಬ್ ವಿಶ್ವವಿದ್ಯಾಲಯದ ದಲಿತ ಸಹಾಯಕ ಪ್ರಾಧ್ಯಾಪಕ ಹರ್‌ಪ್ರೀತ್ ಸಿಂಗ್ ಅವರು ವಿಶ್ವವಿದ್ಯಾಲಯದಲ್ಲಿ ಜಾತಿ ಆಧಾರಿತ ತಾರತಮ್ಯ ಇದೆ ಎಂದು ಸಾರ್ವಜನಿಕವಾಗಿ ಆರೋಪಿಸಿದ್ದಾರೆ. ತನ್ನ ಜಾತಿಯ ಕಾರಣದಿಂದಾಗಿ ಉದ್ದೇಶಪೂರ್ವಕವಾಗಿ ಬಡ್ತಿ ವಿಳಂಬ ಮಾಡಲಾಗಿದೆ...

ಮಹಾರಾಷ್ಟ್ರ: ತಾಯಿ, ಸಹೋದರನ ಕಣ್ಣಿಗೆ ಮೆಣಸಿನ ಪುಡಿ ಎರೆಚಿ ಮದುವೆ ಸಿದ್ಧತೆಯಲ್ಲಿದ್ದ 21 ವರ್ಷದ ಯುವತಿಯ ಅಪಹರಣ

ಮುಂಬೈ: ಆಘಾತಕಾರಿ ಘಟನೆಯೊಂದರಲ್ಲಿ, ಮಹಾರಾಷ್ಟ್ರದ ಪುಣೆ ಜಿಲ್ಲೆಯ ಇಂದಾಪುರ ತಹಸಿಲ್‌ನ ಭಿಗ್ವಾನ್‌ನಲ್ಲಿ 21 ವರ್ಷದ ಯುವತಿಯನ್ನು ಆಕೆಯ ತಾಯಿ ಮತ್ತು ಸಹೋದರನ ಮುಂದೆಯೇ ಇಬ್ಬರು ವ್ಯಕ್ತಿಗಳು ಅಪಹರಿಸಿದ್ದಾರೆ ಎಂದು ಆರೋಪಿಸಲಾಗಿದೆ.ಮದುವೆ ಸಿದ್ಧತೆಯಲ್ಲಿದ್ದ ಯುವತಿ...

KERALA SIR | ಬಿಜೆಪಿ ಮುಖಂಡನ ದೂರು: ಪೌರತ್ವ ಸಾಬೀತುಪಡಿಸುವಂತೆ ಮುಸ್ಲಿಂ ವ್ಯಕ್ತಿಗೆ ನೋಟಿಸ್!

ಬಿಜೆಪಿ ಕಾಸರಗೋಡು ಜಿಲ್ಲಾ ಕಾರ್ಯದರ್ಶಿ ಲೋಕೇಶ್ ನೋಂಡಾ ಎಂಬಾತನ ದೂರಿನ ಮೇರೆಗೆ ಹಿರಿಯ ವಯಸ್ಸಿನ ಮುಸ್ಲಿಂ ವ್ಯಕ್ತಿಯೊಬ್ಬರಿಗೆ ಭಾರತೀಯ ಪೌರತ್ವ ಸಾಬೀತುಪಡಿಸುವಂತೆ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ನೋಟಿಸ್ ಜಾರಿ ಮಾಡಿದ್ದು, ಆ...

ಚೀನಾ ನಿರ್ಮಿತ ರೋಬೋ ಡಾಗ್ ತಾವೇ ಅಭಿವೃದ್ಧಿಪಡಿಸಿದ್ದಾಗಿ ಹೇಳಿಕೊಂಡಿದ್ದ ಗ್ಯಾಲ್ಗೋಟಿಯಾ ವಿವಿ AI ಸಮ್ಮಿಟ್ ಎಕ್ಸ್‌ಪೋದಿಂದ ತೆರವು

ನವದೆಹಲಿ: ಚೀನಾ ನಿರ್ಮಿತ ರೋಬೋ ಡಾಗ್ ತಮ್ಮದೇ ಎಂದು ಪ್ರದರ್ಶಿಸಿದ್ದಕ್ಕಾಗಿ ಟೀಕೆಗೆ ಗುರಿಯಾದ ನಂತರ ಮತ್ತು ಕೇಂದ್ರ ಸರ್ಕಾರವು ವಿರೋಧ ಪಕ್ಷಗಳಿಂದ ಟೀಕೆಗೆ ಗುರಿಯಾದ ನಂತರ ನೋಯ್ಡಾ ಮೂಲದ ಗ್ಯಾಲ್ಗೋಟಿಯಾಸ್ ವಿಶ್ವವಿದ್ಯಾಲಯವನ್ನು ಬುಧವಾರ...

ಉತ್ತರ ಪ್ರದೇಶ| ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಟಿಟಿಇಯಿಂದ ಸೇನಾ ಆಕಾಂಕ್ಷಿಯ ಮೇಲೆ ಅತ್ಯಾಚಾರ

ಉತ್ತರ ಪ್ರದೇಶದ ಅಹಮದಾಬಾದ್-ಗೋರಖ್‌ಪುರ ಎಕ್ಸ್‌ಪ್ರೆಸ್‌ನಲ್ಲಿ ಪ್ರಯಾಣಿಸುತ್ತಿದ್ದಾಗ ಟಿಕೆಟ್ ಪರೀಕ್ಷಕನೊಬ್ಬ (ಟಿಟಿಇ) ತನ್ನ ಮೇಲೆ ಅತ್ಯಾಚಾರ ಎಸಗಿದ್ದಾನೆ ಎಂದು ಸೇನಾ ನೇಮಕಾತಿಗೆ ತಯಾರಿ ನಡೆಸುತ್ತಿದ್ದ ಯುವತಿ ಆರೋಪಿಸಿದ್ದಾರೆ. ಇಂದಾರಾ ಮತ್ತು ಡಿಯೋರಿಯಾ ರೈಲು ನಿಲ್ದಾಣಗಳ ನಡುವೆ...

ನಾನು ಭಾರತಕ್ಕೆ ಯಾವಾಗ ಹಿಂತಿರುಗುತ್ತೇನೆಂದು ಹೇಳಲು ಸಾಧ್ಯವಿಲ್ಲ: ಬಾಂಬೆ ಹೈಕೋರ್ಟ್‌ಗೆ ತಿಳಿಸಿದ ಮಲ್ಯ

ವಂಚನೆ ಮತ್ತು ಹಣ ವರ್ಗಾವಣೆಯ ಹಲವಾರು ಪ್ರಕರಣಗಳನ್ನು ಎದುರಿಸುತ್ತಿರುವ, ದೇಶದಿಂದ ಪರಾರಿಯಾಗಿರುವ ಉದ್ಯಮಿ ವಿಜಯ್ ಮಲ್ಯ, "ಯುಕೆ ತೊರೆಯುವುದನ್ನು ನನಗೆ ಕಾನೂನುಬದ್ಧವಾಗಿ ನಿಷೇಧಿಸಲಾಗಿರುವುದರಿಂದ ಯಾವಾಗ ಭಾರತಕ್ಕೆ ಹಿಂತಿರುಗುತ್ತೇನೆ ಎಂದು ಹೇಳಲು ಸಾಧ್ಯವಿಲ್ಲ" ಎಂದು...

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿ ಆಗದಂತೆ ತಡೆದಿದ್ದು ರಾಹುಲ್ ಗಾಂಧಿ : ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಕಾಂಗ್ರೆಸ್‌ನಲ್ಲಿದ್ದಾಗ ನಾನು ಮುಖ್ಯಮಂತ್ರಿಯಾಗದಂತೆ ರಾಹುಲ್ ಗಾಂಧಿ ತಡೆದಿದ್ದಾರೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಮಂಗಳವಾರ (ಫೆ.17) ಆರೋಪಿಸಿದ್ದಾರೆ. ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, "2014 ರಲ್ಲಿ ಅಂದಿನ ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ...

ಮಮತಾ ಬ್ಯಾನರ್ಜಿ ವಿರುದ್ಧ ಇಡಿ ಅರ್ಜಿ: ಮಾರ್ಚ್ 18ಕ್ಕೆ ವಿಚಾರಣೆ ಮುಂದೂಡಿಕೆ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಹಾಗೂ ಇತರರ ವಿರುದ್ಧದ ಐ-ಪ್ಯಾಕ್ ಕಚೇರಿ ಶೋಧಕ್ಕೆ ಸಂಬಂಧಿಸಿದ ಪ್ರಕರಣದ ವಿಚಾರಣೆಯ ಸಂದರ್ಭದಲ್ಲಿ, ಕೇಂದ್ರ ಜಾರಿ ನಿರ್ದೇಶನಾಲಯದ (ಇಡಿ) ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್‌ವಿ...