Homeಕರೋನಾ ತಲ್ಲಣಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

- Advertisement -
- Advertisement -

ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಅರಿತು ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಹಾಗಾದಾಗ ಅದು ಎಲ್ಲಾ ರಾಜ್ಯಗಳಿಗೆ ಸಮಾನ ಪ್ರಮಾಣದಲ್ಲಿ ಹಂಚಬಹುದಲ್ಲವೇ ಎಂದು ಸುಪ್ರೀಂ ಕೋರ್ಟ್ ನಿನ್ನೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಕೋವಿಡ್ ಲಸಿಕೆಯ ಉತ್ಪಾದನೆ, ದರನಿಗಧಿ ಮತ್ತು ವಿತರಣೆಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಸ್ವಯಂ ವಿಚಾರಣೆಯನ್ನು ಕೈಗತ್ತಿಕೊಂಡಿರುವ ಜಸ್ಟೀಸ್ ಚಂದ್ರಚೂಡ್‌ರವರ ನೇತೃತ್ವದ ಪೀಠ ಹಲವು ವಿಚಾರದಲ್ಲಿ ಕೇಂದ್ರ ಸರ್ಕಾರ ಎಡವುತ್ತಿರುವುದನ್ನು ಬೊಟ್ಟು ಮಾಡಿ ತೋರಿಸಿದೆ.

ಲಸಿಕೆಯ ದರನಿಗಧಿ ಮತ್ತು ವಿತರಣೆಯ ನಿರ್ಧಾರವನ್ನು ತಯಾರಿಕ ಕಂಪನಿಗಳಿಗೆ ಬಿಡಬಾರದು. ಸಾರ್ವಜನಿಕ ಹಿತಾಸಕ್ತಿಯ ಕಾರಣದಿಂದ ಈ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು ಮತ್ತು ತನ್ನ ಅಧಿಕಾರ ಬಳಸಿ ಕಾರ್ಯಗತಗೊಳಿಸಬೇಕು ಎಂದು ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರಿಗೆ ಜಸ್ಟೀಸ್ ಚಂದ್ರಚೂಡ್‌ ತಿಳಿಸಿದ್ದಾರೆ.

ಅಸ್ಟ್ರಜನಕಾ ಕಂಪನಿಯು ಅಮೆರಿಕದ ನಾಗರಿಕರಿಗೆ ಅತಿ ಕಡಿಮೆ ಬೆಲೆಗೆ ಲಸಿಕೆ ನೀಡುತ್ತಿದೆ. ಆದರೆ ನಾವು ಮಾತ್ರ ಏಕೆ ಹೆಚ್ಚು ಪಾವತಿ ಮಾಡಬೇಕು? ತಯಾರಕರು ಕೇಂದ್ರ ಸರ್ಕಾರಕ್ಕೆ ಅಂದರೆ ನಿಮಗೆ 150ರೂ ಡೋಸ್ ನೀಡುತ್ತಾರೆ. ಆದರೆ ರಾಜ್ಯಗಳು 300 ಅಥವಾ 400 ರೂ ಭರಿಸಬೇಕು. ದೇಶವೇಕೆ ಇಷ್ಟು ಹಣ ಪಾವತಿ ಮಾಡಬೇಕು ಎಂದು ಜಸ್ಟೀಸ್ ರವೀಂದ್ರ ಭಟ್ ಪ್ರಶ್ನಿಸಿದ್ದಾರೆ.

“ಲಸಿಕೆಯ ಬೆಲೆ ಸಮಸ್ಯೆಗಳು ತೀರಾ ಗಂಭೀರವಾದ ವಿಷಯವಾಗಿದೆ. ಈ ದೇಶದ ಬಹುಸಂಖ್ಯಾತರು ಬಡವರು ಮತ್ತು ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳಾಗಿವೆ. ನಮ್ಮಲ್ಲಿ ಖಾಸಗಿ ವಲಯದ ಮಾದರಿ ಸಾಧ್ಯವಿಲ್ಲ. ಹಾಗಾಗಿ ನಾವು ರಾಷ್ಟ್ರೀಯ ರೋಗನಿರೋಧಕ ಮಾದರಿಯನ್ನು ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

ರೆಮ್ಡೆಸಿವಿರ್, ಫಾಸಿಪುರಾವಿರ್ ಮತ್ತು ಟೊಸಿಲಿಜುಮಾಬ್ ಮುಂತಾದ ಔಷಧಗಳ ವಿಷಯದಲ್ಲಿ ಪೇಟೆಂಟ್ ಕಾಯ್ದೆಯ ಸೆಕ್ಷನ್ 100 ರ ಅಡಿಯಲ್ಲಿ ಸರ್ಕಾರಿ ಉದ್ದೇಶಗಳಿಗಾಗಿ ಪೇಟೆಂಟ್ ಬಳಸಲು ಉನ್ನತ ನ್ಯಾಯಾಲಯ ಏಕೆ ಅಧಿಕಾರ ನೀಡಬಾರದು? ಅಥವಾ ಪೇಟೆಂಟ್ ಕಾಯ್ದೆಯ ಸೆಕ್ಷನ್ 92 ರ ಅಡಿಯಲ್ಲಿ ಕಡ್ಡಾಯ ಪರವಾನಗಿಗಳನ್ನು ಏಕೆ ನೀಡಬಾರದು? ವಿಶೇಷವಾಗಿ ಅಂತಹ ನಿರ್ದೇಶನವು ಕಾನೂನು ಕ್ರಮಗಳ ಭಯವಿಲ್ಲದೆ ಈ ಔ ಷಧಿಗಳನ್ನು ತಯಾರಿಸಲು ಜೆನೆರಿಕ್ಸ್‌ಗೆ ಅನುವು ಮಾಡಿಕೊಡುತ್ತದೆ ಎಂದು ಸುಪ್ರೀಂ ತಿಳಿಸಿದೆ.

ಕೇಂದ್ರ ಸರ್ಕಾರವು ಖರೀದಿಸುವ ಶೇ.50 ರಷ್ಟು ಲಸಿಕೆಗಳನ್ನು ರಾಜ್ಯಗಳಿಗೆ ಯಾವಾಗ ನೀಡುತ್ತೀರಿ? ಅಲ್ಲದೇ ಕೇಂದ್ರ ಮತ್ತು ರಾಜ್ಯಗಳಿಗೆ ಲಸಿಕೆ ಬೆಲೆಯಲ್ಲಿನ ವ್ಯತ್ಯಾಸಕ್ಕೆ ತರ್ಕವೇನು? ಎಂದು ಕೋರ್ಟ್ ಕೇಂದ್ರವನ್ನು ಪ್ರಶ್ನಿಸಿದೆ.

ಮುಂದಿನ ಆರು ತಿಂಗಳುಗಳವರೆಗೆ ಲಸಿಕೆ ದಾಸ್ತಾನುಗಳ ಪ್ರಸ್ತುತ ಮತ್ತು ಯೋಜಿತ ಲಭ್ಯತೆಯನ್ನು ಕೇಂದ್ರ ಮತ್ತು ರಾಜ್ಯಗಳು ಸೂಚಿಸಬಹುದೇ? ರಾಜ್ಯಗಳಿಗೆ ಸಮಾನವಾಗಿ ಲಸಿಕೆ ಸಿಗುತ್ತದೆಯೇ? ಏಕೆಂದರೆ ಕೆಲ ರಾಜ್ಯಗಳು ಒಮ್ಮೆಗೆ ಹೆಚ್ಚು ಆರ್ಡರ್ ಮಾಡಿದರೆ ಉಳಿದ ರಾಜ್ಯಗಳು ಕಾಯುತ್ತಾ ಕೂರಬೇಕೆ? ಇದನ್ನು ಕೇಂದ್ರ ಸರ್ಕಾರ ಮೇಲ್ವಿಚಾರಣೆ ನಡೆಸುತ್ತದೆಯೇ? ಈಗಾಗಲೇ 45 ವ‍ರ್ಷ ಮೇಲ್ಪಟ್ಟವರಿಗೆ ಲಸಿಕೆ ಕೊರತೆಯಾಗುತ್ತಿದೆ ಎಂಬ ಪ್ರಶ್ನೆಗಳಿಗೆ ಉತ್ತರವೇನು ಎಂದು ಪ್ರಶ್ನಿಸಿದೆ.

18-44 ವಯಸ್ಸಿನವರಿಗೆ ಯಾವಾಗ ಲಸಿಕೆ ನೀಡಲಾಗುತ್ತದೆ? ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು. ಈ ಕುರಿತು ಅಫಿಡವಿಟ್ ಸಲ್ಲಿಸುತ್ತೀರಾ ಎಂದು ಪ್ರಶ್ನಿಸಿರುವ ಕೋರ್ಟ್, ಅನಕ್ಷರಸ್ಥ ಅಥವಾ ಇಂಟರ್ನೆಟ್ ಲಭ್ಯತೆ ಇಲ್ಲದ ವ್ಯಕ್ತಿಗಳಿಗೆ ಲಸಿಕೆ ನೋಂದಣಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೇಗೆ ಶಕ್ತಗೊಳಿಸುತ್ತವೆ ಎಂದಿದೆ.

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 10 ರಂದು ನಡೆಸುತ್ತೇವೆ ಎಂದು ಕೋರ್ಟ್ ತಿಳಿಸಿದೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....

ಬಿಹಾರ: ಸರ್ಕಾರಿ ಶಾಲಾ ಶಿಕ್ಷಕರಿಗೆ ಬೀದಿ ನಾಯಿಗಳನ್ನು ಎಣಿಸುವ ಹೆಚ್ಚುವರಿ ಕರ್ತವ್ಯ ವಹಿಸಿದ ಪುರಸಭೆ  

ಪಾಟ್ನಾ: ಸುಪ್ರೀಂ ಕೋರ್ಟ್ ಬೀದಿ ನಾಯಿಗಳ ವಿಚಾರದಲ್ಲಿ ಮಹತ್ವದ ಆದೇಶ ನೀಡಿದೆ. ಸಾರ್ವಜನಿಕ ರಸ್ತೆಗಳು, ಬೀದಿಗಳು ಬೀದಿನಾಯಿ ಮುಕ್ತವಾಗಿರಬೇಕು ಎಂದು ಹೇಳಿದೆ. ಆದರೆ ಈ ಆದೇಶ ಸರ್ಕಾರಿ ಶಾಲಾ ಶಿಕ್ಷಕರ ಪಾಲಿಗೆ ದೊಡ್ಡ...

ಮಮತಾ ಬ್ಯಾನರ್ಜಿಯ ರಾಜಕೀಯ ಸಲಹಾ ಸಂಸ್ಥೆ ಐ-ಪ್ಯಾಕ್, ಅದರ ಮುಖ್ಯಸ್ಥ ಪ್ರತೀಕ್ ಜೈನ್ ಮನೆ ಮೇಲೆ ಇಡಿ ದಾಳಿ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ...

ಉತ್ತರಪ್ರದೇಶ: ಕಬ್ಬಿನ ಗದ್ದೆಯಲ್ಲಿ ಸುಟ್ಟ, ಅರೆನಗ್ನ ಮಹಿಳೆಯ ಮೃತದೇಹ ಪತ್ತೆ: ಅತ್ಯಾಚಾರ ಮಾಡಿ ಬೆಂಕಿ ಹಚ್ಚಿರುವ ಶಂಕೆ

ಹಾಪುರ್: ಉತ್ತರ ಪ್ರದೇಶದ ಹಾಪುರ್ ಜಿಲ್ಲೆಯಲ್ಲಿ ಆಘಾತಕಾರಿ ಘಟನೆಯೊಂದು ಬೆಳಕಿಗೆ ಬಂದಿದ್ದು, ಬಹದ್ದೂರ್‌ಗಢ ಪೊಲೀಸ್ ಠಾಣೆ ವ್ಯಾಪ್ತಿಯ ಲಹಾದ್ರಾ ಗ್ರಾಮದ ಇಟ್ಟಿಗೆ ಗೂಡುಗಳ ಹಿಂದಿನ ಕಬ್ಬಿನ ಗದ್ದೆಯಲ್ಲಿ ಸುಮಾರು 30 ವರ್ಷ ವಯಸ್ಸಿನ...

ಗೋಮಾಂಸ ಸೇವನೆ ಶಂಕೆಯಲ್ಲಿ ಮಾನಸಿಕ ಅಸ್ವಸ್ಥ ವ್ಯಕ್ತಿಯ ಮೇಲೆ ಕ್ರೂರ ಹಲ್ಲೆ : ಮೂವರು ದುಷ್ಕರ್ಮಿಗಳ ಬಂಧನ

ಸಾರ್ವಜನಿಕವಾಗಿ ಹಸುವನ್ನು ಕೊಂದು, ಅದರ ಮಾಂಸವನ್ನು ತಿಂದಿದ್ದಾರೆ ಎಂದು ಆರೋಪಿಸಿ ಮಾನಸಿಕ ಅಸ್ವಸ್ಥ ವ್ಯಕ್ತಿ ಮೇಲೆ ಸ್ವಘೋಷಿತ ಗೋರಕ್ಷಕರು ಕ್ರೂರವಾಗಿ ಹಲ್ಲೆ ನಡೆಸಿದ ಘಟನೆ ರಾಜಸ್ಥಾನದ ಝಾಲಾವರ್ ಜಿಲ್ಲೆಯ ಅಕ್ಲೇರಾ ತಾಲೂಕಿನ ಕಿಶನ್‌ಪುರ...

‘ನಿಮ್ಮನ್ನು ನಂಬಿ ಬಂದ ನಕ್ಸಲ್ ಕಾರ್ಯಕರ್ತರಿಗೆ ಕೊಟ್ಟ ಮಾತು ಉಳಿಸಿಕೊಳ್ಳಿ’: ಸಿದ್ದರಾಮಯ್ಯ ಅವರಿಗೆ ಮನವಿ ಮಾಡಿದ ಶಾಂತಿಗಾಗಿ ನಾಗರೀಕ ವೇದಿಕೆ

ಬೆಂಗಳೂರು: ‘ಮುಖ್ಯವಾಹಿನಿಗೆ ಬಂದ ಏಳೂ ಜನ ನಕ್ಸಲೀಯರು ಜೈಲಿನಲ್ಲೇ ಇದ್ದಾರೆ. ಬಹಳ ಸೊರಗಿದ್ದಾರೆ. ತೀವ್ರ ದೈಹಿಕ ಹಾಗೂ ಮಾನಸಿಕ ಸಮಸ್ಯೆಗಳನ್ನು ಎದುರಿಸುತ್ತಿದ್ದಾರೆ. ಅವರನ್ನು ಹೋಗಿ ಕಾಣುವುದೇ ನಮ್ಮ ಪಾಲಿಗೆ ದೊಡ್ಡ ಹಿಂಸೆಯಾಗಿದೆ ಎಂದು...

ಕೋಗಿಲು ಮನೆಗಳ ನೆಲಸಮ : ಪ್ರತಿಭಟಿಸಿದ ಹೋರಾಟಗಾರರ ಮೇಲೆ ಎಫ್‌ಐಆರ್

ಕೋಗಿಲು ಬಡಾವಣೆಯಲ್ಲಿ ಬಡವರ ಮನೆಗಳ ನೆಲಸಮ ವೇಳೆ ಬಿಗುವಿನ ವಾತಾವರಣ ಸೃಷ್ಟಿಸಿದ್ದಾರೆ ಎಂಬ ಆರೋಪದ ಮೇಲೆ ಹೋರಾಟಗಾರರ ವಿರುದ್ದ ಯಲಹಂಕ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ. ಜನಪರ ವೇದಿಕೆಯ ಮುಖಂಡರಾದ ಗೌರಮ್ಮ ಮತ್ತು ಮನೋಹರ್,...

17 ವರ್ಷದ ಮಹಿಳಾ ಅಥ್ಲೀಟ್ ಮೇಲೆ ಲೈಂಗಿಕ ದೌರ್ಜನ್ಯ ಆರೋಪ: ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಮಾನತು

ಫರಿದಾಬಾದ್‌ನ ಹೋಟೆಲ್‌ನಲ್ಲಿ 17 ವರ್ಷದ ರಾಷ್ಟ್ರಮಟ್ಟದ ಮಹಿಳಾ ಶೂಟರ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಹರಿಯಾಣ ಪೊಲೀಸರು ಪ್ರಕರಣ ದಾಖಲಿಸಿದ ನಂತರ ರಾಷ್ಟ್ರೀಯ ಶೂಟಿಂಗ್ ತರಬೇತುದಾರ ಅಂಕುಶ್ ಭಾರದ್ವಾಜ್ ಅವರನ್ನು...

ಸುಪ್ರೀಂ ಕೋರ್ಟ್‌ನಿಂದ ಜಾಮೀನು : ಗುಲ್ಫಿಶಾ ಫಾತಿಮಾ ಸೇರಿದಂತೆ ನಾಲ್ವರು ಜೈಲಿನಿಂದ ಬಿಡುಗಡೆ

ಈಶಾನ್ಯ ದೆಹಲಿಯ 2020ರ ಗಲಭೆ ಪಿತೂರಿ ಆರೋಪದಲ್ಲಿ ಬಂಧಿತರಾಗಿದ್ದ ನಾಲ್ವರು ವಿದ್ಯಾರ್ಥಿ ಹೋರಾಟಗಾರರು ಬುಧವಾರ (ಜ.7) ಜೈಲಿನಿಂದ ಹೊರ ಬಂದಿದ್ದಾರೆ. ಗುಲ್ಫಿಶಾ ಫಾತಿಮಾ, ಮೀರಾನ್ ಹೈದರ್, ಶಿಫಾ ಉರ್ ರೆಹಮಾನ್ ಮತ್ತು ಮೊಹಮ್ಮದ್ ಸಲೀಮ್...