Homeಕರೋನಾ ತಲ್ಲಣಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಲಸಿಕೆ ದರದಲ್ಲಿ ತಾರತಮ್ಯವೇಕೆ: ಸುಪ್ರೀಂ ಪ್ರಶ್ನೆ

- Advertisement -
- Advertisement -

ಸಾಂಕ್ರಾಮಿಕ ರೋಗದ ತೀವ್ರತೆಯನ್ನು ಅರಿತು ಕೇಂದ್ರವೇ ಏಕೆ ಎಲ್ಲಾ ಲಸಿಕೆ ಖರೀದಿಸಬಾರದು? ಹಾಗಾದಾಗ ಅದು ಎಲ್ಲಾ ರಾಜ್ಯಗಳಿಗೆ ಸಮಾನ ಪ್ರಮಾಣದಲ್ಲಿ ಹಂಚಬಹುದಲ್ಲವೇ ಎಂದು ಸುಪ್ರೀಂ ಕೋರ್ಟ್ ನಿನ್ನೆ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದೆ.

ಕೋವಿಡ್ ಲಸಿಕೆಯ ಉತ್ಪಾದನೆ, ದರನಿಗಧಿ ಮತ್ತು ವಿತರಣೆಯಲ್ಲಿ ಉಂಟಾಗಿರುವ ಸಮಸ್ಯೆಯ ಕುರಿತು ಸ್ವಯಂ ವಿಚಾರಣೆಯನ್ನು ಕೈಗತ್ತಿಕೊಂಡಿರುವ ಜಸ್ಟೀಸ್ ಚಂದ್ರಚೂಡ್‌ರವರ ನೇತೃತ್ವದ ಪೀಠ ಹಲವು ವಿಚಾರದಲ್ಲಿ ಕೇಂದ್ರ ಸರ್ಕಾರ ಎಡವುತ್ತಿರುವುದನ್ನು ಬೊಟ್ಟು ಮಾಡಿ ತೋರಿಸಿದೆ.

ಲಸಿಕೆಯ ದರನಿಗಧಿ ಮತ್ತು ವಿತರಣೆಯ ನಿರ್ಧಾರವನ್ನು ತಯಾರಿಕ ಕಂಪನಿಗಳಿಗೆ ಬಿಡಬಾರದು. ಸಾರ್ವಜನಿಕ ಹಿತಾಸಕ್ತಿಯ ಕಾರಣದಿಂದ ಈ ಜವಾಬ್ದಾರಿಯನ್ನು ಕೇಂದ್ರ ಸರ್ಕಾರ ಹೊತ್ತುಕೊಳ್ಳಬೇಕು ಮತ್ತು ತನ್ನ ಅಧಿಕಾರ ಬಳಸಿ ಕಾರ್ಯಗತಗೊಳಿಸಬೇಕು ಎಂದು ಕೇಂದ್ರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾರವರಿಗೆ ಜಸ್ಟೀಸ್ ಚಂದ್ರಚೂಡ್‌ ತಿಳಿಸಿದ್ದಾರೆ.

ಅಸ್ಟ್ರಜನಕಾ ಕಂಪನಿಯು ಅಮೆರಿಕದ ನಾಗರಿಕರಿಗೆ ಅತಿ ಕಡಿಮೆ ಬೆಲೆಗೆ ಲಸಿಕೆ ನೀಡುತ್ತಿದೆ. ಆದರೆ ನಾವು ಮಾತ್ರ ಏಕೆ ಹೆಚ್ಚು ಪಾವತಿ ಮಾಡಬೇಕು? ತಯಾರಕರು ಕೇಂದ್ರ ಸರ್ಕಾರಕ್ಕೆ ಅಂದರೆ ನಿಮಗೆ 150ರೂ ಡೋಸ್ ನೀಡುತ್ತಾರೆ. ಆದರೆ ರಾಜ್ಯಗಳು 300 ಅಥವಾ 400 ರೂ ಭರಿಸಬೇಕು. ದೇಶವೇಕೆ ಇಷ್ಟು ಹಣ ಪಾವತಿ ಮಾಡಬೇಕು ಎಂದು ಜಸ್ಟೀಸ್ ರವೀಂದ್ರ ಭಟ್ ಪ್ರಶ್ನಿಸಿದ್ದಾರೆ.

“ಲಸಿಕೆಯ ಬೆಲೆ ಸಮಸ್ಯೆಗಳು ತೀರಾ ಗಂಭೀರವಾದ ವಿಷಯವಾಗಿದೆ. ಈ ದೇಶದ ಬಹುಸಂಖ್ಯಾತರು ಬಡವರು ಮತ್ತು ಅಂಚಿಗೆ ತಳ್ಳಲ್ಪಟ್ಟ ಸಮುದಾಯಗಳಾಗಿವೆ. ನಮ್ಮಲ್ಲಿ ಖಾಸಗಿ ವಲಯದ ಮಾದರಿ ಸಾಧ್ಯವಿಲ್ಲ. ಹಾಗಾಗಿ ನಾವು ರಾಷ್ಟ್ರೀಯ ರೋಗನಿರೋಧಕ ಮಾದರಿಯನ್ನು ಅನುಸರಿಸಬೇಕು” ಎಂದು ನ್ಯಾಯಮೂರ್ತಿ ಚಂದ್ರಚೂಡ್ ಹೇಳಿದರು.

ರೆಮ್ಡೆಸಿವಿರ್, ಫಾಸಿಪುರಾವಿರ್ ಮತ್ತು ಟೊಸಿಲಿಜುಮಾಬ್ ಮುಂತಾದ ಔಷಧಗಳ ವಿಷಯದಲ್ಲಿ ಪೇಟೆಂಟ್ ಕಾಯ್ದೆಯ ಸೆಕ್ಷನ್ 100 ರ ಅಡಿಯಲ್ಲಿ ಸರ್ಕಾರಿ ಉದ್ದೇಶಗಳಿಗಾಗಿ ಪೇಟೆಂಟ್ ಬಳಸಲು ಉನ್ನತ ನ್ಯಾಯಾಲಯ ಏಕೆ ಅಧಿಕಾರ ನೀಡಬಾರದು? ಅಥವಾ ಪೇಟೆಂಟ್ ಕಾಯ್ದೆಯ ಸೆಕ್ಷನ್ 92 ರ ಅಡಿಯಲ್ಲಿ ಕಡ್ಡಾಯ ಪರವಾನಗಿಗಳನ್ನು ಏಕೆ ನೀಡಬಾರದು? ವಿಶೇಷವಾಗಿ ಅಂತಹ ನಿರ್ದೇಶನವು ಕಾನೂನು ಕ್ರಮಗಳ ಭಯವಿಲ್ಲದೆ ಈ ಔ ಷಧಿಗಳನ್ನು ತಯಾರಿಸಲು ಜೆನೆರಿಕ್ಸ್‌ಗೆ ಅನುವು ಮಾಡಿಕೊಡುತ್ತದೆ ಎಂದು ಸುಪ್ರೀಂ ತಿಳಿಸಿದೆ.

ಕೇಂದ್ರ ಸರ್ಕಾರವು ಖರೀದಿಸುವ ಶೇ.50 ರಷ್ಟು ಲಸಿಕೆಗಳನ್ನು ರಾಜ್ಯಗಳಿಗೆ ಯಾವಾಗ ನೀಡುತ್ತೀರಿ? ಅಲ್ಲದೇ ಕೇಂದ್ರ ಮತ್ತು ರಾಜ್ಯಗಳಿಗೆ ಲಸಿಕೆ ಬೆಲೆಯಲ್ಲಿನ ವ್ಯತ್ಯಾಸಕ್ಕೆ ತರ್ಕವೇನು? ಎಂದು ಕೋರ್ಟ್ ಕೇಂದ್ರವನ್ನು ಪ್ರಶ್ನಿಸಿದೆ.

ಮುಂದಿನ ಆರು ತಿಂಗಳುಗಳವರೆಗೆ ಲಸಿಕೆ ದಾಸ್ತಾನುಗಳ ಪ್ರಸ್ತುತ ಮತ್ತು ಯೋಜಿತ ಲಭ್ಯತೆಯನ್ನು ಕೇಂದ್ರ ಮತ್ತು ರಾಜ್ಯಗಳು ಸೂಚಿಸಬಹುದೇ? ರಾಜ್ಯಗಳಿಗೆ ಸಮಾನವಾಗಿ ಲಸಿಕೆ ಸಿಗುತ್ತದೆಯೇ? ಏಕೆಂದರೆ ಕೆಲ ರಾಜ್ಯಗಳು ಒಮ್ಮೆಗೆ ಹೆಚ್ಚು ಆರ್ಡರ್ ಮಾಡಿದರೆ ಉಳಿದ ರಾಜ್ಯಗಳು ಕಾಯುತ್ತಾ ಕೂರಬೇಕೆ? ಇದನ್ನು ಕೇಂದ್ರ ಸರ್ಕಾರ ಮೇಲ್ವಿಚಾರಣೆ ನಡೆಸುತ್ತದೆಯೇ? ಈಗಾಗಲೇ 45 ವ‍ರ್ಷ ಮೇಲ್ಪಟ್ಟವರಿಗೆ ಲಸಿಕೆ ಕೊರತೆಯಾಗುತ್ತಿದೆ ಎಂಬ ಪ್ರಶ್ನೆಗಳಿಗೆ ಉತ್ತರವೇನು ಎಂದು ಪ್ರಶ್ನಿಸಿದೆ.

18-44 ವಯಸ್ಸಿನವರಿಗೆ ಯಾವಾಗ ಲಸಿಕೆ ನೀಡಲಾಗುತ್ತದೆ? ಎಂಬುದರ ಬಗ್ಗೆ ಸರ್ಕಾರ ಸ್ಪಷ್ಟವಾಗಿ ತಿಳಿಸಬೇಕು. ಈ ಕುರಿತು ಅಫಿಡವಿಟ್ ಸಲ್ಲಿಸುತ್ತೀರಾ ಎಂದು ಪ್ರಶ್ನಿಸಿರುವ ಕೋರ್ಟ್, ಅನಕ್ಷರಸ್ಥ ಅಥವಾ ಇಂಟರ್ನೆಟ್ ಲಭ್ಯತೆ ಇಲ್ಲದ ವ್ಯಕ್ತಿಗಳಿಗೆ ಲಸಿಕೆ ನೋಂದಣಿಯನ್ನು ಕೇಂದ್ರ ಮತ್ತು ರಾಜ್ಯ ಸರ್ಕಾರಗಳು ಹೇಗೆ ಶಕ್ತಗೊಳಿಸುತ್ತವೆ ಎಂದಿದೆ.

ಈ ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 10 ರಂದು ನಡೆಸುತ್ತೇವೆ ಎಂದು ಕೋರ್ಟ್ ತಿಳಿಸಿದೆ.


ಇದನ್ನೂ ಓದಿ: ಲಸಿಕೆ ರಾಜಕೀಯ: ರಾಜ್ಯಗಳ ಪಾಲಿಗೆ ವಿಲನ್ ಆದ ಮೋದಿ ಸರ್ಕಾರ?

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...