Homeಮುಖಪುಟಅತಿಕ್ರಮಣಕ್ಕೆ ಸಂಬಂಧಿಸಿದಂತೆ ದರ್ಗಾಗಳನ್ನು ಮಾತ್ರ ಗುರಿಯಾಗಿಸುತ್ತಿರುವುದು ಏಕೆ: ಹಿಂದುತ್ವ ಎನ್‌ಜಿಒಗೆ ದೆಹಲಿ ಹೈಕೋರ್ಟ್ ಪ್ರಶ್ನೆ

ಅತಿಕ್ರಮಣಕ್ಕೆ ಸಂಬಂಧಿಸಿದಂತೆ ದರ್ಗಾಗಳನ್ನು ಮಾತ್ರ ಗುರಿಯಾಗಿಸುತ್ತಿರುವುದು ಏಕೆ: ಹಿಂದುತ್ವ ಎನ್‌ಜಿಒಗೆ ದೆಹಲಿ ಹೈಕೋರ್ಟ್ ಪ್ರಶ್ನೆ

- Advertisement -
- Advertisement -

ಯಮುನಾ ನದಿ ತೀರದಲ್ಲಿ ಅಕ್ರಮ ಒತ್ತುವರಿ ತೆರವುಗೊಳಿಸುವಂತೆ ಕೋರಿ ‘ಸೇವ್ ಇಂಡಿಯಾ’ ಎನ್‌ಜಿಒ ಸಲ್ಲಿಸಿದ್ದ ಅರ್ಜಿಯನ್ನು ದೆಹಲಿ ಹೈಕೋರ್ಟ್ ಬುಧವಾರ, ಸೆಪ್ಟೆಂಬರ್ 3 ರಂದು ವಜಾಗೊಳಿಸಿದೆ. ಅರ್ಜಿಯಲ್ಲಿ ಒಂದು ಮಜರ್ ಮತ್ತು ಮೂರು ದರ್ಗಾಗಳು ಸೇರಿವೆ.

ಈ ಎನ್‌ಜಿಒ ಹಿಂದೂ ಬಲಪಂಥೀಯ ಗುಂಪುಗಳೊಂದಿಗೆ ಸಂಬಂಧ ಹೊಂದಿದೆ. ಸಂಘಟನೆಯ ಪ್ರಾಮಾಣಿಕತೆಯನ್ನು ಪ್ರಶ್ನಿಸಿದ ಮುಖ್ಯ ನ್ಯಾಯಮೂರ್ತಿ ಡಿ.ಕೆ. ಉಪಾಧ್ಯಾಯ ಅವರು, ಆಯ್ದ ಸ್ಥಳಗಳನ್ನು ಮಾತ್ರ ಗುರಿಯಾಸಿಕೊಳ್ಳುತ್ತಿರುವುದು ಯಾಕೆ ಎಂದು ಕಳವಳ ವ್ಯಕ್ತಪಡಿಸಿದರು. “ನಿಮಗೆ ಇತರ ಅತಿಕ್ರಮಣಗಳು ಕಾಣುತ್ತಿಲ್ಲವೇ? ನೀವು ಮಜಾರ್‌ಗಳನ್ನು ಮಾತ್ರ ಏಕೆ ಗುರುತಿಸುತ್ತಿದ್ದೀರಿ?” ಎಂದು ಪ್ರಶ್ನಿಸಿದರು.

ಮುಖ್ಯ ನ್ಯಾಯಮೂರ್ತಿ ಮತ್ತು ನ್ಯಾಯಮೂರ್ತಿ ತುಷಾರ್ ರಾವ್ ಗೆಡೆಲಾ ಅವರನ್ನೊಳಗೊಂಡ ಪೀಠವು ಮೌಖಿಕವಾಗಿ, “ನಾವು ನಿಮ್ಮ ಪ್ರಾಮಾಣಿಕತೆ ನೋಡುತ್ತಿದ್ದೇವೆ.. ಮಜಾರ್‌ಗಳನ್ನು ತೆರವುಗೊಳಿಸುವಂತೆ ನೀವು ಕೋರುತ್ತಿರುವ ಈ ಪೀಠವು ವಿಚಾರಣೆಗೆ ಒಳಪಡಿಸುವ ಐದನೇ ಅಥವಾ ಆರನೇ ಅರ್ಜಿಯಾಗಿರಬೇಕು” ಎಂದು ಹೇಳಿದರು.

“ಸ್ಪಷ್ಟವಾಗಿ ಹೇಳಬೇಕೆಂದರೆ, ದಯವಿಟ್ಟು ಆ ಆಯಾಮವನ್ನು ತೆಗೆದುಕೊಳ್ಳಬೇಡಿ… ಈ ಕಟ್ಟಡ ಕಾನೂನುಬದ್ಧವಾಗಿದೆ ಎಂದು ನಾವು ದೂರದಿಂದಲೂ ಸೂಚಿಸುತ್ತಿಲ್ಲ… ಆದರೆ ನಿರ್ದಿಷ್ಟವಾಗಿ ಮಜಾರ್‌ಗಳು ಮಾತ್ರ ನಿಮ್ಮ ಗುರಿ ಏಕೆ? ನೀವು ನಿಜವಾಗಿಯೂ ಸಾರ್ವಜನಿಕರಿಗೆ ಸೇವೆ ಸಲ್ಲಿಸಲು ಬಯಸಿದರೆ, ಅಂತಹ ಕಟ್ಟಡಗಳನ್ನು ತೆರವುಗೊಳಿಸುವ ಮೂಲಕ ಮಾತ್ರವಲ್ಲದೆ ಇನ್ನೂ ಹಲವು ಮಾರ್ಗಗಳಿವೆ. ದಯವಿಟ್ಟು ನಿಮ್ಮ ಪ್ರತಿಷ್ಠಾನಕ್ಕೆ, ಈಗ ಮಾಡುತ್ತಿರುವುದಕ್ಕಿಂತ ಹೆಚ್ಚಿನದನ್ನು ಏನಾದರೂ ಮಾಡಲು ಕೇಳಿ… ನಿಮ್ಮ ಪ್ರತಿಷ್ಠಾನಕ್ಕೆ ಕೆಲವು ಉತ್ತಮ ಸಾರ್ವಜನಿಕ ಕೆಲಸಗಳನ್ನು ಮಾಡಲು ಸಲಹೆ ನೀಡಿ” ಎಂದು ಸಲಹೆ ನೀಡಿದರು.

ನ್ಯಾಯಾಲಯವು ಸಂಬಂಧಪಟ್ಟ ಅಧಿಕಾರಿಗಳನ್ನು ಪ್ರತಿಷ್ಠಾನದ ಪ್ರಾತಿನಿಧ್ಯದ ಬಗ್ಗೆ ತ್ವರಿತವಾಗಿ ನಿರ್ಧರಿಸುವಂತೆ ಹೇಳಿ, ವಿಷಯವನ್ನು ಇತ್ಯರ್ಥಪಡಿಸಿತು. ಸೇವ್ ಇಂಡಿಯಾ ಫೌಂಡೇಶನ್ ಪರವಾಗಿ ಅದರ ಸಂಸ್ಥಾಪಕ ಪ್ರೀತ್ ಸಿಂಗ್ ಅವರು ಅರ್ಜಿಯನ್ನು ಸಲ್ಲಿಸಿದರು. ಅವರು ಸಂಸ್ಥೆಯು ನಾಗರಿಕರ ಹಕ್ಕುಗಳ ಜಾರಿಗಾಗಿ ಸಮಸ್ಯೆಗಳ ಬಗ್ಗೆ ಮಾತನಾಡಲು ಕೆಲಸ ಮಾಡುತ್ತದೆ ಎಂದು ಹೇಳಿಕೊಳ್ಳುತ್ತಾರೆ. ಆದರೂ, ಆ ವ್ಯಕ್ತಿ ಮುಸ್ಲಿಂ ಸಮುದಾಯದ ವಿರುದ್ಧ ದ್ವೇಷವನ್ನು ಹರಡಿದ ಅನೇಕ ಪ್ರಕರಣಗಳ ಆರೋಪವನ್ನು ಹೊಂದಿದ್ದಾರೆ.

ಸಿಂಗ್ ಪ್ರಸ್ತುತ ದ್ವೇಷ ಭಾಷಣಕ್ಕೆ ಸಂಬಂಧಿಸಿದಂತೆ ಜಾಮೀನಿನ ಮೇಲೆ ಹೊರಗಿದ್ದಾರೆ. 2022 ರಲ್ಲಿ, ಬುರಾರಿಯಲ್ಲಿರುವ ‘ಹಿಂದೂ ಮಹಾಪಂಚಾಯತ್’ನಲ್ಲಿ ಮಾಡಿದ ದ್ವೇಷ ಭಾಷಣಕ್ಕಾಗಿ ಸೇವ್ ಇಂಡಿಯಾ ಫೌಂಡೇಶನ್ ಮತ್ತು ಸಿಂಗ್ ವಿರುದ್ಧ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

2021 ರಲ್ಲಿ ಜಂತರ್ ಮಂತರ್ ನಲ್ಲಿ ನಡೆದ ಕಾರ್ಯಕ್ರಮವೊಂದರಲ್ಲಿ ಮುಸ್ಲಿಂ ವಿರೋಧಿ ಘೋಷಣೆಗಳನ್ನು ಕೂಗಲಾಗಿತ್ತು ಎಂದು ಆರೋಪಿಸಲಾಗಿತ್ತು. ಪ್ರಸ್ತುತ ಸಾರ್ವಜನಿಕ ಹಿತಾಸಕ್ತಿ ಮೊಕದ್ದಮೆಯಲ್ಲಿ (ಪಿಐಎಲ್) ಸಿಂಗ್ ಮೂರು ದರ್ಗಾಗಳು ಮತ್ತು ಒಂದು ಮಜಾರ್ ಅನ್ನು ಅನಧಿಕೃತ ಅತಿಕ್ರಮಣಗಳೆಂದು ಉಲ್ಲೇಖಿಸಿ, “ಸರ್ಕಾರಕ್ಕೆ ಸೇರಿದ ದೊಡ್ಡ ಪ್ರಮಾಣದ ಭೂಮಿಯನ್ನು ಭೂ ಮಾಫಿಯಾ ನಕಲಿ ಧಾರ್ಮಿಕ ರಚನೆಗಳ ಮೂಲಕ ಅತಿಕ್ರಮಣ ಮಾಡಿದೆ” ಎಂದು ಆರೋಪಿಸಿದರು.

ಅರ್ಜಿಯ ಪ್ರಕಾರ, ಮಜಾರ್ ಬುದ್ಧ ವಿಹಾರ್ ಹಂತ 2 ರಲ್ಲಿದೆ, ಆದರೆ ಮೂರು ದರ್ಗಾಗಳು ರೋಹ್ಟಕ್ ರಸ್ತೆ, ಸೀಲಾಂಪುರ ಮತ್ತು ಬುರಾರಿಯಲ್ಲಿವೆ.

ದರ್ಗಾಗಳ ವಿರುದ್ಧದ ಹಿಂದಿನ ಪಿಐಎಲ್ ಪ್ರಕರಣ

ದೆಹಲಿ ಹೈಕೋರ್ಟ್‌ನಲ್ಲಿನ ಪಿಐಎಲ್ ಭಾರತದಲ್ಲಿ ದರ್ಗಾಗಳ ನ್ಯಾಯಸಮ್ಮತತೆಯನ್ನು ಪ್ರಶ್ನಿಸಲಾದ ಹಲವು ನಿದರ್ಶನಗಳಲ್ಲಿ ಒಂದಾಗಿದೆ. ಫೆಬ್ರವರಿ 2024 ರಲ್ಲಿ, ರಾಜಸ್ಥಾನದ ಅಜ್ಮೀರ್‌ನಲ್ಲಿರುವ ಬಲಪಂಥೀಯ ಹಿಂದೂ ಗುಂಪು ಅಜ್ಮೀರ್ ದರ್ಗಾ ವಾಸ್ತವವಾಗಿ ಹಿಂದೂ ದೇವಾಲಯವಾಗಿತ್ತು ಎಂದು ಹೇಳಿಕೊಂಡಿದೆ.

ಅಜ್ಮೀರ್‌ನ ಹಿಂದೂ ಬಲಪಂಥೀಯ ‘ಮಹಾರಾಣ ಪ್ರತಾಪ್ ಸೇನಾ’ದ ಅಧ್ಯಕ್ಷ ರಾಜವರ್ಧನ್ ಸಿಂಗ್ ಪರ್ಮಾರ್, “ಅಜ್ಮೀರ್ ದರ್ಗಾ ಒಂದು ಪವಿತ್ರ ಹಿಂದೂ ದೇವಾಲಯ” ಎಂದು ಹೇಳಿದ್ದಾರೆ. ಅವರು ಇತ್ತೀಚೆಗೆ ಪತ್ರಿಕಾಗೋಷ್ಠಿ ನಡೆಸಿ ಇದೇ ರೀತಿಯ ಹೇಳಿಕೆಗಳನ್ನು ನೀಡಿದ್ದಾರೆ. ಹಿಂದೂ ಬಲಪಂಥೀಯ ಬ್ಲಾಗ್ ವೆಬ್‌ಸೈಟ್ ಹಿಂದೂ ಪೋಸ್ಟ್ ‘ಅಜ್ಮೀರ್‌ನಲ್ಲಿರುವ ಮೊಯಿನುದ್ದೀನ್ ಚಿಸ್ತಿ ಅವರ ದರ್ಗಾ ಸಂಕೀರ್ಣವನ್ನು ನಾಶಪಡಿಸಿದ ಹಿಂದೂ ಮತ್ತು ಜೈನ ಮಂದಿರಗಳ ಮೇಲೆ ನಿರ್ಮಿಸಲಾಗಿದೆಯೇ?’ ಎಂಬ ಲೇಖನವನ್ನು ಪ್ರಕಟಿಸಿದ ಸ್ವಲ್ಪ ಸಮಯದ ನಂತರ ಅವರ ಹೇಳಿಕೆಗಳು ಬಂದಿವೆ.

ದಾಖಲೆರಹಿತ ವಲಸಿಗರ ಬಂಧನ ಕೇಂದ್ರಗಳನ್ನು ಸ್ಥಾಪಿಸಲು ಎಲ್ಲಾ ರಾಜ್ಯಗಳಿಗೆ ಕೇಂದ್ರ ಸೂಚನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೊಬೈಲ್ ಪತ್ತೆ ಪ್ರಕರಣ: ಪ್ರಜ್ವಲ್ ರೇವಣ್ಣ 2 ದಿನ ಪೊಲೀಸ್ ಕಸ್ಟಡಿಗೆ

ಅತ್ಯಾಚಾರ ಪ್ರಕರಣದಲ್ಲಿ ಶಿಕ್ಷೆಗೆ ಗುರಿಯಾಗಿ ಸಜಾ ಕೈದಿಯಾಗಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ಮಾಜಿ ಸಂಸದ ಪ್ರಜ್ವಲ್ ರೇವಣ್ಣ ಅವರಿಗೆ ಮತ್ತೊಂದು ಕಾನೂನು ಸಂಕಷ್ಟ ಎದುರಾಗಿದೆ. ಜೈಲಿನ ಅವರ ಕೊಠಡಿಯಲ್ಲಿ ಅಕ್ರಮವಾಗಿ ಮೊಬೈಲ್...

ರಾಜ್ಯದಲ್ಲಿ ಅವಧಿ ಮೀರಿದ ಆಹಾರ ಪೂರೈಕೆಯ ಬೃಹತ್ ದಂಧೆ: ₹1.43 ಕೋಟಿಯ ಉತ್ಪನ್ನಗಳು ಜಪ್ತಿ

ಆನ್‌ಲೈನ್ ಮತ್ತು ಇ-ಕಾಮರ್ಸ್ ವೇದಿಕೆಗಳ ಮೂಲಕ ಸಾರ್ವಜನಿಕರಿಗೆ ಅವಧಿ ಮೀರಿದ ಹಾಗೂ ಕಳಪೆ ಗುಣಮಟ್ಟದ ಆಹಾರ ಉತ್ಪನ್ನಗಳನ್ನು ಸರಬರಾಜು ಮಾಡುತ್ತಿದ್ದ ಬೃಹತ್ ದಂಧೆಯನ್ನು ಕರ್ನಾಟಕ ಆಹಾರ ಸುರಕ್ಷತೆ ಮತ್ತು ಔಷಧ ಆಡಳಿತ ಇಲಾಖೆ...

ಭಾರತೀಯ ಮಹಿಳೆಯನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ ಪ್ರಕರಣ : 2 ಲಕ್ಷ ರೂ. ಪರಿಹಾರ ಪಾವತಿಸಲು ಅಸ್ಸಾಂ ಸರ್ಕಾರಕ್ಕೆ ಗುವಾಹಟಿ ಹೈಕೋರ್ಟ್ ಆದೇಶ

ಪಶ್ಚಿಮ ಬಂಗಾಳ ಮೂಲದ ಮುಸ್ಲಿಂ ಮಹಿಳೆಯೊಬ್ಬರಿಗೆ ವಿದೇಶಿಯರ ನ್ಯಾಯಾಧಿಕರಣದ (ಫಾರಿನರ್ಸ್ ಟ್ರಿಬ್ಯೂನಲ್) ಆದೇಶವನ್ನು ಪ್ರಶ್ನಿಸಲು ಯಾವುದೇ ಅವಕಾಶ ನೀಡದೆ, ಅವರನ್ನು ಬಾಂಗ್ಲಾ ಗಡಿಯಾಚೆಗೆ ತಳ್ಳಿದ್ದಕ್ಕಾಗಿ ಮಧ್ಯಂತರ ಪರಿಹಾರವಾಗಿ ಆಕೆಯ ಪತಿಗೆ 2 ಲಕ್ಷ...

ಮಂಡಿಯ ಐಐಟಿ ಕ್ಯಾಂಪಸ್‌ನಲ್ಲಿ ‘ಶೂದ್ರರು ಮೇಲ್ವರ್ಗಗಳ ಸೇವಕರು’ ಎಂಬ ವರ್ಣ ಶ್ರೇಣೀಕರಣ ಚಿತ್ರಣ: ಜಾತಿ ವಿವಾದದ ನಂತರ ತನಿಖೆಗೆ ಆದೇಶ

ಮಂಡಿ: ಶೂದ್ರರನ್ನು ‘ಉನ್ನತ ವರ್ಗಗಳಿಗೆ ಸೇವೆ ಸಲ್ಲಿಸಲು ಉದ್ದೇಶಿಸಿರುವವರು’ ಎಂದು ಬಿಂಬಿಸುವ ಪೋಸ್ಟರ್‌ವೊಂದು ಹಿಮಾಚಲ ಪ್ರದೇಶದ ಐಐಟಿ ಮಂಡಿಯಲ್ಲಿ ಜಾತಿ ವಿವಾದಕ್ಕೆ ಕಾರಣವಾಗಿದ್ದು, ಪ್ರಕರಣದ ಕುರಿತು ಸಂಸ್ಥೆ ತನಿಖೆಗೆ ಆದೇಶಿಸಿದೆ. ಸೆಪ್ಟೆಂಬರ್ 4ರಂದು...

ಎಸ್ಐಆರ್ ಬಳಿಕ ಮಣಿಪುರ, ಸಿಕ್ಕಿಂ, ಮಿಜೋರಾಂನಲ್ಲಿ 2.24 ಲಕ್ಷ ಮತದಾರರ ಹೆಸರು ಕಡಿತ: ಸಿಕ್ಕಿಂನಲ್ಲಿ ಶೇ.11.15ರಷ್ಟು ಇಳಿಕೆ 

ನವದೆಹಲಿ: ವಿಶೇಷ ತೀವ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಬಳಿಕ ಈಶಾನ್ಯ ಭಾರತದ ಮಣಿಪುರ, ಸಿಕ್ಕಿಂ ಮತ್ತು ಮಿಜೋರಾಂ ರಾಜ್ಯಗಳ ಮತದಾರರ ಪಟ್ಟಿಯಲ್ಲಿ ದೊಡ್ಡ ಪ್ರಮಾಣದ ಬದಲಾವಣೆ ಕಂಡುಬಂದಿದೆ. ಈ ಮೂರು ರಾಜ್ಯಗಳಲ್ಲಿ...

ಜೆಎನ್‌ಯು ಪ್ರೊಫೆಸರ್ ವಿರುದ್ಧ ಲೈಂಗಿಕ ಕಿರುಕುಳ ಆರೋಪ : 10ಕ್ಕೂ ಹೆಚ್ಚು ವಿದ್ಯಾರ್ಥಿನಿಯರಿಂದ ದೂರು

ದೆಹಲಿಯ ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ (ಜೆಎನ್‌ಯು) ಆಂತರಿಕ ದೂರುಗಳ ಸಮಿತಿಯು (ಐಸಿಸಿ), ಸುಮಾರು ಹನ್ನೊಂದು ವಿದ್ಯಾರ್ಥಿನಿಯರು ಪ್ರೊಫೆಸರ್ ಒಬ್ಬರ ವಿರುದ್ಧ ಮಾಡಿರುವ ಲೈಂಗಿಕ ಕಿರುಕುಳದ ಆರೋಪಗಳ ಕುರಿತು ಪ್ರಸ್ತುತ ತನಿಖೆ ನಡೆಸುತ್ತಿದೆ ಎಂದು...

ಹಿಂದೂ ಧಾರ್ಮಿಕ ಸಂಘಟನೆ ನಿಯೋಗದ ಭೇಟಿ ವೇಳೆ ಮಹಿಳಾ ಸಿಬ್ಬಂದಿಯನ್ನು ದೂರವಿಟ್ಟ ಆರೋಪ; ಈಫೆಲ್ ಟವರ್‌ನಲ್ಲಿ ನೌಕರರ ಮುಷ್ಕರ

ಹಿಂದೂ ಧಾರ್ಮಿಕ ಸಂಘಟನೆ ಬಿಎಪಿಎಸ್ (BAPS) ನಿಯೋಗದ ಭೇಟಿಯ ವೇಳೆ ಮಹಿಳಾ ಸಿಬ್ಬಂದಿಯನ್ನು ಕೆಲಸದ ಸ್ಥಳಗಳಿಂದ ದೂರವಿಡಲಾಗಿತ್ತು ಎಂಬ ಆರೋಪ ಫ್ರಾನ್ಸ್‌ನಲ್ಲಿ ವಿವಾದಕ್ಕೆ ಕಾರಣವಾಗಿದೆ. ಘಟನೆಯನ್ನು ಖಂಡಿಸಿ ಈಫೆಲ್ ಟವರ್‌ನ ಸಿಬ್ಬಂದಿ ಸೋಮವಾರ...

KPSC ಪಶುವೈದ್ಯಾಧಿಕಾರಿ ನೇಮಕಾತಿ ಅಕ್ರಮ: CID ತನಿಖೆಯಲ್ಲಿ ರೂ. 12 ಕೋಟಿಗೂ ಅಧಿಕ ಡೀಲ್ ಬಯಲು!

ಕರ್ನಾಟಕ ಲೋಕಸೇವಾ ಆಯೋಗ (KPSC) ನಡೆಸಿದ ಪಶುವೈದ್ಯಾಧಿಕಾರಿ ಹುದ್ದೆಗಳ ನೇಮಕಾತಿ ಪರೀಕ್ಷೆಯ ಅಕ್ರಮ ಪ್ರಕರಣದ ತನಿಖೆ ತೀವ್ರಗೊಂಡಿದ್ದು, ಸಿಐಡಿ (CID) ತನಿಖೆಯಲ್ಲಿ ಸಾಲು ಸಾಲು ಆಘಾತಕಾರಿ ಸಂಗತಿಗಳು ಹೊರಬಿದ್ದಿವೆ. ಒಟ್ಟು 24 ಅಭ್ಯರ್ಥಿಗಳು ಹಣ...

ದೆಹಲಿಯಲ್ಲಿ ಮಣಿಪುರದ ಸಂಗೀತಗಾರನ ಗುಂಪು ಹತ್ಯೆ : ಎಂಟು ಜನರ ಬಂಧನ

ದೆಹಲಿಯ ಆಶ್ರಮ್ ಪ್ರದೇಶದಲ್ಲಿ ವಾಸಿಸುತ್ತಿದ್ದ ಮಣಿಪುರದ ಸಂಗೀತಗಾರ ಚೊಂಗ್ಥಾಮ್ ವಿಕ್ರಮ್ ಸಿಂಗ್ ಅವರು ಭಾನುವಾರ (ಸೆ.6) ರಾತ್ರಿ ಗುಂಪೊಂದರಿಂದ ಕಲ್ಲು ತೂರಾಟ ಅಥವಾ ಹಲ್ಲೆಗೆ ಒಳಗಾಗಿ, ಅದರಿಂದ ಉಂಟಾದ ಗಂಭೀರ ಗಾಯಗಳಿಂದಾಗಿ ಸೋಮವಾರ...

SIR: ಚಿಂತಕ ಪರಕಾಲ ಪ್ರಭಾಕರ್‌ಗೆ ಚುನಾವಣಾ ಆಯೋಗದಿಂದ ನೋಟಿಸ್

ಅರ್ಥಶಾಸ್ತ್ರಜ್ಞ, ರಾಜಕೀಯ ವಿಶ್ಲೇಷಕ ಡಾ. ಪರಕಾಲ ಪ್ರಭಾಕರ್ ಅವರಿಗೂ ಈಗ ‘ವಿಶೇಷ ತೀವ್ರ ಪರಿಷ್ಕರಣೆ’ (SIR) ಪ್ರಕ್ರಿಯೆಯಡಿ ಚುನಾವಣಾ ಆಯೋಗದ ನೋಟಿಸ್ ಜಾರಿಯಾಗಿದೆ. ವೋಟರ್ ಐಡಿ ಪರಿಶೀಲನೆಯಲ್ಲಿ ‘Logical Discrepancy’ (ತಾರ್ಕಿಕ ಅಸಂಗತತೆ)...