Homeಮುಖಪುಟಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

ಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಪೋಕ್ಸೋ ಪ್ರಕರಣದ ಆರೋಪಿ, ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ಜೂನ್‌ 5ರಂದು ಅಯೋಧ್ಯೆಯ ರಾಮಕಥಾ ಪಾರ್ಕ್‌ನಲ್ಲಿ ಸಂತರ ನೇತೃತ್ವದಲ್ಲಿ ರ್‍ಯಾಲಿಯನ್ನು ನಡೆಸಲು ಮುಂದಾಗಿದ್ದರು. ಅಯೋಧ್ಯೆಯ ಸಂತರ ಬೆಂಬಲದ ಹೊರತಾಗಿಯೂ ರ್‍ಯಾಲಿಯನ್ನು ಮುಂದೂಡಲಾಗಿದೆ.

ಈ ನಿರ್ಧಾರದ ಹಿಂದೆ ಅನೇಕ ಕಾರಣಗಳಿವೆ ಎಂದು ನಿರ್ಧರಿಸಬಹುದು ಮತ್ತು ಚರ್ಚಿಸಬಹುದು. ಸ್ವಾಮೀಜಿ ಮತ್ತು ರಾಜಕಾರಣಿಗಳ ಈ ಹೊಂದಾಣಿ ಇದೆ. ಧರ್ಮ, ಪಿತೃ ಪ್ರಧಾನ ಶಕ್ತಿಗಳ ನಡುವೆ ಒಂದು ರೀತಿಯ ಗೊಂದಲವಿದ್ದರೂ ನಿರಾಕರಿಸಲಾಗದ ಸಂಬಂಧ ಇದೆ ಎಂಬುದು ತಿಳಿಯುತ್ತದೆ.

ಪಿತೃಪ್ರಭುತ್ವ ಮತ್ತು ಧರ್ಮವು ಸಾಮಾನ್ಯವಾಗಿ ಜೊತೆಜೊತೆಯಲ್ಲಿ ಸಾಗುತ್ತದೆ ಎಂದು ತಿಳಿದಿರುವವರು ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ನರೇಂದ್ರ ಮೋದಿ ಸಂಪುಟದ ಮಹಿಳಾ ಮಂತ್ರಿಗಳು ಮೌನವಾಗಿರುವ ಕುರಿತು ಹೆಚ್ಚು ಆಶ್ಚರ್ಯಚಕಿತರಾಗಿದ್ದಾರೆ. ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ, ಧಾರ್ಮಿಕ ಆಚರಣೆಗಳಲ್ಲಿ ಮಹಿಳಾ ಸದಸ್ಯರು ಅತ್ಯಲ್ಪ ಪ್ರಾತಿನಿಧ್ಯ ಹೊಂದಿದ್ದರು. ಬಹುತೇಕ ಇಲ್ಲವೇ ಎನ್ನುವಷ್ಟು ಪಾಲ್ಗೊಂಡಿದ್ದರು.

ಎಲ್ಲಾ ವಲಯಗಳಿಂದ ಟೀಕೆಗಳನ್ನು ಎದುರಿಸುತ್ತಿದ್ದರೂ ಮೋದಿ ಸರ್ಕಾರವು ಬ್ರಿಜ್‌ ಭೂಷಣ್‌ ಅವರನ್ನು ಹೇಗೆ ಸಮರ್ಥಿಸಿಕೊಳ್ಳುತ್ತಿದೆ ಎಂದು ಹಲವರು ಆಶ್ಚರ್ಯ ಪಡುತ್ತಾರೆ. ಆದರೂ ಆರೋಪಿ ಬ್ರಿಜ್‌ ಎಷ್ಟು ‘ಅಸುರಕ್ಷಿತ’ನಾಗಿದ್ದನೆಂದರೆ- ಸ್ತ್ರೀಯರ ವಿರುದ್ಧ ಧಾರ್ಮಿಕ ಶಕ್ತಿ ಹೇಗೆ ನಿಂತಿದೆ ಎಂಬುದನ್ನು ಪ್ರದರ್ಶಿಸುವುದಕ್ಕೂ ಯೋಚಿಸಿ ಸ್ವಾಮೀಜಿಗಳ ಬೆಂಬಲವನ್ನು ಪಡೆಯಬೇಕಾಗಿದೆ.

ಬ್ರಿಜ್ ಭೂಷಣ್ ಸಿಂಗ್‌ನನ್ನು ಬೆಂಬಲಿಸುತ್ತಿರುವ ಸಂತರು

ಆರೋಪಿ ಬ್ರಿಜ್‌ಭೂಷಣ್ ಶರಣ್‌ಸಿಂಗ್‌ನನ್ನು ಬೆಂಬಲಿಸುತ್ತಿರುವವರಲ್ಲಿ, ಹಿಂದುತ್ವವಾದಿ ಮಣಿರಾಮ್ ದಾಸ್ ಶಿಬಿರದ ಮಹಂತ್ ಕಮಲನಯನ್ ದಾಸ್ ಮುಂಚೂಣಿಯಲ್ಲಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಉತ್ತರಾಧಿಕಾರಿ ಎಂದೇ ಇವರನ್ನು ಗುರುತಿಸಲಾಗಿದೆ.

ಬ್ರಿಜ್ ಪರ ಅಭಿಯಾನದಲ್ಲಿ ಹೆಚ್ಚು ಸಕ್ರಿಯವಾಗಿರುವವರಲ್ಲಿ ಮಹಂತ್ ಮಿಥಿಲೇಶ ನಂದಿನಿ ಶರಣ್ ಒಬ್ಬರು. 2012ರಲ್ಲಿ ಪರಿಚಯಿಸಲಾದ ಪೋಕ್ಸೋ ಕಾಯ್ದೆಯಲ್ಲಿ ದೋಷಗಳಿವೆ ಎಂದು ಇವರು ಮಾತನಾಡುತ್ತಿದ್ದಾರೆ. ಈ ಕಾಯ್ದೆಯು ‘ಚಾರಿತ್ರ್ಯ ಹರಣ ಮಾಡುತ್ತದೆ, ಅನೇಕ ಗಣ್ಯರನ್ನು ಮಾಧ್ಯಮಗಳ ವಿಚಾರಣೆ ಒಳಪಡಿಸುತ್ತದೆ.  ಕಾಯ್ದೆಯ ನಿಬಂಧನೆಗಳಿಗೆ ತಿದ್ದುಪಡಿ ತರಬೇಕು’ ಎಂದು ಒತ್ತಾಯಿಸುತ್ತಿದ್ದಾರೆ.

ಪೋಕ್ಸೊ ಕಾಯ್ದೆಯಡಿ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೊದಲು, ಮಹಂತ್ ಶರಣ್ ಅವರು ಪೋಕ್ಸೋ ಕಾನೂನಿನಲ್ಲಿ ದೋಷವನ್ನು ಕಂಡಿರಲಿಲ್ಲ. ಆದರೆ ಈಗ ಏನು ಹೇಳುತ್ತಾರೆ? “ಸಾಧು ಸಂತರು ಅಪ್ರಾಪ್ತ ವಯಸ್ಕರಿಗೆ ಆರ್ಶೀವದಿಸಲು ತಲೆ ಮೇಲೆ ಕೈ ಇಟ್ಟರೂ ಕೆಟ್ಟದ್ದಾಗಿ ಕಾನೂನು ಪರಿಗಣಿಸಬಹುದು. ಸಂತರ ವಿರುದ್ಧ ಕ್ರಮ ಕೈಗೊಳ್ಳಬಹುದು” ಎನ್ನಲು ಶುರು ಮಾಡಿದ್ದಾರೆ.

ಪ್ರತಿಷ್ಠಿತ ಕಾಮತಾ ಪ್ರಸಾದ್ ಸುಂದರ್ ಲಾಲ್ ಸಾಕೇತ್ ಪಿಜಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿ ನಾಯಕನಾಗಿ, ಪ್ರಬಲ ಹಿಂದುತ್ವದ ನಾಯಕನಾಗಿ ಬಂದವರು ಬ್ರಿಜ್ ಎಂದು ಈ ಭಾಗದಲ್ಲಿ ಮಾತನಾಡಿಕೊಳ್ಳಲಾಗುತ್ತಿದೆ. 1992ರಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬ್ರಿಜ್‌ ಆರೋಪಿಯಾಗಿದ್ದನು. “ಈ ಪ್ರಕರಣದಲ್ಲಿ ನನ್ನನ್ನು ಬಂಧಿಸಲಾಗಿತ್ತು” ಎಂದು ಬ್ರಿಜ್‌ ಹೆಮ್ಮೆಪಡುತ್ತಾನೆ.

ಇದನ್ನೂ ಓದಿರಿ: ಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

ಅಯೋಧ್ಯೆಯಲ್ಲಿನ ಸುದೀರ್ಘ ಒಡನಾಟದಿಂದಾಗಿ ಬ್ರಿಜ್‌ ಭೂಷಣ್‌ಗೆ ಋಣಿ ಎಂದು ಭಾವಿಸುವ ಜನರಿಗೆ ಕೊರತೆಯಿಲ್ಲ. ಆತನಿಗೆ ಆಪ್ತರು ಎಂದು ಹೇಳಿಕೊಳ್ಳುವ ಅನೇಕರು ಸಹ ಈಗ ಮುಂದೆ ಬರುತ್ತಿದ್ದಾರೆ. ಬ್ರಿಜ್‌ ಭೂಷಣ್‌ನ ಊರು ಸರಯುವಿನ ಒಂದು ಕಡೆ ಇದ್ದರೆ ಅಯೋಧ್ಯೆ ಇನ್ನೊಂದು ಬದಿಯಲ್ಲಿದೆ. ಆತ ಬಿಜೆಪಿಯ ಒಳಗೆ ಮತ್ತು ಹೊರಗೆ ಎರಡೂ ಕಡೆಗಳಲ್ಲಿ ಅನೇಕ ಹಿತೈಷಿಗಳನ್ನು ಹೊಂದಿದ್ದಾನೆ.

ಅಯೋಧ್ಯೆಯ ಸ್ವಾಮೀಜಿಗಳು ಸಿಂಗ್‌ಗೆ ಏಕೆ ಬೆಂಬಲ ನೀಡುತ್ತಿದ್ದಾರೆ? ಸ್ವಾಮೀಜಿಗಳು ಮತ್ತು ಬ್ರಿಜ್‌ ಇಬ್ಬರೂ ಪರಸ್ಪರ ಅವಲಂಬಿಸಿರುವುದರ ಪರಿಣಾಮ ಇದೆಂದು ಕೆಲವು ತಜ್ಞರು ಹೇಳುತ್ತಾರೆ. ಏಕೆಂದರೆ ಅವರು ಪರಸ್ಪರ ಆಶ್ರಯವನ್ನು ಪಡೆಯುತ್ತಾರೆ ಮತ್ತು ಅಗತ್ಯವಿದ್ದಾಗ ಪರಸ್ಪರ ಪ್ರಭಾವದ ಲಾಭವನ್ನೂ ಪಡೆಯುತ್ತಾರೆ.

ಬ್ರಿಜ್‌ಗೆ ಬೆಂಬಲ ನೀಡಿರುವವರನ್ನು ‘ಸಂತರು’ ಎಂದು ಮಾಧ್ಯಮಗಳು ಉಲ್ಲೇಖಿಸುತ್ತಿರುವುದಕ್ಕೆ ಭಾರತೀಯ  ಕಮ್ಯುನಿಸ್ಟ್ ಪಕ್ಷದ ಸ್ಥಳೀಯ ಮುಖಂಡ ಸೂರ್ಯಕಾಂತ್ ಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಇವರನ್ನು ಸಂತರು ಎಂದು ಬಿಂಬಿಸುವ ಬದಲು ಹುಸಿ ಸಂತರು ಎಂದು ಏಕೆ ಉಲ್ಲೇಖಿಸುವುದಿಲ್ಲ”  ಎಂದು ಪ್ರಶ್ನಿಸಿದ್ದಾರೆ. “ರಾಮಚರಿತಮಾನಸದಲ್ಲಿ ಗೋಸ್ವಾಮಿ ತುಳಸಿದಾಸರು ಪಟ್ಟಿ ಮಾಡಿರುವ ನಿಜವಾದ ಸಂತರ ಗುಣಗಳು ಮತ್ತು ಗುಣಲಕ್ಷಣಗಳ ಬಗ್ಗೆ ಇವರು ಓದಿಲ್ಲ” ಎಂದು ಟೀಕಿಸಿದ್ದಾರೆ.

ಮಾಹಿತಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...