Homeಮುಖಪುಟಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

ಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಪೋಕ್ಸೋ ಪ್ರಕರಣದ ಆರೋಪಿ, ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ಜೂನ್‌ 5ರಂದು ಅಯೋಧ್ಯೆಯ ರಾಮಕಥಾ ಪಾರ್ಕ್‌ನಲ್ಲಿ ಸಂತರ ನೇತೃತ್ವದಲ್ಲಿ ರ್‍ಯಾಲಿಯನ್ನು ನಡೆಸಲು ಮುಂದಾಗಿದ್ದರು. ಅಯೋಧ್ಯೆಯ ಸಂತರ ಬೆಂಬಲದ ಹೊರತಾಗಿಯೂ ರ್‍ಯಾಲಿಯನ್ನು ಮುಂದೂಡಲಾಗಿದೆ.

ಈ ನಿರ್ಧಾರದ ಹಿಂದೆ ಅನೇಕ ಕಾರಣಗಳಿವೆ ಎಂದು ನಿರ್ಧರಿಸಬಹುದು ಮತ್ತು ಚರ್ಚಿಸಬಹುದು. ಸ್ವಾಮೀಜಿ ಮತ್ತು ರಾಜಕಾರಣಿಗಳ ಈ ಹೊಂದಾಣಿ ಇದೆ. ಧರ್ಮ, ಪಿತೃ ಪ್ರಧಾನ ಶಕ್ತಿಗಳ ನಡುವೆ ಒಂದು ರೀತಿಯ ಗೊಂದಲವಿದ್ದರೂ ನಿರಾಕರಿಸಲಾಗದ ಸಂಬಂಧ ಇದೆ ಎಂಬುದು ತಿಳಿಯುತ್ತದೆ.

ಪಿತೃಪ್ರಭುತ್ವ ಮತ್ತು ಧರ್ಮವು ಸಾಮಾನ್ಯವಾಗಿ ಜೊತೆಜೊತೆಯಲ್ಲಿ ಸಾಗುತ್ತದೆ ಎಂದು ತಿಳಿದಿರುವವರು ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ನರೇಂದ್ರ ಮೋದಿ ಸಂಪುಟದ ಮಹಿಳಾ ಮಂತ್ರಿಗಳು ಮೌನವಾಗಿರುವ ಕುರಿತು ಹೆಚ್ಚು ಆಶ್ಚರ್ಯಚಕಿತರಾಗಿದ್ದಾರೆ. ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ, ಧಾರ್ಮಿಕ ಆಚರಣೆಗಳಲ್ಲಿ ಮಹಿಳಾ ಸದಸ್ಯರು ಅತ್ಯಲ್ಪ ಪ್ರಾತಿನಿಧ್ಯ ಹೊಂದಿದ್ದರು. ಬಹುತೇಕ ಇಲ್ಲವೇ ಎನ್ನುವಷ್ಟು ಪಾಲ್ಗೊಂಡಿದ್ದರು.

ಎಲ್ಲಾ ವಲಯಗಳಿಂದ ಟೀಕೆಗಳನ್ನು ಎದುರಿಸುತ್ತಿದ್ದರೂ ಮೋದಿ ಸರ್ಕಾರವು ಬ್ರಿಜ್‌ ಭೂಷಣ್‌ ಅವರನ್ನು ಹೇಗೆ ಸಮರ್ಥಿಸಿಕೊಳ್ಳುತ್ತಿದೆ ಎಂದು ಹಲವರು ಆಶ್ಚರ್ಯ ಪಡುತ್ತಾರೆ. ಆದರೂ ಆರೋಪಿ ಬ್ರಿಜ್‌ ಎಷ್ಟು ‘ಅಸುರಕ್ಷಿತ’ನಾಗಿದ್ದನೆಂದರೆ- ಸ್ತ್ರೀಯರ ವಿರುದ್ಧ ಧಾರ್ಮಿಕ ಶಕ್ತಿ ಹೇಗೆ ನಿಂತಿದೆ ಎಂಬುದನ್ನು ಪ್ರದರ್ಶಿಸುವುದಕ್ಕೂ ಯೋಚಿಸಿ ಸ್ವಾಮೀಜಿಗಳ ಬೆಂಬಲವನ್ನು ಪಡೆಯಬೇಕಾಗಿದೆ.

ಬ್ರಿಜ್ ಭೂಷಣ್ ಸಿಂಗ್‌ನನ್ನು ಬೆಂಬಲಿಸುತ್ತಿರುವ ಸಂತರು

ಆರೋಪಿ ಬ್ರಿಜ್‌ಭೂಷಣ್ ಶರಣ್‌ಸಿಂಗ್‌ನನ್ನು ಬೆಂಬಲಿಸುತ್ತಿರುವವರಲ್ಲಿ, ಹಿಂದುತ್ವವಾದಿ ಮಣಿರಾಮ್ ದಾಸ್ ಶಿಬಿರದ ಮಹಂತ್ ಕಮಲನಯನ್ ದಾಸ್ ಮುಂಚೂಣಿಯಲ್ಲಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಉತ್ತರಾಧಿಕಾರಿ ಎಂದೇ ಇವರನ್ನು ಗುರುತಿಸಲಾಗಿದೆ.

ಬ್ರಿಜ್ ಪರ ಅಭಿಯಾನದಲ್ಲಿ ಹೆಚ್ಚು ಸಕ್ರಿಯವಾಗಿರುವವರಲ್ಲಿ ಮಹಂತ್ ಮಿಥಿಲೇಶ ನಂದಿನಿ ಶರಣ್ ಒಬ್ಬರು. 2012ರಲ್ಲಿ ಪರಿಚಯಿಸಲಾದ ಪೋಕ್ಸೋ ಕಾಯ್ದೆಯಲ್ಲಿ ದೋಷಗಳಿವೆ ಎಂದು ಇವರು ಮಾತನಾಡುತ್ತಿದ್ದಾರೆ. ಈ ಕಾಯ್ದೆಯು ‘ಚಾರಿತ್ರ್ಯ ಹರಣ ಮಾಡುತ್ತದೆ, ಅನೇಕ ಗಣ್ಯರನ್ನು ಮಾಧ್ಯಮಗಳ ವಿಚಾರಣೆ ಒಳಪಡಿಸುತ್ತದೆ.  ಕಾಯ್ದೆಯ ನಿಬಂಧನೆಗಳಿಗೆ ತಿದ್ದುಪಡಿ ತರಬೇಕು’ ಎಂದು ಒತ್ತಾಯಿಸುತ್ತಿದ್ದಾರೆ.

ಪೋಕ್ಸೊ ಕಾಯ್ದೆಯಡಿ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೊದಲು, ಮಹಂತ್ ಶರಣ್ ಅವರು ಪೋಕ್ಸೋ ಕಾನೂನಿನಲ್ಲಿ ದೋಷವನ್ನು ಕಂಡಿರಲಿಲ್ಲ. ಆದರೆ ಈಗ ಏನು ಹೇಳುತ್ತಾರೆ? “ಸಾಧು ಸಂತರು ಅಪ್ರಾಪ್ತ ವಯಸ್ಕರಿಗೆ ಆರ್ಶೀವದಿಸಲು ತಲೆ ಮೇಲೆ ಕೈ ಇಟ್ಟರೂ ಕೆಟ್ಟದ್ದಾಗಿ ಕಾನೂನು ಪರಿಗಣಿಸಬಹುದು. ಸಂತರ ವಿರುದ್ಧ ಕ್ರಮ ಕೈಗೊಳ್ಳಬಹುದು” ಎನ್ನಲು ಶುರು ಮಾಡಿದ್ದಾರೆ.

ಪ್ರತಿಷ್ಠಿತ ಕಾಮತಾ ಪ್ರಸಾದ್ ಸುಂದರ್ ಲಾಲ್ ಸಾಕೇತ್ ಪಿಜಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿ ನಾಯಕನಾಗಿ, ಪ್ರಬಲ ಹಿಂದುತ್ವದ ನಾಯಕನಾಗಿ ಬಂದವರು ಬ್ರಿಜ್ ಎಂದು ಈ ಭಾಗದಲ್ಲಿ ಮಾತನಾಡಿಕೊಳ್ಳಲಾಗುತ್ತಿದೆ. 1992ರಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬ್ರಿಜ್‌ ಆರೋಪಿಯಾಗಿದ್ದನು. “ಈ ಪ್ರಕರಣದಲ್ಲಿ ನನ್ನನ್ನು ಬಂಧಿಸಲಾಗಿತ್ತು” ಎಂದು ಬ್ರಿಜ್‌ ಹೆಮ್ಮೆಪಡುತ್ತಾನೆ.

ಇದನ್ನೂ ಓದಿರಿ: ಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

ಅಯೋಧ್ಯೆಯಲ್ಲಿನ ಸುದೀರ್ಘ ಒಡನಾಟದಿಂದಾಗಿ ಬ್ರಿಜ್‌ ಭೂಷಣ್‌ಗೆ ಋಣಿ ಎಂದು ಭಾವಿಸುವ ಜನರಿಗೆ ಕೊರತೆಯಿಲ್ಲ. ಆತನಿಗೆ ಆಪ್ತರು ಎಂದು ಹೇಳಿಕೊಳ್ಳುವ ಅನೇಕರು ಸಹ ಈಗ ಮುಂದೆ ಬರುತ್ತಿದ್ದಾರೆ. ಬ್ರಿಜ್‌ ಭೂಷಣ್‌ನ ಊರು ಸರಯುವಿನ ಒಂದು ಕಡೆ ಇದ್ದರೆ ಅಯೋಧ್ಯೆ ಇನ್ನೊಂದು ಬದಿಯಲ್ಲಿದೆ. ಆತ ಬಿಜೆಪಿಯ ಒಳಗೆ ಮತ್ತು ಹೊರಗೆ ಎರಡೂ ಕಡೆಗಳಲ್ಲಿ ಅನೇಕ ಹಿತೈಷಿಗಳನ್ನು ಹೊಂದಿದ್ದಾನೆ.

ಅಯೋಧ್ಯೆಯ ಸ್ವಾಮೀಜಿಗಳು ಸಿಂಗ್‌ಗೆ ಏಕೆ ಬೆಂಬಲ ನೀಡುತ್ತಿದ್ದಾರೆ? ಸ್ವಾಮೀಜಿಗಳು ಮತ್ತು ಬ್ರಿಜ್‌ ಇಬ್ಬರೂ ಪರಸ್ಪರ ಅವಲಂಬಿಸಿರುವುದರ ಪರಿಣಾಮ ಇದೆಂದು ಕೆಲವು ತಜ್ಞರು ಹೇಳುತ್ತಾರೆ. ಏಕೆಂದರೆ ಅವರು ಪರಸ್ಪರ ಆಶ್ರಯವನ್ನು ಪಡೆಯುತ್ತಾರೆ ಮತ್ತು ಅಗತ್ಯವಿದ್ದಾಗ ಪರಸ್ಪರ ಪ್ರಭಾವದ ಲಾಭವನ್ನೂ ಪಡೆಯುತ್ತಾರೆ.

ಬ್ರಿಜ್‌ಗೆ ಬೆಂಬಲ ನೀಡಿರುವವರನ್ನು ‘ಸಂತರು’ ಎಂದು ಮಾಧ್ಯಮಗಳು ಉಲ್ಲೇಖಿಸುತ್ತಿರುವುದಕ್ಕೆ ಭಾರತೀಯ  ಕಮ್ಯುನಿಸ್ಟ್ ಪಕ್ಷದ ಸ್ಥಳೀಯ ಮುಖಂಡ ಸೂರ್ಯಕಾಂತ್ ಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಇವರನ್ನು ಸಂತರು ಎಂದು ಬಿಂಬಿಸುವ ಬದಲು ಹುಸಿ ಸಂತರು ಎಂದು ಏಕೆ ಉಲ್ಲೇಖಿಸುವುದಿಲ್ಲ”  ಎಂದು ಪ್ರಶ್ನಿಸಿದ್ದಾರೆ. “ರಾಮಚರಿತಮಾನಸದಲ್ಲಿ ಗೋಸ್ವಾಮಿ ತುಳಸಿದಾಸರು ಪಟ್ಟಿ ಮಾಡಿರುವ ನಿಜವಾದ ಸಂತರ ಗುಣಗಳು ಮತ್ತು ಗುಣಲಕ್ಷಣಗಳ ಬಗ್ಗೆ ಇವರು ಓದಿಲ್ಲ” ಎಂದು ಟೀಕಿಸಿದ್ದಾರೆ.

ಮಾಹಿತಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...