Homeಮುಖಪುಟಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

ಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಪೋಕ್ಸೋ ಪ್ರಕರಣದ ಆರೋಪಿ, ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ಜೂನ್‌ 5ರಂದು ಅಯೋಧ್ಯೆಯ ರಾಮಕಥಾ ಪಾರ್ಕ್‌ನಲ್ಲಿ ಸಂತರ ನೇತೃತ್ವದಲ್ಲಿ ರ್‍ಯಾಲಿಯನ್ನು ನಡೆಸಲು ಮುಂದಾಗಿದ್ದರು. ಅಯೋಧ್ಯೆಯ ಸಂತರ ಬೆಂಬಲದ ಹೊರತಾಗಿಯೂ ರ್‍ಯಾಲಿಯನ್ನು ಮುಂದೂಡಲಾಗಿದೆ.

ಈ ನಿರ್ಧಾರದ ಹಿಂದೆ ಅನೇಕ ಕಾರಣಗಳಿವೆ ಎಂದು ನಿರ್ಧರಿಸಬಹುದು ಮತ್ತು ಚರ್ಚಿಸಬಹುದು. ಸ್ವಾಮೀಜಿ ಮತ್ತು ರಾಜಕಾರಣಿಗಳ ಈ ಹೊಂದಾಣಿ ಇದೆ. ಧರ್ಮ, ಪಿತೃ ಪ್ರಧಾನ ಶಕ್ತಿಗಳ ನಡುವೆ ಒಂದು ರೀತಿಯ ಗೊಂದಲವಿದ್ದರೂ ನಿರಾಕರಿಸಲಾಗದ ಸಂಬಂಧ ಇದೆ ಎಂಬುದು ತಿಳಿಯುತ್ತದೆ.

ಪಿತೃಪ್ರಭುತ್ವ ಮತ್ತು ಧರ್ಮವು ಸಾಮಾನ್ಯವಾಗಿ ಜೊತೆಜೊತೆಯಲ್ಲಿ ಸಾಗುತ್ತದೆ ಎಂದು ತಿಳಿದಿರುವವರು ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ನರೇಂದ್ರ ಮೋದಿ ಸಂಪುಟದ ಮಹಿಳಾ ಮಂತ್ರಿಗಳು ಮೌನವಾಗಿರುವ ಕುರಿತು ಹೆಚ್ಚು ಆಶ್ಚರ್ಯಚಕಿತರಾಗಿದ್ದಾರೆ. ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ, ಧಾರ್ಮಿಕ ಆಚರಣೆಗಳಲ್ಲಿ ಮಹಿಳಾ ಸದಸ್ಯರು ಅತ್ಯಲ್ಪ ಪ್ರಾತಿನಿಧ್ಯ ಹೊಂದಿದ್ದರು. ಬಹುತೇಕ ಇಲ್ಲವೇ ಎನ್ನುವಷ್ಟು ಪಾಲ್ಗೊಂಡಿದ್ದರು.

ಎಲ್ಲಾ ವಲಯಗಳಿಂದ ಟೀಕೆಗಳನ್ನು ಎದುರಿಸುತ್ತಿದ್ದರೂ ಮೋದಿ ಸರ್ಕಾರವು ಬ್ರಿಜ್‌ ಭೂಷಣ್‌ ಅವರನ್ನು ಹೇಗೆ ಸಮರ್ಥಿಸಿಕೊಳ್ಳುತ್ತಿದೆ ಎಂದು ಹಲವರು ಆಶ್ಚರ್ಯ ಪಡುತ್ತಾರೆ. ಆದರೂ ಆರೋಪಿ ಬ್ರಿಜ್‌ ಎಷ್ಟು ‘ಅಸುರಕ್ಷಿತ’ನಾಗಿದ್ದನೆಂದರೆ- ಸ್ತ್ರೀಯರ ವಿರುದ್ಧ ಧಾರ್ಮಿಕ ಶಕ್ತಿ ಹೇಗೆ ನಿಂತಿದೆ ಎಂಬುದನ್ನು ಪ್ರದರ್ಶಿಸುವುದಕ್ಕೂ ಯೋಚಿಸಿ ಸ್ವಾಮೀಜಿಗಳ ಬೆಂಬಲವನ್ನು ಪಡೆಯಬೇಕಾಗಿದೆ.

ಬ್ರಿಜ್ ಭೂಷಣ್ ಸಿಂಗ್‌ನನ್ನು ಬೆಂಬಲಿಸುತ್ತಿರುವ ಸಂತರು

ಆರೋಪಿ ಬ್ರಿಜ್‌ಭೂಷಣ್ ಶರಣ್‌ಸಿಂಗ್‌ನನ್ನು ಬೆಂಬಲಿಸುತ್ತಿರುವವರಲ್ಲಿ, ಹಿಂದುತ್ವವಾದಿ ಮಣಿರಾಮ್ ದಾಸ್ ಶಿಬಿರದ ಮಹಂತ್ ಕಮಲನಯನ್ ದಾಸ್ ಮುಂಚೂಣಿಯಲ್ಲಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಉತ್ತರಾಧಿಕಾರಿ ಎಂದೇ ಇವರನ್ನು ಗುರುತಿಸಲಾಗಿದೆ.

ಬ್ರಿಜ್ ಪರ ಅಭಿಯಾನದಲ್ಲಿ ಹೆಚ್ಚು ಸಕ್ರಿಯವಾಗಿರುವವರಲ್ಲಿ ಮಹಂತ್ ಮಿಥಿಲೇಶ ನಂದಿನಿ ಶರಣ್ ಒಬ್ಬರು. 2012ರಲ್ಲಿ ಪರಿಚಯಿಸಲಾದ ಪೋಕ್ಸೋ ಕಾಯ್ದೆಯಲ್ಲಿ ದೋಷಗಳಿವೆ ಎಂದು ಇವರು ಮಾತನಾಡುತ್ತಿದ್ದಾರೆ. ಈ ಕಾಯ್ದೆಯು ‘ಚಾರಿತ್ರ್ಯ ಹರಣ ಮಾಡುತ್ತದೆ, ಅನೇಕ ಗಣ್ಯರನ್ನು ಮಾಧ್ಯಮಗಳ ವಿಚಾರಣೆ ಒಳಪಡಿಸುತ್ತದೆ.  ಕಾಯ್ದೆಯ ನಿಬಂಧನೆಗಳಿಗೆ ತಿದ್ದುಪಡಿ ತರಬೇಕು’ ಎಂದು ಒತ್ತಾಯಿಸುತ್ತಿದ್ದಾರೆ.

ಪೋಕ್ಸೊ ಕಾಯ್ದೆಯಡಿ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೊದಲು, ಮಹಂತ್ ಶರಣ್ ಅವರು ಪೋಕ್ಸೋ ಕಾನೂನಿನಲ್ಲಿ ದೋಷವನ್ನು ಕಂಡಿರಲಿಲ್ಲ. ಆದರೆ ಈಗ ಏನು ಹೇಳುತ್ತಾರೆ? “ಸಾಧು ಸಂತರು ಅಪ್ರಾಪ್ತ ವಯಸ್ಕರಿಗೆ ಆರ್ಶೀವದಿಸಲು ತಲೆ ಮೇಲೆ ಕೈ ಇಟ್ಟರೂ ಕೆಟ್ಟದ್ದಾಗಿ ಕಾನೂನು ಪರಿಗಣಿಸಬಹುದು. ಸಂತರ ವಿರುದ್ಧ ಕ್ರಮ ಕೈಗೊಳ್ಳಬಹುದು” ಎನ್ನಲು ಶುರು ಮಾಡಿದ್ದಾರೆ.

ಪ್ರತಿಷ್ಠಿತ ಕಾಮತಾ ಪ್ರಸಾದ್ ಸುಂದರ್ ಲಾಲ್ ಸಾಕೇತ್ ಪಿಜಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿ ನಾಯಕನಾಗಿ, ಪ್ರಬಲ ಹಿಂದುತ್ವದ ನಾಯಕನಾಗಿ ಬಂದವರು ಬ್ರಿಜ್ ಎಂದು ಈ ಭಾಗದಲ್ಲಿ ಮಾತನಾಡಿಕೊಳ್ಳಲಾಗುತ್ತಿದೆ. 1992ರಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬ್ರಿಜ್‌ ಆರೋಪಿಯಾಗಿದ್ದನು. “ಈ ಪ್ರಕರಣದಲ್ಲಿ ನನ್ನನ್ನು ಬಂಧಿಸಲಾಗಿತ್ತು” ಎಂದು ಬ್ರಿಜ್‌ ಹೆಮ್ಮೆಪಡುತ್ತಾನೆ.

ಇದನ್ನೂ ಓದಿರಿ: ಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

ಅಯೋಧ್ಯೆಯಲ್ಲಿನ ಸುದೀರ್ಘ ಒಡನಾಟದಿಂದಾಗಿ ಬ್ರಿಜ್‌ ಭೂಷಣ್‌ಗೆ ಋಣಿ ಎಂದು ಭಾವಿಸುವ ಜನರಿಗೆ ಕೊರತೆಯಿಲ್ಲ. ಆತನಿಗೆ ಆಪ್ತರು ಎಂದು ಹೇಳಿಕೊಳ್ಳುವ ಅನೇಕರು ಸಹ ಈಗ ಮುಂದೆ ಬರುತ್ತಿದ್ದಾರೆ. ಬ್ರಿಜ್‌ ಭೂಷಣ್‌ನ ಊರು ಸರಯುವಿನ ಒಂದು ಕಡೆ ಇದ್ದರೆ ಅಯೋಧ್ಯೆ ಇನ್ನೊಂದು ಬದಿಯಲ್ಲಿದೆ. ಆತ ಬಿಜೆಪಿಯ ಒಳಗೆ ಮತ್ತು ಹೊರಗೆ ಎರಡೂ ಕಡೆಗಳಲ್ಲಿ ಅನೇಕ ಹಿತೈಷಿಗಳನ್ನು ಹೊಂದಿದ್ದಾನೆ.

ಅಯೋಧ್ಯೆಯ ಸ್ವಾಮೀಜಿಗಳು ಸಿಂಗ್‌ಗೆ ಏಕೆ ಬೆಂಬಲ ನೀಡುತ್ತಿದ್ದಾರೆ? ಸ್ವಾಮೀಜಿಗಳು ಮತ್ತು ಬ್ರಿಜ್‌ ಇಬ್ಬರೂ ಪರಸ್ಪರ ಅವಲಂಬಿಸಿರುವುದರ ಪರಿಣಾಮ ಇದೆಂದು ಕೆಲವು ತಜ್ಞರು ಹೇಳುತ್ತಾರೆ. ಏಕೆಂದರೆ ಅವರು ಪರಸ್ಪರ ಆಶ್ರಯವನ್ನು ಪಡೆಯುತ್ತಾರೆ ಮತ್ತು ಅಗತ್ಯವಿದ್ದಾಗ ಪರಸ್ಪರ ಪ್ರಭಾವದ ಲಾಭವನ್ನೂ ಪಡೆಯುತ್ತಾರೆ.

ಬ್ರಿಜ್‌ಗೆ ಬೆಂಬಲ ನೀಡಿರುವವರನ್ನು ‘ಸಂತರು’ ಎಂದು ಮಾಧ್ಯಮಗಳು ಉಲ್ಲೇಖಿಸುತ್ತಿರುವುದಕ್ಕೆ ಭಾರತೀಯ  ಕಮ್ಯುನಿಸ್ಟ್ ಪಕ್ಷದ ಸ್ಥಳೀಯ ಮುಖಂಡ ಸೂರ್ಯಕಾಂತ್ ಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಇವರನ್ನು ಸಂತರು ಎಂದು ಬಿಂಬಿಸುವ ಬದಲು ಹುಸಿ ಸಂತರು ಎಂದು ಏಕೆ ಉಲ್ಲೇಖಿಸುವುದಿಲ್ಲ”  ಎಂದು ಪ್ರಶ್ನಿಸಿದ್ದಾರೆ. “ರಾಮಚರಿತಮಾನಸದಲ್ಲಿ ಗೋಸ್ವಾಮಿ ತುಳಸಿದಾಸರು ಪಟ್ಟಿ ಮಾಡಿರುವ ನಿಜವಾದ ಸಂತರ ಗುಣಗಳು ಮತ್ತು ಗುಣಲಕ್ಷಣಗಳ ಬಗ್ಗೆ ಇವರು ಓದಿಲ್ಲ” ಎಂದು ಟೀಕಿಸಿದ್ದಾರೆ.

ಮಾಹಿತಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....