Homeಮುಖಪುಟಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

ಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಪೋಕ್ಸೋ ಪ್ರಕರಣದ ಆರೋಪಿ, ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ಜೂನ್‌ 5ರಂದು ಅಯೋಧ್ಯೆಯ ರಾಮಕಥಾ ಪಾರ್ಕ್‌ನಲ್ಲಿ ಸಂತರ ನೇತೃತ್ವದಲ್ಲಿ ರ್‍ಯಾಲಿಯನ್ನು ನಡೆಸಲು ಮುಂದಾಗಿದ್ದರು. ಅಯೋಧ್ಯೆಯ ಸಂತರ ಬೆಂಬಲದ ಹೊರತಾಗಿಯೂ ರ್‍ಯಾಲಿಯನ್ನು ಮುಂದೂಡಲಾಗಿದೆ.

ಈ ನಿರ್ಧಾರದ ಹಿಂದೆ ಅನೇಕ ಕಾರಣಗಳಿವೆ ಎಂದು ನಿರ್ಧರಿಸಬಹುದು ಮತ್ತು ಚರ್ಚಿಸಬಹುದು. ಸ್ವಾಮೀಜಿ ಮತ್ತು ರಾಜಕಾರಣಿಗಳ ಈ ಹೊಂದಾಣಿ ಇದೆ. ಧರ್ಮ, ಪಿತೃ ಪ್ರಧಾನ ಶಕ್ತಿಗಳ ನಡುವೆ ಒಂದು ರೀತಿಯ ಗೊಂದಲವಿದ್ದರೂ ನಿರಾಕರಿಸಲಾಗದ ಸಂಬಂಧ ಇದೆ ಎಂಬುದು ತಿಳಿಯುತ್ತದೆ.

ಪಿತೃಪ್ರಭುತ್ವ ಮತ್ತು ಧರ್ಮವು ಸಾಮಾನ್ಯವಾಗಿ ಜೊತೆಜೊತೆಯಲ್ಲಿ ಸಾಗುತ್ತದೆ ಎಂದು ತಿಳಿದಿರುವವರು ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ನರೇಂದ್ರ ಮೋದಿ ಸಂಪುಟದ ಮಹಿಳಾ ಮಂತ್ರಿಗಳು ಮೌನವಾಗಿರುವ ಕುರಿತು ಹೆಚ್ಚು ಆಶ್ಚರ್ಯಚಕಿತರಾಗಿದ್ದಾರೆ. ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ, ಧಾರ್ಮಿಕ ಆಚರಣೆಗಳಲ್ಲಿ ಮಹಿಳಾ ಸದಸ್ಯರು ಅತ್ಯಲ್ಪ ಪ್ರಾತಿನಿಧ್ಯ ಹೊಂದಿದ್ದರು. ಬಹುತೇಕ ಇಲ್ಲವೇ ಎನ್ನುವಷ್ಟು ಪಾಲ್ಗೊಂಡಿದ್ದರು.

ಎಲ್ಲಾ ವಲಯಗಳಿಂದ ಟೀಕೆಗಳನ್ನು ಎದುರಿಸುತ್ತಿದ್ದರೂ ಮೋದಿ ಸರ್ಕಾರವು ಬ್ರಿಜ್‌ ಭೂಷಣ್‌ ಅವರನ್ನು ಹೇಗೆ ಸಮರ್ಥಿಸಿಕೊಳ್ಳುತ್ತಿದೆ ಎಂದು ಹಲವರು ಆಶ್ಚರ್ಯ ಪಡುತ್ತಾರೆ. ಆದರೂ ಆರೋಪಿ ಬ್ರಿಜ್‌ ಎಷ್ಟು ‘ಅಸುರಕ್ಷಿತ’ನಾಗಿದ್ದನೆಂದರೆ- ಸ್ತ್ರೀಯರ ವಿರುದ್ಧ ಧಾರ್ಮಿಕ ಶಕ್ತಿ ಹೇಗೆ ನಿಂತಿದೆ ಎಂಬುದನ್ನು ಪ್ರದರ್ಶಿಸುವುದಕ್ಕೂ ಯೋಚಿಸಿ ಸ್ವಾಮೀಜಿಗಳ ಬೆಂಬಲವನ್ನು ಪಡೆಯಬೇಕಾಗಿದೆ.

ಬ್ರಿಜ್ ಭೂಷಣ್ ಸಿಂಗ್‌ನನ್ನು ಬೆಂಬಲಿಸುತ್ತಿರುವ ಸಂತರು

ಆರೋಪಿ ಬ್ರಿಜ್‌ಭೂಷಣ್ ಶರಣ್‌ಸಿಂಗ್‌ನನ್ನು ಬೆಂಬಲಿಸುತ್ತಿರುವವರಲ್ಲಿ, ಹಿಂದುತ್ವವಾದಿ ಮಣಿರಾಮ್ ದಾಸ್ ಶಿಬಿರದ ಮಹಂತ್ ಕಮಲನಯನ್ ದಾಸ್ ಮುಂಚೂಣಿಯಲ್ಲಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಉತ್ತರಾಧಿಕಾರಿ ಎಂದೇ ಇವರನ್ನು ಗುರುತಿಸಲಾಗಿದೆ.

ಬ್ರಿಜ್ ಪರ ಅಭಿಯಾನದಲ್ಲಿ ಹೆಚ್ಚು ಸಕ್ರಿಯವಾಗಿರುವವರಲ್ಲಿ ಮಹಂತ್ ಮಿಥಿಲೇಶ ನಂದಿನಿ ಶರಣ್ ಒಬ್ಬರು. 2012ರಲ್ಲಿ ಪರಿಚಯಿಸಲಾದ ಪೋಕ್ಸೋ ಕಾಯ್ದೆಯಲ್ಲಿ ದೋಷಗಳಿವೆ ಎಂದು ಇವರು ಮಾತನಾಡುತ್ತಿದ್ದಾರೆ. ಈ ಕಾಯ್ದೆಯು ‘ಚಾರಿತ್ರ್ಯ ಹರಣ ಮಾಡುತ್ತದೆ, ಅನೇಕ ಗಣ್ಯರನ್ನು ಮಾಧ್ಯಮಗಳ ವಿಚಾರಣೆ ಒಳಪಡಿಸುತ್ತದೆ.  ಕಾಯ್ದೆಯ ನಿಬಂಧನೆಗಳಿಗೆ ತಿದ್ದುಪಡಿ ತರಬೇಕು’ ಎಂದು ಒತ್ತಾಯಿಸುತ್ತಿದ್ದಾರೆ.

ಪೋಕ್ಸೊ ಕಾಯ್ದೆಯಡಿ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೊದಲು, ಮಹಂತ್ ಶರಣ್ ಅವರು ಪೋಕ್ಸೋ ಕಾನೂನಿನಲ್ಲಿ ದೋಷವನ್ನು ಕಂಡಿರಲಿಲ್ಲ. ಆದರೆ ಈಗ ಏನು ಹೇಳುತ್ತಾರೆ? “ಸಾಧು ಸಂತರು ಅಪ್ರಾಪ್ತ ವಯಸ್ಕರಿಗೆ ಆರ್ಶೀವದಿಸಲು ತಲೆ ಮೇಲೆ ಕೈ ಇಟ್ಟರೂ ಕೆಟ್ಟದ್ದಾಗಿ ಕಾನೂನು ಪರಿಗಣಿಸಬಹುದು. ಸಂತರ ವಿರುದ್ಧ ಕ್ರಮ ಕೈಗೊಳ್ಳಬಹುದು” ಎನ್ನಲು ಶುರು ಮಾಡಿದ್ದಾರೆ.

ಪ್ರತಿಷ್ಠಿತ ಕಾಮತಾ ಪ್ರಸಾದ್ ಸುಂದರ್ ಲಾಲ್ ಸಾಕೇತ್ ಪಿಜಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿ ನಾಯಕನಾಗಿ, ಪ್ರಬಲ ಹಿಂದುತ್ವದ ನಾಯಕನಾಗಿ ಬಂದವರು ಬ್ರಿಜ್ ಎಂದು ಈ ಭಾಗದಲ್ಲಿ ಮಾತನಾಡಿಕೊಳ್ಳಲಾಗುತ್ತಿದೆ. 1992ರಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬ್ರಿಜ್‌ ಆರೋಪಿಯಾಗಿದ್ದನು. “ಈ ಪ್ರಕರಣದಲ್ಲಿ ನನ್ನನ್ನು ಬಂಧಿಸಲಾಗಿತ್ತು” ಎಂದು ಬ್ರಿಜ್‌ ಹೆಮ್ಮೆಪಡುತ್ತಾನೆ.

ಇದನ್ನೂ ಓದಿರಿ: ಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

ಅಯೋಧ್ಯೆಯಲ್ಲಿನ ಸುದೀರ್ಘ ಒಡನಾಟದಿಂದಾಗಿ ಬ್ರಿಜ್‌ ಭೂಷಣ್‌ಗೆ ಋಣಿ ಎಂದು ಭಾವಿಸುವ ಜನರಿಗೆ ಕೊರತೆಯಿಲ್ಲ. ಆತನಿಗೆ ಆಪ್ತರು ಎಂದು ಹೇಳಿಕೊಳ್ಳುವ ಅನೇಕರು ಸಹ ಈಗ ಮುಂದೆ ಬರುತ್ತಿದ್ದಾರೆ. ಬ್ರಿಜ್‌ ಭೂಷಣ್‌ನ ಊರು ಸರಯುವಿನ ಒಂದು ಕಡೆ ಇದ್ದರೆ ಅಯೋಧ್ಯೆ ಇನ್ನೊಂದು ಬದಿಯಲ್ಲಿದೆ. ಆತ ಬಿಜೆಪಿಯ ಒಳಗೆ ಮತ್ತು ಹೊರಗೆ ಎರಡೂ ಕಡೆಗಳಲ್ಲಿ ಅನೇಕ ಹಿತೈಷಿಗಳನ್ನು ಹೊಂದಿದ್ದಾನೆ.

ಅಯೋಧ್ಯೆಯ ಸ್ವಾಮೀಜಿಗಳು ಸಿಂಗ್‌ಗೆ ಏಕೆ ಬೆಂಬಲ ನೀಡುತ್ತಿದ್ದಾರೆ? ಸ್ವಾಮೀಜಿಗಳು ಮತ್ತು ಬ್ರಿಜ್‌ ಇಬ್ಬರೂ ಪರಸ್ಪರ ಅವಲಂಬಿಸಿರುವುದರ ಪರಿಣಾಮ ಇದೆಂದು ಕೆಲವು ತಜ್ಞರು ಹೇಳುತ್ತಾರೆ. ಏಕೆಂದರೆ ಅವರು ಪರಸ್ಪರ ಆಶ್ರಯವನ್ನು ಪಡೆಯುತ್ತಾರೆ ಮತ್ತು ಅಗತ್ಯವಿದ್ದಾಗ ಪರಸ್ಪರ ಪ್ರಭಾವದ ಲಾಭವನ್ನೂ ಪಡೆಯುತ್ತಾರೆ.

ಬ್ರಿಜ್‌ಗೆ ಬೆಂಬಲ ನೀಡಿರುವವರನ್ನು ‘ಸಂತರು’ ಎಂದು ಮಾಧ್ಯಮಗಳು ಉಲ್ಲೇಖಿಸುತ್ತಿರುವುದಕ್ಕೆ ಭಾರತೀಯ  ಕಮ್ಯುನಿಸ್ಟ್ ಪಕ್ಷದ ಸ್ಥಳೀಯ ಮುಖಂಡ ಸೂರ್ಯಕಾಂತ್ ಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಇವರನ್ನು ಸಂತರು ಎಂದು ಬಿಂಬಿಸುವ ಬದಲು ಹುಸಿ ಸಂತರು ಎಂದು ಏಕೆ ಉಲ್ಲೇಖಿಸುವುದಿಲ್ಲ”  ಎಂದು ಪ್ರಶ್ನಿಸಿದ್ದಾರೆ. “ರಾಮಚರಿತಮಾನಸದಲ್ಲಿ ಗೋಸ್ವಾಮಿ ತುಳಸಿದಾಸರು ಪಟ್ಟಿ ಮಾಡಿರುವ ನಿಜವಾದ ಸಂತರ ಗುಣಗಳು ಮತ್ತು ಗುಣಲಕ್ಷಣಗಳ ಬಗ್ಗೆ ಇವರು ಓದಿಲ್ಲ” ಎಂದು ಟೀಕಿಸಿದ್ದಾರೆ.

ಮಾಹಿತಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...