Homeಮುಖಪುಟಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

ಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಪೋಕ್ಸೋ ಪ್ರಕರಣದ ಆರೋಪಿ, ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ಜೂನ್‌ 5ರಂದು ಅಯೋಧ್ಯೆಯ ರಾಮಕಥಾ ಪಾರ್ಕ್‌ನಲ್ಲಿ ಸಂತರ ನೇತೃತ್ವದಲ್ಲಿ ರ್‍ಯಾಲಿಯನ್ನು ನಡೆಸಲು ಮುಂದಾಗಿದ್ದರು. ಅಯೋಧ್ಯೆಯ ಸಂತರ ಬೆಂಬಲದ ಹೊರತಾಗಿಯೂ ರ್‍ಯಾಲಿಯನ್ನು ಮುಂದೂಡಲಾಗಿದೆ.

ಈ ನಿರ್ಧಾರದ ಹಿಂದೆ ಅನೇಕ ಕಾರಣಗಳಿವೆ ಎಂದು ನಿರ್ಧರಿಸಬಹುದು ಮತ್ತು ಚರ್ಚಿಸಬಹುದು. ಸ್ವಾಮೀಜಿ ಮತ್ತು ರಾಜಕಾರಣಿಗಳ ಈ ಹೊಂದಾಣಿ ಇದೆ. ಧರ್ಮ, ಪಿತೃ ಪ್ರಧಾನ ಶಕ್ತಿಗಳ ನಡುವೆ ಒಂದು ರೀತಿಯ ಗೊಂದಲವಿದ್ದರೂ ನಿರಾಕರಿಸಲಾಗದ ಸಂಬಂಧ ಇದೆ ಎಂಬುದು ತಿಳಿಯುತ್ತದೆ.

ಪಿತೃಪ್ರಭುತ್ವ ಮತ್ತು ಧರ್ಮವು ಸಾಮಾನ್ಯವಾಗಿ ಜೊತೆಜೊತೆಯಲ್ಲಿ ಸಾಗುತ್ತದೆ ಎಂದು ತಿಳಿದಿರುವವರು ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ನರೇಂದ್ರ ಮೋದಿ ಸಂಪುಟದ ಮಹಿಳಾ ಮಂತ್ರಿಗಳು ಮೌನವಾಗಿರುವ ಕುರಿತು ಹೆಚ್ಚು ಆಶ್ಚರ್ಯಚಕಿತರಾಗಿದ್ದಾರೆ. ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ, ಧಾರ್ಮಿಕ ಆಚರಣೆಗಳಲ್ಲಿ ಮಹಿಳಾ ಸದಸ್ಯರು ಅತ್ಯಲ್ಪ ಪ್ರಾತಿನಿಧ್ಯ ಹೊಂದಿದ್ದರು. ಬಹುತೇಕ ಇಲ್ಲವೇ ಎನ್ನುವಷ್ಟು ಪಾಲ್ಗೊಂಡಿದ್ದರು.

ಎಲ್ಲಾ ವಲಯಗಳಿಂದ ಟೀಕೆಗಳನ್ನು ಎದುರಿಸುತ್ತಿದ್ದರೂ ಮೋದಿ ಸರ್ಕಾರವು ಬ್ರಿಜ್‌ ಭೂಷಣ್‌ ಅವರನ್ನು ಹೇಗೆ ಸಮರ್ಥಿಸಿಕೊಳ್ಳುತ್ತಿದೆ ಎಂದು ಹಲವರು ಆಶ್ಚರ್ಯ ಪಡುತ್ತಾರೆ. ಆದರೂ ಆರೋಪಿ ಬ್ರಿಜ್‌ ಎಷ್ಟು ‘ಅಸುರಕ್ಷಿತ’ನಾಗಿದ್ದನೆಂದರೆ- ಸ್ತ್ರೀಯರ ವಿರುದ್ಧ ಧಾರ್ಮಿಕ ಶಕ್ತಿ ಹೇಗೆ ನಿಂತಿದೆ ಎಂಬುದನ್ನು ಪ್ರದರ್ಶಿಸುವುದಕ್ಕೂ ಯೋಚಿಸಿ ಸ್ವಾಮೀಜಿಗಳ ಬೆಂಬಲವನ್ನು ಪಡೆಯಬೇಕಾಗಿದೆ.

ಬ್ರಿಜ್ ಭೂಷಣ್ ಸಿಂಗ್‌ನನ್ನು ಬೆಂಬಲಿಸುತ್ತಿರುವ ಸಂತರು

ಆರೋಪಿ ಬ್ರಿಜ್‌ಭೂಷಣ್ ಶರಣ್‌ಸಿಂಗ್‌ನನ್ನು ಬೆಂಬಲಿಸುತ್ತಿರುವವರಲ್ಲಿ, ಹಿಂದುತ್ವವಾದಿ ಮಣಿರಾಮ್ ದಾಸ್ ಶಿಬಿರದ ಮಹಂತ್ ಕಮಲನಯನ್ ದಾಸ್ ಮುಂಚೂಣಿಯಲ್ಲಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಉತ್ತರಾಧಿಕಾರಿ ಎಂದೇ ಇವರನ್ನು ಗುರುತಿಸಲಾಗಿದೆ.

ಬ್ರಿಜ್ ಪರ ಅಭಿಯಾನದಲ್ಲಿ ಹೆಚ್ಚು ಸಕ್ರಿಯವಾಗಿರುವವರಲ್ಲಿ ಮಹಂತ್ ಮಿಥಿಲೇಶ ನಂದಿನಿ ಶರಣ್ ಒಬ್ಬರು. 2012ರಲ್ಲಿ ಪರಿಚಯಿಸಲಾದ ಪೋಕ್ಸೋ ಕಾಯ್ದೆಯಲ್ಲಿ ದೋಷಗಳಿವೆ ಎಂದು ಇವರು ಮಾತನಾಡುತ್ತಿದ್ದಾರೆ. ಈ ಕಾಯ್ದೆಯು ‘ಚಾರಿತ್ರ್ಯ ಹರಣ ಮಾಡುತ್ತದೆ, ಅನೇಕ ಗಣ್ಯರನ್ನು ಮಾಧ್ಯಮಗಳ ವಿಚಾರಣೆ ಒಳಪಡಿಸುತ್ತದೆ.  ಕಾಯ್ದೆಯ ನಿಬಂಧನೆಗಳಿಗೆ ತಿದ್ದುಪಡಿ ತರಬೇಕು’ ಎಂದು ಒತ್ತಾಯಿಸುತ್ತಿದ್ದಾರೆ.

ಪೋಕ್ಸೊ ಕಾಯ್ದೆಯಡಿ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೊದಲು, ಮಹಂತ್ ಶರಣ್ ಅವರು ಪೋಕ್ಸೋ ಕಾನೂನಿನಲ್ಲಿ ದೋಷವನ್ನು ಕಂಡಿರಲಿಲ್ಲ. ಆದರೆ ಈಗ ಏನು ಹೇಳುತ್ತಾರೆ? “ಸಾಧು ಸಂತರು ಅಪ್ರಾಪ್ತ ವಯಸ್ಕರಿಗೆ ಆರ್ಶೀವದಿಸಲು ತಲೆ ಮೇಲೆ ಕೈ ಇಟ್ಟರೂ ಕೆಟ್ಟದ್ದಾಗಿ ಕಾನೂನು ಪರಿಗಣಿಸಬಹುದು. ಸಂತರ ವಿರುದ್ಧ ಕ್ರಮ ಕೈಗೊಳ್ಳಬಹುದು” ಎನ್ನಲು ಶುರು ಮಾಡಿದ್ದಾರೆ.

ಪ್ರತಿಷ್ಠಿತ ಕಾಮತಾ ಪ್ರಸಾದ್ ಸುಂದರ್ ಲಾಲ್ ಸಾಕೇತ್ ಪಿಜಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿ ನಾಯಕನಾಗಿ, ಪ್ರಬಲ ಹಿಂದುತ್ವದ ನಾಯಕನಾಗಿ ಬಂದವರು ಬ್ರಿಜ್ ಎಂದು ಈ ಭಾಗದಲ್ಲಿ ಮಾತನಾಡಿಕೊಳ್ಳಲಾಗುತ್ತಿದೆ. 1992ರಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬ್ರಿಜ್‌ ಆರೋಪಿಯಾಗಿದ್ದನು. “ಈ ಪ್ರಕರಣದಲ್ಲಿ ನನ್ನನ್ನು ಬಂಧಿಸಲಾಗಿತ್ತು” ಎಂದು ಬ್ರಿಜ್‌ ಹೆಮ್ಮೆಪಡುತ್ತಾನೆ.

ಇದನ್ನೂ ಓದಿರಿ: ಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

ಅಯೋಧ್ಯೆಯಲ್ಲಿನ ಸುದೀರ್ಘ ಒಡನಾಟದಿಂದಾಗಿ ಬ್ರಿಜ್‌ ಭೂಷಣ್‌ಗೆ ಋಣಿ ಎಂದು ಭಾವಿಸುವ ಜನರಿಗೆ ಕೊರತೆಯಿಲ್ಲ. ಆತನಿಗೆ ಆಪ್ತರು ಎಂದು ಹೇಳಿಕೊಳ್ಳುವ ಅನೇಕರು ಸಹ ಈಗ ಮುಂದೆ ಬರುತ್ತಿದ್ದಾರೆ. ಬ್ರಿಜ್‌ ಭೂಷಣ್‌ನ ಊರು ಸರಯುವಿನ ಒಂದು ಕಡೆ ಇದ್ದರೆ ಅಯೋಧ್ಯೆ ಇನ್ನೊಂದು ಬದಿಯಲ್ಲಿದೆ. ಆತ ಬಿಜೆಪಿಯ ಒಳಗೆ ಮತ್ತು ಹೊರಗೆ ಎರಡೂ ಕಡೆಗಳಲ್ಲಿ ಅನೇಕ ಹಿತೈಷಿಗಳನ್ನು ಹೊಂದಿದ್ದಾನೆ.

ಅಯೋಧ್ಯೆಯ ಸ್ವಾಮೀಜಿಗಳು ಸಿಂಗ್‌ಗೆ ಏಕೆ ಬೆಂಬಲ ನೀಡುತ್ತಿದ್ದಾರೆ? ಸ್ವಾಮೀಜಿಗಳು ಮತ್ತು ಬ್ರಿಜ್‌ ಇಬ್ಬರೂ ಪರಸ್ಪರ ಅವಲಂಬಿಸಿರುವುದರ ಪರಿಣಾಮ ಇದೆಂದು ಕೆಲವು ತಜ್ಞರು ಹೇಳುತ್ತಾರೆ. ಏಕೆಂದರೆ ಅವರು ಪರಸ್ಪರ ಆಶ್ರಯವನ್ನು ಪಡೆಯುತ್ತಾರೆ ಮತ್ತು ಅಗತ್ಯವಿದ್ದಾಗ ಪರಸ್ಪರ ಪ್ರಭಾವದ ಲಾಭವನ್ನೂ ಪಡೆಯುತ್ತಾರೆ.

ಬ್ರಿಜ್‌ಗೆ ಬೆಂಬಲ ನೀಡಿರುವವರನ್ನು ‘ಸಂತರು’ ಎಂದು ಮಾಧ್ಯಮಗಳು ಉಲ್ಲೇಖಿಸುತ್ತಿರುವುದಕ್ಕೆ ಭಾರತೀಯ  ಕಮ್ಯುನಿಸ್ಟ್ ಪಕ್ಷದ ಸ್ಥಳೀಯ ಮುಖಂಡ ಸೂರ್ಯಕಾಂತ್ ಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಇವರನ್ನು ಸಂತರು ಎಂದು ಬಿಂಬಿಸುವ ಬದಲು ಹುಸಿ ಸಂತರು ಎಂದು ಏಕೆ ಉಲ್ಲೇಖಿಸುವುದಿಲ್ಲ”  ಎಂದು ಪ್ರಶ್ನಿಸಿದ್ದಾರೆ. “ರಾಮಚರಿತಮಾನಸದಲ್ಲಿ ಗೋಸ್ವಾಮಿ ತುಳಸಿದಾಸರು ಪಟ್ಟಿ ಮಾಡಿರುವ ನಿಜವಾದ ಸಂತರ ಗುಣಗಳು ಮತ್ತು ಗುಣಲಕ್ಷಣಗಳ ಬಗ್ಗೆ ಇವರು ಓದಿಲ್ಲ” ಎಂದು ಟೀಕಿಸಿದ್ದಾರೆ.

ಮಾಹಿತಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕರಾವಳಿ ಸಮಸ್ಯೆಗೆ ಶಾಶ್ವತ ಪರಿಹಾರದ ಭರವಸೆ: ಸಚಿವ ಕೆ.ಎಸ್.ಬಸವಂತಪ್ಪ

ರಾಜ್ಯದ ಕರಾವಳಿ ಭಾಗದಲ್ಲಿ ಮೀನುಗಾರಿಕೆ ಕ್ಷೇತ್ರದ ಅಭಿವೃದ್ಧಿ ಕುಂಠಿತವಾಗುತ್ತಿರುವ ಕುರಿತು ಕಳವಳ ವ್ಯಕ್ತವಾಗುತ್ತಿರುವ ಬೆನ್ನಲ್ಲೇ, ಸ್ಥಳೀಯ ಸಮಸ್ಯೆಗಳಿಗೆ ಸ್ಪಂದಿಸಲು ಸರ್ಕಾರ ಮುಂದಾಗಿದೆ. ಕರಾವಳಿ ವ್ಯಾಪ್ತಿಯ ಬಂದರುಗಳು, ಮೀನು ಮಾರುಕಟ್ಟೆಗಳು, ಬ್ರೇಕ್‌ವಾಟರ್‌ಗಳು ಹಾಗೂ ಜೆಟ್ಟಿಗಳಿಗೆ...

SIR ಪ್ರಕ್ರಿಯೆಯಲ್ಲಿ ಯಾರ ಹೆಸರು ಬಿಟ್ಟುಹೋಗಬಾರದು: PRC ನೀಡಲು ವಿಳಂಬ ಬೇಡ ಡಾ. ಜಿ. ಪರಮೇಶ್ವರ್

ಉದ್ಯೋಗ ಅಥವಾ ವಿವಿಧ ಕಾರಣಗಳಿಂದಾಗಿ ತಮ್ಮ ಸ್ವಂತ ಊರು ತೊರೆದು ಬೇರೆಡೆಗೆ ಸ್ಥಳಾಂತರಗೊಂಡು ನೆಲೆಸಿರುವ ರಾಜ್ಯದ ಯಾವುದೇ ನಾಗರಿಕರು ಯಾವುದೇ ಕಾರಣಕ್ಕೂ ಮತದಾರರ ಪಟ್ಟಿಯಿಂದ ಹೊರಗುಳಿಯಬಾರದು ಎಂದು ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರಾದ...

ಬಿಹಾರ ಪ್ರವಾಹದ ನಡುವೆ ಮೋದಿ ಹುಟ್ಟುಹಬ್ಬದ ಪ್ರಯುಕ್ತ ದೀಪೋತ್ಸವ; ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮಕ್ಕೆ ತೇಜಸ್ವಿ ಯಾದವ್ ಆಕ್ಷೇಪ

ಬಿಹಾರದಲ್ಲಿ ಪ್ರವಾಹ ಪರಿಸ್ಥಿತಿ ಮುಂದುವರಿದಿರುವ ನಡುವೆಯೇ ಪ್ರಧಾನಿ ನರೇಂದ್ರ ಮೋದಿ ಅವರ ಹುಟ್ಟುಹಬ್ಬದ ಅಂಗವಾಗಿ ಸೆಪ್ಟೆಂಬರ್ 17ರಂದು ‘ಆಶೀರ್ವಾದ್ ಕಾ ದಿಯಾ’ ಕಾರ್ಯಕ್ರಮ ಆಯೋಜಿಸಿರುವುದು ರಾಜಕೀಯ ಚರ್ಚೆಗೆ ಕಾರಣವಾಗಿದೆ. ರಾಜ್ಯದ 15 ಜಿಲ್ಲೆಗಳಲ್ಲಿ...

ಉಮರ್ ಖಾಲಿದ್ ಅವರನ್ನು ‘ದೇಶಪ್ರೇಮಿ’ ಎಂದ ಬಿ.ಕೆ. ಹರಿಪ್ರಸಾದ್; ವಿಧಾನಸೌಧ ಪೊಲೀಸ್ ಠಾಣೆಯಲ್ಲಿ ದೂರು ದಾಖಲು

ಬೆಂಗಳೂರಿನ ರಾಷ್ಟ್ರೀಯ ಕಾನೂನು ಶಾಲೆ (ಎನ್‌ಎಲ್‌ಎಸ್‌ಐಯು) ಯೂನಿವರ್ಸಿಟಿಯಲ್ಲಿ ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರಕ್ಕೆ ಸಂಬಂಧಿಸಿದಂತೆ ನಡೆಯುತ್ತಿರುವ ವಿವಾದದ ನಡುವೆ, ಅವರನ್ನು "ರಾಷ್ಟ್ರಪ್ರೇಮಿ" ಎಂದು ಕರೆದಿರುವ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ...

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...