Homeಮುಖಪುಟಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

ಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಪೋಕ್ಸೋ ಪ್ರಕರಣದ ಆರೋಪಿ, ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ಜೂನ್‌ 5ರಂದು ಅಯೋಧ್ಯೆಯ ರಾಮಕಥಾ ಪಾರ್ಕ್‌ನಲ್ಲಿ ಸಂತರ ನೇತೃತ್ವದಲ್ಲಿ ರ್‍ಯಾಲಿಯನ್ನು ನಡೆಸಲು ಮುಂದಾಗಿದ್ದರು. ಅಯೋಧ್ಯೆಯ ಸಂತರ ಬೆಂಬಲದ ಹೊರತಾಗಿಯೂ ರ್‍ಯಾಲಿಯನ್ನು ಮುಂದೂಡಲಾಗಿದೆ.

ಈ ನಿರ್ಧಾರದ ಹಿಂದೆ ಅನೇಕ ಕಾರಣಗಳಿವೆ ಎಂದು ನಿರ್ಧರಿಸಬಹುದು ಮತ್ತು ಚರ್ಚಿಸಬಹುದು. ಸ್ವಾಮೀಜಿ ಮತ್ತು ರಾಜಕಾರಣಿಗಳ ಈ ಹೊಂದಾಣಿ ಇದೆ. ಧರ್ಮ, ಪಿತೃ ಪ್ರಧಾನ ಶಕ್ತಿಗಳ ನಡುವೆ ಒಂದು ರೀತಿಯ ಗೊಂದಲವಿದ್ದರೂ ನಿರಾಕರಿಸಲಾಗದ ಸಂಬಂಧ ಇದೆ ಎಂಬುದು ತಿಳಿಯುತ್ತದೆ.

ಪಿತೃಪ್ರಭುತ್ವ ಮತ್ತು ಧರ್ಮವು ಸಾಮಾನ್ಯವಾಗಿ ಜೊತೆಜೊತೆಯಲ್ಲಿ ಸಾಗುತ್ತದೆ ಎಂದು ತಿಳಿದಿರುವವರು ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ನರೇಂದ್ರ ಮೋದಿ ಸಂಪುಟದ ಮಹಿಳಾ ಮಂತ್ರಿಗಳು ಮೌನವಾಗಿರುವ ಕುರಿತು ಹೆಚ್ಚು ಆಶ್ಚರ್ಯಚಕಿತರಾಗಿದ್ದಾರೆ. ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ, ಧಾರ್ಮಿಕ ಆಚರಣೆಗಳಲ್ಲಿ ಮಹಿಳಾ ಸದಸ್ಯರು ಅತ್ಯಲ್ಪ ಪ್ರಾತಿನಿಧ್ಯ ಹೊಂದಿದ್ದರು. ಬಹುತೇಕ ಇಲ್ಲವೇ ಎನ್ನುವಷ್ಟು ಪಾಲ್ಗೊಂಡಿದ್ದರು.

ಎಲ್ಲಾ ವಲಯಗಳಿಂದ ಟೀಕೆಗಳನ್ನು ಎದುರಿಸುತ್ತಿದ್ದರೂ ಮೋದಿ ಸರ್ಕಾರವು ಬ್ರಿಜ್‌ ಭೂಷಣ್‌ ಅವರನ್ನು ಹೇಗೆ ಸಮರ್ಥಿಸಿಕೊಳ್ಳುತ್ತಿದೆ ಎಂದು ಹಲವರು ಆಶ್ಚರ್ಯ ಪಡುತ್ತಾರೆ. ಆದರೂ ಆರೋಪಿ ಬ್ರಿಜ್‌ ಎಷ್ಟು ‘ಅಸುರಕ್ಷಿತ’ನಾಗಿದ್ದನೆಂದರೆ- ಸ್ತ್ರೀಯರ ವಿರುದ್ಧ ಧಾರ್ಮಿಕ ಶಕ್ತಿ ಹೇಗೆ ನಿಂತಿದೆ ಎಂಬುದನ್ನು ಪ್ರದರ್ಶಿಸುವುದಕ್ಕೂ ಯೋಚಿಸಿ ಸ್ವಾಮೀಜಿಗಳ ಬೆಂಬಲವನ್ನು ಪಡೆಯಬೇಕಾಗಿದೆ.

ಬ್ರಿಜ್ ಭೂಷಣ್ ಸಿಂಗ್‌ನನ್ನು ಬೆಂಬಲಿಸುತ್ತಿರುವ ಸಂತರು

ಆರೋಪಿ ಬ್ರಿಜ್‌ಭೂಷಣ್ ಶರಣ್‌ಸಿಂಗ್‌ನನ್ನು ಬೆಂಬಲಿಸುತ್ತಿರುವವರಲ್ಲಿ, ಹಿಂದುತ್ವವಾದಿ ಮಣಿರಾಮ್ ದಾಸ್ ಶಿಬಿರದ ಮಹಂತ್ ಕಮಲನಯನ್ ದಾಸ್ ಮುಂಚೂಣಿಯಲ್ಲಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಉತ್ತರಾಧಿಕಾರಿ ಎಂದೇ ಇವರನ್ನು ಗುರುತಿಸಲಾಗಿದೆ.

ಬ್ರಿಜ್ ಪರ ಅಭಿಯಾನದಲ್ಲಿ ಹೆಚ್ಚು ಸಕ್ರಿಯವಾಗಿರುವವರಲ್ಲಿ ಮಹಂತ್ ಮಿಥಿಲೇಶ ನಂದಿನಿ ಶರಣ್ ಒಬ್ಬರು. 2012ರಲ್ಲಿ ಪರಿಚಯಿಸಲಾದ ಪೋಕ್ಸೋ ಕಾಯ್ದೆಯಲ್ಲಿ ದೋಷಗಳಿವೆ ಎಂದು ಇವರು ಮಾತನಾಡುತ್ತಿದ್ದಾರೆ. ಈ ಕಾಯ್ದೆಯು ‘ಚಾರಿತ್ರ್ಯ ಹರಣ ಮಾಡುತ್ತದೆ, ಅನೇಕ ಗಣ್ಯರನ್ನು ಮಾಧ್ಯಮಗಳ ವಿಚಾರಣೆ ಒಳಪಡಿಸುತ್ತದೆ.  ಕಾಯ್ದೆಯ ನಿಬಂಧನೆಗಳಿಗೆ ತಿದ್ದುಪಡಿ ತರಬೇಕು’ ಎಂದು ಒತ್ತಾಯಿಸುತ್ತಿದ್ದಾರೆ.

ಪೋಕ್ಸೊ ಕಾಯ್ದೆಯಡಿ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೊದಲು, ಮಹಂತ್ ಶರಣ್ ಅವರು ಪೋಕ್ಸೋ ಕಾನೂನಿನಲ್ಲಿ ದೋಷವನ್ನು ಕಂಡಿರಲಿಲ್ಲ. ಆದರೆ ಈಗ ಏನು ಹೇಳುತ್ತಾರೆ? “ಸಾಧು ಸಂತರು ಅಪ್ರಾಪ್ತ ವಯಸ್ಕರಿಗೆ ಆರ್ಶೀವದಿಸಲು ತಲೆ ಮೇಲೆ ಕೈ ಇಟ್ಟರೂ ಕೆಟ್ಟದ್ದಾಗಿ ಕಾನೂನು ಪರಿಗಣಿಸಬಹುದು. ಸಂತರ ವಿರುದ್ಧ ಕ್ರಮ ಕೈಗೊಳ್ಳಬಹುದು” ಎನ್ನಲು ಶುರು ಮಾಡಿದ್ದಾರೆ.

ಪ್ರತಿಷ್ಠಿತ ಕಾಮತಾ ಪ್ರಸಾದ್ ಸುಂದರ್ ಲಾಲ್ ಸಾಕೇತ್ ಪಿಜಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿ ನಾಯಕನಾಗಿ, ಪ್ರಬಲ ಹಿಂದುತ್ವದ ನಾಯಕನಾಗಿ ಬಂದವರು ಬ್ರಿಜ್ ಎಂದು ಈ ಭಾಗದಲ್ಲಿ ಮಾತನಾಡಿಕೊಳ್ಳಲಾಗುತ್ತಿದೆ. 1992ರಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬ್ರಿಜ್‌ ಆರೋಪಿಯಾಗಿದ್ದನು. “ಈ ಪ್ರಕರಣದಲ್ಲಿ ನನ್ನನ್ನು ಬಂಧಿಸಲಾಗಿತ್ತು” ಎಂದು ಬ್ರಿಜ್‌ ಹೆಮ್ಮೆಪಡುತ್ತಾನೆ.

ಇದನ್ನೂ ಓದಿರಿ: ಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

ಅಯೋಧ್ಯೆಯಲ್ಲಿನ ಸುದೀರ್ಘ ಒಡನಾಟದಿಂದಾಗಿ ಬ್ರಿಜ್‌ ಭೂಷಣ್‌ಗೆ ಋಣಿ ಎಂದು ಭಾವಿಸುವ ಜನರಿಗೆ ಕೊರತೆಯಿಲ್ಲ. ಆತನಿಗೆ ಆಪ್ತರು ಎಂದು ಹೇಳಿಕೊಳ್ಳುವ ಅನೇಕರು ಸಹ ಈಗ ಮುಂದೆ ಬರುತ್ತಿದ್ದಾರೆ. ಬ್ರಿಜ್‌ ಭೂಷಣ್‌ನ ಊರು ಸರಯುವಿನ ಒಂದು ಕಡೆ ಇದ್ದರೆ ಅಯೋಧ್ಯೆ ಇನ್ನೊಂದು ಬದಿಯಲ್ಲಿದೆ. ಆತ ಬಿಜೆಪಿಯ ಒಳಗೆ ಮತ್ತು ಹೊರಗೆ ಎರಡೂ ಕಡೆಗಳಲ್ಲಿ ಅನೇಕ ಹಿತೈಷಿಗಳನ್ನು ಹೊಂದಿದ್ದಾನೆ.

ಅಯೋಧ್ಯೆಯ ಸ್ವಾಮೀಜಿಗಳು ಸಿಂಗ್‌ಗೆ ಏಕೆ ಬೆಂಬಲ ನೀಡುತ್ತಿದ್ದಾರೆ? ಸ್ವಾಮೀಜಿಗಳು ಮತ್ತು ಬ್ರಿಜ್‌ ಇಬ್ಬರೂ ಪರಸ್ಪರ ಅವಲಂಬಿಸಿರುವುದರ ಪರಿಣಾಮ ಇದೆಂದು ಕೆಲವು ತಜ್ಞರು ಹೇಳುತ್ತಾರೆ. ಏಕೆಂದರೆ ಅವರು ಪರಸ್ಪರ ಆಶ್ರಯವನ್ನು ಪಡೆಯುತ್ತಾರೆ ಮತ್ತು ಅಗತ್ಯವಿದ್ದಾಗ ಪರಸ್ಪರ ಪ್ರಭಾವದ ಲಾಭವನ್ನೂ ಪಡೆಯುತ್ತಾರೆ.

ಬ್ರಿಜ್‌ಗೆ ಬೆಂಬಲ ನೀಡಿರುವವರನ್ನು ‘ಸಂತರು’ ಎಂದು ಮಾಧ್ಯಮಗಳು ಉಲ್ಲೇಖಿಸುತ್ತಿರುವುದಕ್ಕೆ ಭಾರತೀಯ  ಕಮ್ಯುನಿಸ್ಟ್ ಪಕ್ಷದ ಸ್ಥಳೀಯ ಮುಖಂಡ ಸೂರ್ಯಕಾಂತ್ ಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಇವರನ್ನು ಸಂತರು ಎಂದು ಬಿಂಬಿಸುವ ಬದಲು ಹುಸಿ ಸಂತರು ಎಂದು ಏಕೆ ಉಲ್ಲೇಖಿಸುವುದಿಲ್ಲ”  ಎಂದು ಪ್ರಶ್ನಿಸಿದ್ದಾರೆ. “ರಾಮಚರಿತಮಾನಸದಲ್ಲಿ ಗೋಸ್ವಾಮಿ ತುಳಸಿದಾಸರು ಪಟ್ಟಿ ಮಾಡಿರುವ ನಿಜವಾದ ಸಂತರ ಗುಣಗಳು ಮತ್ತು ಗುಣಲಕ್ಷಣಗಳ ಬಗ್ಗೆ ಇವರು ಓದಿಲ್ಲ” ಎಂದು ಟೀಕಿಸಿದ್ದಾರೆ.

ಮಾಹಿತಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...