Homeಮುಖಪುಟಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

ಪೋಕ್ಸೋ ಆರೋಪಿ ಬ್ರಿಜ್‌ಭೂಷಣ್‌ ಬೆಂಬಲಕ್ಕೆ ‘ಸಂತರು’ ನಿಂತಿರುವುದೇಕೆ?

- Advertisement -
- Advertisement -

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಮತ್ತು ಪೋಕ್ಸೋ ಪ್ರಕರಣದ ಆರೋಪಿ, ಬಿಜೆಪಿ ಸಂಸದ, ಭಾರತೀಯ ಕುಸ್ತಿ ಫೆಡರೇಷನ್‌ ಅಧ್ಯಕ್ಷ ಬ್ರಿಜ್‌ಭೂಷಣ್ ಶರಣ್ ಸಿಂಗ್ ಅವರು ಜೂನ್‌ 5ರಂದು ಅಯೋಧ್ಯೆಯ ರಾಮಕಥಾ ಪಾರ್ಕ್‌ನಲ್ಲಿ ಸಂತರ ನೇತೃತ್ವದಲ್ಲಿ ರ್‍ಯಾಲಿಯನ್ನು ನಡೆಸಲು ಮುಂದಾಗಿದ್ದರು. ಅಯೋಧ್ಯೆಯ ಸಂತರ ಬೆಂಬಲದ ಹೊರತಾಗಿಯೂ ರ್‍ಯಾಲಿಯನ್ನು ಮುಂದೂಡಲಾಗಿದೆ.

ಈ ನಿರ್ಧಾರದ ಹಿಂದೆ ಅನೇಕ ಕಾರಣಗಳಿವೆ ಎಂದು ನಿರ್ಧರಿಸಬಹುದು ಮತ್ತು ಚರ್ಚಿಸಬಹುದು. ಸ್ವಾಮೀಜಿ ಮತ್ತು ರಾಜಕಾರಣಿಗಳ ಈ ಹೊಂದಾಣಿ ಇದೆ. ಧರ್ಮ, ಪಿತೃ ಪ್ರಧಾನ ಶಕ್ತಿಗಳ ನಡುವೆ ಒಂದು ರೀತಿಯ ಗೊಂದಲವಿದ್ದರೂ ನಿರಾಕರಿಸಲಾಗದ ಸಂಬಂಧ ಇದೆ ಎಂಬುದು ತಿಳಿಯುತ್ತದೆ.

ಪಿತೃಪ್ರಭುತ್ವ ಮತ್ತು ಧರ್ಮವು ಸಾಮಾನ್ಯವಾಗಿ ಜೊತೆಜೊತೆಯಲ್ಲಿ ಸಾಗುತ್ತದೆ ಎಂದು ತಿಳಿದಿರುವವರು ಕುಸ್ತಿಪಟುಗಳ ಪ್ರತಿಭಟನೆಯ ಬಗ್ಗೆ ನರೇಂದ್ರ ಮೋದಿ ಸಂಪುಟದ ಮಹಿಳಾ ಮಂತ್ರಿಗಳು ಮೌನವಾಗಿರುವ ಕುರಿತು ಹೆಚ್ಚು ಆಶ್ಚರ್ಯಚಕಿತರಾಗಿದ್ದಾರೆ. ಹೊಸ ಸಂಸತ್ ಭವನದ ಉದ್ಘಾಟನಾ ಸಮಾರಂಭದಲ್ಲಿ, ಧಾರ್ಮಿಕ ಆಚರಣೆಗಳಲ್ಲಿ ಮಹಿಳಾ ಸದಸ್ಯರು ಅತ್ಯಲ್ಪ ಪ್ರಾತಿನಿಧ್ಯ ಹೊಂದಿದ್ದರು. ಬಹುತೇಕ ಇಲ್ಲವೇ ಎನ್ನುವಷ್ಟು ಪಾಲ್ಗೊಂಡಿದ್ದರು.

ಎಲ್ಲಾ ವಲಯಗಳಿಂದ ಟೀಕೆಗಳನ್ನು ಎದುರಿಸುತ್ತಿದ್ದರೂ ಮೋದಿ ಸರ್ಕಾರವು ಬ್ರಿಜ್‌ ಭೂಷಣ್‌ ಅವರನ್ನು ಹೇಗೆ ಸಮರ್ಥಿಸಿಕೊಳ್ಳುತ್ತಿದೆ ಎಂದು ಹಲವರು ಆಶ್ಚರ್ಯ ಪಡುತ್ತಾರೆ. ಆದರೂ ಆರೋಪಿ ಬ್ರಿಜ್‌ ಎಷ್ಟು ‘ಅಸುರಕ್ಷಿತ’ನಾಗಿದ್ದನೆಂದರೆ- ಸ್ತ್ರೀಯರ ವಿರುದ್ಧ ಧಾರ್ಮಿಕ ಶಕ್ತಿ ಹೇಗೆ ನಿಂತಿದೆ ಎಂಬುದನ್ನು ಪ್ರದರ್ಶಿಸುವುದಕ್ಕೂ ಯೋಚಿಸಿ ಸ್ವಾಮೀಜಿಗಳ ಬೆಂಬಲವನ್ನು ಪಡೆಯಬೇಕಾಗಿದೆ.

ಬ್ರಿಜ್ ಭೂಷಣ್ ಸಿಂಗ್‌ನನ್ನು ಬೆಂಬಲಿಸುತ್ತಿರುವ ಸಂತರು

ಆರೋಪಿ ಬ್ರಿಜ್‌ಭೂಷಣ್ ಶರಣ್‌ಸಿಂಗ್‌ನನ್ನು ಬೆಂಬಲಿಸುತ್ತಿರುವವರಲ್ಲಿ, ಹಿಂದುತ್ವವಾದಿ ಮಣಿರಾಮ್ ದಾಸ್ ಶಿಬಿರದ ಮಹಂತ್ ಕಮಲನಯನ್ ದಾಸ್ ಮುಂಚೂಣಿಯಲ್ಲಿದ್ದಾರೆ. ಶ್ರೀರಾಮ ಜನ್ಮಭೂಮಿ ತೀರ್ಥ ಕ್ಷೇತ್ರ ಟ್ರಸ್ಟ್‌ನ ಅಧ್ಯಕ್ಷರಾದ ಮಹಂತ್ ನೃತ್ಯ ಗೋಪಾಲ್ ದಾಸ್ ಅವರ ಉತ್ತರಾಧಿಕಾರಿ ಎಂದೇ ಇವರನ್ನು ಗುರುತಿಸಲಾಗಿದೆ.

ಬ್ರಿಜ್ ಪರ ಅಭಿಯಾನದಲ್ಲಿ ಹೆಚ್ಚು ಸಕ್ರಿಯವಾಗಿರುವವರಲ್ಲಿ ಮಹಂತ್ ಮಿಥಿಲೇಶ ನಂದಿನಿ ಶರಣ್ ಒಬ್ಬರು. 2012ರಲ್ಲಿ ಪರಿಚಯಿಸಲಾದ ಪೋಕ್ಸೋ ಕಾಯ್ದೆಯಲ್ಲಿ ದೋಷಗಳಿವೆ ಎಂದು ಇವರು ಮಾತನಾಡುತ್ತಿದ್ದಾರೆ. ಈ ಕಾಯ್ದೆಯು ‘ಚಾರಿತ್ರ್ಯ ಹರಣ ಮಾಡುತ್ತದೆ, ಅನೇಕ ಗಣ್ಯರನ್ನು ಮಾಧ್ಯಮಗಳ ವಿಚಾರಣೆ ಒಳಪಡಿಸುತ್ತದೆ.  ಕಾಯ್ದೆಯ ನಿಬಂಧನೆಗಳಿಗೆ ತಿದ್ದುಪಡಿ ತರಬೇಕು’ ಎಂದು ಒತ್ತಾಯಿಸುತ್ತಿದ್ದಾರೆ.

ಪೋಕ್ಸೊ ಕಾಯ್ದೆಯಡಿ ಬ್ರಿಜ್‌ಭೂಷಣ್‌ ಶರಣ್‌ ಸಿಂಗ್ ವಿರುದ್ಧ ಎಫ್‌ಐಆರ್‌ ದಾಖಲಿಸುವ ಮೊದಲು, ಮಹಂತ್ ಶರಣ್ ಅವರು ಪೋಕ್ಸೋ ಕಾನೂನಿನಲ್ಲಿ ದೋಷವನ್ನು ಕಂಡಿರಲಿಲ್ಲ. ಆದರೆ ಈಗ ಏನು ಹೇಳುತ್ತಾರೆ? “ಸಾಧು ಸಂತರು ಅಪ್ರಾಪ್ತ ವಯಸ್ಕರಿಗೆ ಆರ್ಶೀವದಿಸಲು ತಲೆ ಮೇಲೆ ಕೈ ಇಟ್ಟರೂ ಕೆಟ್ಟದ್ದಾಗಿ ಕಾನೂನು ಪರಿಗಣಿಸಬಹುದು. ಸಂತರ ವಿರುದ್ಧ ಕ್ರಮ ಕೈಗೊಳ್ಳಬಹುದು” ಎನ್ನಲು ಶುರು ಮಾಡಿದ್ದಾರೆ.

ಪ್ರತಿಷ್ಠಿತ ಕಾಮತಾ ಪ್ರಸಾದ್ ಸುಂದರ್ ಲಾಲ್ ಸಾಕೇತ್ ಪಿಜಿ ಕಾಲೇಜಿನ ವಿದ್ಯಾರ್ಥಿ ಸಂಘಟನೆಯ ವಿದ್ಯಾರ್ಥಿ ನಾಯಕನಾಗಿ, ಪ್ರಬಲ ಹಿಂದುತ್ವದ ನಾಯಕನಾಗಿ ಬಂದವರು ಬ್ರಿಜ್ ಎಂದು ಈ ಭಾಗದಲ್ಲಿ ಮಾತನಾಡಿಕೊಳ್ಳಲಾಗುತ್ತಿದೆ. 1992ರಲ್ಲಿ ಬಾಬರಿ ಮಸೀದಿ ಧ್ವಂಸ ಪ್ರಕರಣದಲ್ಲಿ ಬ್ರಿಜ್‌ ಆರೋಪಿಯಾಗಿದ್ದನು. “ಈ ಪ್ರಕರಣದಲ್ಲಿ ನನ್ನನ್ನು ಬಂಧಿಸಲಾಗಿತ್ತು” ಎಂದು ಬ್ರಿಜ್‌ ಹೆಮ್ಮೆಪಡುತ್ತಾನೆ.

ಇದನ್ನೂ ಓದಿರಿ: ಕುಸ್ತಿಪಟುಗಳ ಪ್ರತಿಭಟನೆಗೆ ಬಿಜೆಪಿ ಸಂಸದೆಯರಾದ ಮೇನಕಾ ಗಾಂಧಿ, ಪ್ರೀತಮ್ ಮುಂಡೆ ಬೆಂಬಲ

ಅಯೋಧ್ಯೆಯಲ್ಲಿನ ಸುದೀರ್ಘ ಒಡನಾಟದಿಂದಾಗಿ ಬ್ರಿಜ್‌ ಭೂಷಣ್‌ಗೆ ಋಣಿ ಎಂದು ಭಾವಿಸುವ ಜನರಿಗೆ ಕೊರತೆಯಿಲ್ಲ. ಆತನಿಗೆ ಆಪ್ತರು ಎಂದು ಹೇಳಿಕೊಳ್ಳುವ ಅನೇಕರು ಸಹ ಈಗ ಮುಂದೆ ಬರುತ್ತಿದ್ದಾರೆ. ಬ್ರಿಜ್‌ ಭೂಷಣ್‌ನ ಊರು ಸರಯುವಿನ ಒಂದು ಕಡೆ ಇದ್ದರೆ ಅಯೋಧ್ಯೆ ಇನ್ನೊಂದು ಬದಿಯಲ್ಲಿದೆ. ಆತ ಬಿಜೆಪಿಯ ಒಳಗೆ ಮತ್ತು ಹೊರಗೆ ಎರಡೂ ಕಡೆಗಳಲ್ಲಿ ಅನೇಕ ಹಿತೈಷಿಗಳನ್ನು ಹೊಂದಿದ್ದಾನೆ.

ಅಯೋಧ್ಯೆಯ ಸ್ವಾಮೀಜಿಗಳು ಸಿಂಗ್‌ಗೆ ಏಕೆ ಬೆಂಬಲ ನೀಡುತ್ತಿದ್ದಾರೆ? ಸ್ವಾಮೀಜಿಗಳು ಮತ್ತು ಬ್ರಿಜ್‌ ಇಬ್ಬರೂ ಪರಸ್ಪರ ಅವಲಂಬಿಸಿರುವುದರ ಪರಿಣಾಮ ಇದೆಂದು ಕೆಲವು ತಜ್ಞರು ಹೇಳುತ್ತಾರೆ. ಏಕೆಂದರೆ ಅವರು ಪರಸ್ಪರ ಆಶ್ರಯವನ್ನು ಪಡೆಯುತ್ತಾರೆ ಮತ್ತು ಅಗತ್ಯವಿದ್ದಾಗ ಪರಸ್ಪರ ಪ್ರಭಾವದ ಲಾಭವನ್ನೂ ಪಡೆಯುತ್ತಾರೆ.

ಬ್ರಿಜ್‌ಗೆ ಬೆಂಬಲ ನೀಡಿರುವವರನ್ನು ‘ಸಂತರು’ ಎಂದು ಮಾಧ್ಯಮಗಳು ಉಲ್ಲೇಖಿಸುತ್ತಿರುವುದಕ್ಕೆ ಭಾರತೀಯ  ಕಮ್ಯುನಿಸ್ಟ್ ಪಕ್ಷದ ಸ್ಥಳೀಯ ಮುಖಂಡ ಸೂರ್ಯಕಾಂತ್ ಪಾಂಡೆ ಆಕ್ಷೇಪ ವ್ಯಕ್ತಪಡಿಸಿದ್ದಾರೆ. “ಇವರನ್ನು ಸಂತರು ಎಂದು ಬಿಂಬಿಸುವ ಬದಲು ಹುಸಿ ಸಂತರು ಎಂದು ಏಕೆ ಉಲ್ಲೇಖಿಸುವುದಿಲ್ಲ”  ಎಂದು ಪ್ರಶ್ನಿಸಿದ್ದಾರೆ. “ರಾಮಚರಿತಮಾನಸದಲ್ಲಿ ಗೋಸ್ವಾಮಿ ತುಳಸಿದಾಸರು ಪಟ್ಟಿ ಮಾಡಿರುವ ನಿಜವಾದ ಸಂತರ ಗುಣಗಳು ಮತ್ತು ಗುಣಲಕ್ಷಣಗಳ ಬಗ್ಗೆ ಇವರು ಓದಿಲ್ಲ” ಎಂದು ಟೀಕಿಸಿದ್ದಾರೆ.

ಮಾಹಿತಿ ಕೃಪೆ: ದಿ ವೈರ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....