Homeಕರೋನಾ ತಲ್ಲಣ2,250 ಕೋಟಿ ರೂ ಖರ್ಚು ಮಾಡಿ ಮೋದಿ ಸರ್ಕಾರ ಖರೀದಿಸಿದ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲವೇಕೆ?

2,250 ಕೋಟಿ ರೂ ಖರ್ಚು ಮಾಡಿ ಮೋದಿ ಸರ್ಕಾರ ಖರೀದಿಸಿದ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲವೇಕೆ?

- Advertisement -
- Advertisement -

ದೋಷಪೂರಿತ ಖರೀದಿ ಪ್ರಕ್ರಿಯೆಯಿಂದಾಗಿ ಆಸ್ಪತ್ರೆಗಳು ಅಗ್ಗದ ವೆಂಟಿಲೇಟರ್‌ಗಳನ್ನು ಪಡೆಯುತ್ತಿವೆ. ಅವುಗಳಲ್ಲಿ ಹಲವು ನಿರುಪಯುಕ್ತವಾಗಿವೆ ಎಂದು ಬಿಜೆಪಿ ಆಡಳಿತದ ರಾಜ್ಯಗಳಲ್ಲಿಯೂ ವೈದ್ಯರು ಹೇಳುತ್ತಿದ್ದಾರೆ ಎಂದು ದಿ ಸ್ಕ್ರೋಲ್ ಪೋರ್ಟಲ್ ತನಿಖಾ ವರದಿ ಹೇಳುತ್ತಿದೆ.

ಕೋವಿಡ್ ಪ್ರಕರಣಗಳು ಮತ್ತು ಸಾವುಗಳಲ್ಲಿ ಮಹಾರಾಷ್ಟ್ರವು ಭೀಕರ ಏರಿಕೆ ಕಂಡ ಏಪ್ರಿಲ್ ಮೂರನೇ ವಾರದಲ್ಲಿ ಔರಂಗಾಬಾದ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ 150 ವೆಂಟಿಲೇಟರ್‌ಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಕಳಿಸಿತ್ತು.

ಆಸ್ಪತ್ರೆಯು ಯಂತ್ರಗಳನ್ನು ಮರಾಠವಾಡ ಪ್ರದೇಶದ ಇತರ ಜಿಲ್ಲಾ ಮತ್ತು ಖಾಸಗಿ ಆಸ್ಪತ್ರೆಗಳಿಗೆ ವಿತರಿಸಿತು. ಆದರೆ ಕೆಲವೇ ದಿನಗಳಲ್ಲಿ, ಅನೇಕ ಆಸ್ಪತ್ರೆಗಳು ಅವನ್ನು ವಾಪಸ್ ಕಳುಹಿಸಿದವು. ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲ, ಕಳಪೆಯಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ನಿರ್ಣಾಯಕ ಆರೈಕೆ ಚಿಕಿತ್ಸೆಯಲ್ಲಿ ಪರಿಣತಿ ಹೊಂದಿರುವ ಮತ್ತು ಈ ಯಂತ್ರಗಳನ್ನು ನಿರ್ವಹಿಸುವ ಈ ಆಸ್ಪತ್ರೆಗಳ ಎಂಟು ವೈದ್ಯರ ತಂಡವು ಸಿದ್ಧಪಡಿಸಿದ ವರದಿಯ ಪ್ರಕಾರ, “ವೆಂಟಿಲೇಟರ್‌ಗಳನ್ನು ಸ್ವಿಚ್ ಆನ್ ಮಾಡಿದ ಕೆಲವೇ ಗಂಟೆಗಳಲ್ಲಿ ರೋಗಿಗಳು ಉಸಿರಾಟದ ತೊಂದರೆ ಮತ್ತು ಸಂಬಂಧಿತ ರೋಗಲಕ್ಷಣಗಳ ಬಗ್ಗೆ ದೂರು ನೀಡಲು ಪ್ರಾರಂಭಿಸಿದರು….’
ಅವುಗಳನ್ನು ತಯಾರಿಸಿದ ಜ್ಯೋತಿ ಸಿಎನ್‌ಸಿಯ ಎಂಜಿನಿಯರ್‌ಗಳ ತಂಡವು ಮೇ 14 ರಂದು ಕೆಲವು ಯಂತ್ರಗಳ ಸರ್ವಿಸ್ ಮಾಡಿತು. ಆದರೆ ವೈದ್ಯರ ವರದಿಯನ್ನು ಉಲ್ಲೇಖಿಸಿ ಮೇ 28ರಂದು ಬಾಂಬೆ ಹೈಕೋರ್ಟ್ “ಈ ವೆಂಟಿಲೇಟರ್‌ಗಳು ರಾತ್ರಿಯಿಡೀ ಚೆನ್ನಾಗಿ ಕೆಲಸ ಮಾಡಿದವು. ಆದರೆ ಮರುದಿನ ಮಧ್ಯಾಹ್ನದ ಹೊತ್ತಿಗೆ ರೋಗಿಗಳು ಕಳಪೆ ಆಮ್ಲಜನಕದ ಬಗ್ಗೆ ದೂರು ನೀಡಿದರು ಮತ್ತು ಚಡಪಡಿಕೆಯ ಲಕ್ಷಣಗಳನ್ನು ತೋರಿಸಿದರು…..’ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.

ಇಲ್ಲಿವರೆಗೆ, ತಲುಪಿದ 150 ವೆಂಟಿಲೇಟರ್‌ಗಳಲ್ಲಿ 117 ಬಳಕೆಯಾಗುತ್ತಿಲ್ಲ ಎಂದು ಔರಂಗಾಬಾದ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಗಳು ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದು, ಉಳಿದ 33 ವೆಂಟಿಲೇಟರ್‌ಗಳನ್ನು ಬಳಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ತಿಳಿಸಿದೆ.

ಮಂಡ್ಯ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಕೆಯಾಗದೆ ನಿಂತಿರುವ ವೆಂಟಿಲೇಟರ್‌ಗಳು

“ಅವುಗಳನ್ನು ಬಳಸುವುದು ತುಂಬಾ ಅಪಾಯಕಾರಿ” ಎಂದು ಔರಂಗಾಬಾದ್‌ನಿಂದ 25 ವೆಂಟಿಲೇಟರ್‌ಗಳನ್ನು ಪಡೆದ ಬೀಡ್ ಜಿಲ್ಲೆಯ ಸುಕ್ರೆಸ್ವಾಮಿ ರಾಮಾನಂದ್ ತೀರ್ಥ್ ಗ್ರಾಮೀಣ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶಿವಾಜಿ ಹೇಳಿದರು..

ಕಳೆದ ವರ್ಷ ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ, 60,000 ಕ್ಕೂ ಹೆಚ್ಚು ವೆಂಟಿಲೇಟರ್‌ಗಳಿಗೆ ಕೇಂದ್ರವು ಸುಮಾರು 2,350 ಕೋಟಿ ರೂ.ಗಳ ಆದೇಶಗಳನ್ನು ನೀಡಿತ್ತು, ಈ ಪೈಕಿ 2,000 ಕೋಟಿ ರೂ. ವೆಚ್ಚದ 50,000 ವೆಂಟಿಲೇಟರ್‌ಗಳಿಗೆ ಪಿಎಂ-ಕೇರ್ಸ್ ನಿಧಿ ಮೂಲಕ ಹಣ ನೀಡಲಾಯಿತು.

ಮಹಾರಾಷ್ಟ್ರದ ಹೊರತಾಗಿ, ರಾಜಸ್ಥಾನ, ಪಂಜಾಬ್, ಜಾರ್ಖಂಡ್ ಮತ್ತು ಛತ್ತೀಸಗಡ ರಾಜ್ಯಗಳು ಈ ವೆಂಟಿಲೇಟರ್‌ಗಳ ಬಗ್ಗೆ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿವೆ.

ಆದರೆ, ಕೇಂದ್ರವು ಈ ವೆಂಟಿಲೇಟರ್‌ಗಳನ್ನು ಮತ್ತೆ ಮತ್ತೆ ಸಮರ್ಥಿಸಿಕೊಂಡಿದೆ. ಈ ಸಮಸ್ಯೆ ಸಾಧನಗಳಲ್ಲಿಲ್ಲ, ರಾಜ್ಯಗಳು ನಿರ್ವಹಿಸುವಲ್ಲಿ ವಿಫಲವಾಗಿವೆ ಎಂದು ಅದು ಹೇಳುತ್ತ ಬಂದಿದೆ.
ಟೀಕೆಗಳು ಜೋರಾಗಿ ಬರುತ್ತಿದ್ದಂತೆ, ಮೇ 15 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವೆಂಟಿಲೇಟರ್‌ಗಳ ಲೆಕ್ಕಪರಿಶೋಧನೆಗೆ ಆದೇಶಿಸಿದರು. ಆದರೆ ಅವರ ಹೇಳಿಕೆ, ಆರೋಗ್ಯ ಕಾರ್ಯಕರ್ತರಿಗೆ ವೆಂಟಿಲೇಟರ್‌ಗಳನ್ನು ನಿರ್ವಹಿಸುವ ತರಬೇತಿ ನೀಡಬೇಕು’ ಎಂಬ ಅರ್ಥದಲ್ಲಿದೆ.

ಸ್ಕ್ರೋಲ್.ಇನ್ ಹಲವಾರು ವೈದ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ವೆಂಟಿಲೇಟರ್ ತಯಾರಕರೊಂದಿಗೆ ಮಾತನಾಡಿದೆ. ನಮಗೆ ದೊರೆತ ಮಾಹಿತಿ ಇಲ್ಲಿದೆ:

ಮೊದಲನೆಯದಾಗಿ, ವೆಂಟಿಲೇಟರ್ ಸಮಸ್ಯೆ ಪ್ರತಿಪಕ್ಷಗಳು ನಡೆಸುವ ರಾಜ್ಯಗಳಿಗೆ ಸೀಮಿತವಾಗಿಲ್ಲ. ಭಾರತೀಯ ಜನತಾ ಪಕ್ಷದ ಆಡಳಿತದಲ್ಲಿರುವ ರಾಜ್ಯಗಳಲ್ಲೂ ಇದೆ. ಆದರೆ ಅವು ಬಹಿರಂಗವಾಗಿ ಇದನ್ನು ಹೇಳುತ್ತಿಲ್ಲ. ಆದರೆ ಅಲ್ಲಿನ ವೈದ್ಯರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಆಡಳಿತದಲ್ಲಿರುವ ಮೂರು ರಾಜ್ಯಗಳಾದ ಉತ್ತರ ಪ್ರದೇಶ, ಗುಜರಾತ್ ಮತ್ತು ಗೋವಾ, ತಮ್ಮ ಆಸ್ಪತ್ರೆಗಳಿಗೆ ಸರಬರಾಜು ಮಾಡಿದ ಕೆಲವು ವೆಂಟಿಲೇಟರ್‌ಗಳು ಯಾವುದೇ ಉದ್ದೇಶವನ್ನು ಪೂರೈಸಲಿಲ್ಲ ಎಂದು ಸ್ಕ್ರೋಲ್.ಇನ್‌ಗೆ ತಿಳಿಸಿವೆ.

ಎರಡನೆಯದಾಗಿ, ವೆಂಟಿಲೇಟರ್‌ಗಳ ಕಾರ್ಯಕ್ಷಮತೆ ಒಂದು ಉತ್ಪಾದಕರಿಂದ ಇನ್ನೊಂದಕ್ಕೆ ಹೆಚ್ಚು ಬದಲಾಗುತ್ತದೆ ಎಂದು ಅವುಗಳನ್ನು ನಿರ್ವಹಿಸಿದ ವೈದ್ಯರು ಹೇಳಿದರು. ಎರಡು ಖಾಸಗಿ ಕಂಪನಿಗಳ ಮಾದರಿಗಳು ವಿಶೇಷವಾಗಿ ಟೀಕೆಗೆ ಗುರುಯಾಗಿವೆ.

ಒಂದು ನೋಯ್ಡಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಆಗ್ವಾ. ಇನ್ನೊಂದು, ರಾಜ್‌ಕೋಟ್ ಮೂಲದ ಜ್ಯೋತಿ ಸಿಎನ್‌ಸಿ. 2019ರವರೆಗೆ, ಈ ಕಂಪನಿ ಪ್ರಮುಖ ಷೇರುದಾರರಲ್ಲಿ ಒಬ್ಬರಾಗಿದ್ದ ಉದ್ಯಮಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರಿನೊಂದಿಗೆ ಮೊನೊಗ್ರಾಮ್ ಮಾಡಿದ ದುಬಾರಿ ಸ್ಯೂಟ್ ಅನ್ನು ಉಡುಗೊರೆಯಾಗಿ ನೀಡಿದ್ದರು.

ಮೂರನೆಯದಾಗಿ, ಕೇಂದ್ರ ಸರ್ಕಾರಕ್ಕೆ ವೆಂಟಿಲೇಟರ್‌ಗಳನ್ನು ಪೂರೈಸಿದ ಏಳು ಕಂಪನಿಗಳಲ್ಲಿ, ಹೆಚ್ಚು ಅನುಭವವನ್ನು ಹೊಂದಿರುವ ಕಂಪನಿಯು –(ಇದು ಎರಡು ದಶಕಗಳಿಂದ ವೆಂಟಿಲೇಟರ್‌ಗಳನ್ನು ತಯಾರಿಸುತ್ತಿದೆ) – ಕನಿಷ್ಠ ಆರ್ಡರ್‌ಗಳನ್ನು ಪಡೆದಿದೆ.

ಪ್ರಸ್ತುತ ಬಿಕ್ಕಟ್ಟು ಕೇಂದ್ರ ಸರ್ಕಾರ ಕಳೆದ ವರ್ಷ ತೆಗೆದುಕೊಂಡ ನಿರ್ಧಾರಗಳಲ್ಲಿ ಬೇರೂರಿದೆ.
ವೆಂಟಿಲೇಟರ್‌ಗಳನ್ನು ತಯಾರಿಸುವಲ್ಲಿ ಪೂರ್ವ ಅನುಭವವಿಲ್ಲದ ಕಂಪನಿಗಳಿಗೆ ಆರ್ಡರ್ ನೀಡಿತು. ಏಳು ಕಂಪೆನಿಗಳಲ್ಲಿ ಎರಡು – ಸರ್ಕಾರ ನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ಅಲೈಡ್ ಮೆಡಿಕಲ್ ಲಿಮಿಟೆಡ್ ಸಹಭಾಗಿತ್ವ ಹೊಂದಿರುವ ಸ್ಕನ್ರೆ- ವೆಂಟಿಲೇಟರ್‌ಗಳನ್ನು ತಯಾರಿಸುವ ಬಗ್ಗೆ ಯಾವುದೇ ಗಮನಾರ್ಹ ದಾಖಲೆಯನ್ನು ಹೊಂದಿಲ್ಲ.

ಖರೀದಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇಲ್ಲ ಎಂದು ಅದರಲ್ಲಿ ಭಾಗವಹಿಸಿದ ಕಂಪನಿಗಳ ಅಧಿಕಾರಿಗಳು ಹೇಳುತ್ತಾರೆ. ಉದಾಹರಣೆಗೆ, ಅಲೈಡ್ ಮೆಡಿಕಲ್ ಲಿಮಿಟೆಡ್‌ಗೆ ಹೆಚ್ಚಿನ ಅನುಭವವಿದ್ದರೂ ಸಹ, ಒಂದು ಸಣ್ಣ ಪರಿಮಾಣವನ್ನು ನೀಡಲಾಯಿತು. ಕೇವಲ 350 ವೆಂಟಿಲೇಟರ್‌ಗಳ ಆರ್ಡರ್ ನೀಡಲಾಗಿತು. ಇದಕ್ಕೆ ವ್ಯತಿರಿಕ್ತವಾಗಿ, ವೆಂಟಿಲೇಟರ್ ತಯಾರಿಕೆಯಲ್ಲಿ ಯಾವುದೇ ಅನುಭವ ಇಲ್ಲದ ಅಗ್ವಾ ಮತ್ತು ಜ್ಯೋತಿ ಸಿಎನ್‌ಸಿ ಕಂಪನಿಗಳಿಗೆ ಕ್ರಮವಾಗಿ 10,000 ಮತ್ತು 5,000 ಯುನಿಟ್‌ಗಳ ಆರ್ಡರ್‌ಗಳನ್ನು ನೀಡಲಾಗಿತು!

ಈ ಆರೋಪಗಳಿಗೆ ಪ್ರತಿಕ್ರಿಯೆ ಕೋರುವ ಪ್ರಶ್ನೆಗಳಿಗೆ ಬಹುತೇಕ ಕಂಪನಿಗಳು ಪ್ರತಿಕ್ರಿಯಿಸಲಿಲ್ಲ.

(ಕೃಪೆ: ಸ್ಕ್ರೋಲ್.ಇನ್)


ಇದನ್ನೂ ಓದಿ; ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಳಪೆ ಗುಣಮಟ್ಟದ Ventilator ಖರೀದಿಯ ಬಗ್ಗೆ ವಿಚಾರಣೆ ಆಗಬೇಕೆಂದು ಯಾರೂ ಒತ್ತಾಯಿಸುತ್ತಿಲ್ಲವಲ್ಲ ಏಕೆ?
    ವಿಷಯ ಇಷ್ಟೊಂದು ಗಂಭೀರವಾಗಿದ್ದರೊ ಸಹ ವಿರೋಧ ಪಕ್ಷದವರಾಗಲೀ, ಬುದ್ಧಿ ಜೀವಿ ಗಳಾಗಲಿ ಅಥವಾ ಪತ್ರಕರ್ತರು ಸುಮ್ಮನಿರುವದು ಯಾಕೆ?
    ಯಾರಾದರೂ ನ್ಯಾಯಾಲಯದ ಕದ ತತ್ತಬೇಕಿತ್ತಲ್ಲವೇ…
    ಇಂತಹ ಕೆಲವೊಂದು ಸರಳ ಸತ್ಯಗಳು ನಮ್ಮಂಥಹ ಜನಸಾಮಾನ್ಯರನ್ನು ಗೊಂದಲಕ್ಕೇ ಈಡು ಮಾಡುತ್ತಾವೆ.

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...