Homeಕರೋನಾ ತಲ್ಲಣ2,250 ಕೋಟಿ ರೂ ಖರ್ಚು ಮಾಡಿ ಮೋದಿ ಸರ್ಕಾರ ಖರೀದಿಸಿದ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲವೇಕೆ?

2,250 ಕೋಟಿ ರೂ ಖರ್ಚು ಮಾಡಿ ಮೋದಿ ಸರ್ಕಾರ ಖರೀದಿಸಿದ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲವೇಕೆ?

- Advertisement -
- Advertisement -

ದೋಷಪೂರಿತ ಖರೀದಿ ಪ್ರಕ್ರಿಯೆಯಿಂದಾಗಿ ಆಸ್ಪತ್ರೆಗಳು ಅಗ್ಗದ ವೆಂಟಿಲೇಟರ್‌ಗಳನ್ನು ಪಡೆಯುತ್ತಿವೆ. ಅವುಗಳಲ್ಲಿ ಹಲವು ನಿರುಪಯುಕ್ತವಾಗಿವೆ ಎಂದು ಬಿಜೆಪಿ ಆಡಳಿತದ ರಾಜ್ಯಗಳಲ್ಲಿಯೂ ವೈದ್ಯರು ಹೇಳುತ್ತಿದ್ದಾರೆ ಎಂದು ದಿ ಸ್ಕ್ರೋಲ್ ಪೋರ್ಟಲ್ ತನಿಖಾ ವರದಿ ಹೇಳುತ್ತಿದೆ.

ಕೋವಿಡ್ ಪ್ರಕರಣಗಳು ಮತ್ತು ಸಾವುಗಳಲ್ಲಿ ಮಹಾರಾಷ್ಟ್ರವು ಭೀಕರ ಏರಿಕೆ ಕಂಡ ಏಪ್ರಿಲ್ ಮೂರನೇ ವಾರದಲ್ಲಿ ಔರಂಗಾಬಾದ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ 150 ವೆಂಟಿಲೇಟರ್‌ಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಕಳಿಸಿತ್ತು.

ಆಸ್ಪತ್ರೆಯು ಯಂತ್ರಗಳನ್ನು ಮರಾಠವಾಡ ಪ್ರದೇಶದ ಇತರ ಜಿಲ್ಲಾ ಮತ್ತು ಖಾಸಗಿ ಆಸ್ಪತ್ರೆಗಳಿಗೆ ವಿತರಿಸಿತು. ಆದರೆ ಕೆಲವೇ ದಿನಗಳಲ್ಲಿ, ಅನೇಕ ಆಸ್ಪತ್ರೆಗಳು ಅವನ್ನು ವಾಪಸ್ ಕಳುಹಿಸಿದವು. ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲ, ಕಳಪೆಯಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ನಿರ್ಣಾಯಕ ಆರೈಕೆ ಚಿಕಿತ್ಸೆಯಲ್ಲಿ ಪರಿಣತಿ ಹೊಂದಿರುವ ಮತ್ತು ಈ ಯಂತ್ರಗಳನ್ನು ನಿರ್ವಹಿಸುವ ಈ ಆಸ್ಪತ್ರೆಗಳ ಎಂಟು ವೈದ್ಯರ ತಂಡವು ಸಿದ್ಧಪಡಿಸಿದ ವರದಿಯ ಪ್ರಕಾರ, “ವೆಂಟಿಲೇಟರ್‌ಗಳನ್ನು ಸ್ವಿಚ್ ಆನ್ ಮಾಡಿದ ಕೆಲವೇ ಗಂಟೆಗಳಲ್ಲಿ ರೋಗಿಗಳು ಉಸಿರಾಟದ ತೊಂದರೆ ಮತ್ತು ಸಂಬಂಧಿತ ರೋಗಲಕ್ಷಣಗಳ ಬಗ್ಗೆ ದೂರು ನೀಡಲು ಪ್ರಾರಂಭಿಸಿದರು….’
ಅವುಗಳನ್ನು ತಯಾರಿಸಿದ ಜ್ಯೋತಿ ಸಿಎನ್‌ಸಿಯ ಎಂಜಿನಿಯರ್‌ಗಳ ತಂಡವು ಮೇ 14 ರಂದು ಕೆಲವು ಯಂತ್ರಗಳ ಸರ್ವಿಸ್ ಮಾಡಿತು. ಆದರೆ ವೈದ್ಯರ ವರದಿಯನ್ನು ಉಲ್ಲೇಖಿಸಿ ಮೇ 28ರಂದು ಬಾಂಬೆ ಹೈಕೋರ್ಟ್ “ಈ ವೆಂಟಿಲೇಟರ್‌ಗಳು ರಾತ್ರಿಯಿಡೀ ಚೆನ್ನಾಗಿ ಕೆಲಸ ಮಾಡಿದವು. ಆದರೆ ಮರುದಿನ ಮಧ್ಯಾಹ್ನದ ಹೊತ್ತಿಗೆ ರೋಗಿಗಳು ಕಳಪೆ ಆಮ್ಲಜನಕದ ಬಗ್ಗೆ ದೂರು ನೀಡಿದರು ಮತ್ತು ಚಡಪಡಿಕೆಯ ಲಕ್ಷಣಗಳನ್ನು ತೋರಿಸಿದರು…..’ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.

ಇಲ್ಲಿವರೆಗೆ, ತಲುಪಿದ 150 ವೆಂಟಿಲೇಟರ್‌ಗಳಲ್ಲಿ 117 ಬಳಕೆಯಾಗುತ್ತಿಲ್ಲ ಎಂದು ಔರಂಗಾಬಾದ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಗಳು ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದು, ಉಳಿದ 33 ವೆಂಟಿಲೇಟರ್‌ಗಳನ್ನು ಬಳಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ತಿಳಿಸಿದೆ.

ಮಂಡ್ಯ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಕೆಯಾಗದೆ ನಿಂತಿರುವ ವೆಂಟಿಲೇಟರ್‌ಗಳು

“ಅವುಗಳನ್ನು ಬಳಸುವುದು ತುಂಬಾ ಅಪಾಯಕಾರಿ” ಎಂದು ಔರಂಗಾಬಾದ್‌ನಿಂದ 25 ವೆಂಟಿಲೇಟರ್‌ಗಳನ್ನು ಪಡೆದ ಬೀಡ್ ಜಿಲ್ಲೆಯ ಸುಕ್ರೆಸ್ವಾಮಿ ರಾಮಾನಂದ್ ತೀರ್ಥ್ ಗ್ರಾಮೀಣ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶಿವಾಜಿ ಹೇಳಿದರು..

ಕಳೆದ ವರ್ಷ ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ, 60,000 ಕ್ಕೂ ಹೆಚ್ಚು ವೆಂಟಿಲೇಟರ್‌ಗಳಿಗೆ ಕೇಂದ್ರವು ಸುಮಾರು 2,350 ಕೋಟಿ ರೂ.ಗಳ ಆದೇಶಗಳನ್ನು ನೀಡಿತ್ತು, ಈ ಪೈಕಿ 2,000 ಕೋಟಿ ರೂ. ವೆಚ್ಚದ 50,000 ವೆಂಟಿಲೇಟರ್‌ಗಳಿಗೆ ಪಿಎಂ-ಕೇರ್ಸ್ ನಿಧಿ ಮೂಲಕ ಹಣ ನೀಡಲಾಯಿತು.

ಮಹಾರಾಷ್ಟ್ರದ ಹೊರತಾಗಿ, ರಾಜಸ್ಥಾನ, ಪಂಜಾಬ್, ಜಾರ್ಖಂಡ್ ಮತ್ತು ಛತ್ತೀಸಗಡ ರಾಜ್ಯಗಳು ಈ ವೆಂಟಿಲೇಟರ್‌ಗಳ ಬಗ್ಗೆ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿವೆ.

ಆದರೆ, ಕೇಂದ್ರವು ಈ ವೆಂಟಿಲೇಟರ್‌ಗಳನ್ನು ಮತ್ತೆ ಮತ್ತೆ ಸಮರ್ಥಿಸಿಕೊಂಡಿದೆ. ಈ ಸಮಸ್ಯೆ ಸಾಧನಗಳಲ್ಲಿಲ್ಲ, ರಾಜ್ಯಗಳು ನಿರ್ವಹಿಸುವಲ್ಲಿ ವಿಫಲವಾಗಿವೆ ಎಂದು ಅದು ಹೇಳುತ್ತ ಬಂದಿದೆ.
ಟೀಕೆಗಳು ಜೋರಾಗಿ ಬರುತ್ತಿದ್ದಂತೆ, ಮೇ 15 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವೆಂಟಿಲೇಟರ್‌ಗಳ ಲೆಕ್ಕಪರಿಶೋಧನೆಗೆ ಆದೇಶಿಸಿದರು. ಆದರೆ ಅವರ ಹೇಳಿಕೆ, ಆರೋಗ್ಯ ಕಾರ್ಯಕರ್ತರಿಗೆ ವೆಂಟಿಲೇಟರ್‌ಗಳನ್ನು ನಿರ್ವಹಿಸುವ ತರಬೇತಿ ನೀಡಬೇಕು’ ಎಂಬ ಅರ್ಥದಲ್ಲಿದೆ.

ಸ್ಕ್ರೋಲ್.ಇನ್ ಹಲವಾರು ವೈದ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ವೆಂಟಿಲೇಟರ್ ತಯಾರಕರೊಂದಿಗೆ ಮಾತನಾಡಿದೆ. ನಮಗೆ ದೊರೆತ ಮಾಹಿತಿ ಇಲ್ಲಿದೆ:

ಮೊದಲನೆಯದಾಗಿ, ವೆಂಟಿಲೇಟರ್ ಸಮಸ್ಯೆ ಪ್ರತಿಪಕ್ಷಗಳು ನಡೆಸುವ ರಾಜ್ಯಗಳಿಗೆ ಸೀಮಿತವಾಗಿಲ್ಲ. ಭಾರತೀಯ ಜನತಾ ಪಕ್ಷದ ಆಡಳಿತದಲ್ಲಿರುವ ರಾಜ್ಯಗಳಲ್ಲೂ ಇದೆ. ಆದರೆ ಅವು ಬಹಿರಂಗವಾಗಿ ಇದನ್ನು ಹೇಳುತ್ತಿಲ್ಲ. ಆದರೆ ಅಲ್ಲಿನ ವೈದ್ಯರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಆಡಳಿತದಲ್ಲಿರುವ ಮೂರು ರಾಜ್ಯಗಳಾದ ಉತ್ತರ ಪ್ರದೇಶ, ಗುಜರಾತ್ ಮತ್ತು ಗೋವಾ, ತಮ್ಮ ಆಸ್ಪತ್ರೆಗಳಿಗೆ ಸರಬರಾಜು ಮಾಡಿದ ಕೆಲವು ವೆಂಟಿಲೇಟರ್‌ಗಳು ಯಾವುದೇ ಉದ್ದೇಶವನ್ನು ಪೂರೈಸಲಿಲ್ಲ ಎಂದು ಸ್ಕ್ರೋಲ್.ಇನ್‌ಗೆ ತಿಳಿಸಿವೆ.

ಎರಡನೆಯದಾಗಿ, ವೆಂಟಿಲೇಟರ್‌ಗಳ ಕಾರ್ಯಕ್ಷಮತೆ ಒಂದು ಉತ್ಪಾದಕರಿಂದ ಇನ್ನೊಂದಕ್ಕೆ ಹೆಚ್ಚು ಬದಲಾಗುತ್ತದೆ ಎಂದು ಅವುಗಳನ್ನು ನಿರ್ವಹಿಸಿದ ವೈದ್ಯರು ಹೇಳಿದರು. ಎರಡು ಖಾಸಗಿ ಕಂಪನಿಗಳ ಮಾದರಿಗಳು ವಿಶೇಷವಾಗಿ ಟೀಕೆಗೆ ಗುರುಯಾಗಿವೆ.

ಒಂದು ನೋಯ್ಡಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಆಗ್ವಾ. ಇನ್ನೊಂದು, ರಾಜ್‌ಕೋಟ್ ಮೂಲದ ಜ್ಯೋತಿ ಸಿಎನ್‌ಸಿ. 2019ರವರೆಗೆ, ಈ ಕಂಪನಿ ಪ್ರಮುಖ ಷೇರುದಾರರಲ್ಲಿ ಒಬ್ಬರಾಗಿದ್ದ ಉದ್ಯಮಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರಿನೊಂದಿಗೆ ಮೊನೊಗ್ರಾಮ್ ಮಾಡಿದ ದುಬಾರಿ ಸ್ಯೂಟ್ ಅನ್ನು ಉಡುಗೊರೆಯಾಗಿ ನೀಡಿದ್ದರು.

ಮೂರನೆಯದಾಗಿ, ಕೇಂದ್ರ ಸರ್ಕಾರಕ್ಕೆ ವೆಂಟಿಲೇಟರ್‌ಗಳನ್ನು ಪೂರೈಸಿದ ಏಳು ಕಂಪನಿಗಳಲ್ಲಿ, ಹೆಚ್ಚು ಅನುಭವವನ್ನು ಹೊಂದಿರುವ ಕಂಪನಿಯು –(ಇದು ಎರಡು ದಶಕಗಳಿಂದ ವೆಂಟಿಲೇಟರ್‌ಗಳನ್ನು ತಯಾರಿಸುತ್ತಿದೆ) – ಕನಿಷ್ಠ ಆರ್ಡರ್‌ಗಳನ್ನು ಪಡೆದಿದೆ.

ಪ್ರಸ್ತುತ ಬಿಕ್ಕಟ್ಟು ಕೇಂದ್ರ ಸರ್ಕಾರ ಕಳೆದ ವರ್ಷ ತೆಗೆದುಕೊಂಡ ನಿರ್ಧಾರಗಳಲ್ಲಿ ಬೇರೂರಿದೆ.
ವೆಂಟಿಲೇಟರ್‌ಗಳನ್ನು ತಯಾರಿಸುವಲ್ಲಿ ಪೂರ್ವ ಅನುಭವವಿಲ್ಲದ ಕಂಪನಿಗಳಿಗೆ ಆರ್ಡರ್ ನೀಡಿತು. ಏಳು ಕಂಪೆನಿಗಳಲ್ಲಿ ಎರಡು – ಸರ್ಕಾರ ನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ಅಲೈಡ್ ಮೆಡಿಕಲ್ ಲಿಮಿಟೆಡ್ ಸಹಭಾಗಿತ್ವ ಹೊಂದಿರುವ ಸ್ಕನ್ರೆ- ವೆಂಟಿಲೇಟರ್‌ಗಳನ್ನು ತಯಾರಿಸುವ ಬಗ್ಗೆ ಯಾವುದೇ ಗಮನಾರ್ಹ ದಾಖಲೆಯನ್ನು ಹೊಂದಿಲ್ಲ.

ಖರೀದಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇಲ್ಲ ಎಂದು ಅದರಲ್ಲಿ ಭಾಗವಹಿಸಿದ ಕಂಪನಿಗಳ ಅಧಿಕಾರಿಗಳು ಹೇಳುತ್ತಾರೆ. ಉದಾಹರಣೆಗೆ, ಅಲೈಡ್ ಮೆಡಿಕಲ್ ಲಿಮಿಟೆಡ್‌ಗೆ ಹೆಚ್ಚಿನ ಅನುಭವವಿದ್ದರೂ ಸಹ, ಒಂದು ಸಣ್ಣ ಪರಿಮಾಣವನ್ನು ನೀಡಲಾಯಿತು. ಕೇವಲ 350 ವೆಂಟಿಲೇಟರ್‌ಗಳ ಆರ್ಡರ್ ನೀಡಲಾಗಿತು. ಇದಕ್ಕೆ ವ್ಯತಿರಿಕ್ತವಾಗಿ, ವೆಂಟಿಲೇಟರ್ ತಯಾರಿಕೆಯಲ್ಲಿ ಯಾವುದೇ ಅನುಭವ ಇಲ್ಲದ ಅಗ್ವಾ ಮತ್ತು ಜ್ಯೋತಿ ಸಿಎನ್‌ಸಿ ಕಂಪನಿಗಳಿಗೆ ಕ್ರಮವಾಗಿ 10,000 ಮತ್ತು 5,000 ಯುನಿಟ್‌ಗಳ ಆರ್ಡರ್‌ಗಳನ್ನು ನೀಡಲಾಗಿತು!

ಈ ಆರೋಪಗಳಿಗೆ ಪ್ರತಿಕ್ರಿಯೆ ಕೋರುವ ಪ್ರಶ್ನೆಗಳಿಗೆ ಬಹುತೇಕ ಕಂಪನಿಗಳು ಪ್ರತಿಕ್ರಿಯಿಸಲಿಲ್ಲ.

(ಕೃಪೆ: ಸ್ಕ್ರೋಲ್.ಇನ್)


ಇದನ್ನೂ ಓದಿ; ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಳಪೆ ಗುಣಮಟ್ಟದ Ventilator ಖರೀದಿಯ ಬಗ್ಗೆ ವಿಚಾರಣೆ ಆಗಬೇಕೆಂದು ಯಾರೂ ಒತ್ತಾಯಿಸುತ್ತಿಲ್ಲವಲ್ಲ ಏಕೆ?
    ವಿಷಯ ಇಷ್ಟೊಂದು ಗಂಭೀರವಾಗಿದ್ದರೊ ಸಹ ವಿರೋಧ ಪಕ್ಷದವರಾಗಲೀ, ಬುದ್ಧಿ ಜೀವಿ ಗಳಾಗಲಿ ಅಥವಾ ಪತ್ರಕರ್ತರು ಸುಮ್ಮನಿರುವದು ಯಾಕೆ?
    ಯಾರಾದರೂ ನ್ಯಾಯಾಲಯದ ಕದ ತತ್ತಬೇಕಿತ್ತಲ್ಲವೇ…
    ಇಂತಹ ಕೆಲವೊಂದು ಸರಳ ಸತ್ಯಗಳು ನಮ್ಮಂಥಹ ಜನಸಾಮಾನ್ಯರನ್ನು ಗೊಂದಲಕ್ಕೇ ಈಡು ಮಾಡುತ್ತಾವೆ.

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...