Homeಕರೋನಾ ತಲ್ಲಣ2,250 ಕೋಟಿ ರೂ ಖರ್ಚು ಮಾಡಿ ಮೋದಿ ಸರ್ಕಾರ ಖರೀದಿಸಿದ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲವೇಕೆ?

2,250 ಕೋಟಿ ರೂ ಖರ್ಚು ಮಾಡಿ ಮೋದಿ ಸರ್ಕಾರ ಖರೀದಿಸಿದ ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲವೇಕೆ?

- Advertisement -
- Advertisement -

ದೋಷಪೂರಿತ ಖರೀದಿ ಪ್ರಕ್ರಿಯೆಯಿಂದಾಗಿ ಆಸ್ಪತ್ರೆಗಳು ಅಗ್ಗದ ವೆಂಟಿಲೇಟರ್‌ಗಳನ್ನು ಪಡೆಯುತ್ತಿವೆ. ಅವುಗಳಲ್ಲಿ ಹಲವು ನಿರುಪಯುಕ್ತವಾಗಿವೆ ಎಂದು ಬಿಜೆಪಿ ಆಡಳಿತದ ರಾಜ್ಯಗಳಲ್ಲಿಯೂ ವೈದ್ಯರು ಹೇಳುತ್ತಿದ್ದಾರೆ ಎಂದು ದಿ ಸ್ಕ್ರೋಲ್ ಪೋರ್ಟಲ್ ತನಿಖಾ ವರದಿ ಹೇಳುತ್ತಿದೆ.

ಕೋವಿಡ್ ಪ್ರಕರಣಗಳು ಮತ್ತು ಸಾವುಗಳಲ್ಲಿ ಮಹಾರಾಷ್ಟ್ರವು ಭೀಕರ ಏರಿಕೆ ಕಂಡ ಏಪ್ರಿಲ್ ಮೂರನೇ ವಾರದಲ್ಲಿ ಔರಂಗಾಬಾದ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ 150 ವೆಂಟಿಲೇಟರ್‌ಗಳನ್ನು ಕೇಂದ್ರ ಆರೋಗ್ಯ ಸಚಿವಾಲಯ ಕಳಿಸಿತ್ತು.

ಆಸ್ಪತ್ರೆಯು ಯಂತ್ರಗಳನ್ನು ಮರಾಠವಾಡ ಪ್ರದೇಶದ ಇತರ ಜಿಲ್ಲಾ ಮತ್ತು ಖಾಸಗಿ ಆಸ್ಪತ್ರೆಗಳಿಗೆ ವಿತರಿಸಿತು. ಆದರೆ ಕೆಲವೇ ದಿನಗಳಲ್ಲಿ, ಅನೇಕ ಆಸ್ಪತ್ರೆಗಳು ಅವನ್ನು ವಾಪಸ್ ಕಳುಹಿಸಿದವು. ವೆಂಟಿಲೇಟರ್‌ಗಳು ಕೆಲಸ ಮಾಡುತ್ತಿಲ್ಲ, ಕಳಪೆಯಾಗಿವೆ ಎಂದು ವೈದ್ಯರು ತಿಳಿಸಿದ್ದಾರೆ.

ನಿರ್ಣಾಯಕ ಆರೈಕೆ ಚಿಕಿತ್ಸೆಯಲ್ಲಿ ಪರಿಣತಿ ಹೊಂದಿರುವ ಮತ್ತು ಈ ಯಂತ್ರಗಳನ್ನು ನಿರ್ವಹಿಸುವ ಈ ಆಸ್ಪತ್ರೆಗಳ ಎಂಟು ವೈದ್ಯರ ತಂಡವು ಸಿದ್ಧಪಡಿಸಿದ ವರದಿಯ ಪ್ರಕಾರ, “ವೆಂಟಿಲೇಟರ್‌ಗಳನ್ನು ಸ್ವಿಚ್ ಆನ್ ಮಾಡಿದ ಕೆಲವೇ ಗಂಟೆಗಳಲ್ಲಿ ರೋಗಿಗಳು ಉಸಿರಾಟದ ತೊಂದರೆ ಮತ್ತು ಸಂಬಂಧಿತ ರೋಗಲಕ್ಷಣಗಳ ಬಗ್ಗೆ ದೂರು ನೀಡಲು ಪ್ರಾರಂಭಿಸಿದರು….’
ಅವುಗಳನ್ನು ತಯಾರಿಸಿದ ಜ್ಯೋತಿ ಸಿಎನ್‌ಸಿಯ ಎಂಜಿನಿಯರ್‌ಗಳ ತಂಡವು ಮೇ 14 ರಂದು ಕೆಲವು ಯಂತ್ರಗಳ ಸರ್ವಿಸ್ ಮಾಡಿತು. ಆದರೆ ವೈದ್ಯರ ವರದಿಯನ್ನು ಉಲ್ಲೇಖಿಸಿ ಮೇ 28ರಂದು ಬಾಂಬೆ ಹೈಕೋರ್ಟ್ “ಈ ವೆಂಟಿಲೇಟರ್‌ಗಳು ರಾತ್ರಿಯಿಡೀ ಚೆನ್ನಾಗಿ ಕೆಲಸ ಮಾಡಿದವು. ಆದರೆ ಮರುದಿನ ಮಧ್ಯಾಹ್ನದ ಹೊತ್ತಿಗೆ ರೋಗಿಗಳು ಕಳಪೆ ಆಮ್ಲಜನಕದ ಬಗ್ಗೆ ದೂರು ನೀಡಿದರು ಮತ್ತು ಚಡಪಡಿಕೆಯ ಲಕ್ಷಣಗಳನ್ನು ತೋರಿಸಿದರು…..’ ಎಂದು ತನ್ನ ಆದೇಶದಲ್ಲಿ ತಿಳಿಸಿದೆ.

ಇಲ್ಲಿವರೆಗೆ, ತಲುಪಿದ 150 ವೆಂಟಿಲೇಟರ್‌ಗಳಲ್ಲಿ 117 ಬಳಕೆಯಾಗುತ್ತಿಲ್ಲ ಎಂದು ಔರಂಗಾಬಾದ್‌ನ ಸರ್ಕಾರಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಅಧಿಕಾರಿಗಳು ಬಾಂಬೆ ಹೈಕೋರ್ಟ್‌ಗೆ ತಿಳಿಸಿದ್ದು, ಉಳಿದ 33 ವೆಂಟಿಲೇಟರ್‌ಗಳನ್ನು ಬಳಸುವುದರಲ್ಲಿ ಯಾವುದೇ ಅರ್ಥವಿಲ್ಲ ಎಂದು ತಿಳಿಸಿದೆ.

ಮಂಡ್ಯ ಸರ್ಕಾರಿ ಜಿಲ್ಲಾಸ್ಪತ್ರೆಯಲ್ಲಿ ಬಳಕೆಯಾಗದೆ ನಿಂತಿರುವ ವೆಂಟಿಲೇಟರ್‌ಗಳು

“ಅವುಗಳನ್ನು ಬಳಸುವುದು ತುಂಬಾ ಅಪಾಯಕಾರಿ” ಎಂದು ಔರಂಗಾಬಾದ್‌ನಿಂದ 25 ವೆಂಟಿಲೇಟರ್‌ಗಳನ್ನು ಪಡೆದ ಬೀಡ್ ಜಿಲ್ಲೆಯ ಸುಕ್ರೆಸ್ವಾಮಿ ರಾಮಾನಂದ್ ತೀರ್ಥ್ ಗ್ರಾಮೀಣ ವೈದ್ಯಕೀಯ ಕಾಲೇಜಿನ ಡೀನ್ ಡಾ.ಶಿವಾಜಿ ಹೇಳಿದರು..

ಕಳೆದ ವರ್ಷ ಮಾರ್ಚ್ ಮತ್ತು ಏಪ್ರಿಲ್ ತಿಂಗಳುಗಳಲ್ಲಿ, 60,000 ಕ್ಕೂ ಹೆಚ್ಚು ವೆಂಟಿಲೇಟರ್‌ಗಳಿಗೆ ಕೇಂದ್ರವು ಸುಮಾರು 2,350 ಕೋಟಿ ರೂ.ಗಳ ಆದೇಶಗಳನ್ನು ನೀಡಿತ್ತು, ಈ ಪೈಕಿ 2,000 ಕೋಟಿ ರೂ. ವೆಚ್ಚದ 50,000 ವೆಂಟಿಲೇಟರ್‌ಗಳಿಗೆ ಪಿಎಂ-ಕೇರ್ಸ್ ನಿಧಿ ಮೂಲಕ ಹಣ ನೀಡಲಾಯಿತು.

ಮಹಾರಾಷ್ಟ್ರದ ಹೊರತಾಗಿ, ರಾಜಸ್ಥಾನ, ಪಂಜಾಬ್, ಜಾರ್ಖಂಡ್ ಮತ್ತು ಛತ್ತೀಸಗಡ ರಾಜ್ಯಗಳು ಈ ವೆಂಟಿಲೇಟರ್‌ಗಳ ಬಗ್ಗೆ ತಮ್ಮ ಅಸಮಾಧಾನವನ್ನು ಬಹಿರಂಗವಾಗಿ ವ್ಯಕ್ತಪಡಿಸಿವೆ.

ಆದರೆ, ಕೇಂದ್ರವು ಈ ವೆಂಟಿಲೇಟರ್‌ಗಳನ್ನು ಮತ್ತೆ ಮತ್ತೆ ಸಮರ್ಥಿಸಿಕೊಂಡಿದೆ. ಈ ಸಮಸ್ಯೆ ಸಾಧನಗಳಲ್ಲಿಲ್ಲ, ರಾಜ್ಯಗಳು ನಿರ್ವಹಿಸುವಲ್ಲಿ ವಿಫಲವಾಗಿವೆ ಎಂದು ಅದು ಹೇಳುತ್ತ ಬಂದಿದೆ.
ಟೀಕೆಗಳು ಜೋರಾಗಿ ಬರುತ್ತಿದ್ದಂತೆ, ಮೇ 15 ರಂದು ಪ್ರಧಾನಿ ನರೇಂದ್ರ ಮೋದಿ ಅವರು ವೆಂಟಿಲೇಟರ್‌ಗಳ ಲೆಕ್ಕಪರಿಶೋಧನೆಗೆ ಆದೇಶಿಸಿದರು. ಆದರೆ ಅವರ ಹೇಳಿಕೆ, ಆರೋಗ್ಯ ಕಾರ್ಯಕರ್ತರಿಗೆ ವೆಂಟಿಲೇಟರ್‌ಗಳನ್ನು ನಿರ್ವಹಿಸುವ ತರಬೇತಿ ನೀಡಬೇಕು’ ಎಂಬ ಅರ್ಥದಲ್ಲಿದೆ.

ಸ್ಕ್ರೋಲ್.ಇನ್ ಹಲವಾರು ವೈದ್ಯರು, ಸರ್ಕಾರಿ ಅಧಿಕಾರಿಗಳು ಮತ್ತು ವೆಂಟಿಲೇಟರ್ ತಯಾರಕರೊಂದಿಗೆ ಮಾತನಾಡಿದೆ. ನಮಗೆ ದೊರೆತ ಮಾಹಿತಿ ಇಲ್ಲಿದೆ:

ಮೊದಲನೆಯದಾಗಿ, ವೆಂಟಿಲೇಟರ್ ಸಮಸ್ಯೆ ಪ್ರತಿಪಕ್ಷಗಳು ನಡೆಸುವ ರಾಜ್ಯಗಳಿಗೆ ಸೀಮಿತವಾಗಿಲ್ಲ. ಭಾರತೀಯ ಜನತಾ ಪಕ್ಷದ ಆಡಳಿತದಲ್ಲಿರುವ ರಾಜ್ಯಗಳಲ್ಲೂ ಇದೆ. ಆದರೆ ಅವು ಬಹಿರಂಗವಾಗಿ ಇದನ್ನು ಹೇಳುತ್ತಿಲ್ಲ. ಆದರೆ ಅಲ್ಲಿನ ವೈದ್ಯರು ಈ ಬಗ್ಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಬಿಜೆಪಿ ಆಡಳಿತದಲ್ಲಿರುವ ಮೂರು ರಾಜ್ಯಗಳಾದ ಉತ್ತರ ಪ್ರದೇಶ, ಗುಜರಾತ್ ಮತ್ತು ಗೋವಾ, ತಮ್ಮ ಆಸ್ಪತ್ರೆಗಳಿಗೆ ಸರಬರಾಜು ಮಾಡಿದ ಕೆಲವು ವೆಂಟಿಲೇಟರ್‌ಗಳು ಯಾವುದೇ ಉದ್ದೇಶವನ್ನು ಪೂರೈಸಲಿಲ್ಲ ಎಂದು ಸ್ಕ್ರೋಲ್.ಇನ್‌ಗೆ ತಿಳಿಸಿವೆ.

ಎರಡನೆಯದಾಗಿ, ವೆಂಟಿಲೇಟರ್‌ಗಳ ಕಾರ್ಯಕ್ಷಮತೆ ಒಂದು ಉತ್ಪಾದಕರಿಂದ ಇನ್ನೊಂದಕ್ಕೆ ಹೆಚ್ಚು ಬದಲಾಗುತ್ತದೆ ಎಂದು ಅವುಗಳನ್ನು ನಿರ್ವಹಿಸಿದ ವೈದ್ಯರು ಹೇಳಿದರು. ಎರಡು ಖಾಸಗಿ ಕಂಪನಿಗಳ ಮಾದರಿಗಳು ವಿಶೇಷವಾಗಿ ಟೀಕೆಗೆ ಗುರುಯಾಗಿವೆ.

ಒಂದು ನೋಯ್ಡಾದಲ್ಲಿ ಪ್ರಧಾನ ಕಚೇರಿಯನ್ನು ಹೊಂದಿರುವ ಆಗ್ವಾ. ಇನ್ನೊಂದು, ರಾಜ್‌ಕೋಟ್ ಮೂಲದ ಜ್ಯೋತಿ ಸಿಎನ್‌ಸಿ. 2019ರವರೆಗೆ, ಈ ಕಂಪನಿ ಪ್ರಮುಖ ಷೇರುದಾರರಲ್ಲಿ ಒಬ್ಬರಾಗಿದ್ದ ಉದ್ಯಮಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರ ಹೆಸರಿನೊಂದಿಗೆ ಮೊನೊಗ್ರಾಮ್ ಮಾಡಿದ ದುಬಾರಿ ಸ್ಯೂಟ್ ಅನ್ನು ಉಡುಗೊರೆಯಾಗಿ ನೀಡಿದ್ದರು.

ಮೂರನೆಯದಾಗಿ, ಕೇಂದ್ರ ಸರ್ಕಾರಕ್ಕೆ ವೆಂಟಿಲೇಟರ್‌ಗಳನ್ನು ಪೂರೈಸಿದ ಏಳು ಕಂಪನಿಗಳಲ್ಲಿ, ಹೆಚ್ಚು ಅನುಭವವನ್ನು ಹೊಂದಿರುವ ಕಂಪನಿಯು –(ಇದು ಎರಡು ದಶಕಗಳಿಂದ ವೆಂಟಿಲೇಟರ್‌ಗಳನ್ನು ತಯಾರಿಸುತ್ತಿದೆ) – ಕನಿಷ್ಠ ಆರ್ಡರ್‌ಗಳನ್ನು ಪಡೆದಿದೆ.

ಪ್ರಸ್ತುತ ಬಿಕ್ಕಟ್ಟು ಕೇಂದ್ರ ಸರ್ಕಾರ ಕಳೆದ ವರ್ಷ ತೆಗೆದುಕೊಂಡ ನಿರ್ಧಾರಗಳಲ್ಲಿ ಬೇರೂರಿದೆ.
ವೆಂಟಿಲೇಟರ್‌ಗಳನ್ನು ತಯಾರಿಸುವಲ್ಲಿ ಪೂರ್ವ ಅನುಭವವಿಲ್ಲದ ಕಂಪನಿಗಳಿಗೆ ಆರ್ಡರ್ ನೀಡಿತು. ಏಳು ಕಂಪೆನಿಗಳಲ್ಲಿ ಎರಡು – ಸರ್ಕಾರ ನಿರ್ವಹಿಸುವ ಭಾರತ್ ಎಲೆಕ್ಟ್ರಾನಿಕ್ಸ್ ಲಿಮಿಟೆಡ್ ಮತ್ತು ಅಲೈಡ್ ಮೆಡಿಕಲ್ ಲಿಮಿಟೆಡ್ ಸಹಭಾಗಿತ್ವ ಹೊಂದಿರುವ ಸ್ಕನ್ರೆ- ವೆಂಟಿಲೇಟರ್‌ಗಳನ್ನು ತಯಾರಿಸುವ ಬಗ್ಗೆ ಯಾವುದೇ ಗಮನಾರ್ಹ ದಾಖಲೆಯನ್ನು ಹೊಂದಿಲ್ಲ.

ಖರೀದಿ ಪ್ರಕ್ರಿಯೆಯಲ್ಲಿ ಪಾರದರ್ಶಕತೆ ಇಲ್ಲ ಎಂದು ಅದರಲ್ಲಿ ಭಾಗವಹಿಸಿದ ಕಂಪನಿಗಳ ಅಧಿಕಾರಿಗಳು ಹೇಳುತ್ತಾರೆ. ಉದಾಹರಣೆಗೆ, ಅಲೈಡ್ ಮೆಡಿಕಲ್ ಲಿಮಿಟೆಡ್‌ಗೆ ಹೆಚ್ಚಿನ ಅನುಭವವಿದ್ದರೂ ಸಹ, ಒಂದು ಸಣ್ಣ ಪರಿಮಾಣವನ್ನು ನೀಡಲಾಯಿತು. ಕೇವಲ 350 ವೆಂಟಿಲೇಟರ್‌ಗಳ ಆರ್ಡರ್ ನೀಡಲಾಗಿತು. ಇದಕ್ಕೆ ವ್ಯತಿರಿಕ್ತವಾಗಿ, ವೆಂಟಿಲೇಟರ್ ತಯಾರಿಕೆಯಲ್ಲಿ ಯಾವುದೇ ಅನುಭವ ಇಲ್ಲದ ಅಗ್ವಾ ಮತ್ತು ಜ್ಯೋತಿ ಸಿಎನ್‌ಸಿ ಕಂಪನಿಗಳಿಗೆ ಕ್ರಮವಾಗಿ 10,000 ಮತ್ತು 5,000 ಯುನಿಟ್‌ಗಳ ಆರ್ಡರ್‌ಗಳನ್ನು ನೀಡಲಾಗಿತು!

ಈ ಆರೋಪಗಳಿಗೆ ಪ್ರತಿಕ್ರಿಯೆ ಕೋರುವ ಪ್ರಶ್ನೆಗಳಿಗೆ ಬಹುತೇಕ ಕಂಪನಿಗಳು ಪ್ರತಿಕ್ರಿಯಿಸಲಿಲ್ಲ.

(ಕೃಪೆ: ಸ್ಕ್ರೋಲ್.ಇನ್)


ಇದನ್ನೂ ಓದಿ; ಪಿಎಂ ಕೇರ್ಸ್ ನಿಧಿಯಡಿ ಖರೀದಿಸಿರುವ ವೆಂಟಿಲೇಟರ್ ಬಳಸಬೇಕಾದರೆ ‘ಬ್ಯಾಕಪ್’ ವೆಂಟಿಲೇಟರ್ ಅಗತ್ಯ..!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

  1. ಕಳಪೆ ಗುಣಮಟ್ಟದ Ventilator ಖರೀದಿಯ ಬಗ್ಗೆ ವಿಚಾರಣೆ ಆಗಬೇಕೆಂದು ಯಾರೂ ಒತ್ತಾಯಿಸುತ್ತಿಲ್ಲವಲ್ಲ ಏಕೆ?
    ವಿಷಯ ಇಷ್ಟೊಂದು ಗಂಭೀರವಾಗಿದ್ದರೊ ಸಹ ವಿರೋಧ ಪಕ್ಷದವರಾಗಲೀ, ಬುದ್ಧಿ ಜೀವಿ ಗಳಾಗಲಿ ಅಥವಾ ಪತ್ರಕರ್ತರು ಸುಮ್ಮನಿರುವದು ಯಾಕೆ?
    ಯಾರಾದರೂ ನ್ಯಾಯಾಲಯದ ಕದ ತತ್ತಬೇಕಿತ್ತಲ್ಲವೇ…
    ಇಂತಹ ಕೆಲವೊಂದು ಸರಳ ಸತ್ಯಗಳು ನಮ್ಮಂಥಹ ಜನಸಾಮಾನ್ಯರನ್ನು ಗೊಂದಲಕ್ಕೇ ಈಡು ಮಾಡುತ್ತಾವೆ.

LEAVE A REPLY

Please enter your comment!
Please enter your name here

- Advertisment -

ದಲಿತ ವಿದ್ಯಾರ್ಥಿನಿ ಕೊಲೆ ಪ್ರಕರಣ: ಪ್ರತಿಭಟನಾಕಾರರ ಮೇಲೆ ಪೊಲೀಸ್ ಲಾಠಿಚಾರ್ಜ್; ಯೋಗಿ ಸರ್ಕಾರದ ವಿರುದ್ಧ ತೀವ್ರ ಆಕ್ರೋಶ

ನವದೆಹಲಿ: ಜುಲೈ 8 ರಂದು ಮೀರತ್‌ನಲ್ಲಿ ನಡೆದ ದಲಿತ ವಿದ್ಯಾರ್ಥಿನಿಯ ಹತ್ಯೆಯನ್ನು ಖಂಡಿಸಿ ಪ್ರತಿಭಟನೆ ನಡೆಸುತ್ತಿದ್ದ ದಲಿತ ಕಾರ್ಯಕರ್ತರು ಮತ್ತು ಮೃತರ ಕುಟುಂಬ ಸದಸ್ಯರ ಮೇಲೆ ಉತ್ತರ ಪ್ರದೇಶ ಪೊಲೀಸರು ಭೀಕರ ಹಲ್ಲೆ,...

ಒಮಾನ್ ಕರಾವಳಿಯಲ್ಲಿ ಮತ್ತೊಂದು ಹಡಗಿನ ಮೇಲೆ ದಾಳಿ: ಭಾರತೀಯ ಪ್ರಜೆ ನಾಪತ್ತೆ, 10 ಜನರ ರಕ್ಷಣೆ: ವಿದೇಶಾಂಗ ಸಚಿವಾಲಯ ಮಾಹಿತಿ

ನವದೆಹಲಿ: ಜುಲೈ 12 ರಂದು ಒಮಾನ್ ಕರಾವಳಿಯ ಅಂತರರಾಷ್ಟ್ರೀಯ ಜಲಮಾರ್ಗದಲ್ಲಿ ಸಾಗುತ್ತಿದ್ದ ‘ಜಿಎಫ್‌ಎಸ್ ಗ್ಯಾಲಕ್ಸಿ’ (GFS Galaxy) ಎಂಬ ವಾಣಿಜ್ಯ ಹಡಗಿನ ಮೇಲೆ ನಡೆದ ದಾಳಿಯನ್ನು ಭಾರತ ಸರ್ಕಾರ ತೀವ್ರವಾಗಿ ಖಂಡಿಸಿದೆ. ಭೀಕರ...

SIR ಪ್ರಕ್ರಿಯೆಯಲ್ಲಿ ಎಐ ಬಳಕೆ, ಭಾರೀ ಪ್ರಮಾಣದಲ್ಲಿ ಮತದಾರರ ಹೆಸರು ಡಿಲೀಟ್ : ಕಳವಳ ವ್ಯಕ್ತಪಡಿಸಿದ ವಿಶ್ವಸಂಸ್ಥೆಯ ವಿಶೇಷ ವರದಿಗಾರರು

ಭಾರತೀಯ ಚುನಾವಣಾ ಆಯೋಗ (ಇಸಿಐ) ಕೈಗೊಂಡ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆಯು (ಎಸ್‌ಐಆರ್) ವ್ಯಾಪಕ ಪ್ರಮಾಣದಲ್ಲಿ ಮತದಾರರ ಹೆಸರುಗಳ ಅಳಿಸುವಿಕೆಗೆ ಕಾರಣವಾಗಿದೆ ಮತ್ತು ಇದು ಮುಸ್ಲಿಮರು ಹಾಗೂ ಇತರ ಅಲ್ಪಸಂಖ್ಯಾತ ಸಮುದಾಯಗಳ...

ಮಹಾರಾಷ್ಟ್ರ: ನಂದೂರ್ಬಾರ್‌ನ ಸರ್ಕಾರಿ ಹಾಸ್ಟೆಲ್‌ನಲ್ಲಿ ಕಲುಷಿತ ಆಹಾರ ಸೇವಿಸಿ 40 ವಿದ್ಯಾರ್ಥಿಗಳು ಅಸ್ವಸ್ಥ; ತೀವ್ರಗೊಂಡ ತನಿಖೆ 

ನಂದೂರ್ಬಾರ್ (ಮಹಾರಾಷ್ಟ್ರ): ಮಹಾರಾಷ್ಟ್ರದ ನಂದೂರ್ಬಾರ್ ಜಿಲ್ಲೆಯ ಶಹಾಡಾ ತಾಲೂಕಿನಲ್ಲಿರುವ ಸರ್ಕಾರಿ ಸಮಾಜ ಕಲ್ಯಾಣ ಇಲಾಖೆಯ ವಸತಿನಿಲಯದಲ್ಲಿ ಶಂಕಿತ ವಿಷಪೂರಿತ ಆಹಾರ ಸೇವಿಸಿ ಸುಮಾರು 40 ವಿದ್ಯಾರ್ಥಿಗಳು ತೀವ್ರವಾಗಿ ಅಸ್ವಸ್ಥಗೊಂಡಿರುವ ಕಳವಳಕಾರಿ ಘಟನೆ ವರದಿಯಾಗಿದೆ.  ಹಾಸ್ಟೆಲ್‌ನಲ್ಲಿ...

ಇರಾನ್‌ನ 140 ಸ್ಥಳಗಳನ್ನು ಗುರಿಯಾಗಿಸಿ ಅಮೆರಿಕದಿಂದ ದಾಳಿ : ಬಹ್ರೇನ್, ಕತಾರ್, ಯುಎಇ ಮೇಲೆ ಇರಾನ್‌ನಿಂದ ಪ್ರತಿದಾಳಿ

ಹಾರ್ಮುಝ್ ಜಲಸಂಧಿಯಲ್ಲಿ ಇರಾನ್ ನಡೆಸಿದ ದಾಳಿಯಿಂದಾಗಿ ಸರಕು ಸಾಗಣೆ ಹಡಗೊಂದು ಹೊತ್ತಿ ಉರಿದು, ಅದರಲ್ಲಿದ್ದ ಸಿಬ್ಬಂದಿ ಹಡಗು ಬಿಟ್ಟು ಹೊರಡುವಂತಾಗಿತ್ತು. ಈ ಘಟನೆಯನ್ನು ಖಂಡಿಸಿ ಅಮೆರಿಕ ಭಾನುವಾರ (ಜು.12) ಮುಂಜಾನೆ ಇರಾನ್ ಮೇಲೆ...

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...