Homeಮುಖಪುಟಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ 'ವಂದೇ ಮಾತರಂ' ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

- Advertisement -
- Advertisement -

ಸೋಮವಾರ ಲೋಕಸಭೆಯಲ್ಲಿ ‘ವಂದೇ ಮಾತರಂನ 150 ವರ್ಷಗಳು’ ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ ಗೀತೆಯ ಕುರಿತು ಸದನ ಏಕೆ ಚರ್ಚೆ ನಡೆಸುತ್ತಿದೆ ಎಂದು ಪ್ರಶ್ನಿಸಿದರು.

“ನಾವು ಚರ್ಚಿಸುತ್ತಿರುವ ವಿಷಯವು ದೇಶದ ಆತ್ಮದ ಭಾಗವಾಗಿದೆ. ನಾವು ವಂದೇ ಮಾತರಂ ಬಗ್ಗೆ ಪ್ರಸ್ತಾಪಿಸಿದಾಗ, ಅದು ನಮ್ಮ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ನೆನಪಿಸುತ್ತದೆ. ಈ ಚರ್ಚೆ ವಿಚಿತ್ರವಾಗಿದೆ; ಈ ಗೀತೆ ಜನರ ಹೃದಯದಲ್ಲಿ ಸ್ಥಾನ ಪಡೆದಿದೆ; ಹೀಗಿರುವಾಗ ಈ ಚರ್ಚೆಯ ಅಗತ್ಯವೇನಿದೆ?” ಎಂದು ಪ್ರಿಯಾಂಕಾ ಗಾಂಧಿ ಕೇಳಿದರು.

“ನಮ್ಮ ಗುರಿ ಏನು, ಜನರಿಗೆ ಸಂಬಂಧಿಸಿದಂತೆ ನಮ್ಮ ಜವಾಬ್ದಾರಿ ಏನು, ಅದನ್ನು ನಾವು ಹೇಗೆ ಪೂರೈಸುತ್ತಿದ್ದೇವೆ..? ನಾವು ಈ ರಾಷ್ಟ್ರೀಯ ಗೀತೆಯ ಬಗ್ಗೆ ಚರ್ಚಿಸುತ್ತಿರುವುದು ಏಕೆ? ಅದರ ಬಗ್ಗೆ ಏನು ಚರ್ಚೆ ಮಾಡಬಹುದು?” ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನೆ ಎತ್ತಿದ್ದರು.

ಇತರ ಪ್ರಮುಖ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಈ ಚರ್ಚೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದರು. ಬಂಗಾಳದಲ್ಲಿ ಚುನಾವಣೆ ಸಮೀಪಿಸುತ್ತಿರುವುದರಿಂದ ಮತ್ತು ಪ್ರಧಾನ ಮಂತ್ರಿಗಳು ಅದರಲ್ಲಿ ತಮ್ಮ ಪಾತ್ರವನ್ನು ನಿರ್ವಹಿಸಲು ಬಯಸುತ್ತಿರುವುದರಿಂದ ನಾವು ಈ ಚರ್ಚೆಯನ್ನು ನಡೆಸುತ್ತಿದ್ದೇವೆ” ಎಂದು ಹೇಳಿದರು.

ಸರ್ಕಾರ ಈ ಚರ್ಚೆ ಹಮ್ಮಿಕೊಳ್ಳಲು ಎರಡನೆಯ ಕಾರಣವೆಂದರೆ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮತ್ತು ದೇಶಕ್ಕಾಗಿ ಅಪಾರ ತ್ಯಾಗ ಮಾಡಿದವರ ವಿರುದ್ಧ ಹೊಸ ಆರೋಪಗಳನ್ನು ಮಾಡಲು ಎಂದು ಪ್ರಿಯಾಂಕಾ ಗಾಂಧಿ ದೂರಿದರು.

“ಈ ಸರ್ಕಾರ ವರ್ತಮಾನ ಮತ್ತು ಭವಿಷ್ಯವನ್ನು ನೋಡಲು ಬಯಸುವುದಿಲ್ಲವಾದ್ದರಿಂದ ನಾವು ಭೂತಕಾಲವನ್ನು ಪರಿಶೀಲಿಸುತ್ತಲೇ ಇರಬೇಕೆಂದು ನೀವು ಬಯಸುತ್ತೀರಿ” ಎಂದರು.

“ಪ್ರಧಾನಿ ಮೋದಿ ಅವರು ಹಿಂದಿನ ಪ್ರಧಾನಿಯಲ್ಲ; ಇದು ಅವರ ಆತ್ಮವಿಶ್ವಾಸ ಕಡಿಮೆಯಾಗುತ್ತಿದೆ ಮತ್ತು ಅವರ ನೀತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ ಎಂದು ತೋರಿಸುತ್ತಿದೆ. ಸರ್ಕಾರದಲ್ಲಿರುವ ನನ್ನ ಸ್ನೇಹಿತರು ಮೌನವಾಗಿದ್ದಾರೆ, ಏಕೆಂದರೆ ಅವರಿಗೂ ಇದು ತಿಳಿದಿದೆ” ಎಂದು ಪ್ರಿಯಾಂಕಾ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ಪ್ರಿಯಾಂಕಾ, ಅವರ “ಆತ್ಮವಿಶ್ವಾಸ ಕಡಿಮೆಯಾಗುತ್ತಿದೆ ಮತ್ತು ನೀತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ” ಎಂದು ಆರೋಪಿಸಿದರು.

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ವಿರುದ್ಧ ಹೊಸ ಆರೋಪಗಳನ್ನು ಮಾಡಲು ಸರ್ಕಾರ ಈ ಚರ್ಚೆಯನ್ನು ಬಯಸುತ್ತಿದೆ ಎಂದು ಹೇಳಿದರು.

“ನೀವು ನೆಹರು ಬಗ್ಗೆ ಸದಾ ಮಾತನಾಡುತ್ತಿರುವುದರಿಂದ ಒಂದು ಕೆಲಸ ಮಾಡೋಣ. ಒಂದು ಚರ್ಚೆಗೆ ಸಮಯ ನಿಗದಿಪಡಿಸೋಣ. ನೆಹರು ವಿರುದ್ದದ ಎಲ್ಲಾ ಆರೋಪಗಳನ್ನು ಪಟ್ಟಿ ಮಾಡೋಣ. ಅವುಗಳ ಕುರಿತು ಚರ್ಚೆ ನಡೆಸಿ, ವಿಷಯವನ್ನು ಅಲ್ಲಿಗೆ ಮುಗಿಸಿ ಬಿಡೋಣ. ಅದರ ನಂತರ, ಇಂದಿನ ಸಮಸ್ಯೆಗಳಾದ ಬೆಲೆ ಏರಿಕೆ ಮತ್ತು ನಿರುದ್ಯೋಗದ ಬಗ್ಗೆ ಮಾತನಾಡೋಣ” ಎಂದರು.

ವಂದೇ ಮಾತರಂ ಮೇಲೆ ಕಾಂಗ್ರೆಸ್ ತುಷ್ಟೀಕರಣದ ರಾಜಕೀಯ ಮಾಡಿದೆ ಎಂಬ ಪ್ರಧಾನಿ ಮೋದಿಯವರ ಆರೋಪವನ್ನು ಅಲ್ಲಗಳೆಯಲು ಪ್ರಿಯಾಂಕಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸುಭಾಷ್ ಚಂದ್ರ ಬೋಸ್ ನಡುವಿನ ಪತ್ರವ್ಯವಹಾರವನ್ನು ಉಲ್ಲೇಖಿಸಿದರು.

“ಬಂಕಿಮ್ ಚಂದ್ರ ಚಟರ್ಜಿ 1875ರಲ್ಲಿ ಈ ಗೀತೆಯನ್ನು ಬರೆದರು, ಮೊದಲ ಎರಡು ಚರಣಗಳನ್ನು ಬರೆದರು ಮತ್ತು 1882ರಲ್ಲಿ ನಾಲ್ಕು ಚರಣಗಳನ್ನು ಸೇರಿಸಿದ ನಂತರ ಆನಂದ್ ಮಠದಲ್ಲಿ ಪ್ರಕಟಿಸಿದರು. 1896ರಲ್ಲಿ ಗುರುದೇವ್ ರವೀಂದ್ರನಾಥ ಟ್ಯಾಗೋರ್ ಅವರು ಇದನ್ನು ಮೊದಲ ಬಾರಿಗೆ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಿದರು” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ರಾಷ್ಟ್ರೀಯ ಗೀತೆಯನ್ನಾಗಿ ಮಾಡುವ ನಿರ್ಧಾರವನ್ನು ಪ್ರಶ್ನಿಸುವುದು ಸಂವಿಧಾನ ಸಭೆ ಮತ್ತು ಅದರ ಸದಸ್ಯರನ್ನು ಪ್ರಶ್ನಿಸಿದಂತಿದೆ ಎಂದರು.

“ಮೋದಿಯವರು ಸುಮಾರು 12 ವರ್ಷಗಳ ಕಾಲ ಪ್ರಧಾನಿಯಾಗಿದ್ದಾರೆ. ಸರಿ ಸುಮಾರು ಅಷ್ಟೇ ಕಾಲ ನೆಹರು ಅವರು ಜೈಲಿನಲ್ಲಿದ್ದರು” ಎಂದು ನೆಹರು ವಿರುದ್ದದ ಮೋದಿ ಟೀಕೆಗೆ ಪ್ರಿಯಾಂಕಾ ತಿರುಗೇಟು ಕೊಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರವ್ ಗೊಗೊಯ್ ಸಹಿತ ಮೂವರು ಕಾಂಗ್ರೆಸ್ ನಾಯಕರ ವಿರುದ್ಧ 500 ಕೋಟಿ ರೂ. ಮಾನನಷ್ಟ ಮೊಕದ್ದಮೆ ಹೂಡಿದ ಅಸ್ಸಾಂ ಸಿಎಂ

ಕಾಂಗ್ರೆಸ್ ನಾಯಕರಾದ ಜಿತೇಂದ್ರ ಸಿಂಗ್, ಭೂಪೇಶ್ ಬಘೇಲ್ ಮತ್ತು ಗೌರವ್ ಗೊಗೊಯ್ ವಿರುದ್ದ 500 ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಿದ್ದೇನೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ತಿಳಿಸಿದ್ದಾರೆ. "ಪತ್ರಿಕಾಗೋಷ್ಠಿಯ ಮೂಲಕ...

ಕೇರಳದಲ್ಲಿ ಸರ್ಕಾರ ಬದಲಾವಣೆಗೆ ಕವಿ ಸಚ್ಚಿದಾನಂದನ್ ಕರೆಗೆ ಎಡಪಕ್ಷಗಳ ತೀವ್ರ ವಿರೋಧ; ಇದು ಸಾರ್ವಜನಿಕ ಭಾವನೆ ಎಂದ ವಿಪಕ್ಷಗಳು

ಕೇರಳದಲ್ಲಿ ನಿರಂತರ ಆಡಳಿತ ಅಪೇಕ್ಷಣೀಯವಲ್ಲ ಮತ್ತು ಅಧಿಕಾರವು ರಾಜಕೀಯ ರಂಗಗಳ ನಡುವೆ ಪರ್ಯಾಯವಾಗಿರಬೇಕು ಎಂದು ಹಿರಿಯ ಕವಿ ಮತ್ತು ಕೇರಳ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಕೆ. ಸಚ್ಚಿದಾನಂದನ್ ಹೇಳಿದ್ದಾರೆ. ಈ ಹೇಳಿಕೆ ಆಡಳಿತಾರೂಢ...

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಣೆ; ದೀಪಕ್ ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿ ಬಂಧನ

ಹಿಂದುತ್ವ ಗುಂಪಿನಿಂದ ಮುಸ್ಲಿಂ ವ್ಯಕ್ತಿ ರಕ್ಷಿಸಿದ್ದ ಜಿಮ್ ಮಾಲೀಕ ದೀಪಕ್ ಕುಮಾರ್ (ಮೊಹಮ್ಮದ್ ದೀಪಕ್) ಅವರನ್ನು ಕೊಂದವರಿಗೆ 2 ಲಕ್ಷ ರೂಪಾಯಿ ಬಹುಮಾನ ಘೋಷಿಸಿದ್ದ ವ್ಯಕ್ತಿಯನ್ನು ಉತ್ತರಾಖಂಡ ಪೊಲೀಸರು ಸೋಮವಾರ (ಫೆ.9) ಬಂಧಿಸಿದ್ದಾರೆ. ಬಿಹಾರದ...

ಬಾಂಗ್ಲಾದೇಶ: ಚುನಾವಣೆಗೂ ಮುನ್ನ 62 ವರ್ಷದ ಹಿಂದೂ ಅಕ್ಕಿ ವ್ಯಾಪಾರಿ ಸುಶೇನ್ ಚಂದ್ರ ಸರ್ಕಾರ್ ಹತ್ಯೆ

ಬಾಂಗ್ಲಾದೇಶದ ಸಾರ್ವತ್ರಿಕ ಚುನಾವಣೆಗೆ ಮತದಾನಕ್ಕೆ ಕೆಲವೇ ಗಂಟೆಗಳ ಮೊದಲು, ಸೋಮವಾರ ತಡರಾತ್ರಿ ಬಾಂಗ್ಲಾದೇಶದ ಮೈಮೆನ್ಸಿಂಗ್ ಜಿಲ್ಲೆಯಲ್ಲಿ ಹಿಂದೂ ಅಕ್ಕಿ ವ್ಯಾಪಾರಿಯೊಬ್ಬರನ್ನು ಅವರ ಅಂಗಡಿಯೊಳಗೆ ಹತ್ಯೆಯಾಗಿದೆ.  ತ್ರಿಶಾಲ್ ಉಪಜಿಲಾದ ಬೋಗರ್ ಬಜಾರ್ ಛೇದಕದಲ್ಲಿರುವ "ಮೆಸರ್ಸ್ ಭಾಯ್...

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಮಸೀದಿ ಕೆಡವಿದ ಉತ್ತರ ಪ್ರದೇಶ ಸರ್ಕಾರ

ಹೈಕೋರ್ಟ್‌ನಲ್ಲಿ ಪ್ರಕರಣ ಬಾಕಿ ಇರುವಾಗಲೇ ಉತ್ತರ ಪ್ರದೇಶ ಆಡಳಿತವು ಬರೇಲಿ ಜಿಲ್ಲೆಯ ಮಸೀದಿಯನ್ನು ನೆಲಸಮಗೊಳಿಸಿದೆ. ಮಸೀದಿ ನಿರ್ಮಾಣ ಕುರಿತಾದ ಪ್ರಕರಣ ಅಲಹಾಬಾದ್ ಹೈಕೋರ್ಟ್‌ನಲ್ಲಿ ಬಾಕಿ ಉಳಿದಿದೆ. ಭೋಜಿಪುರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿರುವ ಪಿಪಾರಿಯಾ...

‘ನಾನು ಮಾಜಿ ಸೇನಾ ಮುಖ್ಯಸ್ಥರನ್ನು ನಂಬುತ್ತೇನೆ’ : ಜನರಲ್ ನರವಾಣೆ ಪುಸ್ತಕದ ಕುರಿತ ಪ್ರಕಾಶಕರ ಹೇಳಿಕೆಗೆ ರಾಹುಲ್ ಗಾಂಧಿ ಪ್ರತಿಕ್ರಿಯೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಎಂ.ಎಂ. ನರವಾಣೆ ಅವರ ಆತ್ಮಕಥೆಯ ಪ್ರಕಾಶಕರ ವಿರುದ್ಧ ರಾಹುಲ್ ಗಾಂಧಿ ಮಂಗಳವಾರ (ಫೆ.10) ಗಂಭೀರ ಆರೋಪ ಮಾಡಿದ್ದಾರೆ. ನರವಾಣೆ ಅವರ ನೆನಪುಗಳ ಆಧಾರಿತ ಪುಸ್ತಕವು ಈಗಾಗಲೇ ಮಾರಾಟಕ್ಕೆ...

‘ಆದಿತ್ಯನಾಥನ ಆಡಳಿತದಲ್ಲಿ ಬ್ರಾಹ್ಮಣರು ಅಸುರಕ್ಷಿತರು, ಸನಾತನಿಗಳು ಎಂದಿಗೂ ಮರೆಯುವುದಿಲ್ಲ’ ಎಂಬ ಅರ್ಥದಲ್ಲಿ ಪೋಸ್ಟ್ ಮಾಡಿದ ಪತ್ರಕರ್ತನ ಬಂಧನ

ಮಧ್ಯಪ್ರದೇಶದ ಉಜ್ಜಯಿನಿ ಜಿಲ್ಲೆಯ ಪತ್ರಕರ್ತರೊಬ್ಬರನ್ನು ಉತ್ತರ ಪ್ರದೇಶ ಪೊಲೀಸರು ಬಂಧಿಸಿದ್ದಾರೆ. ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಕುರಿತು ಆಕ್ಷೇಪಾರ್ಹ ಮತ್ತು ಪ್ರಚೋದನಕಾರಿ ಚಿತ್ರವನ್ನು ಫೇಸ್‌ಬುಕ್‌ನಲ್ಲಿ ಅಪ್‌ಲೋಡ್ ಮಾಡಿದ ಆರೋಪದ ಮೇಲೆ ಅವರನ್ನು ಬಂಧಿಸಲಾಗಿದೆ ಎಂದು...

ಹಿಮಂತ ಬಿಸ್ವಾ ಶರ್ಮಾ ‘ಗುಂಡು ಹಾರಿಸುವ’ ವಿಡಿಯೋ ವಿರುದ್ಧದ ಅರ್ಜಿ; ವಿಚಾರಣೆಗೆ ಸಮ್ಮತಿಸಿದ ಸುಪ್ರೀಂ ಕೋರ್ಟ್

ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಅವರು ನಿರ್ದಿಷ್ಟ ಸಮುದಾಯದ ಸದಸ್ಯರ ಮೇಲೆ ಗುರಿಯಿಟ್ಟು ರೈಫಲ್‌ನಿಂದ ಗುಂಡು ಹಾರಿಸುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಅವರ ವಿರುದ್ಧ ಕ್ರಮ ಕೈಗೊಳ್ಳುವಂತೆ ಕೋರಿ ಎಡಪಂಥೀಯ...

ನರವಾಣೆಯ ಅಪ್ರಕಟಿತ ಆತ್ಮಚರಿತ್ರೆ ಪ್ರಸಾರ ಆರೋಪ : ಎಫ್‌ಐಆರ್‌ ದಾಖಲಿಸಿದ ದೆಹಲಿ ಪೊಲೀಸರು

ಮಾಜಿ ಭೂಸೇನಾ ಮುಖ್ಯಸ್ಥ ಎಂ.ಎಂ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ "ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ"ಯ ಪ್ರಸಾರ ಆರೋಪದ ಮೇಲೆ ದೆಹಲಿ ಪೊಲೀಸರು ಪ್ರಕರಣ ದಾಖಲಿಸಿದ್ದಾರೆ ಎಂದು ವರದಿಯಾಗಿದೆ. ಇದೇ ಪುಸ್ತಕದ ವಿಷಯಗಳನ್ನು ಪ್ರತಿಪಕ್ಷ...

ನರವಾಣೆ ಅವರ ಆತ್ಮಚರಿತ್ರೆಯ ಯಾವುದೇ ಪ್ರತಿಗಳು ಸಾರ್ವಜನಿಕವಾಗಿ ಲಭ್ಯವಿಲ್ಲ: ಪೆಂಗ್ವಿನ್ ಪ್ರಕಾಶನ ಸ್ಪಷ್ಟನೆ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಆತ್ಮಚರಿತ್ರೆ 'ಫೋರ್ ಸ್ಟಾರ್ಸ್ ಆಫ್ ಡೆಸ್ಟಿನಿ'ಗೆ ವಿಶೇಷ ಪ್ರಕಾಶನ ಹಕ್ಕುಗಳನ್ನು ಹೊಂದಿದ್ದೇವೆ ಎಂದು ಪೆಂಗ್ವಿನ್ ರಾಂಡಮ್ ಹೌಸ್ ಇಂಡಿಯಾ (ಪಿಆರ್‌ಎಚ್‌ಐ) ಹೇಳಿದ್ದು,...