Homeಮುಖಪುಟಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ 'ವಂದೇ ಮಾತರಂ' ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

- Advertisement -
- Advertisement -

ಸೋಮವಾರ ಲೋಕಸಭೆಯಲ್ಲಿ ‘ವಂದೇ ಮಾತರಂನ 150 ವರ್ಷಗಳು’ ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ ಗೀತೆಯ ಕುರಿತು ಸದನ ಏಕೆ ಚರ್ಚೆ ನಡೆಸುತ್ತಿದೆ ಎಂದು ಪ್ರಶ್ನಿಸಿದರು.

“ನಾವು ಚರ್ಚಿಸುತ್ತಿರುವ ವಿಷಯವು ದೇಶದ ಆತ್ಮದ ಭಾಗವಾಗಿದೆ. ನಾವು ವಂದೇ ಮಾತರಂ ಬಗ್ಗೆ ಪ್ರಸ್ತಾಪಿಸಿದಾಗ, ಅದು ನಮ್ಮ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ನೆನಪಿಸುತ್ತದೆ. ಈ ಚರ್ಚೆ ವಿಚಿತ್ರವಾಗಿದೆ; ಈ ಗೀತೆ ಜನರ ಹೃದಯದಲ್ಲಿ ಸ್ಥಾನ ಪಡೆದಿದೆ; ಹೀಗಿರುವಾಗ ಈ ಚರ್ಚೆಯ ಅಗತ್ಯವೇನಿದೆ?” ಎಂದು ಪ್ರಿಯಾಂಕಾ ಗಾಂಧಿ ಕೇಳಿದರು.

“ನಮ್ಮ ಗುರಿ ಏನು, ಜನರಿಗೆ ಸಂಬಂಧಿಸಿದಂತೆ ನಮ್ಮ ಜವಾಬ್ದಾರಿ ಏನು, ಅದನ್ನು ನಾವು ಹೇಗೆ ಪೂರೈಸುತ್ತಿದ್ದೇವೆ..? ನಾವು ಈ ರಾಷ್ಟ್ರೀಯ ಗೀತೆಯ ಬಗ್ಗೆ ಚರ್ಚಿಸುತ್ತಿರುವುದು ಏಕೆ? ಅದರ ಬಗ್ಗೆ ಏನು ಚರ್ಚೆ ಮಾಡಬಹುದು?” ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನೆ ಎತ್ತಿದ್ದರು.

ಇತರ ಪ್ರಮುಖ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಈ ಚರ್ಚೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದರು. ಬಂಗಾಳದಲ್ಲಿ ಚುನಾವಣೆ ಸಮೀಪಿಸುತ್ತಿರುವುದರಿಂದ ಮತ್ತು ಪ್ರಧಾನ ಮಂತ್ರಿಗಳು ಅದರಲ್ಲಿ ತಮ್ಮ ಪಾತ್ರವನ್ನು ನಿರ್ವಹಿಸಲು ಬಯಸುತ್ತಿರುವುದರಿಂದ ನಾವು ಈ ಚರ್ಚೆಯನ್ನು ನಡೆಸುತ್ತಿದ್ದೇವೆ” ಎಂದು ಹೇಳಿದರು.

ಸರ್ಕಾರ ಈ ಚರ್ಚೆ ಹಮ್ಮಿಕೊಳ್ಳಲು ಎರಡನೆಯ ಕಾರಣವೆಂದರೆ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮತ್ತು ದೇಶಕ್ಕಾಗಿ ಅಪಾರ ತ್ಯಾಗ ಮಾಡಿದವರ ವಿರುದ್ಧ ಹೊಸ ಆರೋಪಗಳನ್ನು ಮಾಡಲು ಎಂದು ಪ್ರಿಯಾಂಕಾ ಗಾಂಧಿ ದೂರಿದರು.

“ಈ ಸರ್ಕಾರ ವರ್ತಮಾನ ಮತ್ತು ಭವಿಷ್ಯವನ್ನು ನೋಡಲು ಬಯಸುವುದಿಲ್ಲವಾದ್ದರಿಂದ ನಾವು ಭೂತಕಾಲವನ್ನು ಪರಿಶೀಲಿಸುತ್ತಲೇ ಇರಬೇಕೆಂದು ನೀವು ಬಯಸುತ್ತೀರಿ” ಎಂದರು.

“ಪ್ರಧಾನಿ ಮೋದಿ ಅವರು ಹಿಂದಿನ ಪ್ರಧಾನಿಯಲ್ಲ; ಇದು ಅವರ ಆತ್ಮವಿಶ್ವಾಸ ಕಡಿಮೆಯಾಗುತ್ತಿದೆ ಮತ್ತು ಅವರ ನೀತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ ಎಂದು ತೋರಿಸುತ್ತಿದೆ. ಸರ್ಕಾರದಲ್ಲಿರುವ ನನ್ನ ಸ್ನೇಹಿತರು ಮೌನವಾಗಿದ್ದಾರೆ, ಏಕೆಂದರೆ ಅವರಿಗೂ ಇದು ತಿಳಿದಿದೆ” ಎಂದು ಪ್ರಿಯಾಂಕಾ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ಪ್ರಿಯಾಂಕಾ, ಅವರ “ಆತ್ಮವಿಶ್ವಾಸ ಕಡಿಮೆಯಾಗುತ್ತಿದೆ ಮತ್ತು ನೀತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ” ಎಂದು ಆರೋಪಿಸಿದರು.

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ವಿರುದ್ಧ ಹೊಸ ಆರೋಪಗಳನ್ನು ಮಾಡಲು ಸರ್ಕಾರ ಈ ಚರ್ಚೆಯನ್ನು ಬಯಸುತ್ತಿದೆ ಎಂದು ಹೇಳಿದರು.

“ನೀವು ನೆಹರು ಬಗ್ಗೆ ಸದಾ ಮಾತನಾಡುತ್ತಿರುವುದರಿಂದ ಒಂದು ಕೆಲಸ ಮಾಡೋಣ. ಒಂದು ಚರ್ಚೆಗೆ ಸಮಯ ನಿಗದಿಪಡಿಸೋಣ. ನೆಹರು ವಿರುದ್ದದ ಎಲ್ಲಾ ಆರೋಪಗಳನ್ನು ಪಟ್ಟಿ ಮಾಡೋಣ. ಅವುಗಳ ಕುರಿತು ಚರ್ಚೆ ನಡೆಸಿ, ವಿಷಯವನ್ನು ಅಲ್ಲಿಗೆ ಮುಗಿಸಿ ಬಿಡೋಣ. ಅದರ ನಂತರ, ಇಂದಿನ ಸಮಸ್ಯೆಗಳಾದ ಬೆಲೆ ಏರಿಕೆ ಮತ್ತು ನಿರುದ್ಯೋಗದ ಬಗ್ಗೆ ಮಾತನಾಡೋಣ” ಎಂದರು.

ವಂದೇ ಮಾತರಂ ಮೇಲೆ ಕಾಂಗ್ರೆಸ್ ತುಷ್ಟೀಕರಣದ ರಾಜಕೀಯ ಮಾಡಿದೆ ಎಂಬ ಪ್ರಧಾನಿ ಮೋದಿಯವರ ಆರೋಪವನ್ನು ಅಲ್ಲಗಳೆಯಲು ಪ್ರಿಯಾಂಕಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸುಭಾಷ್ ಚಂದ್ರ ಬೋಸ್ ನಡುವಿನ ಪತ್ರವ್ಯವಹಾರವನ್ನು ಉಲ್ಲೇಖಿಸಿದರು.

“ಬಂಕಿಮ್ ಚಂದ್ರ ಚಟರ್ಜಿ 1875ರಲ್ಲಿ ಈ ಗೀತೆಯನ್ನು ಬರೆದರು, ಮೊದಲ ಎರಡು ಚರಣಗಳನ್ನು ಬರೆದರು ಮತ್ತು 1882ರಲ್ಲಿ ನಾಲ್ಕು ಚರಣಗಳನ್ನು ಸೇರಿಸಿದ ನಂತರ ಆನಂದ್ ಮಠದಲ್ಲಿ ಪ್ರಕಟಿಸಿದರು. 1896ರಲ್ಲಿ ಗುರುದೇವ್ ರವೀಂದ್ರನಾಥ ಟ್ಯಾಗೋರ್ ಅವರು ಇದನ್ನು ಮೊದಲ ಬಾರಿಗೆ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಿದರು” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ರಾಷ್ಟ್ರೀಯ ಗೀತೆಯನ್ನಾಗಿ ಮಾಡುವ ನಿರ್ಧಾರವನ್ನು ಪ್ರಶ್ನಿಸುವುದು ಸಂವಿಧಾನ ಸಭೆ ಮತ್ತು ಅದರ ಸದಸ್ಯರನ್ನು ಪ್ರಶ್ನಿಸಿದಂತಿದೆ ಎಂದರು.

“ಮೋದಿಯವರು ಸುಮಾರು 12 ವರ್ಷಗಳ ಕಾಲ ಪ್ರಧಾನಿಯಾಗಿದ್ದಾರೆ. ಸರಿ ಸುಮಾರು ಅಷ್ಟೇ ಕಾಲ ನೆಹರು ಅವರು ಜೈಲಿನಲ್ಲಿದ್ದರು” ಎಂದು ನೆಹರು ವಿರುದ್ದದ ಮೋದಿ ಟೀಕೆಗೆ ಪ್ರಿಯಾಂಕಾ ತಿರುಗೇಟು ಕೊಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

1962ರ ಯುದ್ಧದಲ್ಲಿ ಸೈನ್ಯಕ್ಕೆ 600 ಕೆಜಿ ಚಿನ್ನ ದಾನ ಮಾಡಿದ್ದ ದರ್ಭಂಗಾದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ ನಿಧನ

ದರ್ಭಾಂಗ ರಾಜಮನೆತನದ ಕೊನೆಯ ಮಹಾರಾಣಿ ಕಾಮಸುಂದರಿ ದೇವಿ 2025 ಜನವರಿ 12 ರಂದು ನಿಧನರಾಗಿದ್ದಾರೆ.  ಅನಾರೋಗ್ಯದಿಂದ ಬಳಲುತ್ತಿದ್ದ ಮಹಾರಾಣಿ ಕಾಮಸುಂದರಿ ಅವರು, ಬಿಹಾರದ ದರ್ಭಾಂಗದಲ್ಲಿರುವ ತಮ್ಮ ಐತಿಹಾಸಿಕ ನಿವಾಸ 'ಕಲ್ಯಾಣಿ'ಯಲ್ಲಿ ಕೊನೆಯುಸಿರೆಳೆದಿದ್ದಾರೆ. ಅವರ ನಿಧನದೊಂದಿಗೆ...

ವಿಧಾನಸಭೆ ಸೇರಿದಂತೆ ಎಲ್ಲಾ ಚುನಾವಣೆಗಳಲ್ಲಿ ಬಿಎಸ್‌ಪಿ ಏಕಾಂಗಿ ಸ್ಪರ್ಧೆ: ಮಾಯಾವತಿ

2027 ರ ಉತ್ತರ ಪ್ರದೇಶ ವಿಧಾನಸಭಾ ಚುನಾವಣೆ ಸೇರಿದಂತೆ ದೇಶಾದ್ಯಂತ ಎಲ್ಲಾ ಚುನಾವಣೆಗಳಲ್ಲಿ ತಮ್ಮ ಪಕ್ಷವು ಏಕಾಂಗಿಯಾಗಿ ಸ್ಪರ್ಧಿಸಲಿದೆ. ರಾಜ್ಯದಲ್ಲಿ ಪೂರ್ಣ ಬಹುಮತದೊಂದಿಗೆ ಸರ್ಕಾರ ರಚಿಸಲಿದೆ ಎಂದು ಬಹುಜನ ಸಮಾಜ ಪಕ್ಷ (ಬಿಎಸ್‌ಪಿ)...

ಐ-ಪ್ಯಾಕ್ ದಾಳಿ | ಇಡಿ ಅಧಿಕಾರಿಗಳ ವಿರುದ್ಧದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ತಡೆ : ಮಮತಾ ಬ್ಯಾನರ್ಜಿ, ಪ.ಬಂಗಾಳ ಸರ್ಕಾರಕ್ಕೆ ನೋಟಿಸ್

ಐ-ಪ್ಯಾಕ್ ಕಚೇರಿ ಮೇಲೆ ದಾಳಿ ನಡೆಸಿದ ಸಂದರ್ಭದಲ್ಲಿ ಕಳ್ಳತನ ಮಾಡಿದ್ದಾರೆ ಎಂದು ಆರೋಪಿಸಿ ಇಡಿ ಅಧಿಕಾರಿಗಳ ವಿರುದ್ದ ಕೋಲ್ಕತ್ತಾ ಪೊಲೀಸರು ದಾಖಲಿಸಿದ್ದ ಎಫ್‌ಐಆರ್‌ಗೆ ಸುಪ್ರೀಂ ಕೋರ್ಟ್ ಗುರುವಾರ (ಜ.15) ತಡೆ ನೀಡಿದೆ. ಇದರಿಂದ...

ಕಾಶ್ಮೀರ: ಭಯೋತ್ಪಾದನಾ ಪ್ರಕರಣದಲ್ಲಿ ಆಸಿಯಾ ಅಂದ್ರಾಬಿ ಮತ್ತು ಅವರ ಇಬ್ಬರು ಸಹಚರರು ದೋಷಿಗಳು ಎಂದು ತೀರ್ಪು ನೀಡಿದ ದೆಹಲಿ ನ್ಯಾಯಾಲಯ 

ದೆಹಲಿಯ ಎನ್ಐಎ ನ್ಯಾಯಾಲಯದ ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ ಚಂದರ್ ಜಿತ್ ಸಿಂಗ್ ಬುಧವಾರ ನಿಷೇಧಿತ ಕಾಶ್ಮೀರಿ ಸಂಘಟನೆ ದುಖ್ತರನ್-ಎ-ಮಿಲ್ಲತ್ (ಡಿಇಎಂ) ಮುಖ್ಯಸ್ಥೆ ಆಸಿಯಾ ಅಂದ್ರಾಬಿ ಮತ್ತು ಆಕೆಯ ಇಬ್ಬರು ಸಹಚರರಾದ ಸೋಫಿ ಫೆಹ್ಮಿದಾ...

ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ: ಉದ್ಧವ್ ಠಾಕ್ರೆ ಆರೋಪ

ಮಹಾರಾಷ್ಟ್ರದ ನಾಗರಿಕ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂದು ಶಿವಸೇನೆ (ಯುಬಿಟಿ) ಮುಖ್ಯಸ್ಥ ಉದ್ಧವ್ ಠಾಕ್ರೆ ಗುರುವಾರ ಆರೋಪಿಸಿದ್ದು, ಇದು ಪ್ರಜಾಪ್ರಭುತ್ವವನ್ನು ಕೊಲೆ ಮಾಡುವ ಪ್ರಯತ್ನ ಎಂದು ಹೇಳಿದ್ದಾರೆ. ನಗರಸಭೆ ಚುನಾವಣೆಯಲ್ಲಿ ಅಕ್ರಮಗಳು ನಡೆದಿವೆ ಎಂಬ...

2025ರಲ್ಲಿ ಭಾರತದಲ್ಲಿ 1,318 ದ್ವೇಷ ಭಾಷಣ ಪ್ರಕರಣಗಳು ವರದಿಯಾಗಿದ್ದು, ಅವುಗಳಲ್ಲಿ ಶೇ. 98 ಮುಸ್ಲಿಮರನ್ನು ಗುರಿಯಾಗಿಸಿಕೊಂಡಿವೆ; ವರದಿ

2025ರಲ್ಲಿ ಭಾರತವು ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಧಾರ್ಮಿಕ ಅಲ್ಪಸಂಖ್ಯಾತರನ್ನು, ವಿಶೇಷವಾಗಿ ಮುಸ್ಲಿಮರು ಮತ್ತು ಕ್ರಿಶ್ಚಿಯನ್ನರನ್ನು ಗುರಿಯಾಗಿಸಿಕೊಂಡ ಕನಿಷ್ಠ 1,318 ದ್ವೇಷ ಭಾಷಣ ಘಟನೆಗಳಿಗೆ ಸಾಕ್ಷಿಯಾಗಿದೆ. ದಿನಕ್ಕೆ ಸರಾಸರಿ ನಾಲ್ಕು ದ್ವೇಷ ಭಾಷಣ...

ಪಶ್ಚಿಮ ಬಂಗಾಳ ಎಸ್‌ಐಆರ್ ಪ್ರತಿಭಟನೆ; ಉತ್ತರ ದಿನಾಜ್‌ಪುರದ ಸರ್ಕಾರಿ ಕಚೇರಿ ಧ್ವಂಸ

ಪಶ್ಚಿಮ ಬಂಗಾಳದ ಉತ್ತರ ದಿನಾಜ್‌ಪುರ ಜಿಲ್ಲೆಯಲ್ಲಿ ಗುರುವಾರ ನಡೆದ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ವಿರುದ್ಧದ ಪ್ರತಿಭಟನೆಯ ಸಂದರ್ಭದಲ್ಲಿ ಸರ್ಕಾರಿ ಕಚೇರಿಯನ್ನು ಧ್ವಂಸಗೊಳಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಮುಂಜಾನೆಯಿಂದಲೇ, ಚಾಕುಲಿಯಾದಲ್ಲಿನ ಕಹಾಟಾ...

ಕೇರಳದ ಭಾರತೀಯ ಕ್ರೀಡಾ ಪ್ರಾಧಿಕಾರದ ಹಾಸ್ಟೆಲ್‌ನಲ್ಲಿ ಇಬ್ಬರು ಬಾಲಕಿಯರ ಶವಗಳು ಪತ್ತೆ

ಕೇರಳದ ಕೊಲ್ಲಂನಲ್ಲಿರುವ ಭಾರತೀಯ ಕ್ರೀಡಾ ಪ್ರಾಧಿಕಾರ (SAI) ಹಾಸ್ಟೆಲ್‌ನಲ್ಲಿ ತಂಗಿದ್ದ ಇಬ್ಬರು ಹುಡುಗಿಯರು ಗುರುವಾರ ಬೆಳಿಗ್ಗೆ ತಮ್ಮ ಕೋಣೆಯಲ್ಲಿ ಶವವಾಗಿ ಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಮೃತರನ್ನು ಕೋಝಿಕ್ಕೋಡ್ ಜಿಲ್ಲೆಯ ಸಾಂಡ್ರಾ (17) ಮತ್ತು...

ಪಿಎಚ್‌ಡಿ ಪ್ರವೇಶ ನಿರಾಕರಿಸಿದ ಜಾಮಿಯಾ ಯೂನಿವರ್ಸಿಟಿ; ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ ವಿದ್ಯಾರ್ಥಿ

2025–26 ಶೈಕ್ಷಣಿಕ ಅವಧಿಗೆ ಅಧಿಕೃತ ಪ್ರವೇಶ ಪ್ರಕ್ರಿಯೆಯ ಮೂಲಕ ಆಯ್ಕೆಯಾದ ತನ್ನನ್ನು ಜಾಮಿಯಾ ಮಿಲಿಯಾ ಇಸ್ಲಾಮಿಯಾ (ಜೆಎಂಐ) ವಿನಾಕಾರಣ ಪ್ರವೇಶ ನಿರಾಕರಿಸಿದೆ ಎಂದು ಆರೋಪಿಸಿ ವಿದ್ಯಾರ್ಥಿಯೊಬ್ಬರು ದೆಹಲಿ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದಾರೆ. ಯುಜಿಸಿ-ನೆಟ್ ವಿನಾಯಿತಿ...

ಮದ್ರಸಾ ನಿರ್ಮಾಣದ ವದಂತಿ : ಖಾಸಗಿ ಶಾಲಾ ಕಟ್ಟಡ ಕೆಡವಿದ ಅಧಿಕಾರಿಗಳು

ಅನಧಿಕೃತವಾಗಿ ಮದ್ರಸಾ ನಿರ್ಮಿಸಲಾಗುತ್ತಿದೆ ಎಂಬ ವದಂತಿ ಹರಡಿದ ಹಿನ್ನೆಲೆ ನಿರ್ಮಾಣ ಹಂತದಲ್ಲಿದ್ದ ಶಾಲಾ ಕಟ್ಟಡವನ್ನು ಅಧಿಕಾರಿಗಳು ಬುಲ್ಡೋಝರ್ ಬಳಸಿ ಕೆಡವಿದ ಘಟನೆ ಮಧ್ಯಪ್ರದೇಶದ ಬೇತುಲ್ ಜಿಲ್ಲೆಯಲ್ಲಿ ನಡೆದಿದೆ ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್...