Homeಮುಖಪುಟಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ 'ವಂದೇ ಮಾತರಂ' ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

- Advertisement -
- Advertisement -

ಸೋಮವಾರ ಲೋಕಸಭೆಯಲ್ಲಿ ‘ವಂದೇ ಮಾತರಂನ 150 ವರ್ಷಗಳು’ ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ ಗೀತೆಯ ಕುರಿತು ಸದನ ಏಕೆ ಚರ್ಚೆ ನಡೆಸುತ್ತಿದೆ ಎಂದು ಪ್ರಶ್ನಿಸಿದರು.

“ನಾವು ಚರ್ಚಿಸುತ್ತಿರುವ ವಿಷಯವು ದೇಶದ ಆತ್ಮದ ಭಾಗವಾಗಿದೆ. ನಾವು ವಂದೇ ಮಾತರಂ ಬಗ್ಗೆ ಪ್ರಸ್ತಾಪಿಸಿದಾಗ, ಅದು ನಮ್ಮ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ನೆನಪಿಸುತ್ತದೆ. ಈ ಚರ್ಚೆ ವಿಚಿತ್ರವಾಗಿದೆ; ಈ ಗೀತೆ ಜನರ ಹೃದಯದಲ್ಲಿ ಸ್ಥಾನ ಪಡೆದಿದೆ; ಹೀಗಿರುವಾಗ ಈ ಚರ್ಚೆಯ ಅಗತ್ಯವೇನಿದೆ?” ಎಂದು ಪ್ರಿಯಾಂಕಾ ಗಾಂಧಿ ಕೇಳಿದರು.

“ನಮ್ಮ ಗುರಿ ಏನು, ಜನರಿಗೆ ಸಂಬಂಧಿಸಿದಂತೆ ನಮ್ಮ ಜವಾಬ್ದಾರಿ ಏನು, ಅದನ್ನು ನಾವು ಹೇಗೆ ಪೂರೈಸುತ್ತಿದ್ದೇವೆ..? ನಾವು ಈ ರಾಷ್ಟ್ರೀಯ ಗೀತೆಯ ಬಗ್ಗೆ ಚರ್ಚಿಸುತ್ತಿರುವುದು ಏಕೆ? ಅದರ ಬಗ್ಗೆ ಏನು ಚರ್ಚೆ ಮಾಡಬಹುದು?” ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನೆ ಎತ್ತಿದ್ದರು.

ಇತರ ಪ್ರಮುಖ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಈ ಚರ್ಚೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದರು. ಬಂಗಾಳದಲ್ಲಿ ಚುನಾವಣೆ ಸಮೀಪಿಸುತ್ತಿರುವುದರಿಂದ ಮತ್ತು ಪ್ರಧಾನ ಮಂತ್ರಿಗಳು ಅದರಲ್ಲಿ ತಮ್ಮ ಪಾತ್ರವನ್ನು ನಿರ್ವಹಿಸಲು ಬಯಸುತ್ತಿರುವುದರಿಂದ ನಾವು ಈ ಚರ್ಚೆಯನ್ನು ನಡೆಸುತ್ತಿದ್ದೇವೆ” ಎಂದು ಹೇಳಿದರು.

ಸರ್ಕಾರ ಈ ಚರ್ಚೆ ಹಮ್ಮಿಕೊಳ್ಳಲು ಎರಡನೆಯ ಕಾರಣವೆಂದರೆ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮತ್ತು ದೇಶಕ್ಕಾಗಿ ಅಪಾರ ತ್ಯಾಗ ಮಾಡಿದವರ ವಿರುದ್ಧ ಹೊಸ ಆರೋಪಗಳನ್ನು ಮಾಡಲು ಎಂದು ಪ್ರಿಯಾಂಕಾ ಗಾಂಧಿ ದೂರಿದರು.

“ಈ ಸರ್ಕಾರ ವರ್ತಮಾನ ಮತ್ತು ಭವಿಷ್ಯವನ್ನು ನೋಡಲು ಬಯಸುವುದಿಲ್ಲವಾದ್ದರಿಂದ ನಾವು ಭೂತಕಾಲವನ್ನು ಪರಿಶೀಲಿಸುತ್ತಲೇ ಇರಬೇಕೆಂದು ನೀವು ಬಯಸುತ್ತೀರಿ” ಎಂದರು.

“ಪ್ರಧಾನಿ ಮೋದಿ ಅವರು ಹಿಂದಿನ ಪ್ರಧಾನಿಯಲ್ಲ; ಇದು ಅವರ ಆತ್ಮವಿಶ್ವಾಸ ಕಡಿಮೆಯಾಗುತ್ತಿದೆ ಮತ್ತು ಅವರ ನೀತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ ಎಂದು ತೋರಿಸುತ್ತಿದೆ. ಸರ್ಕಾರದಲ್ಲಿರುವ ನನ್ನ ಸ್ನೇಹಿತರು ಮೌನವಾಗಿದ್ದಾರೆ, ಏಕೆಂದರೆ ಅವರಿಗೂ ಇದು ತಿಳಿದಿದೆ” ಎಂದು ಪ್ರಿಯಾಂಕಾ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ಪ್ರಿಯಾಂಕಾ, ಅವರ “ಆತ್ಮವಿಶ್ವಾಸ ಕಡಿಮೆಯಾಗುತ್ತಿದೆ ಮತ್ತು ನೀತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ” ಎಂದು ಆರೋಪಿಸಿದರು.

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ವಿರುದ್ಧ ಹೊಸ ಆರೋಪಗಳನ್ನು ಮಾಡಲು ಸರ್ಕಾರ ಈ ಚರ್ಚೆಯನ್ನು ಬಯಸುತ್ತಿದೆ ಎಂದು ಹೇಳಿದರು.

“ನೀವು ನೆಹರು ಬಗ್ಗೆ ಸದಾ ಮಾತನಾಡುತ್ತಿರುವುದರಿಂದ ಒಂದು ಕೆಲಸ ಮಾಡೋಣ. ಒಂದು ಚರ್ಚೆಗೆ ಸಮಯ ನಿಗದಿಪಡಿಸೋಣ. ನೆಹರು ವಿರುದ್ದದ ಎಲ್ಲಾ ಆರೋಪಗಳನ್ನು ಪಟ್ಟಿ ಮಾಡೋಣ. ಅವುಗಳ ಕುರಿತು ಚರ್ಚೆ ನಡೆಸಿ, ವಿಷಯವನ್ನು ಅಲ್ಲಿಗೆ ಮುಗಿಸಿ ಬಿಡೋಣ. ಅದರ ನಂತರ, ಇಂದಿನ ಸಮಸ್ಯೆಗಳಾದ ಬೆಲೆ ಏರಿಕೆ ಮತ್ತು ನಿರುದ್ಯೋಗದ ಬಗ್ಗೆ ಮಾತನಾಡೋಣ” ಎಂದರು.

ವಂದೇ ಮಾತರಂ ಮೇಲೆ ಕಾಂಗ್ರೆಸ್ ತುಷ್ಟೀಕರಣದ ರಾಜಕೀಯ ಮಾಡಿದೆ ಎಂಬ ಪ್ರಧಾನಿ ಮೋದಿಯವರ ಆರೋಪವನ್ನು ಅಲ್ಲಗಳೆಯಲು ಪ್ರಿಯಾಂಕಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸುಭಾಷ್ ಚಂದ್ರ ಬೋಸ್ ನಡುವಿನ ಪತ್ರವ್ಯವಹಾರವನ್ನು ಉಲ್ಲೇಖಿಸಿದರು.

“ಬಂಕಿಮ್ ಚಂದ್ರ ಚಟರ್ಜಿ 1875ರಲ್ಲಿ ಈ ಗೀತೆಯನ್ನು ಬರೆದರು, ಮೊದಲ ಎರಡು ಚರಣಗಳನ್ನು ಬರೆದರು ಮತ್ತು 1882ರಲ್ಲಿ ನಾಲ್ಕು ಚರಣಗಳನ್ನು ಸೇರಿಸಿದ ನಂತರ ಆನಂದ್ ಮಠದಲ್ಲಿ ಪ್ರಕಟಿಸಿದರು. 1896ರಲ್ಲಿ ಗುರುದೇವ್ ರವೀಂದ್ರನಾಥ ಟ್ಯಾಗೋರ್ ಅವರು ಇದನ್ನು ಮೊದಲ ಬಾರಿಗೆ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಿದರು” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ರಾಷ್ಟ್ರೀಯ ಗೀತೆಯನ್ನಾಗಿ ಮಾಡುವ ನಿರ್ಧಾರವನ್ನು ಪ್ರಶ್ನಿಸುವುದು ಸಂವಿಧಾನ ಸಭೆ ಮತ್ತು ಅದರ ಸದಸ್ಯರನ್ನು ಪ್ರಶ್ನಿಸಿದಂತಿದೆ ಎಂದರು.

“ಮೋದಿಯವರು ಸುಮಾರು 12 ವರ್ಷಗಳ ಕಾಲ ಪ್ರಧಾನಿಯಾಗಿದ್ದಾರೆ. ಸರಿ ಸುಮಾರು ಅಷ್ಟೇ ಕಾಲ ನೆಹರು ಅವರು ಜೈಲಿನಲ್ಲಿದ್ದರು” ಎಂದು ನೆಹರು ವಿರುದ್ದದ ಮೋದಿ ಟೀಕೆಗೆ ಪ್ರಿಯಾಂಕಾ ತಿರುಗೇಟು ಕೊಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನೇಮಕಾತಿ ಅಕ್ರಮ ಖಂಡಿಸಿ ಜಾರ್ಖಂಡ್‌ನಲ್ಲಿ ಧರಣಿ: ವಿದ್ಯಾರ್ಥಿಗಳ ಹೋರಾಟಕ್ಕೆ ತಲೆಬಾಗಿದ ಸಿಎಂ ಹೇಮಂತ್ ಸೊರೇನ್, ‘ನ್ಯಾಯದ ಭರವಸೆ’

ಜಾರ್ಖಂಡ್‌ನ ಸರ್ಕಾರಿ ಉದ್ಯೋಗ ಆಕಾಂಕ್ಷಿಗಳು ಹಾಗೂ ಯುವಜನತೆ ತಮ್ಮ ಭವಿಷ್ಯದ ಭದ್ರತೆಗಾಗಿ ಬೀದಿಗಿಳಿದು ನಡೆಸುತ್ತಿರುವ ಬೃಹತ್ ಪ್ರತಿಭಟನೆ ಈಗ ಇಡೀ ರಾಜ್ಯದ ಗಮನ ಸೆಳೆದಿದೆ. ಜಾರ್ಖಂಡ್ ಸಾರ್ವಜನಿಕ ಸೇವಾ ಆಯೋಗ (JPSC) ಮತ್ತು...

ಪ.ಬಂಗಾಳ : ಮಮತಾ ಬ್ಯಾನರ್ಜಿ ಕಾರಿನ ಮೇಲೆ ದಾಳಿ; ಕಲ್ಲು, ಚಪ್ಪಲಿ ತೂರಿದ ಗುಂಪು

ಪೊಲೀಸ್ ಕಸ್ಟಡಿಯಲ್ಲಿ ಸಾವನ್ನಪ್ಪಿದ್ದಾರೆ ಎನ್ನಲಾದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಕಾರ್ಯಕರ್ತನ ಮನೆಗೆ ಹೋಗುತ್ತಿದ್ದಾಗ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಇದ್ದ ಕಾರಿನ ಮೇಲೆ ಗುಂಪೊಂದು ದಾಳಿ ನಡೆಸಿದ ಘಟನೆ ಭಾನುವಾರ...

SIR ನೆಪದಲ್ಲಿ 1 ಕೋಟಿ ಮತ ಡಿಲೀಟ್ ಮಾಡೋ ಸಂಚು: ಎಚ್ಚೆತ್ತುಕೊಳ್ಳುವಂತೆ ಕಾರ್ಯಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ

SIR ನೆಪದಲ್ಲಿ ಮತದಾರರ ಪಟ್ಟಿಯಿಂದ ಒಂದು ಕೋಟಿಗೂ ಹೆಚ್ಚು ಮತಗಳನ್ನು ಅಳಿಸುವ ಸಂಚು ನಡೆಯುತ್ತಿದೆ, ಕಾಂಗ್ರೆಸ್ ಕಾರ್ಯಕರ್ತರು ಈ ವಿಚಾರದಲ್ಲಿ ಎಚ್ಚೆತ್ತುಕೊಳ್ಳಬೇಕು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಕರೆ ನೀಡಿದರು. ಕೆಪಿಸಿಸಿ ಕಚೇರಿಯ...

‘ಮೋದಿ ದೇಶದ ಯುವಕರನ್ನು ಸಬಲೀಕರಣಗೊಳಿಸಲು ಶ್ರಮಿಸುತ್ತಿದ್ದಾರೆ ’: ‘ಜೆನ್ ಝೀ’ಗಳನ್ನು ‘ಬಾಹ್ಯ ಶಕ್ತಿಗಳು ದಾರಿ ತಪ್ಪಿಸುತ್ತಿವೆ’: ಒಡಿಶಾ ಸಿಎಂ ಮೋಹನ್ ಚರಣ್ ಮಾಝಿ

ಭುವನೇಶ್ವರ: ಜಾಗತಿಕ ವೇದಿಕೆಯಲ್ಲಿ "ತಮ್ಮನ್ನು ದಾರಿ ತಪ್ಪಿಸಲು ಮತ್ತು ಭಾರತವನ್ನು ದುರ್ಬಲಗೊಳಿಸಲು" ನಿರಂತರವಾಗಿ ಪ್ರಯತ್ನಿಸುತ್ತಿರುವ "ಬಾಹ್ಯ ಶಕ್ತಿಗಳಿಗೆ" ಬಲಿಯಾಗಬೇಡಿ ಎಂದು ಒಡಿಶಾ ಮುಖ್ಯಮಂತ್ರಿ ಮೋಹನ್ ಚರಣ್ ಮಾಝಿ ಭಾನುವಾರ ಜೆನ್ ಝೀ (GEN-Z)...

ಪದವಿ ಪ್ರದಾನ ಸಮಾರಂಭಕ್ಕೆ CJI ಆಹ್ವಾನಿಸಲು ಹೈದರಾಬಾದ್ ಕಾನೂನು ವಿಶ್ವವಿದ್ಯಾಲಯದಲ್ಲಿ ವಿದ್ಯಾರ್ಥಿಗಳ ವಿರೋಧ

ಹೈದರಾಬಾದ್‌ನ ‘ನಾಲ್ಸಾರ್’ (NALSAR) ಕಾನೂನು ವಿಶ್ವವಿದ್ಯಾಲಯದ ಪದವಿ ಪ್ರದಾನ ಸಮಾರಂಭಕ್ಕೆ ಭಾರತದ ಮುಖ್ಯ ನ್ಯಾಯಮೂರ್ತಿ (CJI) ಸೂರ್ಯ ಕಾಂತ್ ಅವರನ್ನು ಮುಖ್ಯ ಅತಿಥಿಯಾಗಿ ಆಹ್ವಾನಿಸಬಾರದು ಎಂದು ವಿಶ್ವವಿದ್ಯಾಲಯದ ವಿದ್ಯಾರ್ಥಿಗಳ ಒಂದು ಗುಂಪು ಆಡಳಿತ...

3ನೇ ಹಂತದ ‘SIR’ ಕರಡು ಮತದಾರರ ಪಟ್ಟಿ ಬಿಡುಗಡೆ: 12 ರಾಜ್ಯಗಳಲ್ಲಿ 1.58 ಕೋಟಿ ಮತದಾರರ ಹೆಸರು ಕೈಬಿಟ್ಟ ಆಯೋಗ, ಇನ್ನು ಕರ್ನಾಟಕ ಬಾಕಿ

3ನೇ ಹಂತದದಲ್ಲಿ ದೇಶದ 12 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ ಜುಲೈನಿಂದ ನಡೆಸಲಾದ ‘ವಿಶೇಷ ತೀವ್ರ ಮತಪಟ್ಟಿ ಪರಿಷ್ಕರಣೆ’ (SIR) ಪ್ರಕ್ರಿಯೆಯ ಬಳಿಕ ಬಿಡುಗಡೆಯಾದ ಕರಡು ಮತದಾರರ ಪಟ್ಟಿಯಲ್ಲಿ ಭಾರಿ ಪ್ರಮಾಣದ ಹೆಸರುಗಳು...

ದಾರುಲ್ ಉಲೂಮ್ ದಿಯೋಬಂದ್ ಆವರಣದಲ್ಲಿ ಶಿವಲಿಂಗವಿದೆ ಎಂದ ಹಿಂದುತ್ವ ಸಂಘಟನೆ : ಆ.11ರಂದು ಗಂಗಾಜಲ ಅರ್ಪಿಸುವುದಾಗಿ ಘೋಷಣೆ

ಉತ್ತರ ಪ್ರದೇಶದ ದಿಯೋಬಂದ್‌ನಲ್ಲಿರುವ ಪ್ರಸಿದ್ದ ಮುಸ್ಲಿಂ ಶಿಕ್ಷಣ ಸಂಸ್ಥೆ ದಾರುಲ್ ಉಲೂಮ್ ಆವರಣದಲ್ಲಿ ಶಿವಲಿಂಗವಿದೆ ಎಂದು ಪ್ರತಿಪಾದಿಸಿರುವ ಹಿಂದೂ ರಕ್ಷಾ ದಳ ಸಂಘಟನೆ, ಆಗಸ್ಟ್ 11 ರಂದು ಸಂಸ್ಥೆಗೆ ಭೇಟಿ ನೀಡಿ ಗಂಗಾಜಲ...

‘ಮೋದಿ ನಮ್ಮನ್ನು ಗುಂಡಿಕ್ಕಿ ಕೊಂದರೂ ಈ ಜೀವಿತಾವಧಿಯಲ್ಲಿ ವಂದೇ ಮಾತರಂ ಪೂರ್ಣ ಆವೃತ್ತಿ ಹಾಡುವುದಿಲ್ಲ’: ಕೇರಳ ಕಾಂಗ್ರೆಸ್ ಸಂಸದ ರಾಜಮೋಹನ್ ಉನ್ನಿತ್ತಾನ್

ಕಾಸರಗೋಡು (ಕೇರಳ): ಕೇಂದ್ರ ಸರ್ಕಾರದ ನಿರ್ದೇಶನದ ಮೇರೆಗೆ 'ಹರ್ ಘರ್ ತಿರಂಗಾ' ಅಭಿಯಾನದ ಸಮಯದಲ್ಲಿ ರಾಷ್ಟ್ರಗೀತೆ 'ವಂದೇ ಮಾತರಂ'ನ ಸಂಪೂರ್ಣ ವಾಗ್ವಾದ/ಆವೃತ್ತಿಯನ್ನು ಹಾಡುವಂತೆ ರಾಜ್ಯ ಸರ್ಕಾರ ಹೊರಡಿಸಿರುವ ಸಂವಹನದ ಸುತ್ತ ಭಾರಿ ವಿವಾದ...

ಮೊಜ್ತಬಾ ಖಾಮಿನೈ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದ ಇಸ್ರೇಲ್ ಮಾಧ್ಯಮಗಳು : ವಿಡಿಯೋ ಬಿಡುಗಡೆ ಮಾಡಿ ಕೌಂಟರ್ ಕೊಟ್ಟ ಇರಾನ್

ಇರಾನ್‌ನ ಸರ್ವೋಚ್ಚ ನಾಯಕ ಮೊಜ್ತಾಬಾ ಖಾಮಿನೈ ಅವರ ಆರೋಗ್ಯ ಸ್ಥಿತಿ 'ಅತ್ಯಂತ ಗಂಭೀರವಾಗಿದೆ' ಎಂದು ಇಸ್ರೇಲಿ ಮಾಧ್ಯಮಗಳು ವರದಿ ಮಾಡಿದ ಬೆನ್ನಲ್ಲೇ, ಅವರು ಉತ್ತಮ ಆರೋಗ್ಯದಿಂದ ಇರುವಂತೆ ಕಾಣಿಸುವ ದಿನಾಂಕವಿಲ್ಲದ ವಿಡಿಯೋ ಒಂದನ್ನು...

‘ಬ್ರಿಟಿಷರಿಂದ ಕಠಿಣ ಶಿಕ್ಷೆ ಅನುಭವಿಸಿದವರು ಸಾವರ್ಕರ್’ ಎಂಬ ಕೇರಳ ಶಾಲೆಯೊಂದರ ಕ್ವಿಜ್‌ ಪ್ರಶ್ನೆ ತಂದಿಟ್ಟ ವಿವಾದ

ಕೇರಳದ ಕಾಸರಗೋಡು ಜಿಲ್ಲೆಯ ಮಂಜೇಶ್ವರಂ ಮತ್ತು ಕುಂಬಳೆ ಉಪಜಿಲ್ಲೆಗಳ ಕಿರಿಯ ಪ್ರಾಥಮಿಕ ಶಾಲಾ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾಗಿದ್ದ ಸ್ವಾತಂತ್ರ್ಯ ದಿನಾಚರಣೆ ಕ್ವಿಜ್‌ನಲ್ಲಿ ವಿ ವಿನಾಯಕ ದಾಮೋದರ ಸಾವರ್ಕರ್ ಕುರಿತಾದ ಪ್ರಶ್ನೆಯೊಂದು ತೀವ್ರ ವಿವಾದಕ್ಕೆ ಕಾರಣವಾಗಿದೆ....