Homeಮುಖಪುಟಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ 'ವಂದೇ ಮಾತರಂ' ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ ‘ವಂದೇ ಮಾತರಂ’ ಕುರಿತು ಚರ್ಚೆ ಏಕೆ? ಪ್ರಿಯಾಂಕಾ ಗಾಂಧಿ

- Advertisement -
- Advertisement -

ಸೋಮವಾರ ಲೋಕಸಭೆಯಲ್ಲಿ ‘ವಂದೇ ಮಾತರಂನ 150 ವರ್ಷಗಳು’ ಕುರಿತ ಚರ್ಚೆಯಲ್ಲಿ ಭಾಗವಹಿಸಿದ್ದ ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ, ಭಾರತಕ್ಕೆ ಸ್ವಾತಂತ್ರ್ಯ ಬಂದು 79 ವರ್ಷಗಳ ನಂತರ, ಚರ್ಚಿಸಲು ಹೆಚ್ಚು ಮುಖ್ಯವಾದ ವಿಷಯಗಳಿರುವಾಗ, ಈ ಗೀತೆಯ ಕುರಿತು ಸದನ ಏಕೆ ಚರ್ಚೆ ನಡೆಸುತ್ತಿದೆ ಎಂದು ಪ್ರಶ್ನಿಸಿದರು.

“ನಾವು ಚರ್ಚಿಸುತ್ತಿರುವ ವಿಷಯವು ದೇಶದ ಆತ್ಮದ ಭಾಗವಾಗಿದೆ. ನಾವು ವಂದೇ ಮಾತರಂ ಬಗ್ಗೆ ಪ್ರಸ್ತಾಪಿಸಿದಾಗ, ಅದು ನಮ್ಮ ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ನೆನಪಿಸುತ್ತದೆ. ಈ ಚರ್ಚೆ ವಿಚಿತ್ರವಾಗಿದೆ; ಈ ಗೀತೆ ಜನರ ಹೃದಯದಲ್ಲಿ ಸ್ಥಾನ ಪಡೆದಿದೆ; ಹೀಗಿರುವಾಗ ಈ ಚರ್ಚೆಯ ಅಗತ್ಯವೇನಿದೆ?” ಎಂದು ಪ್ರಿಯಾಂಕಾ ಗಾಂಧಿ ಕೇಳಿದರು.

“ನಮ್ಮ ಗುರಿ ಏನು, ಜನರಿಗೆ ಸಂಬಂಧಿಸಿದಂತೆ ನಮ್ಮ ಜವಾಬ್ದಾರಿ ಏನು, ಅದನ್ನು ನಾವು ಹೇಗೆ ಪೂರೈಸುತ್ತಿದ್ದೇವೆ..? ನಾವು ಈ ರಾಷ್ಟ್ರೀಯ ಗೀತೆಯ ಬಗ್ಗೆ ಚರ್ಚಿಸುತ್ತಿರುವುದು ಏಕೆ? ಅದರ ಬಗ್ಗೆ ಏನು ಚರ್ಚೆ ಮಾಡಬಹುದು?” ಎಂದು ಪ್ರಿಯಾಂಕಾ ಗಾಂಧಿ ಪ್ರಶ್ನೆ ಎತ್ತಿದ್ದರು.

ಇತರ ಪ್ರಮುಖ ವಿಷಯಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಈ ಚರ್ಚೆಯನ್ನು ಹಮ್ಮಿಕೊಳ್ಳಲಾಗಿದೆ ಎಂದು ಅವರು ಆರೋಪಿಸಿದರು. ಬಂಗಾಳದಲ್ಲಿ ಚುನಾವಣೆ ಸಮೀಪಿಸುತ್ತಿರುವುದರಿಂದ ಮತ್ತು ಪ್ರಧಾನ ಮಂತ್ರಿಗಳು ಅದರಲ್ಲಿ ತಮ್ಮ ಪಾತ್ರವನ್ನು ನಿರ್ವಹಿಸಲು ಬಯಸುತ್ತಿರುವುದರಿಂದ ನಾವು ಈ ಚರ್ಚೆಯನ್ನು ನಡೆಸುತ್ತಿದ್ದೇವೆ” ಎಂದು ಹೇಳಿದರು.

ಸರ್ಕಾರ ಈ ಚರ್ಚೆ ಹಮ್ಮಿಕೊಳ್ಳಲು ಎರಡನೆಯ ಕಾರಣವೆಂದರೆ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದ ಮತ್ತು ದೇಶಕ್ಕಾಗಿ ಅಪಾರ ತ್ಯಾಗ ಮಾಡಿದವರ ವಿರುದ್ಧ ಹೊಸ ಆರೋಪಗಳನ್ನು ಮಾಡಲು ಎಂದು ಪ್ರಿಯಾಂಕಾ ಗಾಂಧಿ ದೂರಿದರು.

“ಈ ಸರ್ಕಾರ ವರ್ತಮಾನ ಮತ್ತು ಭವಿಷ್ಯವನ್ನು ನೋಡಲು ಬಯಸುವುದಿಲ್ಲವಾದ್ದರಿಂದ ನಾವು ಭೂತಕಾಲವನ್ನು ಪರಿಶೀಲಿಸುತ್ತಲೇ ಇರಬೇಕೆಂದು ನೀವು ಬಯಸುತ್ತೀರಿ” ಎಂದರು.

“ಪ್ರಧಾನಿ ಮೋದಿ ಅವರು ಹಿಂದಿನ ಪ್ರಧಾನಿಯಲ್ಲ; ಇದು ಅವರ ಆತ್ಮವಿಶ್ವಾಸ ಕಡಿಮೆಯಾಗುತ್ತಿದೆ ಮತ್ತು ಅವರ ನೀತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ ಎಂದು ತೋರಿಸುತ್ತಿದೆ. ಸರ್ಕಾರದಲ್ಲಿರುವ ನನ್ನ ಸ್ನೇಹಿತರು ಮೌನವಾಗಿದ್ದಾರೆ, ಏಕೆಂದರೆ ಅವರಿಗೂ ಇದು ತಿಳಿದಿದೆ” ಎಂದು ಪ್ರಿಯಾಂಕಾ ಹೇಳಿದರು.

ಪ್ರಧಾನಿ ನರೇಂದ್ರ ಮೋದಿ ಅವರನ್ನು ಟೀಕಿಸಿದ ಪ್ರಿಯಾಂಕಾ, ಅವರ “ಆತ್ಮವಿಶ್ವಾಸ ಕಡಿಮೆಯಾಗುತ್ತಿದೆ ಮತ್ತು ನೀತಿಗಳು ದೇಶವನ್ನು ದುರ್ಬಲಗೊಳಿಸುತ್ತಿವೆ” ಎಂದು ಆರೋಪಿಸಿದರು.

ದೇಶದ ಮೊದಲ ಪ್ರಧಾನಿ ಜವಾಹರಲಾಲ್ ನೆಹರೂ ಅವರನ್ನು ಗುರಿಯಾಗಿಸಿಕೊಂಡಿದ್ದಕ್ಕಾಗಿ ಬಿಜೆಪಿಯನ್ನು ತರಾಟೆಗೆ ತೆಗೆದುಕೊಂಡ ಪ್ರಿಯಾಂಕಾ ಗಾಂಧಿ, ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರ ವಿರುದ್ಧ ಹೊಸ ಆರೋಪಗಳನ್ನು ಮಾಡಲು ಸರ್ಕಾರ ಈ ಚರ್ಚೆಯನ್ನು ಬಯಸುತ್ತಿದೆ ಎಂದು ಹೇಳಿದರು.

“ನೀವು ನೆಹರು ಬಗ್ಗೆ ಸದಾ ಮಾತನಾಡುತ್ತಿರುವುದರಿಂದ ಒಂದು ಕೆಲಸ ಮಾಡೋಣ. ಒಂದು ಚರ್ಚೆಗೆ ಸಮಯ ನಿಗದಿಪಡಿಸೋಣ. ನೆಹರು ವಿರುದ್ದದ ಎಲ್ಲಾ ಆರೋಪಗಳನ್ನು ಪಟ್ಟಿ ಮಾಡೋಣ. ಅವುಗಳ ಕುರಿತು ಚರ್ಚೆ ನಡೆಸಿ, ವಿಷಯವನ್ನು ಅಲ್ಲಿಗೆ ಮುಗಿಸಿ ಬಿಡೋಣ. ಅದರ ನಂತರ, ಇಂದಿನ ಸಮಸ್ಯೆಗಳಾದ ಬೆಲೆ ಏರಿಕೆ ಮತ್ತು ನಿರುದ್ಯೋಗದ ಬಗ್ಗೆ ಮಾತನಾಡೋಣ” ಎಂದರು.

ವಂದೇ ಮಾತರಂ ಮೇಲೆ ಕಾಂಗ್ರೆಸ್ ತುಷ್ಟೀಕರಣದ ರಾಜಕೀಯ ಮಾಡಿದೆ ಎಂಬ ಪ್ರಧಾನಿ ಮೋದಿಯವರ ಆರೋಪವನ್ನು ಅಲ್ಲಗಳೆಯಲು ಪ್ರಿಯಾಂಕಾ ಗಾಂಧಿ, ಜವಾಹರಲಾಲ್ ನೆಹರು ಮತ್ತು ಸುಭಾಷ್ ಚಂದ್ರ ಬೋಸ್ ನಡುವಿನ ಪತ್ರವ್ಯವಹಾರವನ್ನು ಉಲ್ಲೇಖಿಸಿದರು.

“ಬಂಕಿಮ್ ಚಂದ್ರ ಚಟರ್ಜಿ 1875ರಲ್ಲಿ ಈ ಗೀತೆಯನ್ನು ಬರೆದರು, ಮೊದಲ ಎರಡು ಚರಣಗಳನ್ನು ಬರೆದರು ಮತ್ತು 1882ರಲ್ಲಿ ನಾಲ್ಕು ಚರಣಗಳನ್ನು ಸೇರಿಸಿದ ನಂತರ ಆನಂದ್ ಮಠದಲ್ಲಿ ಪ್ರಕಟಿಸಿದರು. 1896ರಲ್ಲಿ ಗುರುದೇವ್ ರವೀಂದ್ರನಾಥ ಟ್ಯಾಗೋರ್ ಅವರು ಇದನ್ನು ಮೊದಲ ಬಾರಿಗೆ ಕಾಂಗ್ರೆಸ್ ಅಧಿವೇಶನದಲ್ಲಿ ಹಾಡಿದರು” ಎಂದು ಪ್ರಿಯಾಂಕಾ ಗಾಂಧಿ ಹೇಳಿದರು.

ವಂದೇ ಮಾತರಂನ ಮೊದಲ ಎರಡು ಚರಣಗಳನ್ನು ರಾಷ್ಟ್ರೀಯ ಗೀತೆಯನ್ನಾಗಿ ಮಾಡುವ ನಿರ್ಧಾರವನ್ನು ಪ್ರಶ್ನಿಸುವುದು ಸಂವಿಧಾನ ಸಭೆ ಮತ್ತು ಅದರ ಸದಸ್ಯರನ್ನು ಪ್ರಶ್ನಿಸಿದಂತಿದೆ ಎಂದರು.

“ಮೋದಿಯವರು ಸುಮಾರು 12 ವರ್ಷಗಳ ಕಾಲ ಪ್ರಧಾನಿಯಾಗಿದ್ದಾರೆ. ಸರಿ ಸುಮಾರು ಅಷ್ಟೇ ಕಾಲ ನೆಹರು ಅವರು ಜೈಲಿನಲ್ಲಿದ್ದರು” ಎಂದು ನೆಹರು ವಿರುದ್ದದ ಮೋದಿ ಟೀಕೆಗೆ ಪ್ರಿಯಾಂಕಾ ತಿರುಗೇಟು ಕೊಟ್ಟರು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...