Homeಕರ್ನಾಟಕಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

ಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

- Advertisement -
- Advertisement -

ಬಿ.ಎಸ್.ಯಡಿಯೂರಪ್ಪ ಇತಿಹಾಸ ನಿರ್ಮಿಸಿದ್ದಾರೆ. ಅದೂ ನಾಲ್ಕು ಬಾರಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಮೂಲಕ. ಯಡಿಯೂರಪ್ಪ ಈಗ ರಾಜಿನಾಮೆ ಕೊಡಲಿ ಇಲ್ಲವೇ ಬಿಡಲಿ ಅವರ ದಾಖಲೆಯಂತೂ ಮುರಿಯಲು ಸಧ್ಯಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಯಡಿಯೂರಪ್ಪ ಅವರಂತೆ ಜೈಲಿಗೆ ಹೋಗಿ ಬಂದವರೂ ಯಾರೂ ಇಲ್ಲ. ಕೆ.ಜೆ.ಪಿ ಪಕ್ಷ ಕಟ್ಟಿ ಮತ್ತೆ ಮಾತೃ ಪಕ್ಷ ಬಿಜೆಪಿಗೆ ಮರಳಿ ಮುಖ್ಯಮಂತ್ರಿಯೂ ಆದರು. ಬೇರೆ ಯಾರಿಗೂ ಆ ಛಾನ್ಸ್ ಸಿಗಲಿಲ್ಲ ಬಿಡಿ. ಇಂತಹ ಪ್ರಸಂಗಗಳು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಹಿಂದೆಯೂ ನಡೆದಿಲ್ಲ. ಮುಂದೆಯೂ ಸಂಭವಿಸುವುದಿಲ್ಲ. ಒಂದೇ ಪಕ್ಷದಲ್ಲಿ ನಾಲ್ಕು ಬಾರಿ ಅಧಿಕಾರದ ಗದ್ದುಗೆ ಏರಿದವರು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಮಾತ್ರ.

ಯಡಿಯೂರಪ್ಪ ಬೇಕಂತಲೇ ಮಾತಾಡಿರುವಂತಿರುವ ವಿಡಿಯೋ ಕೇಳಿ..

ಯಡಿಯೂರಪ್ಪ ಹಿಂದೆಯೂ ಕಷ್ಟ ಅನುಭವಿಸಿದರು. ಸ್ವಪಕ್ಷದವರೇ ಕಾಲೆಳೆದಿದ್ದು ಹೆಚ್ಚು. ಮಾಜಿ ಕೇಂದ್ರ ಸಚಿವ ದಿವಂಗತ ಎಚ್.ಎನ್. ಅನಂತ ಕುಮಾರ್ ಮತ್ತು ಯಡಿಯೂರಪ್ಪ ನಡುವೆ ಶೀತಲ ಸಮರ ಕೊನೆಯವರೆಗೂ ಇತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ಇಳಿಯಲು ಅನಂತ್ ಕುಮಾರ್ ಪಾತ್ರವೂ ಇತ್ತು. ಆ ಕಾರಣಕ್ಕಾಗಿಯೇ ಒಂದು ಅವಧಿಯ ಸರ್ಕಾರದಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಕಾಣಬೇಕಾದ ಪರಿಸ್ಥಿತಿ ಬಂತು.

ಜೈಲಿಗೆ ಹೋಗಿ ಬಂದ ಮೇಲೆ ಯಡಿಯೂರಪ್ಪ ಸ್ವಲ್ಪ ಮಂಕಾಗಿದ್ದಾರೆ. ವಯಸ್ಸು ಅವರನ್ನು ಬಾಧಿಸುತ್ತಿದೆ. ಆದರೂ ಮುಖ್ಯಮಂತ್ರಿ ಪಟ್ಟದಲ್ಲಿ ಮುಂದುವರಿಯಲು ಹೆಣಗುತ್ತಿದ್ದಾರೆ. ಹಿಂದೆ ಅನಂತಕುಮಾರ್ ಕಿರುಕುಳ ಇತ್ತು. ಅವರು ಹೋದ ಮೇಲೆ ಈಗ ಹಲವು ಮಗ್ಗಲು ಮುಳ್ಳುಗಳು ಯಡಿಯೂರಪ್ಪ ಅವರನ್ನು ಚುಚ್ಚುತ್ತಿವೆ. ಆರ್.ಎಸ್.ಎಸ್ ಮುಖಂಡ ಸಂತೋಷ್ ಅನಂತ್ ಸ್ಥಾನದಲ್ಲಿ ಕುಳಿತು ಯಡಿಯೂರಪ್ಪ ಅವರಿಗೆ ತಿವಿಯುತ್ತಿದ್ದಾರೆ. ಸಚಿವ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಂದಿಲ್ಲೊಂದು ಬಗೆಯಲ್ಲಿ ಸರ್ಕಾರ ಮತ್ತು ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಲೇ ಇದ್ದಾರೆ. ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ, ಡಾ.ಅಶ್ವತ್ಥನಾರಾಯಣ ಮತ್ತು ಕೇಂದ್ರ ಸಚಿವ ಸದಾನಂದಗೌಡ ಅವರು ಹೈಕಮಾಂಡ್ ನಾಯಕರಿಗೆ ಆಪ್ತರಾಗಿದ್ದಾರೆ. ಹೀಗಾಗಿ ಯಡಿಯೂರಪ್ಪ ಬಲಹೀನರಾಗಿದ್ದಾರೆ.

ಕರ್ನಾಟಕದ ಬಿಜೆಪಿಯಲ್ಲಿ ಈಗ ಎರಡು-ಮೂರು ಬಣಗಳು ಸಕ್ರಿಯವಾಗಿ ಕಾರ್ಯಚರಿಸುತ್ತಿವೆ. ಬಣಗಳ ಪ್ರಾಬಲ್ಯ ಬಿಗಿಗೊಂಡಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆದರಿದಂತೆ ಕಾಣುತ್ತಿದ್ದಾರೆ. ರಾಜ್ಯದಲ್ಲಿ ಪ್ರವಾಸ ಹೋದಕಡೆಯಲ್ಲಾ ಮಾಧ್ಯಮಗಳ ಮುಂದೆ ಏನೂ ಮಾತನಾಡದೆ ಕುಗ್ಗಿ ಹೋಗಿದ್ದಾರೆ. ನೆರೆ ಪರಿಹಾರವು ಬಿಡುಗಡೆಯಾಗಿಲ್ಲ. ಹೈಕಮಾಂಡ್ ನಾಯಕರ ಕೃಪಾಕಟಾಕ್ಷವೂ ಇಲ್ಲ ಎಂಬುದು ಖಚಿತವಾಗಿರುವುದರಿಂದ  ಯಡಿಯೂರಪ್ಪ ಕೂಡ ಹೊಸ ದಾಳಗಳನ್ನು ಉರುಳಿಸುತ್ತಿದ್ದಾರೆ.

ಅನರ್ಹ ಶಾಸಕರು ಶಾಸಕರ ಬಿಜೆಪಿ ಸೇರ್ಪಡೆ ಅಥವಾ ಟಿಕೆಟ್ ನೀಡುವ ಸಂಬಂಧ ದ್ವಂದ್ವ ಹೇಳಿಕೆಗಳು ಪ್ರಕಟವಾಗುತ್ತಿರುವುದು ನಡೆದಿದೆ. ಇಂತಹ ಸಮಯದಲ್ಲಿ ಅನರ್ಹರ ಬೆನ್ನಿಗೆ ನಿಂತಿರುವುದು ಮುಖ್ಯಮಂತ್ರಿ ಒಬ್ಬರೇ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜಿನಾಮೆ ನೀಡುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಬಲವಿತ್ತು. ಅವರೇ ಶಾಸಕರು ಮುಂಬೈನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದು ಎಂಬ  ಹೇಳಿಕೆ ಈಗ ವಿವಾದ ಸೃಷ್ಟಿಸಿದೆ. ಇಂತಹ ಹೇಳಿಕೆ ನೀಡುವ ಮೂಲಕ ಹೈಕಮಾಂಡ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಲು ಯಡಿಯೂರಪ್ಪ ಪ್ರಯತ್ನಿಸುತ್ತಿದ್ದಾರೆ ತನ್ನ ಸ್ಥಾನವೂ ಭದ್ರವಾಗಿರಬೇಕು. ಮತ್ತೆ ಯಾರೂ ನನ್ನ ವಿರುದ್ಧ ಪಿತೂರಿ ನಡೆಸಬಾರದು ಎಂಬ ಉದ್ದೇಶ ಈ ಹೇಳಿಕೆಯಲ್ಲಿದ್ದಂತಿದೆ.

ಅನರ್ಹ ಶಾಸಕರಿಗೆ ಅಮಿತ್ ಶಾ ಬೆಂಬಲದ ಹೇಳಿಕೆ ಬಿಜೆಪಿಗೆ ಡ್ಯಾಮೇಜ್ ತಂದೊಡ್ಡಲಿದೆ. ಯಡಿಯೂರಪ್ಪ ಅವರಿಗೂ ಬೇಕಾಗಿರುವುದು ಇದೇ. ತನಗೆ ಪದೇ ಪೇದೆ ಕಿರುಕುಳ ಕೊಡುವವರನ್ನು ಸಹಿಸಿಕೊಳ್ಳಲು ಹೇಗೆ ಸಾಧ್ಯ. ಅದೇ ಕಾರಣಕ್ಕೆ ಯಡಿಯೂರಪ್ಪ ಈ ರೀತಿ ಹೇಳಿಕೆ ನೀಡಿ ಚುಚ್ಚುತ್ತಿದ್ದಾರೆ. ಇಲ್ಲದಿದ್ದರೆ ಅಧಿಕಾರದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಬಿಜೆಪಿಯ ವೀರಶೈವ ಲಿಂಗಾಯತರು ಹೇಳುವ ಮಾತು. ಅಂತೂ ಯಡಿಯೂರಪ್ಪ ಆಟ ಎಷ್ಟು ದಿನ ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...