Homeಕರ್ನಾಟಕಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

ಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

- Advertisement -
- Advertisement -

ಬಿ.ಎಸ್.ಯಡಿಯೂರಪ್ಪ ಇತಿಹಾಸ ನಿರ್ಮಿಸಿದ್ದಾರೆ. ಅದೂ ನಾಲ್ಕು ಬಾರಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಮೂಲಕ. ಯಡಿಯೂರಪ್ಪ ಈಗ ರಾಜಿನಾಮೆ ಕೊಡಲಿ ಇಲ್ಲವೇ ಬಿಡಲಿ ಅವರ ದಾಖಲೆಯಂತೂ ಮುರಿಯಲು ಸಧ್ಯಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಯಡಿಯೂರಪ್ಪ ಅವರಂತೆ ಜೈಲಿಗೆ ಹೋಗಿ ಬಂದವರೂ ಯಾರೂ ಇಲ್ಲ. ಕೆ.ಜೆ.ಪಿ ಪಕ್ಷ ಕಟ್ಟಿ ಮತ್ತೆ ಮಾತೃ ಪಕ್ಷ ಬಿಜೆಪಿಗೆ ಮರಳಿ ಮುಖ್ಯಮಂತ್ರಿಯೂ ಆದರು. ಬೇರೆ ಯಾರಿಗೂ ಆ ಛಾನ್ಸ್ ಸಿಗಲಿಲ್ಲ ಬಿಡಿ. ಇಂತಹ ಪ್ರಸಂಗಗಳು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಹಿಂದೆಯೂ ನಡೆದಿಲ್ಲ. ಮುಂದೆಯೂ ಸಂಭವಿಸುವುದಿಲ್ಲ. ಒಂದೇ ಪಕ್ಷದಲ್ಲಿ ನಾಲ್ಕು ಬಾರಿ ಅಧಿಕಾರದ ಗದ್ದುಗೆ ಏರಿದವರು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಮಾತ್ರ.

ಯಡಿಯೂರಪ್ಪ ಬೇಕಂತಲೇ ಮಾತಾಡಿರುವಂತಿರುವ ವಿಡಿಯೋ ಕೇಳಿ..

ಯಡಿಯೂರಪ್ಪ ಹಿಂದೆಯೂ ಕಷ್ಟ ಅನುಭವಿಸಿದರು. ಸ್ವಪಕ್ಷದವರೇ ಕಾಲೆಳೆದಿದ್ದು ಹೆಚ್ಚು. ಮಾಜಿ ಕೇಂದ್ರ ಸಚಿವ ದಿವಂಗತ ಎಚ್.ಎನ್. ಅನಂತ ಕುಮಾರ್ ಮತ್ತು ಯಡಿಯೂರಪ್ಪ ನಡುವೆ ಶೀತಲ ಸಮರ ಕೊನೆಯವರೆಗೂ ಇತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ಇಳಿಯಲು ಅನಂತ್ ಕುಮಾರ್ ಪಾತ್ರವೂ ಇತ್ತು. ಆ ಕಾರಣಕ್ಕಾಗಿಯೇ ಒಂದು ಅವಧಿಯ ಸರ್ಕಾರದಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಕಾಣಬೇಕಾದ ಪರಿಸ್ಥಿತಿ ಬಂತು.

ಜೈಲಿಗೆ ಹೋಗಿ ಬಂದ ಮೇಲೆ ಯಡಿಯೂರಪ್ಪ ಸ್ವಲ್ಪ ಮಂಕಾಗಿದ್ದಾರೆ. ವಯಸ್ಸು ಅವರನ್ನು ಬಾಧಿಸುತ್ತಿದೆ. ಆದರೂ ಮುಖ್ಯಮಂತ್ರಿ ಪಟ್ಟದಲ್ಲಿ ಮುಂದುವರಿಯಲು ಹೆಣಗುತ್ತಿದ್ದಾರೆ. ಹಿಂದೆ ಅನಂತಕುಮಾರ್ ಕಿರುಕುಳ ಇತ್ತು. ಅವರು ಹೋದ ಮೇಲೆ ಈಗ ಹಲವು ಮಗ್ಗಲು ಮುಳ್ಳುಗಳು ಯಡಿಯೂರಪ್ಪ ಅವರನ್ನು ಚುಚ್ಚುತ್ತಿವೆ. ಆರ್.ಎಸ್.ಎಸ್ ಮುಖಂಡ ಸಂತೋಷ್ ಅನಂತ್ ಸ್ಥಾನದಲ್ಲಿ ಕುಳಿತು ಯಡಿಯೂರಪ್ಪ ಅವರಿಗೆ ತಿವಿಯುತ್ತಿದ್ದಾರೆ. ಸಚಿವ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಂದಿಲ್ಲೊಂದು ಬಗೆಯಲ್ಲಿ ಸರ್ಕಾರ ಮತ್ತು ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಲೇ ಇದ್ದಾರೆ. ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ, ಡಾ.ಅಶ್ವತ್ಥನಾರಾಯಣ ಮತ್ತು ಕೇಂದ್ರ ಸಚಿವ ಸದಾನಂದಗೌಡ ಅವರು ಹೈಕಮಾಂಡ್ ನಾಯಕರಿಗೆ ಆಪ್ತರಾಗಿದ್ದಾರೆ. ಹೀಗಾಗಿ ಯಡಿಯೂರಪ್ಪ ಬಲಹೀನರಾಗಿದ್ದಾರೆ.

ಕರ್ನಾಟಕದ ಬಿಜೆಪಿಯಲ್ಲಿ ಈಗ ಎರಡು-ಮೂರು ಬಣಗಳು ಸಕ್ರಿಯವಾಗಿ ಕಾರ್ಯಚರಿಸುತ್ತಿವೆ. ಬಣಗಳ ಪ್ರಾಬಲ್ಯ ಬಿಗಿಗೊಂಡಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆದರಿದಂತೆ ಕಾಣುತ್ತಿದ್ದಾರೆ. ರಾಜ್ಯದಲ್ಲಿ ಪ್ರವಾಸ ಹೋದಕಡೆಯಲ್ಲಾ ಮಾಧ್ಯಮಗಳ ಮುಂದೆ ಏನೂ ಮಾತನಾಡದೆ ಕುಗ್ಗಿ ಹೋಗಿದ್ದಾರೆ. ನೆರೆ ಪರಿಹಾರವು ಬಿಡುಗಡೆಯಾಗಿಲ್ಲ. ಹೈಕಮಾಂಡ್ ನಾಯಕರ ಕೃಪಾಕಟಾಕ್ಷವೂ ಇಲ್ಲ ಎಂಬುದು ಖಚಿತವಾಗಿರುವುದರಿಂದ  ಯಡಿಯೂರಪ್ಪ ಕೂಡ ಹೊಸ ದಾಳಗಳನ್ನು ಉರುಳಿಸುತ್ತಿದ್ದಾರೆ.

ಅನರ್ಹ ಶಾಸಕರು ಶಾಸಕರ ಬಿಜೆಪಿ ಸೇರ್ಪಡೆ ಅಥವಾ ಟಿಕೆಟ್ ನೀಡುವ ಸಂಬಂಧ ದ್ವಂದ್ವ ಹೇಳಿಕೆಗಳು ಪ್ರಕಟವಾಗುತ್ತಿರುವುದು ನಡೆದಿದೆ. ಇಂತಹ ಸಮಯದಲ್ಲಿ ಅನರ್ಹರ ಬೆನ್ನಿಗೆ ನಿಂತಿರುವುದು ಮುಖ್ಯಮಂತ್ರಿ ಒಬ್ಬರೇ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜಿನಾಮೆ ನೀಡುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಬಲವಿತ್ತು. ಅವರೇ ಶಾಸಕರು ಮುಂಬೈನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದು ಎಂಬ  ಹೇಳಿಕೆ ಈಗ ವಿವಾದ ಸೃಷ್ಟಿಸಿದೆ. ಇಂತಹ ಹೇಳಿಕೆ ನೀಡುವ ಮೂಲಕ ಹೈಕಮಾಂಡ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಲು ಯಡಿಯೂರಪ್ಪ ಪ್ರಯತ್ನಿಸುತ್ತಿದ್ದಾರೆ ತನ್ನ ಸ್ಥಾನವೂ ಭದ್ರವಾಗಿರಬೇಕು. ಮತ್ತೆ ಯಾರೂ ನನ್ನ ವಿರುದ್ಧ ಪಿತೂರಿ ನಡೆಸಬಾರದು ಎಂಬ ಉದ್ದೇಶ ಈ ಹೇಳಿಕೆಯಲ್ಲಿದ್ದಂತಿದೆ.

ಅನರ್ಹ ಶಾಸಕರಿಗೆ ಅಮಿತ್ ಶಾ ಬೆಂಬಲದ ಹೇಳಿಕೆ ಬಿಜೆಪಿಗೆ ಡ್ಯಾಮೇಜ್ ತಂದೊಡ್ಡಲಿದೆ. ಯಡಿಯೂರಪ್ಪ ಅವರಿಗೂ ಬೇಕಾಗಿರುವುದು ಇದೇ. ತನಗೆ ಪದೇ ಪೇದೆ ಕಿರುಕುಳ ಕೊಡುವವರನ್ನು ಸಹಿಸಿಕೊಳ್ಳಲು ಹೇಗೆ ಸಾಧ್ಯ. ಅದೇ ಕಾರಣಕ್ಕೆ ಯಡಿಯೂರಪ್ಪ ಈ ರೀತಿ ಹೇಳಿಕೆ ನೀಡಿ ಚುಚ್ಚುತ್ತಿದ್ದಾರೆ. ಇಲ್ಲದಿದ್ದರೆ ಅಧಿಕಾರದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಬಿಜೆಪಿಯ ವೀರಶೈವ ಲಿಂಗಾಯತರು ಹೇಳುವ ಮಾತು. ಅಂತೂ ಯಡಿಯೂರಪ್ಪ ಆಟ ಎಷ್ಟು ದಿನ ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...