Homeಕರ್ನಾಟಕಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

ಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

- Advertisement -
- Advertisement -

ಬಿ.ಎಸ್.ಯಡಿಯೂರಪ್ಪ ಇತಿಹಾಸ ನಿರ್ಮಿಸಿದ್ದಾರೆ. ಅದೂ ನಾಲ್ಕು ಬಾರಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಮೂಲಕ. ಯಡಿಯೂರಪ್ಪ ಈಗ ರಾಜಿನಾಮೆ ಕೊಡಲಿ ಇಲ್ಲವೇ ಬಿಡಲಿ ಅವರ ದಾಖಲೆಯಂತೂ ಮುರಿಯಲು ಸಧ್ಯಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಯಡಿಯೂರಪ್ಪ ಅವರಂತೆ ಜೈಲಿಗೆ ಹೋಗಿ ಬಂದವರೂ ಯಾರೂ ಇಲ್ಲ. ಕೆ.ಜೆ.ಪಿ ಪಕ್ಷ ಕಟ್ಟಿ ಮತ್ತೆ ಮಾತೃ ಪಕ್ಷ ಬಿಜೆಪಿಗೆ ಮರಳಿ ಮುಖ್ಯಮಂತ್ರಿಯೂ ಆದರು. ಬೇರೆ ಯಾರಿಗೂ ಆ ಛಾನ್ಸ್ ಸಿಗಲಿಲ್ಲ ಬಿಡಿ. ಇಂತಹ ಪ್ರಸಂಗಗಳು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಹಿಂದೆಯೂ ನಡೆದಿಲ್ಲ. ಮುಂದೆಯೂ ಸಂಭವಿಸುವುದಿಲ್ಲ. ಒಂದೇ ಪಕ್ಷದಲ್ಲಿ ನಾಲ್ಕು ಬಾರಿ ಅಧಿಕಾರದ ಗದ್ದುಗೆ ಏರಿದವರು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಮಾತ್ರ.

ಯಡಿಯೂರಪ್ಪ ಬೇಕಂತಲೇ ಮಾತಾಡಿರುವಂತಿರುವ ವಿಡಿಯೋ ಕೇಳಿ..

ಯಡಿಯೂರಪ್ಪ ಹಿಂದೆಯೂ ಕಷ್ಟ ಅನುಭವಿಸಿದರು. ಸ್ವಪಕ್ಷದವರೇ ಕಾಲೆಳೆದಿದ್ದು ಹೆಚ್ಚು. ಮಾಜಿ ಕೇಂದ್ರ ಸಚಿವ ದಿವಂಗತ ಎಚ್.ಎನ್. ಅನಂತ ಕುಮಾರ್ ಮತ್ತು ಯಡಿಯೂರಪ್ಪ ನಡುವೆ ಶೀತಲ ಸಮರ ಕೊನೆಯವರೆಗೂ ಇತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ಇಳಿಯಲು ಅನಂತ್ ಕುಮಾರ್ ಪಾತ್ರವೂ ಇತ್ತು. ಆ ಕಾರಣಕ್ಕಾಗಿಯೇ ಒಂದು ಅವಧಿಯ ಸರ್ಕಾರದಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಕಾಣಬೇಕಾದ ಪರಿಸ್ಥಿತಿ ಬಂತು.

ಜೈಲಿಗೆ ಹೋಗಿ ಬಂದ ಮೇಲೆ ಯಡಿಯೂರಪ್ಪ ಸ್ವಲ್ಪ ಮಂಕಾಗಿದ್ದಾರೆ. ವಯಸ್ಸು ಅವರನ್ನು ಬಾಧಿಸುತ್ತಿದೆ. ಆದರೂ ಮುಖ್ಯಮಂತ್ರಿ ಪಟ್ಟದಲ್ಲಿ ಮುಂದುವರಿಯಲು ಹೆಣಗುತ್ತಿದ್ದಾರೆ. ಹಿಂದೆ ಅನಂತಕುಮಾರ್ ಕಿರುಕುಳ ಇತ್ತು. ಅವರು ಹೋದ ಮೇಲೆ ಈಗ ಹಲವು ಮಗ್ಗಲು ಮುಳ್ಳುಗಳು ಯಡಿಯೂರಪ್ಪ ಅವರನ್ನು ಚುಚ್ಚುತ್ತಿವೆ. ಆರ್.ಎಸ್.ಎಸ್ ಮುಖಂಡ ಸಂತೋಷ್ ಅನಂತ್ ಸ್ಥಾನದಲ್ಲಿ ಕುಳಿತು ಯಡಿಯೂರಪ್ಪ ಅವರಿಗೆ ತಿವಿಯುತ್ತಿದ್ದಾರೆ. ಸಚಿವ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಂದಿಲ್ಲೊಂದು ಬಗೆಯಲ್ಲಿ ಸರ್ಕಾರ ಮತ್ತು ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಲೇ ಇದ್ದಾರೆ. ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ, ಡಾ.ಅಶ್ವತ್ಥನಾರಾಯಣ ಮತ್ತು ಕೇಂದ್ರ ಸಚಿವ ಸದಾನಂದಗೌಡ ಅವರು ಹೈಕಮಾಂಡ್ ನಾಯಕರಿಗೆ ಆಪ್ತರಾಗಿದ್ದಾರೆ. ಹೀಗಾಗಿ ಯಡಿಯೂರಪ್ಪ ಬಲಹೀನರಾಗಿದ್ದಾರೆ.

ಕರ್ನಾಟಕದ ಬಿಜೆಪಿಯಲ್ಲಿ ಈಗ ಎರಡು-ಮೂರು ಬಣಗಳು ಸಕ್ರಿಯವಾಗಿ ಕಾರ್ಯಚರಿಸುತ್ತಿವೆ. ಬಣಗಳ ಪ್ರಾಬಲ್ಯ ಬಿಗಿಗೊಂಡಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆದರಿದಂತೆ ಕಾಣುತ್ತಿದ್ದಾರೆ. ರಾಜ್ಯದಲ್ಲಿ ಪ್ರವಾಸ ಹೋದಕಡೆಯಲ್ಲಾ ಮಾಧ್ಯಮಗಳ ಮುಂದೆ ಏನೂ ಮಾತನಾಡದೆ ಕುಗ್ಗಿ ಹೋಗಿದ್ದಾರೆ. ನೆರೆ ಪರಿಹಾರವು ಬಿಡುಗಡೆಯಾಗಿಲ್ಲ. ಹೈಕಮಾಂಡ್ ನಾಯಕರ ಕೃಪಾಕಟಾಕ್ಷವೂ ಇಲ್ಲ ಎಂಬುದು ಖಚಿತವಾಗಿರುವುದರಿಂದ  ಯಡಿಯೂರಪ್ಪ ಕೂಡ ಹೊಸ ದಾಳಗಳನ್ನು ಉರುಳಿಸುತ್ತಿದ್ದಾರೆ.

ಅನರ್ಹ ಶಾಸಕರು ಶಾಸಕರ ಬಿಜೆಪಿ ಸೇರ್ಪಡೆ ಅಥವಾ ಟಿಕೆಟ್ ನೀಡುವ ಸಂಬಂಧ ದ್ವಂದ್ವ ಹೇಳಿಕೆಗಳು ಪ್ರಕಟವಾಗುತ್ತಿರುವುದು ನಡೆದಿದೆ. ಇಂತಹ ಸಮಯದಲ್ಲಿ ಅನರ್ಹರ ಬೆನ್ನಿಗೆ ನಿಂತಿರುವುದು ಮುಖ್ಯಮಂತ್ರಿ ಒಬ್ಬರೇ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜಿನಾಮೆ ನೀಡುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಬಲವಿತ್ತು. ಅವರೇ ಶಾಸಕರು ಮುಂಬೈನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದು ಎಂಬ  ಹೇಳಿಕೆ ಈಗ ವಿವಾದ ಸೃಷ್ಟಿಸಿದೆ. ಇಂತಹ ಹೇಳಿಕೆ ನೀಡುವ ಮೂಲಕ ಹೈಕಮಾಂಡ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಲು ಯಡಿಯೂರಪ್ಪ ಪ್ರಯತ್ನಿಸುತ್ತಿದ್ದಾರೆ ತನ್ನ ಸ್ಥಾನವೂ ಭದ್ರವಾಗಿರಬೇಕು. ಮತ್ತೆ ಯಾರೂ ನನ್ನ ವಿರುದ್ಧ ಪಿತೂರಿ ನಡೆಸಬಾರದು ಎಂಬ ಉದ್ದೇಶ ಈ ಹೇಳಿಕೆಯಲ್ಲಿದ್ದಂತಿದೆ.

ಅನರ್ಹ ಶಾಸಕರಿಗೆ ಅಮಿತ್ ಶಾ ಬೆಂಬಲದ ಹೇಳಿಕೆ ಬಿಜೆಪಿಗೆ ಡ್ಯಾಮೇಜ್ ತಂದೊಡ್ಡಲಿದೆ. ಯಡಿಯೂರಪ್ಪ ಅವರಿಗೂ ಬೇಕಾಗಿರುವುದು ಇದೇ. ತನಗೆ ಪದೇ ಪೇದೆ ಕಿರುಕುಳ ಕೊಡುವವರನ್ನು ಸಹಿಸಿಕೊಳ್ಳಲು ಹೇಗೆ ಸಾಧ್ಯ. ಅದೇ ಕಾರಣಕ್ಕೆ ಯಡಿಯೂರಪ್ಪ ಈ ರೀತಿ ಹೇಳಿಕೆ ನೀಡಿ ಚುಚ್ಚುತ್ತಿದ್ದಾರೆ. ಇಲ್ಲದಿದ್ದರೆ ಅಧಿಕಾರದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಬಿಜೆಪಿಯ ವೀರಶೈವ ಲಿಂಗಾಯತರು ಹೇಳುವ ಮಾತು. ಅಂತೂ ಯಡಿಯೂರಪ್ಪ ಆಟ ಎಷ್ಟು ದಿನ ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ಗೂ ಸರ್ಕಾರಿ ಸೌಲಭ್ಯಕ್ಕೂ ಲಿಂಕ್; ಅರ್ಜಿ ವಿಚಾರಣೆಗೆ ಸುಪ್ರೀಂ ನಕಾರ : ನಿಜವಾದ ಆತಂಕ

ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳದ ಹೊಸ ಸರ್ಕಾರ ನೀಡಿರುವ ಆದೇಶಗಳ ವಿರುದ್ಧ ಸಲ್ಲಿಕೆಯಾಗಿದ್ದ ಅರ್ಜಿಯೊಂದರ ತುರ್ತು ವಿಚಾರಣೆಗೆ ಸುಪ್ರೀಂ ಕೋರ್ಟ್ 23 ಜೂನ್ 2026ರಂದು ನಿರಾಕರಿಸಿದೆ. ವಿಧಾನಸಭೆ ಚುನಾವಣೆಗೆ ಮುನ್ನ ನಡೆದ ವಿಶೇಷ...

ಒಂಬತ್ತನೇ ತರಗತಿ ಪಠ್ಯಪುಸ್ತಕದಲ್ಲಿ ತುರ್ತು ಪರಿಸ್ಥಿತಿ ಅಧ್ಯಾಯ ಸೇರಿಸಿದ ಎನ್‌ಸಿಇಆರ್‌ಟಿ

ಭಾರತದಲ್ಲಿ ತುರ್ತು ಪರಿಸ್ಥಿತಿ ಘೋಷಿಸಲ್ಪಟ್ಟ ಸುಮಾರು ಐದು ದಶಕಗಳ ನಂತರ, ರಾಷ್ಟ್ರೀಯ ಶೈಕ್ಷಣಿಕ ಸಂಶೋಧನೆ ಮತ್ತು ತರಬೇತಿ ಮಂಡಳಿ (ಎನ್‌ಸಿಇಆರ್‌ಟಿ) ಈ ವಿಷಯವನ್ನು 9 ನೇ ತರಗತಿಯ ಸಮಾಜ ವಿಜ್ಞಾನ ಪಠ್ಯಪುಸ್ತಕದಲ್ಲಿ ಮೊದಲ...

‘ಆರ್‌ಎಸ್‌ಎಸ್ ಗಲಿಬಿಲಿಗೊಂಡರೆ ಬಿಜೆಪಿ ಬುಸುಗುಡುತ್ತದೆ’: ಗೃಹ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬೆಂಗಳೂರು: ರಾಷ್ಟ್ರೀಯ ಸ್ವಯಂಸೇವಕ ಸಂಘ (RSS) ಹಾಗೂ ಆಡಳಿತಾರೂಢ ಬಿಜೆಪಿ ವಿರುದ್ಧ ಕರ್ನಾಟಕದ ಗೃಹ ಸಚಿವ ಪ್ರಿಯಾಂಕ್ ಖರ್ಗೆ ಮತ್ತೊಮ್ಮೆ ತೀವ್ರ ಸ್ವರೂಪದ ಸೈದ್ಧಾಂತಿಕ ದಾಳಿ ನಡೆಸಿದ್ದಾರೆ. ಸಾಮಾಜಿಕ ಜಾಲತಾಣಗಳಲ್ಲಿ ಸರಣಿ ಪ್ರಶ್ನೆಗಳನ್ನು...

ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ಜಾರಿಯ ಜೊತೆಯಲ್ಲೆ ಸುಪ್ರೀಂ ಕೋರ್ಟ್‌ಗೆ ಹೋಗಲು ಕರ್ನಾಟಕ ಸಜ್ಜು

ಕೇಂದ್ರ ಸರ್ಕಾರದ ಹೊಸ ಗ್ರಾಮೀಣ ಉದ್ಯೋಗ ಖಾತರಿ ಯೋಜನೆ ‘ವಿಕಸಿತ ಭಾರತ-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ)’ (VB-G RAM G) ಕಾಯ್ದೆಯ ಹಲವು ನಿಯಮಗಳಿಗೆ ತೀವ್ರ ವಿರೋಧ ವ್ಯಕ್ತಪಡಿಸಿದ್ದರೂ...

ಉತ್ತರ ಪ್ರದೇಶ: ಮದುವೆ ರಿಸೆಪ್ಷನ್‌ನಲ್ಲಿ ಗೋಮಾಂಸ ಬಡಿಸಿದ ಆರೋಪ; ವರನ ತಂದೆ ಸೇರಿ ಏಳು ಮಂದಿ ಬಂಧನ, ಮಂಟಪ ಸೀಲ್

ಶಾಮ್ಲಿ (ಉತ್ತರ ಪ್ರದೇಶ): ಉತ್ತರ ಪ್ರದೇಶದ ಶಾಮ್ಲಿ ಜಿಲ್ಲೆಯ ಕೈರಾನಾ ಪಟ್ಟಣದಲ್ಲಿ ನಡೆದ ಮದುವೆ ಆರತಕ್ಷತೆ (ವಲೀಮಾ) ಸಮಾರಂಭವೊಂದು ಈಗ ಭಾರೀ ವಿವಾದಕ್ಕೆ ಕಾರಣವಾಗಿದೆ. ಸಮಾರಂಭದಲ್ಲಿ ಅತಿಥಿಗಳಿಗೆ ಗೋಮಾಂಸವನ್ನು ಬೇಯಿಸಿ ಬಡಿಸಲಾಗಿದೆ ಎಂಬ...

ರಾಮ ಮಂದಿರ ದೇಣಿಗೆ ವಿವಾದ: ಎಫ್‌ಐಆರ್ ದಾಖಲಿಸಿ ತ್ವರಿತ ನ್ಯಾಯಾಲಯದ ವಿಚಾರಣೆಗೆ ವಿಶ್ವ ಹಿಂದೂ ಪರಿಷತ್ ಆಗ್ರಹ

ರಾಮ ದೇಣಿಗೆ ವಿವಾದ ದುರುಪಯೋಗ ಕುರಿತು ಎಸ್‌ಐಟಿ ತನ್ನ ಪ್ರಾಥಮಿಕ ವರದಿಯನ್ನು ಸಲ್ಲಿಸಿದ ಕೂಡಲೇ, ಬಲಪಂಥೀಯ ಹಿಂದುತ್ವ ಸಂಘಟನೆ ವಿಶ್ವ ಹಿಂದೂ ಪರಿಷತ್ (ವಿಎಚ್‌ಪಿ) ಪ್ರಕರಣದಲ್ಲಿ ಎಫ್‌ಐಆರ್ ದಾಖಲಿಸಬೇಕೆಂದು ಒತ್ತಾಯಿಸಿದೆ. ವಿಎಚ್‌ಪಿ ಅಂತರರಾಷ್ಟ್ರೀಯ...

ಪಾಸ್‌ಪೋರ್ಟ್ ಪೌರತ್ವದ ದಾಖಲೆಯಲ್ಲ: ವಿದೇಶಾಂಗ ಸಚಿವಾಲಯ

ಪಾಸ್‌ಪೋರ್ಟ್ ಒಂದು ಪ್ರಯಾಣದ ದಾಖಲೆಯಾಗಿದೆಯೇ ಹೊರತು, ಪೌರತ್ವದ ದಾಖಲೆಯಲ್ಲ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ (ಎಂಇಎ) ಅಧಿಕಾರಿಗಳು ಬುಧವಾರ (ಜೂನ್ 24) ತಿಳಿಸಿದ್ದಾರೆ. ಈ ಮೂಲಕ ಅವರು ಭಾರತೀಯ ಪೌರತ್ವವನ್ನು ಖಚಿತವಾಗಿ ಸಾಬೀತುಪಡಿಸುವ...

90 ಪ್ರಶ್ನೆ ಪತ್ರಿಕೆ ಸೋರಿಕೆಯಾಗಿದೆ, ಲಕ್ಷಾಂತರ ವಿದ್ಯಾರ್ಥಿಗಳ ಭವಿಷ್ಯ ಹಾಳಾಗಿದೆ ಆದರೆ ಪ್ರಧಾನ್ ತಮ್ಮ ಕುರ್ಚಿಗೆ ಅಂಟಿಕೊಂಡಿದ್ದಾರೆ: ಮಲ್ಲಿಕಾರ್ಜುನ ಖರ್ಗೆ

ನವದೆಹಲಿ: ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ 'ನೀಟ್' (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರದ ವಿರುದ್ಧ ವಿರೋಧ ಪಕ್ಷಗಳು ತಮ್ಮ ಆಕ್ರೋಶವನ್ನು ಮತ್ತಷ್ಟು ತೀವ್ರಗೊಳಿಸಿವೆ. ಪರೀಕ್ಷಾ ಅಕ್ರಮಗಳನ್ನು ವಿರೋಧಿಸಿ...

2023ರಿಂದ 20 ಸಾವಿರಕ್ಕೂ ಹೆಚ್ಚು ಪ್ಯಾಲೆಸ್ತೀನ್ ಮಕ್ಕಳನ್ನು ಹತ್ಯೆಗೈದ ಇಸ್ರೇಲ್; ಉದ್ದೇಶಪೂರ್ವಕ ‘ನರಮೇಧ’ ಎಂದ ವರದಿ

ಪ್ಯಾಲೆಸ್ತೀನ್ ಮಕ್ಕಳನ್ನು ಉದ್ದೇಶಪೂರ್ವಕವಾಗಿ ಗುರಿಯಾಗಿಸಿಕೊಂಡು ಹತ್ಯೆ ಮಾಡುವ ಮೂಲಕ ಇಸ್ರೇಲ್‌ ಸೇನೆ ನರಮೇಧ ನಡೆಸಿದೆ ಎಂದು ವಿಶ್ವಸಂಸ್ಥೆಯ ಸ್ವತಂತ್ರ ಅಂತಾರಾಷ್ಟ್ರೀಯ ವಿಚಾರಣಾ ಆಯೋಗ ಮಂಗಳವಾರ (ಜೂ.23) ತಿಳಿಸಿದೆ. ಇಸ್ರೇಲ್ ಪಡೆಗಳು ಅಕ್ಟೋಬರ್ 2023ರಿಂದ ಈವರೆಗೆ...

ಮೀಸಲಾತಿ ರದ್ದುಗೊಳಿಸಲು ಬಿಜೆಪಿ ಮೂರನೇ ಎರಡರಷ್ಟು ಬಹುಮತ ಬಯಸುತ್ತಿದೆ: ಜೈರಾಮ್‌ ರಮೇಶ್‌

ಲೋಕಸಭೆಯಲ್ಲಿ ಬಿಜೆಪಿ ಮೂರನೇ ಎರಡರಷ್ಟು ಬಹುಮತಕ್ಕಾಗಿ ಶ್ರಮಿಸುತ್ತಿದೆ. ಏಕೆಂದರೆ, ಮೀಸಲಾತಿಯನ್ನು ಕೊನೆಗೊಳಿಸಲು ಸಂವಿಧಾನವನ್ನು ತಿದ್ದುಪಡಿ ಮಾಡುವುದು ಅದರ ನಿಜವಾದ ಮತ್ತು ಅಂತಿಮ ಗುರಿಯಾಗಿದೆ ಎಂದು ಕಾಂಗ್ರೆಸ್ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್...