Homeಕರ್ನಾಟಕಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

ಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

- Advertisement -
- Advertisement -

ಬಿ.ಎಸ್.ಯಡಿಯೂರಪ್ಪ ಇತಿಹಾಸ ನಿರ್ಮಿಸಿದ್ದಾರೆ. ಅದೂ ನಾಲ್ಕು ಬಾರಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಮೂಲಕ. ಯಡಿಯೂರಪ್ಪ ಈಗ ರಾಜಿನಾಮೆ ಕೊಡಲಿ ಇಲ್ಲವೇ ಬಿಡಲಿ ಅವರ ದಾಖಲೆಯಂತೂ ಮುರಿಯಲು ಸಧ್ಯಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಯಡಿಯೂರಪ್ಪ ಅವರಂತೆ ಜೈಲಿಗೆ ಹೋಗಿ ಬಂದವರೂ ಯಾರೂ ಇಲ್ಲ. ಕೆ.ಜೆ.ಪಿ ಪಕ್ಷ ಕಟ್ಟಿ ಮತ್ತೆ ಮಾತೃ ಪಕ್ಷ ಬಿಜೆಪಿಗೆ ಮರಳಿ ಮುಖ್ಯಮಂತ್ರಿಯೂ ಆದರು. ಬೇರೆ ಯಾರಿಗೂ ಆ ಛಾನ್ಸ್ ಸಿಗಲಿಲ್ಲ ಬಿಡಿ. ಇಂತಹ ಪ್ರಸಂಗಗಳು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಹಿಂದೆಯೂ ನಡೆದಿಲ್ಲ. ಮುಂದೆಯೂ ಸಂಭವಿಸುವುದಿಲ್ಲ. ಒಂದೇ ಪಕ್ಷದಲ್ಲಿ ನಾಲ್ಕು ಬಾರಿ ಅಧಿಕಾರದ ಗದ್ದುಗೆ ಏರಿದವರು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಮಾತ್ರ.

ಯಡಿಯೂರಪ್ಪ ಬೇಕಂತಲೇ ಮಾತಾಡಿರುವಂತಿರುವ ವಿಡಿಯೋ ಕೇಳಿ..

ಯಡಿಯೂರಪ್ಪ ಹಿಂದೆಯೂ ಕಷ್ಟ ಅನುಭವಿಸಿದರು. ಸ್ವಪಕ್ಷದವರೇ ಕಾಲೆಳೆದಿದ್ದು ಹೆಚ್ಚು. ಮಾಜಿ ಕೇಂದ್ರ ಸಚಿವ ದಿವಂಗತ ಎಚ್.ಎನ್. ಅನಂತ ಕುಮಾರ್ ಮತ್ತು ಯಡಿಯೂರಪ್ಪ ನಡುವೆ ಶೀತಲ ಸಮರ ಕೊನೆಯವರೆಗೂ ಇತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ಇಳಿಯಲು ಅನಂತ್ ಕುಮಾರ್ ಪಾತ್ರವೂ ಇತ್ತು. ಆ ಕಾರಣಕ್ಕಾಗಿಯೇ ಒಂದು ಅವಧಿಯ ಸರ್ಕಾರದಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಕಾಣಬೇಕಾದ ಪರಿಸ್ಥಿತಿ ಬಂತು.

ಜೈಲಿಗೆ ಹೋಗಿ ಬಂದ ಮೇಲೆ ಯಡಿಯೂರಪ್ಪ ಸ್ವಲ್ಪ ಮಂಕಾಗಿದ್ದಾರೆ. ವಯಸ್ಸು ಅವರನ್ನು ಬಾಧಿಸುತ್ತಿದೆ. ಆದರೂ ಮುಖ್ಯಮಂತ್ರಿ ಪಟ್ಟದಲ್ಲಿ ಮುಂದುವರಿಯಲು ಹೆಣಗುತ್ತಿದ್ದಾರೆ. ಹಿಂದೆ ಅನಂತಕುಮಾರ್ ಕಿರುಕುಳ ಇತ್ತು. ಅವರು ಹೋದ ಮೇಲೆ ಈಗ ಹಲವು ಮಗ್ಗಲು ಮುಳ್ಳುಗಳು ಯಡಿಯೂರಪ್ಪ ಅವರನ್ನು ಚುಚ್ಚುತ್ತಿವೆ. ಆರ್.ಎಸ್.ಎಸ್ ಮುಖಂಡ ಸಂತೋಷ್ ಅನಂತ್ ಸ್ಥಾನದಲ್ಲಿ ಕುಳಿತು ಯಡಿಯೂರಪ್ಪ ಅವರಿಗೆ ತಿವಿಯುತ್ತಿದ್ದಾರೆ. ಸಚಿವ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಂದಿಲ್ಲೊಂದು ಬಗೆಯಲ್ಲಿ ಸರ್ಕಾರ ಮತ್ತು ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಲೇ ಇದ್ದಾರೆ. ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ, ಡಾ.ಅಶ್ವತ್ಥನಾರಾಯಣ ಮತ್ತು ಕೇಂದ್ರ ಸಚಿವ ಸದಾನಂದಗೌಡ ಅವರು ಹೈಕಮಾಂಡ್ ನಾಯಕರಿಗೆ ಆಪ್ತರಾಗಿದ್ದಾರೆ. ಹೀಗಾಗಿ ಯಡಿಯೂರಪ್ಪ ಬಲಹೀನರಾಗಿದ್ದಾರೆ.

ಕರ್ನಾಟಕದ ಬಿಜೆಪಿಯಲ್ಲಿ ಈಗ ಎರಡು-ಮೂರು ಬಣಗಳು ಸಕ್ರಿಯವಾಗಿ ಕಾರ್ಯಚರಿಸುತ್ತಿವೆ. ಬಣಗಳ ಪ್ರಾಬಲ್ಯ ಬಿಗಿಗೊಂಡಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆದರಿದಂತೆ ಕಾಣುತ್ತಿದ್ದಾರೆ. ರಾಜ್ಯದಲ್ಲಿ ಪ್ರವಾಸ ಹೋದಕಡೆಯಲ್ಲಾ ಮಾಧ್ಯಮಗಳ ಮುಂದೆ ಏನೂ ಮಾತನಾಡದೆ ಕುಗ್ಗಿ ಹೋಗಿದ್ದಾರೆ. ನೆರೆ ಪರಿಹಾರವು ಬಿಡುಗಡೆಯಾಗಿಲ್ಲ. ಹೈಕಮಾಂಡ್ ನಾಯಕರ ಕೃಪಾಕಟಾಕ್ಷವೂ ಇಲ್ಲ ಎಂಬುದು ಖಚಿತವಾಗಿರುವುದರಿಂದ  ಯಡಿಯೂರಪ್ಪ ಕೂಡ ಹೊಸ ದಾಳಗಳನ್ನು ಉರುಳಿಸುತ್ತಿದ್ದಾರೆ.

ಅನರ್ಹ ಶಾಸಕರು ಶಾಸಕರ ಬಿಜೆಪಿ ಸೇರ್ಪಡೆ ಅಥವಾ ಟಿಕೆಟ್ ನೀಡುವ ಸಂಬಂಧ ದ್ವಂದ್ವ ಹೇಳಿಕೆಗಳು ಪ್ರಕಟವಾಗುತ್ತಿರುವುದು ನಡೆದಿದೆ. ಇಂತಹ ಸಮಯದಲ್ಲಿ ಅನರ್ಹರ ಬೆನ್ನಿಗೆ ನಿಂತಿರುವುದು ಮುಖ್ಯಮಂತ್ರಿ ಒಬ್ಬರೇ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜಿನಾಮೆ ನೀಡುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಬಲವಿತ್ತು. ಅವರೇ ಶಾಸಕರು ಮುಂಬೈನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದು ಎಂಬ  ಹೇಳಿಕೆ ಈಗ ವಿವಾದ ಸೃಷ್ಟಿಸಿದೆ. ಇಂತಹ ಹೇಳಿಕೆ ನೀಡುವ ಮೂಲಕ ಹೈಕಮಾಂಡ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಲು ಯಡಿಯೂರಪ್ಪ ಪ್ರಯತ್ನಿಸುತ್ತಿದ್ದಾರೆ ತನ್ನ ಸ್ಥಾನವೂ ಭದ್ರವಾಗಿರಬೇಕು. ಮತ್ತೆ ಯಾರೂ ನನ್ನ ವಿರುದ್ಧ ಪಿತೂರಿ ನಡೆಸಬಾರದು ಎಂಬ ಉದ್ದೇಶ ಈ ಹೇಳಿಕೆಯಲ್ಲಿದ್ದಂತಿದೆ.

ಅನರ್ಹ ಶಾಸಕರಿಗೆ ಅಮಿತ್ ಶಾ ಬೆಂಬಲದ ಹೇಳಿಕೆ ಬಿಜೆಪಿಗೆ ಡ್ಯಾಮೇಜ್ ತಂದೊಡ್ಡಲಿದೆ. ಯಡಿಯೂರಪ್ಪ ಅವರಿಗೂ ಬೇಕಾಗಿರುವುದು ಇದೇ. ತನಗೆ ಪದೇ ಪೇದೆ ಕಿರುಕುಳ ಕೊಡುವವರನ್ನು ಸಹಿಸಿಕೊಳ್ಳಲು ಹೇಗೆ ಸಾಧ್ಯ. ಅದೇ ಕಾರಣಕ್ಕೆ ಯಡಿಯೂರಪ್ಪ ಈ ರೀತಿ ಹೇಳಿಕೆ ನೀಡಿ ಚುಚ್ಚುತ್ತಿದ್ದಾರೆ. ಇಲ್ಲದಿದ್ದರೆ ಅಧಿಕಾರದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಬಿಜೆಪಿಯ ವೀರಶೈವ ಲಿಂಗಾಯತರು ಹೇಳುವ ಮಾತು. ಅಂತೂ ಯಡಿಯೂರಪ್ಪ ಆಟ ಎಷ್ಟು ದಿನ ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...

ಕೇಂದ್ರ ಶಿಕ್ಷಣ ಸಚಿವರ ರಾಜೀನಾಮೆಗೆ ಆಗ್ರಹ : ಮೊದಲ ಬೀದಿ ಹೋರಾಟಕ್ಕೆ ಸಜ್ಜಾದ ಕಾಕ್ರೋಚ್ ಜನತಾ ಪಾರ್ಟಿ

ಸಾಮಾಜಿಕ ಜಾಲತಾಣಗಳಲ್ಲಿ ಹೊಸ ಅಲೆಯನ್ನು ಸೃಷ್ಟಿಸಿರುವ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ತನ್ನ ಮೊದಲ ಬೀದಿ ಹೋರಾಟಕ್ಕೆ ಸಜ್ಜಾಗಿದೆ. ಜೂನ್ 6, 2026ರಂದು ನವದೆಹಲಿಯ ಜಂತರ್ ಮಂತರ್‌ನಲ್ಲಿ ಸಿಜೆಪಿ ಪ್ರತಿಭಟನೆ ಆಯೋಜಿಸಿದ್ದು, ಇದರ...