Homeಕರ್ನಾಟಕಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

ಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

- Advertisement -
- Advertisement -

ಬಿ.ಎಸ್.ಯಡಿಯೂರಪ್ಪ ಇತಿಹಾಸ ನಿರ್ಮಿಸಿದ್ದಾರೆ. ಅದೂ ನಾಲ್ಕು ಬಾರಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಮೂಲಕ. ಯಡಿಯೂರಪ್ಪ ಈಗ ರಾಜಿನಾಮೆ ಕೊಡಲಿ ಇಲ್ಲವೇ ಬಿಡಲಿ ಅವರ ದಾಖಲೆಯಂತೂ ಮುರಿಯಲು ಸಧ್ಯಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಯಡಿಯೂರಪ್ಪ ಅವರಂತೆ ಜೈಲಿಗೆ ಹೋಗಿ ಬಂದವರೂ ಯಾರೂ ಇಲ್ಲ. ಕೆ.ಜೆ.ಪಿ ಪಕ್ಷ ಕಟ್ಟಿ ಮತ್ತೆ ಮಾತೃ ಪಕ್ಷ ಬಿಜೆಪಿಗೆ ಮರಳಿ ಮುಖ್ಯಮಂತ್ರಿಯೂ ಆದರು. ಬೇರೆ ಯಾರಿಗೂ ಆ ಛಾನ್ಸ್ ಸಿಗಲಿಲ್ಲ ಬಿಡಿ. ಇಂತಹ ಪ್ರಸಂಗಗಳು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಹಿಂದೆಯೂ ನಡೆದಿಲ್ಲ. ಮುಂದೆಯೂ ಸಂಭವಿಸುವುದಿಲ್ಲ. ಒಂದೇ ಪಕ್ಷದಲ್ಲಿ ನಾಲ್ಕು ಬಾರಿ ಅಧಿಕಾರದ ಗದ್ದುಗೆ ಏರಿದವರು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಮಾತ್ರ.

ಯಡಿಯೂರಪ್ಪ ಬೇಕಂತಲೇ ಮಾತಾಡಿರುವಂತಿರುವ ವಿಡಿಯೋ ಕೇಳಿ..

ಯಡಿಯೂರಪ್ಪ ಹಿಂದೆಯೂ ಕಷ್ಟ ಅನುಭವಿಸಿದರು. ಸ್ವಪಕ್ಷದವರೇ ಕಾಲೆಳೆದಿದ್ದು ಹೆಚ್ಚು. ಮಾಜಿ ಕೇಂದ್ರ ಸಚಿವ ದಿವಂಗತ ಎಚ್.ಎನ್. ಅನಂತ ಕುಮಾರ್ ಮತ್ತು ಯಡಿಯೂರಪ್ಪ ನಡುವೆ ಶೀತಲ ಸಮರ ಕೊನೆಯವರೆಗೂ ಇತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ಇಳಿಯಲು ಅನಂತ್ ಕುಮಾರ್ ಪಾತ್ರವೂ ಇತ್ತು. ಆ ಕಾರಣಕ್ಕಾಗಿಯೇ ಒಂದು ಅವಧಿಯ ಸರ್ಕಾರದಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಕಾಣಬೇಕಾದ ಪರಿಸ್ಥಿತಿ ಬಂತು.

ಜೈಲಿಗೆ ಹೋಗಿ ಬಂದ ಮೇಲೆ ಯಡಿಯೂರಪ್ಪ ಸ್ವಲ್ಪ ಮಂಕಾಗಿದ್ದಾರೆ. ವಯಸ್ಸು ಅವರನ್ನು ಬಾಧಿಸುತ್ತಿದೆ. ಆದರೂ ಮುಖ್ಯಮಂತ್ರಿ ಪಟ್ಟದಲ್ಲಿ ಮುಂದುವರಿಯಲು ಹೆಣಗುತ್ತಿದ್ದಾರೆ. ಹಿಂದೆ ಅನಂತಕುಮಾರ್ ಕಿರುಕುಳ ಇತ್ತು. ಅವರು ಹೋದ ಮೇಲೆ ಈಗ ಹಲವು ಮಗ್ಗಲು ಮುಳ್ಳುಗಳು ಯಡಿಯೂರಪ್ಪ ಅವರನ್ನು ಚುಚ್ಚುತ್ತಿವೆ. ಆರ್.ಎಸ್.ಎಸ್ ಮುಖಂಡ ಸಂತೋಷ್ ಅನಂತ್ ಸ್ಥಾನದಲ್ಲಿ ಕುಳಿತು ಯಡಿಯೂರಪ್ಪ ಅವರಿಗೆ ತಿವಿಯುತ್ತಿದ್ದಾರೆ. ಸಚಿವ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಂದಿಲ್ಲೊಂದು ಬಗೆಯಲ್ಲಿ ಸರ್ಕಾರ ಮತ್ತು ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಲೇ ಇದ್ದಾರೆ. ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ, ಡಾ.ಅಶ್ವತ್ಥನಾರಾಯಣ ಮತ್ತು ಕೇಂದ್ರ ಸಚಿವ ಸದಾನಂದಗೌಡ ಅವರು ಹೈಕಮಾಂಡ್ ನಾಯಕರಿಗೆ ಆಪ್ತರಾಗಿದ್ದಾರೆ. ಹೀಗಾಗಿ ಯಡಿಯೂರಪ್ಪ ಬಲಹೀನರಾಗಿದ್ದಾರೆ.

ಕರ್ನಾಟಕದ ಬಿಜೆಪಿಯಲ್ಲಿ ಈಗ ಎರಡು-ಮೂರು ಬಣಗಳು ಸಕ್ರಿಯವಾಗಿ ಕಾರ್ಯಚರಿಸುತ್ತಿವೆ. ಬಣಗಳ ಪ್ರಾಬಲ್ಯ ಬಿಗಿಗೊಂಡಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆದರಿದಂತೆ ಕಾಣುತ್ತಿದ್ದಾರೆ. ರಾಜ್ಯದಲ್ಲಿ ಪ್ರವಾಸ ಹೋದಕಡೆಯಲ್ಲಾ ಮಾಧ್ಯಮಗಳ ಮುಂದೆ ಏನೂ ಮಾತನಾಡದೆ ಕುಗ್ಗಿ ಹೋಗಿದ್ದಾರೆ. ನೆರೆ ಪರಿಹಾರವು ಬಿಡುಗಡೆಯಾಗಿಲ್ಲ. ಹೈಕಮಾಂಡ್ ನಾಯಕರ ಕೃಪಾಕಟಾಕ್ಷವೂ ಇಲ್ಲ ಎಂಬುದು ಖಚಿತವಾಗಿರುವುದರಿಂದ  ಯಡಿಯೂರಪ್ಪ ಕೂಡ ಹೊಸ ದಾಳಗಳನ್ನು ಉರುಳಿಸುತ್ತಿದ್ದಾರೆ.

ಅನರ್ಹ ಶಾಸಕರು ಶಾಸಕರ ಬಿಜೆಪಿ ಸೇರ್ಪಡೆ ಅಥವಾ ಟಿಕೆಟ್ ನೀಡುವ ಸಂಬಂಧ ದ್ವಂದ್ವ ಹೇಳಿಕೆಗಳು ಪ್ರಕಟವಾಗುತ್ತಿರುವುದು ನಡೆದಿದೆ. ಇಂತಹ ಸಮಯದಲ್ಲಿ ಅನರ್ಹರ ಬೆನ್ನಿಗೆ ನಿಂತಿರುವುದು ಮುಖ್ಯಮಂತ್ರಿ ಒಬ್ಬರೇ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜಿನಾಮೆ ನೀಡುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಬಲವಿತ್ತು. ಅವರೇ ಶಾಸಕರು ಮುಂಬೈನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದು ಎಂಬ  ಹೇಳಿಕೆ ಈಗ ವಿವಾದ ಸೃಷ್ಟಿಸಿದೆ. ಇಂತಹ ಹೇಳಿಕೆ ನೀಡುವ ಮೂಲಕ ಹೈಕಮಾಂಡ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಲು ಯಡಿಯೂರಪ್ಪ ಪ್ರಯತ್ನಿಸುತ್ತಿದ್ದಾರೆ ತನ್ನ ಸ್ಥಾನವೂ ಭದ್ರವಾಗಿರಬೇಕು. ಮತ್ತೆ ಯಾರೂ ನನ್ನ ವಿರುದ್ಧ ಪಿತೂರಿ ನಡೆಸಬಾರದು ಎಂಬ ಉದ್ದೇಶ ಈ ಹೇಳಿಕೆಯಲ್ಲಿದ್ದಂತಿದೆ.

ಅನರ್ಹ ಶಾಸಕರಿಗೆ ಅಮಿತ್ ಶಾ ಬೆಂಬಲದ ಹೇಳಿಕೆ ಬಿಜೆಪಿಗೆ ಡ್ಯಾಮೇಜ್ ತಂದೊಡ್ಡಲಿದೆ. ಯಡಿಯೂರಪ್ಪ ಅವರಿಗೂ ಬೇಕಾಗಿರುವುದು ಇದೇ. ತನಗೆ ಪದೇ ಪೇದೆ ಕಿರುಕುಳ ಕೊಡುವವರನ್ನು ಸಹಿಸಿಕೊಳ್ಳಲು ಹೇಗೆ ಸಾಧ್ಯ. ಅದೇ ಕಾರಣಕ್ಕೆ ಯಡಿಯೂರಪ್ಪ ಈ ರೀತಿ ಹೇಳಿಕೆ ನೀಡಿ ಚುಚ್ಚುತ್ತಿದ್ದಾರೆ. ಇಲ್ಲದಿದ್ದರೆ ಅಧಿಕಾರದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಬಿಜೆಪಿಯ ವೀರಶೈವ ಲಿಂಗಾಯತರು ಹೇಳುವ ಮಾತು. ಅಂತೂ ಯಡಿಯೂರಪ್ಪ ಆಟ ಎಷ್ಟು ದಿನ ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...