Homeಕರ್ನಾಟಕಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

ಜೆಡಿಎಸ್‌-ಕಾಂಗ್ರೆಸ್‌ ಶಾಸಕರ ರಾಜಿನಾಮೆ ಕೊಡಿಸಿದ್ದು ಅಮಿತ್‌ ಶಾರಲ್ಲವೇ?: ಯಡಿಯೂರಪ್ಪ ಹೀಗೆ ಹೇಳಿದ್ದೇಕೆ ಗೊತ್ತಾ?

- Advertisement -
- Advertisement -

ಬಿ.ಎಸ್.ಯಡಿಯೂರಪ್ಪ ಇತಿಹಾಸ ನಿರ್ಮಿಸಿದ್ದಾರೆ. ಅದೂ ನಾಲ್ಕು ಬಾರಿ ಮುಖ್ಯಮಂತ್ರಿ ಹುದ್ದೆ ಅಲಂಕರಿಸುವ ಮೂಲಕ. ಯಡಿಯೂರಪ್ಪ ಈಗ ರಾಜಿನಾಮೆ ಕೊಡಲಿ ಇಲ್ಲವೇ ಬಿಡಲಿ ಅವರ ದಾಖಲೆಯಂತೂ ಮುರಿಯಲು ಸಧ್ಯಕ್ಕೆ ಯಾರಿಂದಲೂ ಸಾಧ್ಯವಿಲ್ಲ. ಯಡಿಯೂರಪ್ಪ ಅವರಂತೆ ಜೈಲಿಗೆ ಹೋಗಿ ಬಂದವರೂ ಯಾರೂ ಇಲ್ಲ. ಕೆ.ಜೆ.ಪಿ ಪಕ್ಷ ಕಟ್ಟಿ ಮತ್ತೆ ಮಾತೃ ಪಕ್ಷ ಬಿಜೆಪಿಗೆ ಮರಳಿ ಮುಖ್ಯಮಂತ್ರಿಯೂ ಆದರು. ಬೇರೆ ಯಾರಿಗೂ ಆ ಛಾನ್ಸ್ ಸಿಗಲಿಲ್ಲ ಬಿಡಿ. ಇಂತಹ ಪ್ರಸಂಗಗಳು ಕರ್ನಾಟಕ ರಾಜಕೀಯ ಇತಿಹಾಸದಲ್ಲಿ ಹಿಂದೆಯೂ ನಡೆದಿಲ್ಲ. ಮುಂದೆಯೂ ಸಂಭವಿಸುವುದಿಲ್ಲ. ಒಂದೇ ಪಕ್ಷದಲ್ಲಿ ನಾಲ್ಕು ಬಾರಿ ಅಧಿಕಾರದ ಗದ್ದುಗೆ ಏರಿದವರು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಮಾತ್ರ.

ಯಡಿಯೂರಪ್ಪ ಬೇಕಂತಲೇ ಮಾತಾಡಿರುವಂತಿರುವ ವಿಡಿಯೋ ಕೇಳಿ..

ಯಡಿಯೂರಪ್ಪ ಹಿಂದೆಯೂ ಕಷ್ಟ ಅನುಭವಿಸಿದರು. ಸ್ವಪಕ್ಷದವರೇ ಕಾಲೆಳೆದಿದ್ದು ಹೆಚ್ಚು. ಮಾಜಿ ಕೇಂದ್ರ ಸಚಿವ ದಿವಂಗತ ಎಚ್.ಎನ್. ಅನಂತ ಕುಮಾರ್ ಮತ್ತು ಯಡಿಯೂರಪ್ಪ ನಡುವೆ ಶೀತಲ ಸಮರ ಕೊನೆಯವರೆಗೂ ಇತ್ತು. ಯಡಿಯೂರಪ್ಪ ಮುಖ್ಯಮಂತ್ರಿ ಹುದ್ದೆಯಿಂದ ಇಳಿಯಲು ಅನಂತ್ ಕುಮಾರ್ ಪಾತ್ರವೂ ಇತ್ತು. ಆ ಕಾರಣಕ್ಕಾಗಿಯೇ ಒಂದು ಅವಧಿಯ ಸರ್ಕಾರದಲ್ಲಿ ಮೂವರು ಮುಖ್ಯಮಂತ್ರಿಗಳನ್ನು ಕಾಣಬೇಕಾದ ಪರಿಸ್ಥಿತಿ ಬಂತು.

ಜೈಲಿಗೆ ಹೋಗಿ ಬಂದ ಮೇಲೆ ಯಡಿಯೂರಪ್ಪ ಸ್ವಲ್ಪ ಮಂಕಾಗಿದ್ದಾರೆ. ವಯಸ್ಸು ಅವರನ್ನು ಬಾಧಿಸುತ್ತಿದೆ. ಆದರೂ ಮುಖ್ಯಮಂತ್ರಿ ಪಟ್ಟದಲ್ಲಿ ಮುಂದುವರಿಯಲು ಹೆಣಗುತ್ತಿದ್ದಾರೆ. ಹಿಂದೆ ಅನಂತಕುಮಾರ್ ಕಿರುಕುಳ ಇತ್ತು. ಅವರು ಹೋದ ಮೇಲೆ ಈಗ ಹಲವು ಮಗ್ಗಲು ಮುಳ್ಳುಗಳು ಯಡಿಯೂರಪ್ಪ ಅವರನ್ನು ಚುಚ್ಚುತ್ತಿವೆ. ಆರ್.ಎಸ್.ಎಸ್ ಮುಖಂಡ ಸಂತೋಷ್ ಅನಂತ್ ಸ್ಥಾನದಲ್ಲಿ ಕುಳಿತು ಯಡಿಯೂರಪ್ಪ ಅವರಿಗೆ ತಿವಿಯುತ್ತಿದ್ದಾರೆ. ಸಚಿವ ಸಿ.ಟಿ.ರವಿ, ಬಿಜೆಪಿ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಒಂದಿಲ್ಲೊಂದು ಬಗೆಯಲ್ಲಿ ಸರ್ಕಾರ ಮತ್ತು ಯಡಿಯೂರಪ್ಪ ಅವರನ್ನು ಇಕ್ಕಟ್ಟಿಗೆ ಸಿಲುಕಿಸುತ್ತಲೇ ಇದ್ದಾರೆ. ಉಪಮುಖ್ಯಮಂತ್ರಿಗಳಾದ ಲಕ್ಷ್ಮಣ್ ಸವದಿ, ಡಾ.ಅಶ್ವತ್ಥನಾರಾಯಣ ಮತ್ತು ಕೇಂದ್ರ ಸಚಿವ ಸದಾನಂದಗೌಡ ಅವರು ಹೈಕಮಾಂಡ್ ನಾಯಕರಿಗೆ ಆಪ್ತರಾಗಿದ್ದಾರೆ. ಹೀಗಾಗಿ ಯಡಿಯೂರಪ್ಪ ಬಲಹೀನರಾಗಿದ್ದಾರೆ.

ಕರ್ನಾಟಕದ ಬಿಜೆಪಿಯಲ್ಲಿ ಈಗ ಎರಡು-ಮೂರು ಬಣಗಳು ಸಕ್ರಿಯವಾಗಿ ಕಾರ್ಯಚರಿಸುತ್ತಿವೆ. ಬಣಗಳ ಪ್ರಾಬಲ್ಯ ಬಿಗಿಗೊಂಡಂತೆ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಬೆದರಿದಂತೆ ಕಾಣುತ್ತಿದ್ದಾರೆ. ರಾಜ್ಯದಲ್ಲಿ ಪ್ರವಾಸ ಹೋದಕಡೆಯಲ್ಲಾ ಮಾಧ್ಯಮಗಳ ಮುಂದೆ ಏನೂ ಮಾತನಾಡದೆ ಕುಗ್ಗಿ ಹೋಗಿದ್ದಾರೆ. ನೆರೆ ಪರಿಹಾರವು ಬಿಡುಗಡೆಯಾಗಿಲ್ಲ. ಹೈಕಮಾಂಡ್ ನಾಯಕರ ಕೃಪಾಕಟಾಕ್ಷವೂ ಇಲ್ಲ ಎಂಬುದು ಖಚಿತವಾಗಿರುವುದರಿಂದ  ಯಡಿಯೂರಪ್ಪ ಕೂಡ ಹೊಸ ದಾಳಗಳನ್ನು ಉರುಳಿಸುತ್ತಿದ್ದಾರೆ.

ಅನರ್ಹ ಶಾಸಕರು ಶಾಸಕರ ಬಿಜೆಪಿ ಸೇರ್ಪಡೆ ಅಥವಾ ಟಿಕೆಟ್ ನೀಡುವ ಸಂಬಂಧ ದ್ವಂದ್ವ ಹೇಳಿಕೆಗಳು ಪ್ರಕಟವಾಗುತ್ತಿರುವುದು ನಡೆದಿದೆ. ಇಂತಹ ಸಮಯದಲ್ಲಿ ಅನರ್ಹರ ಬೆನ್ನಿಗೆ ನಿಂತಿರುವುದು ಮುಖ್ಯಮಂತ್ರಿ ಒಬ್ಬರೇ. ಹೀಗಾಗಿ ಮುಖ್ಯಮಂತ್ರಿ ಯಡಿಯೂರಪ್ಪ ಹೊಸ ಬಾಂಬ್ ಸಿಡಿಸಿದ್ದಾರೆ. ಕಾಂಗ್ರೆಸ್ ಮತ್ತು ಜೆಡಿಎಸ್ ಶಾಸಕರು ರಾಜಿನಾಮೆ ನೀಡುವುದಕ್ಕೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಬೆಂಬಲವಿತ್ತು. ಅವರೇ ಶಾಸಕರು ಮುಂಬೈನಲ್ಲಿ ಉಳಿದುಕೊಳ್ಳಲು ವ್ಯವಸ್ಥೆ ಮಾಡಿದ್ದು ಎಂಬ  ಹೇಳಿಕೆ ಈಗ ವಿವಾದ ಸೃಷ್ಟಿಸಿದೆ. ಇಂತಹ ಹೇಳಿಕೆ ನೀಡುವ ಮೂಲಕ ಹೈಕಮಾಂಡ್ ನಾಯಕರನ್ನು ಇಕ್ಕಟ್ಟಿಗೆ ಸಿಲುಕಿಸಲು ಯಡಿಯೂರಪ್ಪ ಪ್ರಯತ್ನಿಸುತ್ತಿದ್ದಾರೆ ತನ್ನ ಸ್ಥಾನವೂ ಭದ್ರವಾಗಿರಬೇಕು. ಮತ್ತೆ ಯಾರೂ ನನ್ನ ವಿರುದ್ಧ ಪಿತೂರಿ ನಡೆಸಬಾರದು ಎಂಬ ಉದ್ದೇಶ ಈ ಹೇಳಿಕೆಯಲ್ಲಿದ್ದಂತಿದೆ.

ಅನರ್ಹ ಶಾಸಕರಿಗೆ ಅಮಿತ್ ಶಾ ಬೆಂಬಲದ ಹೇಳಿಕೆ ಬಿಜೆಪಿಗೆ ಡ್ಯಾಮೇಜ್ ತಂದೊಡ್ಡಲಿದೆ. ಯಡಿಯೂರಪ್ಪ ಅವರಿಗೂ ಬೇಕಾಗಿರುವುದು ಇದೇ. ತನಗೆ ಪದೇ ಪೇದೆ ಕಿರುಕುಳ ಕೊಡುವವರನ್ನು ಸಹಿಸಿಕೊಳ್ಳಲು ಹೇಗೆ ಸಾಧ್ಯ. ಅದೇ ಕಾರಣಕ್ಕೆ ಯಡಿಯೂರಪ್ಪ ಈ ರೀತಿ ಹೇಳಿಕೆ ನೀಡಿ ಚುಚ್ಚುತ್ತಿದ್ದಾರೆ. ಇಲ್ಲದಿದ್ದರೆ ಅಧಿಕಾರದಲ್ಲಿ ಮುಂದುವರೆಯಲು ಸಾಧ್ಯವಿಲ್ಲ ಎಂದು ಬಿಜೆಪಿಯ ವೀರಶೈವ ಲಿಂಗಾಯತರು ಹೇಳುವ ಮಾತು. ಅಂತೂ ಯಡಿಯೂರಪ್ಪ ಆಟ ಎಷ್ಟು ದಿನ ನೋಡಬೇಕು.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...