Homeಕರ್ನಾಟಕಸರ್ಕಾರ ರಚಿಸಲು ಆಗುತ್ತಿಲ್ಲ: ಜ್ಯೋತಿಷ್ಯದ ಮೊರೆ ಹೋದ ಯಡಿಯೂರಪ್ಪ ಮತ್ತು ಮಾಧ್ಯಮಗಳು

ಸರ್ಕಾರ ರಚಿಸಲು ಆಗುತ್ತಿಲ್ಲ: ಜ್ಯೋತಿಷ್ಯದ ಮೊರೆ ಹೋದ ಯಡಿಯೂರಪ್ಪ ಮತ್ತು ಮಾಧ್ಯಮಗಳು

- Advertisement -
- Advertisement -

ಅಧಿವೇಶನದ ಪೂರ್ತಿ ಯಡಿಯೂರಪ್ಪ ಮತ್ತು ಬಿಜೆಪಿಯವರು ಮಾತನಾಡಿದ್ದು ಹೆಚ್ಚು ಕಮ್ಮಿ ಒಂದೇ ಮಾತು. ಅದು ಬೇಗ ವಿಶ್ವಾಸಮತ ಸಾಬೀತುಪಡಿಸಿ ಎಂಬುದೇ ಆಗಿತ್ತು. ಅದರರ್ಥ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಸಂಖ್ಯಾಬಲ ಇಲ್ಲದಿರುವುದರಿಂದ ಈ ಸರ್ಕಾರ ಬಿದ್ದುಹೋಗುತ್ತದೆ ಕೂಡಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬುದು ಎಲ್ಲಾ ಬಿಜೆಪಿಗರ ಮನದಾಸೆ. ಅದಕ್ಕಾಗಿ ಸುಪಾರಿ ಪಡೆದವರಂತೆ ವರ್ತಿಸಿದ್ದವು ಮುಖ್ಯವಾಹಿನಿ ಎಲೆಕ್ಟ್ರಾನಿಕ್ ಮಾಧ್ಯಮಗಳು..

ಈಗ ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿ ಎರಡುದಿನಗಳಾಗುತ್ತಾ ಬಂದರೂ ಹೊಸ ಸರ್ಕಾರದ ಸುದ್ದಿಯೇ ಇಲ್ಲವಲ್ಲ?? ಸದನದಲ್ಲಿ ಚರ್ಚೆ ನಡೆಯುವಾಗ ಬಿಜೆಪಿ ಮತ್ತು ಮಾಧ್ಯಮಗಳಿಗಿದ್ದ ಆತುರ ಹೀಗೆಕ್ಕಿಲ್ಲ? ಏಕೆಂದರೆ ಅಧಿಕಾರ ಹಿಡಿಯುವ ಕಾರಣಕ್ಕಾಗಿ ಬಿಜೆಪಿಯವರು ಯಾವ ಆಪರೇಷನ್ ಮಾಡಿದರೋ, ಅದೇ ಆಪರೇಷನ್ ಅವರಿಗೆ ಮುಳುವಾಗಿಬಿಡದೆಂಬ ಭಯ ಕಾಡುತ್ತಿದೆ. ಅದಕ್ಕೆ ಇಲ್ಲ ಸಲ್ಲದ ನೆಪಗಳನ್ನು ಹುಡುಕುತ್ತಿದ್ದಾರೆ. ಅಂತಹ ನೆಪಗಳು ಇಲ್ಲಿವೆ ನೋಡಿ

ಜ್ಯೋತಿಷ್ಯದ ಜೋತು ಬಿದ್ದ ಯಡಿಯೂರಪ್ಪ

ಈ ಹಿಂದಿನ ಸರ್ಕಾರ ಲೋಕೋಪಯೋಗಿ ಇಲಾಖೆಯ ಸಚಿವ ಎಚ್.ಡಿ ರೇವಣ್ಣನವರನ್ನು ನಿಂಬೆ ಹಣ್ಣು ರೇವಣ್ಣ ಎಂದು ಎಲ್ಲರೂ ಆಡಿಕೊಂಡು ಸುಸ್ತಾಗಿದ್ದರು. ಸ್ವತಃ ಸ್ಪೀಕರ್ ಸಹ ರೇವಣ್ಣನವರು ಚರ್ಚೆಗೆ ಸಮಯ ಕೇಳಿದಾಗ ನಮ್ಮ ಜ್ಯೋತಿಷಿಗಳ ಬಳಿ ಕೇಳಿ ಗಳಿಗೆ ನಿಗಧಿ ಮಾಡುತ್ತೇವೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದರು. ಈಗ ಯಡಿಯೂರಪ್ಪನವರು ಸಹ ತಾವೇನು ಕಮ್ಮಿ ಎಂದು ರೇಣುಕಾರ್ಚಾರ ಎಂಬ ಜ್ಯೋತಿಷಿಯ ಮೊರೆಹೋಗಿದ್ದಾರೆ.

ಆ ಜ್ಯೋತಿಷಿಯು ಅಳೆದು ತೂಗಿ ಶುಕ್ರವಾರ ಸಂಜೆ 6 ಗಂಟೆ ಮೇಲೆ, ಇಲ್ಲ ಸೋಮವಾರ ಅಥವಾ ಆಷಾಡ ಮುಗಿದ ಮೇಲೆ ಯಡಿಯೂರಪ್ಪನವರು ಪ್ರಮಾಣವಚನ ಸ್ಪೀಕರಿಸಿದರೆ ಒಳ್ಳೇಯದು ಎಂದು ಷರಾ ಬರೆದಿದ್ದಾರೆ. ಎಂದರೆ ಅಷ್ಟು ದಿನ ಸರ್ಕಾರ ರಚಿಸುವ ಸರ್ಕಸ್ಸನ್ನು ಎಳೆಯಲು ಅನುವು ಮಾಡಿಕೊಟ್ಟಿದ್ದಾರೆ.

ಅವರು ಹಾಗೇ ಹೇಳಿ ಮುಗಿಸಿದ ಮೂರೇ ನಿಮಿಷಕ್ಕೆ ಕನ್ನಡದ ಖಾಸಗಿ ಚಾನೆಲ್ ಒಂದರಲ್ಲಿ ಮೂವತ್ತು ನಿಮಿಷದ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಪಾಪಾ ಅವರಷ್ಟು ಸ್ಪೀಡು ಬಿಜೆಪಿ ಸರ್ಕಾರಕ್ಕಿಲ್ಲ.

ಐವರು ಡಿಸಿಎಂಗಳನ್ನು ತಪ್ಪಿಸಬೇಕು

ಸರ್ಕಾರ ರಚನೆ ತಡವಾಗುತ್ತಿರುವುದಕ್ಕೆ ಟಿವಿ ಮಾಧ್ಯಮಗಳು ಕಂಡುಕೊಂಡ ಪರಿಹಾರ ಐವರು ಡಿಸಿಎಂಗಳನ್ನು ತಪ್ಪಿಸಬೇಕು ಎಂಬುದಾಗಿದೆ. ಅವರ ಪ್ರಕಾರ ಬಿಜೆಪಿಯಲ್ಲಿ ಐವರು ನಾಯಕರು ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಅವರಿಗೆ ಕೊಡುವುದು ಕಷ್ಟ ಹಾಗಾಗಿ ಸರ್ಕಾರ ರಚನೆ ವಿಳಂಬವಾಗುತ್ತಿದೆ.

ಜಗದೀಶ್ ಶೆಟ್ಟರ್, ಕೆ.ಎಸ್ ಈಶ್ವರಪ್ಪ, ಬಿ.ಶ್ರೀರಾಮುಲು, ಆರ್.ಅಶೋಕ್ ಮತ್ತು ಗೋವಿಂದ ಕಾರಜೋಳ ರವರು ಹೆಸರನ್ನು ಪದೇ ಪದೇ ಉಲ್ಲೇಖಿಸುತ್ತಿರುವ ಟಿ.ವಿಗಲು ಸದ್ದಿಲ್ಲದೇ ಅರವಿಂದ ಲಿಂಬಾವಳಿ ಹೆಸರನ್ನು ಕೈಬಿಟ್ಟಿದ್ದಾರೆ. ವಿಶ್ವಾಸಮತ ಯಾಚನೆಗೂ ಮುನ್ನವೇ ರೆಸಾರ್ಟ್ ನಲ್ಲಿ ಕೆ.ಎಸ್ ಈಶ್ವರಪ್ಪ ಮತ್ತು ಅರವಿಂದ ಲಿಂಬಾವಳಿ ನಡುವೆ ಇದೇ ಡಿಸಿಎಂ ಸ್ಥಾನಕ್ಕಾಗಿ ಕಿತ್ತಾಟವಾದುದ್ದಾಗಿಯೂ, ತದನಂತರವೇ ಅಶ್ಲೀಲ ಸಿ.ಡಿ ಬಿಡುಗಡೆಯಾಗಿದ್ದು ಆದರೂ ಅವರ ಬಗ್ಗೆ ಟಿವಿಗಳು ಚಕಾರವೆತ್ತುತ್ತಿಲ್ಲ.

ಸ್ಪೀಕರ್ ರವರು ಏನಂಥಾರೆ?

ಇನ್ನು ಅತೃಪ್ತ ಶಾಸಕರೆಂದು ಕರೆಯುವ 16 ಜನ ಶಾಸಕರ ರಾಜೀನಾಮೆ ವಿಚಾರವಿನ್ನು ಬಗೆಹರಿದಿಲ್ಲ. ಸುಪ್ರೀಂ ಕೋರ್ಟ್ ಸಹ ಅಂತಿಮ ತೀರ್ಪು ನೀಡಿಲ್ಲ. ಅವರನ್ನು ಈ ವಿಧಾನಸಭಾ ಅವಧಿಪೂರ್ತಿ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹ ಮಾಡಬೇಕೇಂದು ಸ್ಪೀಕರ್ ರವರು ಕಾಯುತ್ತಿದ್ದಾರೆ.

ಇಂದು ಮಾಧ್ಯಮಗಳು ಸ್ಪೀಕರ್ ರವರಿಗೆ ಪದೇ ಪದೇ ಆ ಶಾಸಕರ ರಾಜೀನಾಮೆ ಏನು ಮಾಡುತ್ತೀರಿ? ಅನರ್ಹತೆ ಯಾವಾಗ ಮಾಡುತ್ತೀರಿ ಎಂದು ಪ್ರಶ್ನೆ ಹಾಕುತ್ತಿದ್ದರು. ಒಂದೂ ಚಾನೆಲ್ ಅಂತೂ ಆ ಶಾಸಕರನ್ನು ಮತ್ತೆ ವಿಚಾರಣೆಗೆ ಕರೆಯುತ್ತೀರಾ ಎಂದು ಪ್ರಶ್ನಿಸಿತು. ಆಗ ಸಿಟ್ಟಿಗೆದ್ದ ಸ್ಪೀಕರ್ ರಮೇಶ್ ಕುಮಾರ್, “ನಮಗೇನು ಬೇರೆ ಕೆಲಸ ಇಲ್ಲ ಅನ್ಕೊಂಡ್ರ? ಬೇಕಾದರೆ ನೀವೆ ಕರೆಸಿ ವಿಚಾರಣೆ ಮಾಡಿಕೊಳ್ಳಿ” ಎಂದು ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ಗುಟ್ಟು ಬಿಟ್ಟುಕೊಡಲು ನಿರಾಕರಿಸಿದ್ದಾರೆ.

ಹೈಕಮಾಂಡ್ ಎಂಬ ಗುಮ್ಮ

ಇನ್ನು ಬಿಜೆಪಿ ಹೈಕಮಾಂಡ್ ಕೂಡ ಗೊಂದಲಕ್ಕೆ ಬಿದ್ದಿದೆ. ಹಾಗಾಗಿ ರಾಜ್ಯ ಬಿಜೆಪಿಗೆ ಯಾವುದೇ ಸ್ಪಷ್ಟ ಸೂಚನೆಯನ್ನು ಕೊಟ್ಟಿಲ್ಲ. ಇದು ಯಡಿಯೂರಪ್ಪನವರ ಎದೆಬಡಿತವನ್ನು ಹೆಚ್ಚಿಸಿದೆ. ಕಷ್ಟಪಟ್ಟು ಮೈತ್ರಿ ಸರ್ಕಾರ ಬೀಳಿಸಿದ್ದರೂ ತಾನು ಪಟ್ಟಕ್ಕೆರಲು ತಡವಾಗುತ್ತಿರುವುದು ಅವರ ಚಿಂತೆಗೆ ಕಾರಣವಾಗಿದೆ. ಹೈಕಮಾಂಡ್ ಮುಖ್ಯಮಂತ್ರಿಯನ್ನೇ ಬದಲಾವಣೆ ಮಾಡಿಬಿಟ್ಟರೆ ಏನು ಮಾಡುವುದು ಎಂಬುದು 76 ವರ್ಷದ ಯಡಿಯೂರಪ್ಪನವರ ಅನುಮಾನ.

ಹೈಕಮಾಂಡ್ ಅನುಮತಿ ನೀಡುವವರೆಗೂ ಸರ್ಕಾರ ರಚನೆಯ ಪ್ರಕ್ರಿಯೆ ನಿಂತಲ್ಲೇ ನಿಲ್ಲಲ್ಲಿದೆ.. ಒಟ್ಟಿಗೆ ಅಷ್ಟೆಲ್ಲಾ ಅರ್ಜೆಂಟ್ ಮಾಡಿದವರಿಗೆ ಈಗ ತಾವು ಕಾಲ ತಳ್ಳುವಂತ ಪರಿಸ್ಥಿತಿ ಬಂದೊದಗಿದೆ. ಇದೆಲ್ಲದರ ನೋವು ಅನುಭವಿಸುತ್ತಿರುವವರು ಮಾತ್ರ ಜನಸಾಮಾನ್ಯರು. ಸ್ಪೀಕರ್ ರವರು ಇದನ್ನು ಸೂಚ್ಯವಾಗಿ ಹೇಳಿದರು. ಬೇಗ ಹೊಸ ಸರ್ಕಾರ ರಚನೆಯಾಗಬೇಕು, ನಾನು ಯಾವಾಗ ಬೇಕಾದರೂ ಸದನ ನಡೆಸಲು ಸಿದ್ದನಿದ್ದೇನೆ ಏಕೆಂದರೆ ತಿಂಗಳ ಕೊನೆ ಆಗಿರುವುದರಿಂದ ಸರ್ಕಾರಿ ನೌಕರರಿಗೆ ಸಂಬಳ ಹಾಕುವುದು ಸಹ ಕಷ್ಟವಾಗಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...