Homeಕರ್ನಾಟಕಸರ್ಕಾರ ರಚಿಸಲು ಆಗುತ್ತಿಲ್ಲ: ಜ್ಯೋತಿಷ್ಯದ ಮೊರೆ ಹೋದ ಯಡಿಯೂರಪ್ಪ ಮತ್ತು ಮಾಧ್ಯಮಗಳು

ಸರ್ಕಾರ ರಚಿಸಲು ಆಗುತ್ತಿಲ್ಲ: ಜ್ಯೋತಿಷ್ಯದ ಮೊರೆ ಹೋದ ಯಡಿಯೂರಪ್ಪ ಮತ್ತು ಮಾಧ್ಯಮಗಳು

- Advertisement -
- Advertisement -

ಅಧಿವೇಶನದ ಪೂರ್ತಿ ಯಡಿಯೂರಪ್ಪ ಮತ್ತು ಬಿಜೆಪಿಯವರು ಮಾತನಾಡಿದ್ದು ಹೆಚ್ಚು ಕಮ್ಮಿ ಒಂದೇ ಮಾತು. ಅದು ಬೇಗ ವಿಶ್ವಾಸಮತ ಸಾಬೀತುಪಡಿಸಿ ಎಂಬುದೇ ಆಗಿತ್ತು. ಅದರರ್ಥ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಸಂಖ್ಯಾಬಲ ಇಲ್ಲದಿರುವುದರಿಂದ ಈ ಸರ್ಕಾರ ಬಿದ್ದುಹೋಗುತ್ತದೆ ಕೂಡಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬುದು ಎಲ್ಲಾ ಬಿಜೆಪಿಗರ ಮನದಾಸೆ. ಅದಕ್ಕಾಗಿ ಸುಪಾರಿ ಪಡೆದವರಂತೆ ವರ್ತಿಸಿದ್ದವು ಮುಖ್ಯವಾಹಿನಿ ಎಲೆಕ್ಟ್ರಾನಿಕ್ ಮಾಧ್ಯಮಗಳು..

ಈಗ ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿ ಎರಡುದಿನಗಳಾಗುತ್ತಾ ಬಂದರೂ ಹೊಸ ಸರ್ಕಾರದ ಸುದ್ದಿಯೇ ಇಲ್ಲವಲ್ಲ?? ಸದನದಲ್ಲಿ ಚರ್ಚೆ ನಡೆಯುವಾಗ ಬಿಜೆಪಿ ಮತ್ತು ಮಾಧ್ಯಮಗಳಿಗಿದ್ದ ಆತುರ ಹೀಗೆಕ್ಕಿಲ್ಲ? ಏಕೆಂದರೆ ಅಧಿಕಾರ ಹಿಡಿಯುವ ಕಾರಣಕ್ಕಾಗಿ ಬಿಜೆಪಿಯವರು ಯಾವ ಆಪರೇಷನ್ ಮಾಡಿದರೋ, ಅದೇ ಆಪರೇಷನ್ ಅವರಿಗೆ ಮುಳುವಾಗಿಬಿಡದೆಂಬ ಭಯ ಕಾಡುತ್ತಿದೆ. ಅದಕ್ಕೆ ಇಲ್ಲ ಸಲ್ಲದ ನೆಪಗಳನ್ನು ಹುಡುಕುತ್ತಿದ್ದಾರೆ. ಅಂತಹ ನೆಪಗಳು ಇಲ್ಲಿವೆ ನೋಡಿ

ಜ್ಯೋತಿಷ್ಯದ ಜೋತು ಬಿದ್ದ ಯಡಿಯೂರಪ್ಪ

ಈ ಹಿಂದಿನ ಸರ್ಕಾರ ಲೋಕೋಪಯೋಗಿ ಇಲಾಖೆಯ ಸಚಿವ ಎಚ್.ಡಿ ರೇವಣ್ಣನವರನ್ನು ನಿಂಬೆ ಹಣ್ಣು ರೇವಣ್ಣ ಎಂದು ಎಲ್ಲರೂ ಆಡಿಕೊಂಡು ಸುಸ್ತಾಗಿದ್ದರು. ಸ್ವತಃ ಸ್ಪೀಕರ್ ಸಹ ರೇವಣ್ಣನವರು ಚರ್ಚೆಗೆ ಸಮಯ ಕೇಳಿದಾಗ ನಮ್ಮ ಜ್ಯೋತಿಷಿಗಳ ಬಳಿ ಕೇಳಿ ಗಳಿಗೆ ನಿಗಧಿ ಮಾಡುತ್ತೇವೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದರು. ಈಗ ಯಡಿಯೂರಪ್ಪನವರು ಸಹ ತಾವೇನು ಕಮ್ಮಿ ಎಂದು ರೇಣುಕಾರ್ಚಾರ ಎಂಬ ಜ್ಯೋತಿಷಿಯ ಮೊರೆಹೋಗಿದ್ದಾರೆ.

ಆ ಜ್ಯೋತಿಷಿಯು ಅಳೆದು ತೂಗಿ ಶುಕ್ರವಾರ ಸಂಜೆ 6 ಗಂಟೆ ಮೇಲೆ, ಇಲ್ಲ ಸೋಮವಾರ ಅಥವಾ ಆಷಾಡ ಮುಗಿದ ಮೇಲೆ ಯಡಿಯೂರಪ್ಪನವರು ಪ್ರಮಾಣವಚನ ಸ್ಪೀಕರಿಸಿದರೆ ಒಳ್ಳೇಯದು ಎಂದು ಷರಾ ಬರೆದಿದ್ದಾರೆ. ಎಂದರೆ ಅಷ್ಟು ದಿನ ಸರ್ಕಾರ ರಚಿಸುವ ಸರ್ಕಸ್ಸನ್ನು ಎಳೆಯಲು ಅನುವು ಮಾಡಿಕೊಟ್ಟಿದ್ದಾರೆ.

ಅವರು ಹಾಗೇ ಹೇಳಿ ಮುಗಿಸಿದ ಮೂರೇ ನಿಮಿಷಕ್ಕೆ ಕನ್ನಡದ ಖಾಸಗಿ ಚಾನೆಲ್ ಒಂದರಲ್ಲಿ ಮೂವತ್ತು ನಿಮಿಷದ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಪಾಪಾ ಅವರಷ್ಟು ಸ್ಪೀಡು ಬಿಜೆಪಿ ಸರ್ಕಾರಕ್ಕಿಲ್ಲ.

ಐವರು ಡಿಸಿಎಂಗಳನ್ನು ತಪ್ಪಿಸಬೇಕು

ಸರ್ಕಾರ ರಚನೆ ತಡವಾಗುತ್ತಿರುವುದಕ್ಕೆ ಟಿವಿ ಮಾಧ್ಯಮಗಳು ಕಂಡುಕೊಂಡ ಪರಿಹಾರ ಐವರು ಡಿಸಿಎಂಗಳನ್ನು ತಪ್ಪಿಸಬೇಕು ಎಂಬುದಾಗಿದೆ. ಅವರ ಪ್ರಕಾರ ಬಿಜೆಪಿಯಲ್ಲಿ ಐವರು ನಾಯಕರು ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಅವರಿಗೆ ಕೊಡುವುದು ಕಷ್ಟ ಹಾಗಾಗಿ ಸರ್ಕಾರ ರಚನೆ ವಿಳಂಬವಾಗುತ್ತಿದೆ.

ಜಗದೀಶ್ ಶೆಟ್ಟರ್, ಕೆ.ಎಸ್ ಈಶ್ವರಪ್ಪ, ಬಿ.ಶ್ರೀರಾಮುಲು, ಆರ್.ಅಶೋಕ್ ಮತ್ತು ಗೋವಿಂದ ಕಾರಜೋಳ ರವರು ಹೆಸರನ್ನು ಪದೇ ಪದೇ ಉಲ್ಲೇಖಿಸುತ್ತಿರುವ ಟಿ.ವಿಗಲು ಸದ್ದಿಲ್ಲದೇ ಅರವಿಂದ ಲಿಂಬಾವಳಿ ಹೆಸರನ್ನು ಕೈಬಿಟ್ಟಿದ್ದಾರೆ. ವಿಶ್ವಾಸಮತ ಯಾಚನೆಗೂ ಮುನ್ನವೇ ರೆಸಾರ್ಟ್ ನಲ್ಲಿ ಕೆ.ಎಸ್ ಈಶ್ವರಪ್ಪ ಮತ್ತು ಅರವಿಂದ ಲಿಂಬಾವಳಿ ನಡುವೆ ಇದೇ ಡಿಸಿಎಂ ಸ್ಥಾನಕ್ಕಾಗಿ ಕಿತ್ತಾಟವಾದುದ್ದಾಗಿಯೂ, ತದನಂತರವೇ ಅಶ್ಲೀಲ ಸಿ.ಡಿ ಬಿಡುಗಡೆಯಾಗಿದ್ದು ಆದರೂ ಅವರ ಬಗ್ಗೆ ಟಿವಿಗಳು ಚಕಾರವೆತ್ತುತ್ತಿಲ್ಲ.

ಸ್ಪೀಕರ್ ರವರು ಏನಂಥಾರೆ?

ಇನ್ನು ಅತೃಪ್ತ ಶಾಸಕರೆಂದು ಕರೆಯುವ 16 ಜನ ಶಾಸಕರ ರಾಜೀನಾಮೆ ವಿಚಾರವಿನ್ನು ಬಗೆಹರಿದಿಲ್ಲ. ಸುಪ್ರೀಂ ಕೋರ್ಟ್ ಸಹ ಅಂತಿಮ ತೀರ್ಪು ನೀಡಿಲ್ಲ. ಅವರನ್ನು ಈ ವಿಧಾನಸಭಾ ಅವಧಿಪೂರ್ತಿ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹ ಮಾಡಬೇಕೇಂದು ಸ್ಪೀಕರ್ ರವರು ಕಾಯುತ್ತಿದ್ದಾರೆ.

ಇಂದು ಮಾಧ್ಯಮಗಳು ಸ್ಪೀಕರ್ ರವರಿಗೆ ಪದೇ ಪದೇ ಆ ಶಾಸಕರ ರಾಜೀನಾಮೆ ಏನು ಮಾಡುತ್ತೀರಿ? ಅನರ್ಹತೆ ಯಾವಾಗ ಮಾಡುತ್ತೀರಿ ಎಂದು ಪ್ರಶ್ನೆ ಹಾಕುತ್ತಿದ್ದರು. ಒಂದೂ ಚಾನೆಲ್ ಅಂತೂ ಆ ಶಾಸಕರನ್ನು ಮತ್ತೆ ವಿಚಾರಣೆಗೆ ಕರೆಯುತ್ತೀರಾ ಎಂದು ಪ್ರಶ್ನಿಸಿತು. ಆಗ ಸಿಟ್ಟಿಗೆದ್ದ ಸ್ಪೀಕರ್ ರಮೇಶ್ ಕುಮಾರ್, “ನಮಗೇನು ಬೇರೆ ಕೆಲಸ ಇಲ್ಲ ಅನ್ಕೊಂಡ್ರ? ಬೇಕಾದರೆ ನೀವೆ ಕರೆಸಿ ವಿಚಾರಣೆ ಮಾಡಿಕೊಳ್ಳಿ” ಎಂದು ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ಗುಟ್ಟು ಬಿಟ್ಟುಕೊಡಲು ನಿರಾಕರಿಸಿದ್ದಾರೆ.

ಹೈಕಮಾಂಡ್ ಎಂಬ ಗುಮ್ಮ

ಇನ್ನು ಬಿಜೆಪಿ ಹೈಕಮಾಂಡ್ ಕೂಡ ಗೊಂದಲಕ್ಕೆ ಬಿದ್ದಿದೆ. ಹಾಗಾಗಿ ರಾಜ್ಯ ಬಿಜೆಪಿಗೆ ಯಾವುದೇ ಸ್ಪಷ್ಟ ಸೂಚನೆಯನ್ನು ಕೊಟ್ಟಿಲ್ಲ. ಇದು ಯಡಿಯೂರಪ್ಪನವರ ಎದೆಬಡಿತವನ್ನು ಹೆಚ್ಚಿಸಿದೆ. ಕಷ್ಟಪಟ್ಟು ಮೈತ್ರಿ ಸರ್ಕಾರ ಬೀಳಿಸಿದ್ದರೂ ತಾನು ಪಟ್ಟಕ್ಕೆರಲು ತಡವಾಗುತ್ತಿರುವುದು ಅವರ ಚಿಂತೆಗೆ ಕಾರಣವಾಗಿದೆ. ಹೈಕಮಾಂಡ್ ಮುಖ್ಯಮಂತ್ರಿಯನ್ನೇ ಬದಲಾವಣೆ ಮಾಡಿಬಿಟ್ಟರೆ ಏನು ಮಾಡುವುದು ಎಂಬುದು 76 ವರ್ಷದ ಯಡಿಯೂರಪ್ಪನವರ ಅನುಮಾನ.

ಹೈಕಮಾಂಡ್ ಅನುಮತಿ ನೀಡುವವರೆಗೂ ಸರ್ಕಾರ ರಚನೆಯ ಪ್ರಕ್ರಿಯೆ ನಿಂತಲ್ಲೇ ನಿಲ್ಲಲ್ಲಿದೆ.. ಒಟ್ಟಿಗೆ ಅಷ್ಟೆಲ್ಲಾ ಅರ್ಜೆಂಟ್ ಮಾಡಿದವರಿಗೆ ಈಗ ತಾವು ಕಾಲ ತಳ್ಳುವಂತ ಪರಿಸ್ಥಿತಿ ಬಂದೊದಗಿದೆ. ಇದೆಲ್ಲದರ ನೋವು ಅನುಭವಿಸುತ್ತಿರುವವರು ಮಾತ್ರ ಜನಸಾಮಾನ್ಯರು. ಸ್ಪೀಕರ್ ರವರು ಇದನ್ನು ಸೂಚ್ಯವಾಗಿ ಹೇಳಿದರು. ಬೇಗ ಹೊಸ ಸರ್ಕಾರ ರಚನೆಯಾಗಬೇಕು, ನಾನು ಯಾವಾಗ ಬೇಕಾದರೂ ಸದನ ನಡೆಸಲು ಸಿದ್ದನಿದ್ದೇನೆ ಏಕೆಂದರೆ ತಿಂಗಳ ಕೊನೆ ಆಗಿರುವುದರಿಂದ ಸರ್ಕಾರಿ ನೌಕರರಿಗೆ ಸಂಬಳ ಹಾಕುವುದು ಸಹ ಕಷ್ಟವಾಗಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...

ದ್ವೇಷ ಭಾಷಣ ಮಸೂದೆ ರಾಜ್ಯಪಾಲರಿಂದ ತಿರಸ್ಕೃತವಾಗಿಲ್ಲ: ಸಿಎಂ ಸಿದ್ದರಾಮಯ್ಯ

ದ್ವೇಷ ಭಾಷಣ ಮಸೂದೆ ಸರ್ವಾನುಮತದಿಂದ ಅಂಗೀಕಾರವಾಗಿದ್ದು, ರಾಜ್ಯಪಾಲರು ಅದನ್ನು ವಾಪಸ್ ಕಳಿಸಿಲ್ಲ, ತಿರಸ್ಕರಿಸಿಲ್ಲ, ಅಂಕಿತವನ್ನೂ ಹಾಕಿಲ್ಲ. ಅವರು ಕರೆದಾಗ ಈ ಬಗ್ಗೆ ವಿವರಣೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು. ಭಾನುವಾರ (ಜ.11) ಮಂಗಳೂರಿನಲ್ಲಿ...

ಐಸಿಸ್ ಗುರಿ ಮಾಡಿ ಸಿರಿಯಾ ಮೇಲೆ ವೈಮಾನಿಕ ದಾಳಿ ನಡೆಸಿದ ಅಮೆರಿಕ

ಸಿರಿಯಾದ ಇಸ್ಲಾಮಿಕ್ ಸ್ಟೇಟ್ (ಐಎಸ್) ಗುಂಪಿನ ತಾಣಗಳ ಮೇಲೆ ಅಮೆರಿಕ ಮತ್ತು ಅದರ ಪಾಲುದಾರ ಪಡೆಗಳು ದೊಡ್ಡ ಪ್ರಮಾಣದ ದಾಳಿಗಳನ್ನು ನಡೆಸಿವೆ ಎಂದು ಅಮೆರಿಕದ ಸೆಂಟ್ರಲ್ ಕಮಾಂಡ್ (ಸೆಂಟ್‌ಕಾಮ್) ಘೋಷಿಸಿದೆ. ಡಿಸೆಂಬರ್ 13ರಂದು ಸಿರಿಯಾದಲ್ಲಿ...

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...