Homeಕರ್ನಾಟಕಸರ್ಕಾರ ರಚಿಸಲು ಆಗುತ್ತಿಲ್ಲ: ಜ್ಯೋತಿಷ್ಯದ ಮೊರೆ ಹೋದ ಯಡಿಯೂರಪ್ಪ ಮತ್ತು ಮಾಧ್ಯಮಗಳು

ಸರ್ಕಾರ ರಚಿಸಲು ಆಗುತ್ತಿಲ್ಲ: ಜ್ಯೋತಿಷ್ಯದ ಮೊರೆ ಹೋದ ಯಡಿಯೂರಪ್ಪ ಮತ್ತು ಮಾಧ್ಯಮಗಳು

- Advertisement -
- Advertisement -

ಅಧಿವೇಶನದ ಪೂರ್ತಿ ಯಡಿಯೂರಪ್ಪ ಮತ್ತು ಬಿಜೆಪಿಯವರು ಮಾತನಾಡಿದ್ದು ಹೆಚ್ಚು ಕಮ್ಮಿ ಒಂದೇ ಮಾತು. ಅದು ಬೇಗ ವಿಶ್ವಾಸಮತ ಸಾಬೀತುಪಡಿಸಿ ಎಂಬುದೇ ಆಗಿತ್ತು. ಅದರರ್ಥ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಸಂಖ್ಯಾಬಲ ಇಲ್ಲದಿರುವುದರಿಂದ ಈ ಸರ್ಕಾರ ಬಿದ್ದುಹೋಗುತ್ತದೆ ಕೂಡಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬುದು ಎಲ್ಲಾ ಬಿಜೆಪಿಗರ ಮನದಾಸೆ. ಅದಕ್ಕಾಗಿ ಸುಪಾರಿ ಪಡೆದವರಂತೆ ವರ್ತಿಸಿದ್ದವು ಮುಖ್ಯವಾಹಿನಿ ಎಲೆಕ್ಟ್ರಾನಿಕ್ ಮಾಧ್ಯಮಗಳು..

ಈಗ ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿ ಎರಡುದಿನಗಳಾಗುತ್ತಾ ಬಂದರೂ ಹೊಸ ಸರ್ಕಾರದ ಸುದ್ದಿಯೇ ಇಲ್ಲವಲ್ಲ?? ಸದನದಲ್ಲಿ ಚರ್ಚೆ ನಡೆಯುವಾಗ ಬಿಜೆಪಿ ಮತ್ತು ಮಾಧ್ಯಮಗಳಿಗಿದ್ದ ಆತುರ ಹೀಗೆಕ್ಕಿಲ್ಲ? ಏಕೆಂದರೆ ಅಧಿಕಾರ ಹಿಡಿಯುವ ಕಾರಣಕ್ಕಾಗಿ ಬಿಜೆಪಿಯವರು ಯಾವ ಆಪರೇಷನ್ ಮಾಡಿದರೋ, ಅದೇ ಆಪರೇಷನ್ ಅವರಿಗೆ ಮುಳುವಾಗಿಬಿಡದೆಂಬ ಭಯ ಕಾಡುತ್ತಿದೆ. ಅದಕ್ಕೆ ಇಲ್ಲ ಸಲ್ಲದ ನೆಪಗಳನ್ನು ಹುಡುಕುತ್ತಿದ್ದಾರೆ. ಅಂತಹ ನೆಪಗಳು ಇಲ್ಲಿವೆ ನೋಡಿ

ಜ್ಯೋತಿಷ್ಯದ ಜೋತು ಬಿದ್ದ ಯಡಿಯೂರಪ್ಪ

ಈ ಹಿಂದಿನ ಸರ್ಕಾರ ಲೋಕೋಪಯೋಗಿ ಇಲಾಖೆಯ ಸಚಿವ ಎಚ್.ಡಿ ರೇವಣ್ಣನವರನ್ನು ನಿಂಬೆ ಹಣ್ಣು ರೇವಣ್ಣ ಎಂದು ಎಲ್ಲರೂ ಆಡಿಕೊಂಡು ಸುಸ್ತಾಗಿದ್ದರು. ಸ್ವತಃ ಸ್ಪೀಕರ್ ಸಹ ರೇವಣ್ಣನವರು ಚರ್ಚೆಗೆ ಸಮಯ ಕೇಳಿದಾಗ ನಮ್ಮ ಜ್ಯೋತಿಷಿಗಳ ಬಳಿ ಕೇಳಿ ಗಳಿಗೆ ನಿಗಧಿ ಮಾಡುತ್ತೇವೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದರು. ಈಗ ಯಡಿಯೂರಪ್ಪನವರು ಸಹ ತಾವೇನು ಕಮ್ಮಿ ಎಂದು ರೇಣುಕಾರ್ಚಾರ ಎಂಬ ಜ್ಯೋತಿಷಿಯ ಮೊರೆಹೋಗಿದ್ದಾರೆ.

ಆ ಜ್ಯೋತಿಷಿಯು ಅಳೆದು ತೂಗಿ ಶುಕ್ರವಾರ ಸಂಜೆ 6 ಗಂಟೆ ಮೇಲೆ, ಇಲ್ಲ ಸೋಮವಾರ ಅಥವಾ ಆಷಾಡ ಮುಗಿದ ಮೇಲೆ ಯಡಿಯೂರಪ್ಪನವರು ಪ್ರಮಾಣವಚನ ಸ್ಪೀಕರಿಸಿದರೆ ಒಳ್ಳೇಯದು ಎಂದು ಷರಾ ಬರೆದಿದ್ದಾರೆ. ಎಂದರೆ ಅಷ್ಟು ದಿನ ಸರ್ಕಾರ ರಚಿಸುವ ಸರ್ಕಸ್ಸನ್ನು ಎಳೆಯಲು ಅನುವು ಮಾಡಿಕೊಟ್ಟಿದ್ದಾರೆ.

ಅವರು ಹಾಗೇ ಹೇಳಿ ಮುಗಿಸಿದ ಮೂರೇ ನಿಮಿಷಕ್ಕೆ ಕನ್ನಡದ ಖಾಸಗಿ ಚಾನೆಲ್ ಒಂದರಲ್ಲಿ ಮೂವತ್ತು ನಿಮಿಷದ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಪಾಪಾ ಅವರಷ್ಟು ಸ್ಪೀಡು ಬಿಜೆಪಿ ಸರ್ಕಾರಕ್ಕಿಲ್ಲ.

ಐವರು ಡಿಸಿಎಂಗಳನ್ನು ತಪ್ಪಿಸಬೇಕು

ಸರ್ಕಾರ ರಚನೆ ತಡವಾಗುತ್ತಿರುವುದಕ್ಕೆ ಟಿವಿ ಮಾಧ್ಯಮಗಳು ಕಂಡುಕೊಂಡ ಪರಿಹಾರ ಐವರು ಡಿಸಿಎಂಗಳನ್ನು ತಪ್ಪಿಸಬೇಕು ಎಂಬುದಾಗಿದೆ. ಅವರ ಪ್ರಕಾರ ಬಿಜೆಪಿಯಲ್ಲಿ ಐವರು ನಾಯಕರು ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಅವರಿಗೆ ಕೊಡುವುದು ಕಷ್ಟ ಹಾಗಾಗಿ ಸರ್ಕಾರ ರಚನೆ ವಿಳಂಬವಾಗುತ್ತಿದೆ.

ಜಗದೀಶ್ ಶೆಟ್ಟರ್, ಕೆ.ಎಸ್ ಈಶ್ವರಪ್ಪ, ಬಿ.ಶ್ರೀರಾಮುಲು, ಆರ್.ಅಶೋಕ್ ಮತ್ತು ಗೋವಿಂದ ಕಾರಜೋಳ ರವರು ಹೆಸರನ್ನು ಪದೇ ಪದೇ ಉಲ್ಲೇಖಿಸುತ್ತಿರುವ ಟಿ.ವಿಗಲು ಸದ್ದಿಲ್ಲದೇ ಅರವಿಂದ ಲಿಂಬಾವಳಿ ಹೆಸರನ್ನು ಕೈಬಿಟ್ಟಿದ್ದಾರೆ. ವಿಶ್ವಾಸಮತ ಯಾಚನೆಗೂ ಮುನ್ನವೇ ರೆಸಾರ್ಟ್ ನಲ್ಲಿ ಕೆ.ಎಸ್ ಈಶ್ವರಪ್ಪ ಮತ್ತು ಅರವಿಂದ ಲಿಂಬಾವಳಿ ನಡುವೆ ಇದೇ ಡಿಸಿಎಂ ಸ್ಥಾನಕ್ಕಾಗಿ ಕಿತ್ತಾಟವಾದುದ್ದಾಗಿಯೂ, ತದನಂತರವೇ ಅಶ್ಲೀಲ ಸಿ.ಡಿ ಬಿಡುಗಡೆಯಾಗಿದ್ದು ಆದರೂ ಅವರ ಬಗ್ಗೆ ಟಿವಿಗಳು ಚಕಾರವೆತ್ತುತ್ತಿಲ್ಲ.

ಸ್ಪೀಕರ್ ರವರು ಏನಂಥಾರೆ?

ಇನ್ನು ಅತೃಪ್ತ ಶಾಸಕರೆಂದು ಕರೆಯುವ 16 ಜನ ಶಾಸಕರ ರಾಜೀನಾಮೆ ವಿಚಾರವಿನ್ನು ಬಗೆಹರಿದಿಲ್ಲ. ಸುಪ್ರೀಂ ಕೋರ್ಟ್ ಸಹ ಅಂತಿಮ ತೀರ್ಪು ನೀಡಿಲ್ಲ. ಅವರನ್ನು ಈ ವಿಧಾನಸಭಾ ಅವಧಿಪೂರ್ತಿ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹ ಮಾಡಬೇಕೇಂದು ಸ್ಪೀಕರ್ ರವರು ಕಾಯುತ್ತಿದ್ದಾರೆ.

ಇಂದು ಮಾಧ್ಯಮಗಳು ಸ್ಪೀಕರ್ ರವರಿಗೆ ಪದೇ ಪದೇ ಆ ಶಾಸಕರ ರಾಜೀನಾಮೆ ಏನು ಮಾಡುತ್ತೀರಿ? ಅನರ್ಹತೆ ಯಾವಾಗ ಮಾಡುತ್ತೀರಿ ಎಂದು ಪ್ರಶ್ನೆ ಹಾಕುತ್ತಿದ್ದರು. ಒಂದೂ ಚಾನೆಲ್ ಅಂತೂ ಆ ಶಾಸಕರನ್ನು ಮತ್ತೆ ವಿಚಾರಣೆಗೆ ಕರೆಯುತ್ತೀರಾ ಎಂದು ಪ್ರಶ್ನಿಸಿತು. ಆಗ ಸಿಟ್ಟಿಗೆದ್ದ ಸ್ಪೀಕರ್ ರಮೇಶ್ ಕುಮಾರ್, “ನಮಗೇನು ಬೇರೆ ಕೆಲಸ ಇಲ್ಲ ಅನ್ಕೊಂಡ್ರ? ಬೇಕಾದರೆ ನೀವೆ ಕರೆಸಿ ವಿಚಾರಣೆ ಮಾಡಿಕೊಳ್ಳಿ” ಎಂದು ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ಗುಟ್ಟು ಬಿಟ್ಟುಕೊಡಲು ನಿರಾಕರಿಸಿದ್ದಾರೆ.

ಹೈಕಮಾಂಡ್ ಎಂಬ ಗುಮ್ಮ

ಇನ್ನು ಬಿಜೆಪಿ ಹೈಕಮಾಂಡ್ ಕೂಡ ಗೊಂದಲಕ್ಕೆ ಬಿದ್ದಿದೆ. ಹಾಗಾಗಿ ರಾಜ್ಯ ಬಿಜೆಪಿಗೆ ಯಾವುದೇ ಸ್ಪಷ್ಟ ಸೂಚನೆಯನ್ನು ಕೊಟ್ಟಿಲ್ಲ. ಇದು ಯಡಿಯೂರಪ್ಪನವರ ಎದೆಬಡಿತವನ್ನು ಹೆಚ್ಚಿಸಿದೆ. ಕಷ್ಟಪಟ್ಟು ಮೈತ್ರಿ ಸರ್ಕಾರ ಬೀಳಿಸಿದ್ದರೂ ತಾನು ಪಟ್ಟಕ್ಕೆರಲು ತಡವಾಗುತ್ತಿರುವುದು ಅವರ ಚಿಂತೆಗೆ ಕಾರಣವಾಗಿದೆ. ಹೈಕಮಾಂಡ್ ಮುಖ್ಯಮಂತ್ರಿಯನ್ನೇ ಬದಲಾವಣೆ ಮಾಡಿಬಿಟ್ಟರೆ ಏನು ಮಾಡುವುದು ಎಂಬುದು 76 ವರ್ಷದ ಯಡಿಯೂರಪ್ಪನವರ ಅನುಮಾನ.

ಹೈಕಮಾಂಡ್ ಅನುಮತಿ ನೀಡುವವರೆಗೂ ಸರ್ಕಾರ ರಚನೆಯ ಪ್ರಕ್ರಿಯೆ ನಿಂತಲ್ಲೇ ನಿಲ್ಲಲ್ಲಿದೆ.. ಒಟ್ಟಿಗೆ ಅಷ್ಟೆಲ್ಲಾ ಅರ್ಜೆಂಟ್ ಮಾಡಿದವರಿಗೆ ಈಗ ತಾವು ಕಾಲ ತಳ್ಳುವಂತ ಪರಿಸ್ಥಿತಿ ಬಂದೊದಗಿದೆ. ಇದೆಲ್ಲದರ ನೋವು ಅನುಭವಿಸುತ್ತಿರುವವರು ಮಾತ್ರ ಜನಸಾಮಾನ್ಯರು. ಸ್ಪೀಕರ್ ರವರು ಇದನ್ನು ಸೂಚ್ಯವಾಗಿ ಹೇಳಿದರು. ಬೇಗ ಹೊಸ ಸರ್ಕಾರ ರಚನೆಯಾಗಬೇಕು, ನಾನು ಯಾವಾಗ ಬೇಕಾದರೂ ಸದನ ನಡೆಸಲು ಸಿದ್ದನಿದ್ದೇನೆ ಏಕೆಂದರೆ ತಿಂಗಳ ಕೊನೆ ಆಗಿರುವುದರಿಂದ ಸರ್ಕಾರಿ ನೌಕರರಿಗೆ ಸಂಬಳ ಹಾಕುವುದು ಸಹ ಕಷ್ಟವಾಗಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸ್ಥಳಾಂತರಗೊಂಡ ಅಕ್ಬರ್ ನಗರ ನಿವಾಸಿಗಳನ್ನು SIR ನಿಂದ ಹೊರಗಿಟ್ಟಿರುವ ಬಗ್ಗೆ ಪರಿಶೀಲಿಸಲು ಲಕ್ನೋ ಚುನಾವಣಾ ಅಧಿಕಾರಿಗೆ ಸುಪ್ರೀಂ ಸೂಚನೆ

ಉತ್ತರ ಪ್ರದೇಶದಲ್ಲಿ ತಮ್ಮ ಮನೆಗಳನ್ನು ನೆಲಸಮಗೊಳಿಸಿ, ಸ್ಥಳಾಂತರದ ನಂತರ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ನಿಂದ ತಮ್ಮನ್ನು ಹೊರಗಿಡಲಾಗಿದೆ ಎಂದು ಆರೋಪಿಸಿ ಅಕ್ಬರ್ ನಗರದ ಮಾಜಿ ನಿವಾಸಿಗಳು ಎತ್ತಿರುವ ದೂರುಗಳನ್ನು...

‘ವಯಸ್ಕರು ಒಟ್ಟಿಗೆ ವಾಸಿಸಲು ನಿರ್ಧರಿಸುವುದು ಅಪರಾಧವಲ್ಲ..’; ಅಂತರಧರ್ಮೀಯ ಜೋಡಿ ಕುರಿತು ಕೋರ್ಟ್ ಮಹತ್ವದ ತೀರ್ಪು

"ಅಂತರ್ಧರ್ಮೀಯರಾದ ಇಬ್ಬರು ವಯಸ್ಕ ವ್ಯಕ್ತಿಗಳು, ಅವರು ತಮ್ಮ ಸ್ವತಂತ್ರ ಇಚ್ಛೆಯಿಂದ ಒಟ್ಟಿಗೆ ವಾಸಿಸಲು ನಿರ್ಧರಿಸುತ್ತಾರೆ, ಉತ್ತರ ಪ್ರದೇಶದ ಮತಾಂತರ ವಿರೋಧಿ ಕಾನೂನು ಅವರನ್ನು ತಡೆಯಲು ಅಥವಾ ಅಂತರಧರ್ಮೀಯ ವಿವಾಹಗಳನ್ನು ನಿಷೇಧಿಸಲು ಸಾಧ್ಯವಿಲ್ಲ" ಎಂದು...

ಗೋರಖ್‌ಪುರದ ಏಮ್ಸ್‌ನಲ್ಲಿ ನಾಗಾಲ್ಯಾಂಡ್ ವೈದ್ಯೆಗೆ ಕಿರುಕುಳ; ಜನಾಂಗೀಯ ನಿಂದನೆ

ಉತ್ತರ ಪ್ರದೇಶದ ಗೋರಖ್‌ಪುರದ ಏಮ್ಸ್‌ನಲ್ಲಿ ನಿಯೋಜಿತರಾಗಿದ್ದ ನಾಗಾಲ್ಯಾಂಡ್‌ನ ಮೂರನೇ ವರ್ಷದ ನಿವಾಸಿ ವೈದ್ಯರ ಮೇಲೆ ಭಾನುವಾರ ಸಂಜೆ ಸಂಸ್ಥೆಯ ಆವರಣದ ಬಳಿ ಮೂವರು ಜನಾಂಗೀಯ ನಿಂದನೆ, ಕಿರುಕುಳ ಮತ್ತು ದೈಹಿಕ ಹಲ್ಲೆ ನಡೆಸಿದ್ದಾರೆ...

‘2026 ರಲ್ಲಿ ಸಮುದ್ರವನ್ನು ಪ್ರಾಬಲ್ಯಗೊಳಿಸುತ್ತೇವೆ’: ಪಹಲ್ಗಾಮ್ ದಾಳಿಯ ಮಾಸ್ಟರ್ ಮೈಂಡ್ ಸೈಫುಲ್ಲಾ ಕಸೂರಿಯಿಂದ ಭಾರತಕ್ಕೆ ಬಹಿರಂಗ ಬೆದರಿಕೆ

2008ರ ಮುಂಬೈ ದಾಳಿಯ ಭೀಕರತೆಯನ್ನು ಪ್ರತಿಧ್ವನಿಸುವ ಕಟು ಬೆದರಿಕೆಯಲ್ಲಿ, ಪಾಕಿಸ್ತಾನ ಮೂಲದ ಭಯೋತ್ಪಾದಕ ಸಂಘಟನೆ ಲಷ್ಕರ್-ಎ-ತೊಯ್ಬಾ (LeT) ಭಾರತದಲ್ಲಿ ಮತ್ತೊಮ್ಮೆ ಸಮುದ್ರ ಮಾರ್ಗವನ್ನು ಬಳಸಿಕೊಂಡು 26/11 ಮಾದರಿಯ ದಾಳಿಯನ್ನು ನಡೆಸುವುದಾಗಿ ಬೆದರಿಕೆ ಹಾಕಿದೆ...

ಕೇರಳ ಹೆಸರು ಇನ್ನು ಮುಂದೆ ‘ಕೇರಳಂ’; ಕೇಂದ್ರ ಸಚಿವ ಸಂಪುಟ ಅನುಮೋದನೆ

ವಿಧಾನಸಭೆ ಚುನಾವಣೆ ಸಮೀಪಿಸುತ್ತಿರುವ ಹೊತ್ತಿನಲ್ಲಿ ಮಹತ್ವದ ಬೆಳವಣಿಗೆಯೊಂದರಲ್ಲಿ, ರಾಜ್ಯದ ಹೆಸರನ್ನು ಕೇರಳಂ ಎಂದು ಬದಲಾಯಿಸುವ ಪ್ರಸ್ತಾವನೆಗೆ ಕೇಂದ್ರ ಸಚಿವ ಸಂಪುಟ ಮಂಗಳವಾರ ಅನುಮೋದನೆ ನೀಡಿದೆ. "ಕೇರಳವನ್ನು ಕೇರಳಂ ಎಂದು ಮರುನಾಮಕರಣ ಮಾಡಲು ಕೇಂದ್ರ...

ನಾಡೋಜ ಗೌರವ ತಿರಸ್ಕರಿಸಿದ ಹಿರಿಯ ಚಿಂತಕ ಡಾ ಜಿ. ರಾಮಕೃಷ್ಣ; ರಾಜ್ಯಪಾಲರಿಂದ ಗೌರವ ಸ್ವೀಕರಿಸದಿರಲು ನಿರ್ಧಾರ

ಹಿರಿಯ ಚಿಂತಕ ಡಾ.ಜಿ.ರಾಮಕೃಷ್ಣ ಅವರು ಹಂಪಿ ಕನ್ನಡ ವಿಶ್ವವಿದ್ಯಾಲಯ ಕೊಡಮಾಡುವ ನಾಡೋಜ ಪ್ರಶಸ್ತಿಯನ್ನು ರಾಜ್ಯಪಾಲರಿಂದ ಸ್ವೀಕರಿಸಲು ನಿರಾಕರಿಸಿದ್ದಾರೆ. ಹಂಪಿ ಕನ್ನಡ ವಿಶ್ವವಿದ್ಯಾಲಯದ ವಿದ್ಯಾರಣ್ಯ ಕ್ಯಾಂಪಸ್‌ನ ‘ನವರಂಗ’ ಬಯಲು ರಂಗಮಂದಿರದಲ್ಲಿ ಮಂಗಳವಾರ ನಡೆಯುವ 34ನೇ ನುಡಿಹಬ್ಬದಲ್ಲಿ...

‘ಕೇರಳ ಸಂಪೂರ್ಣ ಸಾಮರಸ್ಯದಿಂದ ಬದುಕುತ್ತಿದೆ, ಸಿನಿಮಾದಲ್ಲಿ ತಪ್ಪು ಚಿತ್ರಣವಿದೆ’: ‘ದಿ ಕೇರಳ ಸ್ಟೋರಿ 2’ ಕುರಿತು ಕೇರಳ ಹೈಕೋರ್ಟ್

ವಿವಾದಾತ್ಮಕ 'ದಿ ಕೇರಳ ಸ್ಟೋರಿ 2 -ಗೋಸ್ ಬಿಯಾಂಡ್' ಸಿನಿಮಾಗೆ ಸರ್ಟಿಫಿಕೇಟ್ ನೀಡಿರುವ ಕುರಿತು ಕೇರಳ ಹೈಕೋರ್ಟ್ ಮಂಗಳವಾರ (ಫೆ.24) ಕೇಂದ್ರ ಚಲನಚಿತ್ರ ಪ್ರಮಾಣೀಕರಣ ಮಂಡಳಿಯನ್ನು (ಸಿಬಿಎಫ್‌ಸಿ) ಪ್ರಶ್ನಿಸಿದೆ ಎಂದು ಕಾನೂನು ಸುದ್ದಿ...

‘ಸರ್ವಾಧಿಕಾರಿ ಪ್ರವೃತ್ತಿ, ಹೇಡಿತನಕ್ಕೆ ಸಾಕ್ಷಿ’ : ಯುವ ಕಾಂಗ್ರೆಸ್‌ ನಾಯಕರ ಬಂಧನ ಖಂಡಿಸಿದ ರಾಹುಲ್ ಗಾಂಧಿ

ಯುವ ಕಾಂಗ್ರೆಸ್ ರಾಷ್ಟ್ರೀಯ ಅಧ್ಯಕ್ಷ ಉದಯ್ ಭಾನು ಚಿಬ್ ಮತ್ತು ಪಕ್ಷದ ಇತರ ಸದಸ್ಯರ ಬಂಧನವನ್ನು ತೀವ್ರವಾಗಿ ಖಂಡಿಸಿರುವ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ, "ಇದು ಸರ್ವಾಧಿಕಾರಿ ಪ್ರವೃತ್ತಿ ಮತ್ತು...

‘ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ’; ನ್ಯಾಯಮೂರ್ತಿ ಉಜ್ವಲ್  ಭೂಯಾನ್

ಹೊಸದಿಲ್ಲಿ: ಭಾರತದ ಸಂವಿಧಾನವು ಪ್ರತಿಯೊಬ್ಬರಿಗೂ ಸಮಾನತೆ ಮತ್ತು ಘನತೆಯ ಭರವಸೆ ನೀಡುತ್ತದೆ. ಆದರೆ ಸ್ವಾತಂತ್ರ್ಯದ 75 ವರ್ಷಗಳ ನಂತರವೂ ಭಾರತದ ಸಾಮಾಜಿಕ ರಚನೆಯಲ್ಲಿ ಬಿರುಕುಗಳು ಆಳವಾಗಿ ಅಡಗಿದೆ ಎಂದು ಸುಪ್ರೀಂ ಕೋರ್ಟ್ ನ್ಯಾಯಮೂರ್ತಿ...

ಹೈದರಾಬಾದ್ ವಿಶ್ವವಿದ್ಯಾಲಯದಲ್ಲಿ ದಲಿತ ವಿದ್ಯಾರ್ಥಿಯ ಮೇಲೆ ಹಲ್ಲೆ ಆರೋಪ; ಎಎಸ್ಎ ಪ್ರತಿಭಟನೆ

ದಲಿತ ವಿದ್ಯಾರ್ಥಿಯ ಮೇಲೆ ಜಾತಿ ಆಧಾರಿತ ಹಲ್ಲೆ ನಡೆದಿದ್ದರೂ ಪ್ರಕರಣದಲ್ಲಿ ಹೈದರಾಬಾದ್ ವಿಶ್ವವಿದ್ಯಾಲಯದ (ಯುಒಎಚ್) ಆಡಳಿತಾತ್ಮಕ ನಿಷ್ಕ್ರಿಯತೆ ಇದೆ ಎಂದು ಆರೋಪಿಸಿ, ಅಂಬೇಡ್ಕರ್ ವಿದ್ಯಾರ್ಥಿ ಸಂಘ (ಎಎಸ್ಎ) ಸೋಮವಾರ (ಫೆ.23) ಪ್ರತಿಭಟನೆ ನಡೆಸಿತು...