Homeಕರ್ನಾಟಕಸರ್ಕಾರ ರಚಿಸಲು ಆಗುತ್ತಿಲ್ಲ: ಜ್ಯೋತಿಷ್ಯದ ಮೊರೆ ಹೋದ ಯಡಿಯೂರಪ್ಪ ಮತ್ತು ಮಾಧ್ಯಮಗಳು

ಸರ್ಕಾರ ರಚಿಸಲು ಆಗುತ್ತಿಲ್ಲ: ಜ್ಯೋತಿಷ್ಯದ ಮೊರೆ ಹೋದ ಯಡಿಯೂರಪ್ಪ ಮತ್ತು ಮಾಧ್ಯಮಗಳು

- Advertisement -
- Advertisement -

ಅಧಿವೇಶನದ ಪೂರ್ತಿ ಯಡಿಯೂರಪ್ಪ ಮತ್ತು ಬಿಜೆಪಿಯವರು ಮಾತನಾಡಿದ್ದು ಹೆಚ್ಚು ಕಮ್ಮಿ ಒಂದೇ ಮಾತು. ಅದು ಬೇಗ ವಿಶ್ವಾಸಮತ ಸಾಬೀತುಪಡಿಸಿ ಎಂಬುದೇ ಆಗಿತ್ತು. ಅದರರ್ಥ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಸಂಖ್ಯಾಬಲ ಇಲ್ಲದಿರುವುದರಿಂದ ಈ ಸರ್ಕಾರ ಬಿದ್ದುಹೋಗುತ್ತದೆ ಕೂಡಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬುದು ಎಲ್ಲಾ ಬಿಜೆಪಿಗರ ಮನದಾಸೆ. ಅದಕ್ಕಾಗಿ ಸುಪಾರಿ ಪಡೆದವರಂತೆ ವರ್ತಿಸಿದ್ದವು ಮುಖ್ಯವಾಹಿನಿ ಎಲೆಕ್ಟ್ರಾನಿಕ್ ಮಾಧ್ಯಮಗಳು..

ಈಗ ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿ ಎರಡುದಿನಗಳಾಗುತ್ತಾ ಬಂದರೂ ಹೊಸ ಸರ್ಕಾರದ ಸುದ್ದಿಯೇ ಇಲ್ಲವಲ್ಲ?? ಸದನದಲ್ಲಿ ಚರ್ಚೆ ನಡೆಯುವಾಗ ಬಿಜೆಪಿ ಮತ್ತು ಮಾಧ್ಯಮಗಳಿಗಿದ್ದ ಆತುರ ಹೀಗೆಕ್ಕಿಲ್ಲ? ಏಕೆಂದರೆ ಅಧಿಕಾರ ಹಿಡಿಯುವ ಕಾರಣಕ್ಕಾಗಿ ಬಿಜೆಪಿಯವರು ಯಾವ ಆಪರೇಷನ್ ಮಾಡಿದರೋ, ಅದೇ ಆಪರೇಷನ್ ಅವರಿಗೆ ಮುಳುವಾಗಿಬಿಡದೆಂಬ ಭಯ ಕಾಡುತ್ತಿದೆ. ಅದಕ್ಕೆ ಇಲ್ಲ ಸಲ್ಲದ ನೆಪಗಳನ್ನು ಹುಡುಕುತ್ತಿದ್ದಾರೆ. ಅಂತಹ ನೆಪಗಳು ಇಲ್ಲಿವೆ ನೋಡಿ

ಜ್ಯೋತಿಷ್ಯದ ಜೋತು ಬಿದ್ದ ಯಡಿಯೂರಪ್ಪ

ಈ ಹಿಂದಿನ ಸರ್ಕಾರ ಲೋಕೋಪಯೋಗಿ ಇಲಾಖೆಯ ಸಚಿವ ಎಚ್.ಡಿ ರೇವಣ್ಣನವರನ್ನು ನಿಂಬೆ ಹಣ್ಣು ರೇವಣ್ಣ ಎಂದು ಎಲ್ಲರೂ ಆಡಿಕೊಂಡು ಸುಸ್ತಾಗಿದ್ದರು. ಸ್ವತಃ ಸ್ಪೀಕರ್ ಸಹ ರೇವಣ್ಣನವರು ಚರ್ಚೆಗೆ ಸಮಯ ಕೇಳಿದಾಗ ನಮ್ಮ ಜ್ಯೋತಿಷಿಗಳ ಬಳಿ ಕೇಳಿ ಗಳಿಗೆ ನಿಗಧಿ ಮಾಡುತ್ತೇವೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದರು. ಈಗ ಯಡಿಯೂರಪ್ಪನವರು ಸಹ ತಾವೇನು ಕಮ್ಮಿ ಎಂದು ರೇಣುಕಾರ್ಚಾರ ಎಂಬ ಜ್ಯೋತಿಷಿಯ ಮೊರೆಹೋಗಿದ್ದಾರೆ.

ಆ ಜ್ಯೋತಿಷಿಯು ಅಳೆದು ತೂಗಿ ಶುಕ್ರವಾರ ಸಂಜೆ 6 ಗಂಟೆ ಮೇಲೆ, ಇಲ್ಲ ಸೋಮವಾರ ಅಥವಾ ಆಷಾಡ ಮುಗಿದ ಮೇಲೆ ಯಡಿಯೂರಪ್ಪನವರು ಪ್ರಮಾಣವಚನ ಸ್ಪೀಕರಿಸಿದರೆ ಒಳ್ಳೇಯದು ಎಂದು ಷರಾ ಬರೆದಿದ್ದಾರೆ. ಎಂದರೆ ಅಷ್ಟು ದಿನ ಸರ್ಕಾರ ರಚಿಸುವ ಸರ್ಕಸ್ಸನ್ನು ಎಳೆಯಲು ಅನುವು ಮಾಡಿಕೊಟ್ಟಿದ್ದಾರೆ.

ಅವರು ಹಾಗೇ ಹೇಳಿ ಮುಗಿಸಿದ ಮೂರೇ ನಿಮಿಷಕ್ಕೆ ಕನ್ನಡದ ಖಾಸಗಿ ಚಾನೆಲ್ ಒಂದರಲ್ಲಿ ಮೂವತ್ತು ನಿಮಿಷದ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಪಾಪಾ ಅವರಷ್ಟು ಸ್ಪೀಡು ಬಿಜೆಪಿ ಸರ್ಕಾರಕ್ಕಿಲ್ಲ.

ಐವರು ಡಿಸಿಎಂಗಳನ್ನು ತಪ್ಪಿಸಬೇಕು

ಸರ್ಕಾರ ರಚನೆ ತಡವಾಗುತ್ತಿರುವುದಕ್ಕೆ ಟಿವಿ ಮಾಧ್ಯಮಗಳು ಕಂಡುಕೊಂಡ ಪರಿಹಾರ ಐವರು ಡಿಸಿಎಂಗಳನ್ನು ತಪ್ಪಿಸಬೇಕು ಎಂಬುದಾಗಿದೆ. ಅವರ ಪ್ರಕಾರ ಬಿಜೆಪಿಯಲ್ಲಿ ಐವರು ನಾಯಕರು ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಅವರಿಗೆ ಕೊಡುವುದು ಕಷ್ಟ ಹಾಗಾಗಿ ಸರ್ಕಾರ ರಚನೆ ವಿಳಂಬವಾಗುತ್ತಿದೆ.

ಜಗದೀಶ್ ಶೆಟ್ಟರ್, ಕೆ.ಎಸ್ ಈಶ್ವರಪ್ಪ, ಬಿ.ಶ್ರೀರಾಮುಲು, ಆರ್.ಅಶೋಕ್ ಮತ್ತು ಗೋವಿಂದ ಕಾರಜೋಳ ರವರು ಹೆಸರನ್ನು ಪದೇ ಪದೇ ಉಲ್ಲೇಖಿಸುತ್ತಿರುವ ಟಿ.ವಿಗಲು ಸದ್ದಿಲ್ಲದೇ ಅರವಿಂದ ಲಿಂಬಾವಳಿ ಹೆಸರನ್ನು ಕೈಬಿಟ್ಟಿದ್ದಾರೆ. ವಿಶ್ವಾಸಮತ ಯಾಚನೆಗೂ ಮುನ್ನವೇ ರೆಸಾರ್ಟ್ ನಲ್ಲಿ ಕೆ.ಎಸ್ ಈಶ್ವರಪ್ಪ ಮತ್ತು ಅರವಿಂದ ಲಿಂಬಾವಳಿ ನಡುವೆ ಇದೇ ಡಿಸಿಎಂ ಸ್ಥಾನಕ್ಕಾಗಿ ಕಿತ್ತಾಟವಾದುದ್ದಾಗಿಯೂ, ತದನಂತರವೇ ಅಶ್ಲೀಲ ಸಿ.ಡಿ ಬಿಡುಗಡೆಯಾಗಿದ್ದು ಆದರೂ ಅವರ ಬಗ್ಗೆ ಟಿವಿಗಳು ಚಕಾರವೆತ್ತುತ್ತಿಲ್ಲ.

ಸ್ಪೀಕರ್ ರವರು ಏನಂಥಾರೆ?

ಇನ್ನು ಅತೃಪ್ತ ಶಾಸಕರೆಂದು ಕರೆಯುವ 16 ಜನ ಶಾಸಕರ ರಾಜೀನಾಮೆ ವಿಚಾರವಿನ್ನು ಬಗೆಹರಿದಿಲ್ಲ. ಸುಪ್ರೀಂ ಕೋರ್ಟ್ ಸಹ ಅಂತಿಮ ತೀರ್ಪು ನೀಡಿಲ್ಲ. ಅವರನ್ನು ಈ ವಿಧಾನಸಭಾ ಅವಧಿಪೂರ್ತಿ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹ ಮಾಡಬೇಕೇಂದು ಸ್ಪೀಕರ್ ರವರು ಕಾಯುತ್ತಿದ್ದಾರೆ.

ಇಂದು ಮಾಧ್ಯಮಗಳು ಸ್ಪೀಕರ್ ರವರಿಗೆ ಪದೇ ಪದೇ ಆ ಶಾಸಕರ ರಾಜೀನಾಮೆ ಏನು ಮಾಡುತ್ತೀರಿ? ಅನರ್ಹತೆ ಯಾವಾಗ ಮಾಡುತ್ತೀರಿ ಎಂದು ಪ್ರಶ್ನೆ ಹಾಕುತ್ತಿದ್ದರು. ಒಂದೂ ಚಾನೆಲ್ ಅಂತೂ ಆ ಶಾಸಕರನ್ನು ಮತ್ತೆ ವಿಚಾರಣೆಗೆ ಕರೆಯುತ್ತೀರಾ ಎಂದು ಪ್ರಶ್ನಿಸಿತು. ಆಗ ಸಿಟ್ಟಿಗೆದ್ದ ಸ್ಪೀಕರ್ ರಮೇಶ್ ಕುಮಾರ್, “ನಮಗೇನು ಬೇರೆ ಕೆಲಸ ಇಲ್ಲ ಅನ್ಕೊಂಡ್ರ? ಬೇಕಾದರೆ ನೀವೆ ಕರೆಸಿ ವಿಚಾರಣೆ ಮಾಡಿಕೊಳ್ಳಿ” ಎಂದು ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ಗುಟ್ಟು ಬಿಟ್ಟುಕೊಡಲು ನಿರಾಕರಿಸಿದ್ದಾರೆ.

ಹೈಕಮಾಂಡ್ ಎಂಬ ಗುಮ್ಮ

ಇನ್ನು ಬಿಜೆಪಿ ಹೈಕಮಾಂಡ್ ಕೂಡ ಗೊಂದಲಕ್ಕೆ ಬಿದ್ದಿದೆ. ಹಾಗಾಗಿ ರಾಜ್ಯ ಬಿಜೆಪಿಗೆ ಯಾವುದೇ ಸ್ಪಷ್ಟ ಸೂಚನೆಯನ್ನು ಕೊಟ್ಟಿಲ್ಲ. ಇದು ಯಡಿಯೂರಪ್ಪನವರ ಎದೆಬಡಿತವನ್ನು ಹೆಚ್ಚಿಸಿದೆ. ಕಷ್ಟಪಟ್ಟು ಮೈತ್ರಿ ಸರ್ಕಾರ ಬೀಳಿಸಿದ್ದರೂ ತಾನು ಪಟ್ಟಕ್ಕೆರಲು ತಡವಾಗುತ್ತಿರುವುದು ಅವರ ಚಿಂತೆಗೆ ಕಾರಣವಾಗಿದೆ. ಹೈಕಮಾಂಡ್ ಮುಖ್ಯಮಂತ್ರಿಯನ್ನೇ ಬದಲಾವಣೆ ಮಾಡಿಬಿಟ್ಟರೆ ಏನು ಮಾಡುವುದು ಎಂಬುದು 76 ವರ್ಷದ ಯಡಿಯೂರಪ್ಪನವರ ಅನುಮಾನ.

ಹೈಕಮಾಂಡ್ ಅನುಮತಿ ನೀಡುವವರೆಗೂ ಸರ್ಕಾರ ರಚನೆಯ ಪ್ರಕ್ರಿಯೆ ನಿಂತಲ್ಲೇ ನಿಲ್ಲಲ್ಲಿದೆ.. ಒಟ್ಟಿಗೆ ಅಷ್ಟೆಲ್ಲಾ ಅರ್ಜೆಂಟ್ ಮಾಡಿದವರಿಗೆ ಈಗ ತಾವು ಕಾಲ ತಳ್ಳುವಂತ ಪರಿಸ್ಥಿತಿ ಬಂದೊದಗಿದೆ. ಇದೆಲ್ಲದರ ನೋವು ಅನುಭವಿಸುತ್ತಿರುವವರು ಮಾತ್ರ ಜನಸಾಮಾನ್ಯರು. ಸ್ಪೀಕರ್ ರವರು ಇದನ್ನು ಸೂಚ್ಯವಾಗಿ ಹೇಳಿದರು. ಬೇಗ ಹೊಸ ಸರ್ಕಾರ ರಚನೆಯಾಗಬೇಕು, ನಾನು ಯಾವಾಗ ಬೇಕಾದರೂ ಸದನ ನಡೆಸಲು ಸಿದ್ದನಿದ್ದೇನೆ ಏಕೆಂದರೆ ತಿಂಗಳ ಕೊನೆ ಆಗಿರುವುದರಿಂದ ಸರ್ಕಾರಿ ನೌಕರರಿಗೆ ಸಂಬಳ ಹಾಕುವುದು ಸಹ ಕಷ್ಟವಾಗಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...