Homeಕರ್ನಾಟಕಸರ್ಕಾರ ರಚಿಸಲು ಆಗುತ್ತಿಲ್ಲ: ಜ್ಯೋತಿಷ್ಯದ ಮೊರೆ ಹೋದ ಯಡಿಯೂರಪ್ಪ ಮತ್ತು ಮಾಧ್ಯಮಗಳು

ಸರ್ಕಾರ ರಚಿಸಲು ಆಗುತ್ತಿಲ್ಲ: ಜ್ಯೋತಿಷ್ಯದ ಮೊರೆ ಹೋದ ಯಡಿಯೂರಪ್ಪ ಮತ್ತು ಮಾಧ್ಯಮಗಳು

- Advertisement -
- Advertisement -

ಅಧಿವೇಶನದ ಪೂರ್ತಿ ಯಡಿಯೂರಪ್ಪ ಮತ್ತು ಬಿಜೆಪಿಯವರು ಮಾತನಾಡಿದ್ದು ಹೆಚ್ಚು ಕಮ್ಮಿ ಒಂದೇ ಮಾತು. ಅದು ಬೇಗ ವಿಶ್ವಾಸಮತ ಸಾಬೀತುಪಡಿಸಿ ಎಂಬುದೇ ಆಗಿತ್ತು. ಅದರರ್ಥ ಕಾಂಗ್ರೆಸ್ ಮತ್ತು ಜೆಡಿಎಸ್ ಗೆ ಸಂಖ್ಯಾಬಲ ಇಲ್ಲದಿರುವುದರಿಂದ ಈ ಸರ್ಕಾರ ಬಿದ್ದುಹೋಗುತ್ತದೆ ಕೂಡಲೇ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಬೇಕು ಎಂಬುದು ಎಲ್ಲಾ ಬಿಜೆಪಿಗರ ಮನದಾಸೆ. ಅದಕ್ಕಾಗಿ ಸುಪಾರಿ ಪಡೆದವರಂತೆ ವರ್ತಿಸಿದ್ದವು ಮುಖ್ಯವಾಹಿನಿ ಎಲೆಕ್ಟ್ರಾನಿಕ್ ಮಾಧ್ಯಮಗಳು..

ಈಗ ಕುಮಾರಸ್ವಾಮಿಯವರು ಬಹುಮತ ಸಾಬೀತುಪಡಿಸುವಲ್ಲಿ ವಿಫಲರಾಗಿ ಎರಡುದಿನಗಳಾಗುತ್ತಾ ಬಂದರೂ ಹೊಸ ಸರ್ಕಾರದ ಸುದ್ದಿಯೇ ಇಲ್ಲವಲ್ಲ?? ಸದನದಲ್ಲಿ ಚರ್ಚೆ ನಡೆಯುವಾಗ ಬಿಜೆಪಿ ಮತ್ತು ಮಾಧ್ಯಮಗಳಿಗಿದ್ದ ಆತುರ ಹೀಗೆಕ್ಕಿಲ್ಲ? ಏಕೆಂದರೆ ಅಧಿಕಾರ ಹಿಡಿಯುವ ಕಾರಣಕ್ಕಾಗಿ ಬಿಜೆಪಿಯವರು ಯಾವ ಆಪರೇಷನ್ ಮಾಡಿದರೋ, ಅದೇ ಆಪರೇಷನ್ ಅವರಿಗೆ ಮುಳುವಾಗಿಬಿಡದೆಂಬ ಭಯ ಕಾಡುತ್ತಿದೆ. ಅದಕ್ಕೆ ಇಲ್ಲ ಸಲ್ಲದ ನೆಪಗಳನ್ನು ಹುಡುಕುತ್ತಿದ್ದಾರೆ. ಅಂತಹ ನೆಪಗಳು ಇಲ್ಲಿವೆ ನೋಡಿ

ಜ್ಯೋತಿಷ್ಯದ ಜೋತು ಬಿದ್ದ ಯಡಿಯೂರಪ್ಪ

ಈ ಹಿಂದಿನ ಸರ್ಕಾರ ಲೋಕೋಪಯೋಗಿ ಇಲಾಖೆಯ ಸಚಿವ ಎಚ್.ಡಿ ರೇವಣ್ಣನವರನ್ನು ನಿಂಬೆ ಹಣ್ಣು ರೇವಣ್ಣ ಎಂದು ಎಲ್ಲರೂ ಆಡಿಕೊಂಡು ಸುಸ್ತಾಗಿದ್ದರು. ಸ್ವತಃ ಸ್ಪೀಕರ್ ಸಹ ರೇವಣ್ಣನವರು ಚರ್ಚೆಗೆ ಸಮಯ ಕೇಳಿದಾಗ ನಮ್ಮ ಜ್ಯೋತಿಷಿಗಳ ಬಳಿ ಕೇಳಿ ಗಳಿಗೆ ನಿಗಧಿ ಮಾಡುತ್ತೇವೆ ಎಂದು ಹಾಸ್ಯ ಚಟಾಕಿ ಹಾರಿಸಿದ್ದರು. ಈಗ ಯಡಿಯೂರಪ್ಪನವರು ಸಹ ತಾವೇನು ಕಮ್ಮಿ ಎಂದು ರೇಣುಕಾರ್ಚಾರ ಎಂಬ ಜ್ಯೋತಿಷಿಯ ಮೊರೆಹೋಗಿದ್ದಾರೆ.

ಆ ಜ್ಯೋತಿಷಿಯು ಅಳೆದು ತೂಗಿ ಶುಕ್ರವಾರ ಸಂಜೆ 6 ಗಂಟೆ ಮೇಲೆ, ಇಲ್ಲ ಸೋಮವಾರ ಅಥವಾ ಆಷಾಡ ಮುಗಿದ ಮೇಲೆ ಯಡಿಯೂರಪ್ಪನವರು ಪ್ರಮಾಣವಚನ ಸ್ಪೀಕರಿಸಿದರೆ ಒಳ್ಳೇಯದು ಎಂದು ಷರಾ ಬರೆದಿದ್ದಾರೆ. ಎಂದರೆ ಅಷ್ಟು ದಿನ ಸರ್ಕಾರ ರಚಿಸುವ ಸರ್ಕಸ್ಸನ್ನು ಎಳೆಯಲು ಅನುವು ಮಾಡಿಕೊಟ್ಟಿದ್ದಾರೆ.

ಅವರು ಹಾಗೇ ಹೇಳಿ ಮುಗಿಸಿದ ಮೂರೇ ನಿಮಿಷಕ್ಕೆ ಕನ್ನಡದ ಖಾಸಗಿ ಚಾನೆಲ್ ಒಂದರಲ್ಲಿ ಮೂವತ್ತು ನಿಮಿಷದ ಚರ್ಚಾ ಕಾರ್ಯಕ್ರಮದಲ್ಲಿ ಭಾಗವಹಿಸಿದ್ದಾರೆ. ಪಾಪಾ ಅವರಷ್ಟು ಸ್ಪೀಡು ಬಿಜೆಪಿ ಸರ್ಕಾರಕ್ಕಿಲ್ಲ.

ಐವರು ಡಿಸಿಎಂಗಳನ್ನು ತಪ್ಪಿಸಬೇಕು

ಸರ್ಕಾರ ರಚನೆ ತಡವಾಗುತ್ತಿರುವುದಕ್ಕೆ ಟಿವಿ ಮಾಧ್ಯಮಗಳು ಕಂಡುಕೊಂಡ ಪರಿಹಾರ ಐವರು ಡಿಸಿಎಂಗಳನ್ನು ತಪ್ಪಿಸಬೇಕು ಎಂಬುದಾಗಿದೆ. ಅವರ ಪ್ರಕಾರ ಬಿಜೆಪಿಯಲ್ಲಿ ಐವರು ನಾಯಕರು ಡಿಸಿಎಂ ಸ್ಥಾನದ ಮೇಲೆ ಕಣ್ಣಿಟ್ಟಿದ್ದಾರೆ. ಅವರಿಗೆ ಕೊಡುವುದು ಕಷ್ಟ ಹಾಗಾಗಿ ಸರ್ಕಾರ ರಚನೆ ವಿಳಂಬವಾಗುತ್ತಿದೆ.

ಜಗದೀಶ್ ಶೆಟ್ಟರ್, ಕೆ.ಎಸ್ ಈಶ್ವರಪ್ಪ, ಬಿ.ಶ್ರೀರಾಮುಲು, ಆರ್.ಅಶೋಕ್ ಮತ್ತು ಗೋವಿಂದ ಕಾರಜೋಳ ರವರು ಹೆಸರನ್ನು ಪದೇ ಪದೇ ಉಲ್ಲೇಖಿಸುತ್ತಿರುವ ಟಿ.ವಿಗಲು ಸದ್ದಿಲ್ಲದೇ ಅರವಿಂದ ಲಿಂಬಾವಳಿ ಹೆಸರನ್ನು ಕೈಬಿಟ್ಟಿದ್ದಾರೆ. ವಿಶ್ವಾಸಮತ ಯಾಚನೆಗೂ ಮುನ್ನವೇ ರೆಸಾರ್ಟ್ ನಲ್ಲಿ ಕೆ.ಎಸ್ ಈಶ್ವರಪ್ಪ ಮತ್ತು ಅರವಿಂದ ಲಿಂಬಾವಳಿ ನಡುವೆ ಇದೇ ಡಿಸಿಎಂ ಸ್ಥಾನಕ್ಕಾಗಿ ಕಿತ್ತಾಟವಾದುದ್ದಾಗಿಯೂ, ತದನಂತರವೇ ಅಶ್ಲೀಲ ಸಿ.ಡಿ ಬಿಡುಗಡೆಯಾಗಿದ್ದು ಆದರೂ ಅವರ ಬಗ್ಗೆ ಟಿವಿಗಳು ಚಕಾರವೆತ್ತುತ್ತಿಲ್ಲ.

ಸ್ಪೀಕರ್ ರವರು ಏನಂಥಾರೆ?

ಇನ್ನು ಅತೃಪ್ತ ಶಾಸಕರೆಂದು ಕರೆಯುವ 16 ಜನ ಶಾಸಕರ ರಾಜೀನಾಮೆ ವಿಚಾರವಿನ್ನು ಬಗೆಹರಿದಿಲ್ಲ. ಸುಪ್ರೀಂ ಕೋರ್ಟ್ ಸಹ ಅಂತಿಮ ತೀರ್ಪು ನೀಡಿಲ್ಲ. ಅವರನ್ನು ಈ ವಿಧಾನಸಭಾ ಅವಧಿಪೂರ್ತಿ ಚುನಾವಣೆಗೆ ಸ್ಪರ್ಧಿಸದಂತೆ ಅನರ್ಹ ಮಾಡಬೇಕೇಂದು ಸ್ಪೀಕರ್ ರವರು ಕಾಯುತ್ತಿದ್ದಾರೆ.

ಇಂದು ಮಾಧ್ಯಮಗಳು ಸ್ಪೀಕರ್ ರವರಿಗೆ ಪದೇ ಪದೇ ಆ ಶಾಸಕರ ರಾಜೀನಾಮೆ ಏನು ಮಾಡುತ್ತೀರಿ? ಅನರ್ಹತೆ ಯಾವಾಗ ಮಾಡುತ್ತೀರಿ ಎಂದು ಪ್ರಶ್ನೆ ಹಾಕುತ್ತಿದ್ದರು. ಒಂದೂ ಚಾನೆಲ್ ಅಂತೂ ಆ ಶಾಸಕರನ್ನು ಮತ್ತೆ ವಿಚಾರಣೆಗೆ ಕರೆಯುತ್ತೀರಾ ಎಂದು ಪ್ರಶ್ನಿಸಿತು. ಆಗ ಸಿಟ್ಟಿಗೆದ್ದ ಸ್ಪೀಕರ್ ರಮೇಶ್ ಕುಮಾರ್, “ನಮಗೇನು ಬೇರೆ ಕೆಲಸ ಇಲ್ಲ ಅನ್ಕೊಂಡ್ರ? ಬೇಕಾದರೆ ನೀವೆ ಕರೆಸಿ ವಿಚಾರಣೆ ಮಾಡಿಕೊಳ್ಳಿ” ಎಂದು ಖಾರವಾಗಿ ಪ್ರತಿಕ್ರಿಯಿಸುವ ಮೂಲಕ ಗುಟ್ಟು ಬಿಟ್ಟುಕೊಡಲು ನಿರಾಕರಿಸಿದ್ದಾರೆ.

ಹೈಕಮಾಂಡ್ ಎಂಬ ಗುಮ್ಮ

ಇನ್ನು ಬಿಜೆಪಿ ಹೈಕಮಾಂಡ್ ಕೂಡ ಗೊಂದಲಕ್ಕೆ ಬಿದ್ದಿದೆ. ಹಾಗಾಗಿ ರಾಜ್ಯ ಬಿಜೆಪಿಗೆ ಯಾವುದೇ ಸ್ಪಷ್ಟ ಸೂಚನೆಯನ್ನು ಕೊಟ್ಟಿಲ್ಲ. ಇದು ಯಡಿಯೂರಪ್ಪನವರ ಎದೆಬಡಿತವನ್ನು ಹೆಚ್ಚಿಸಿದೆ. ಕಷ್ಟಪಟ್ಟು ಮೈತ್ರಿ ಸರ್ಕಾರ ಬೀಳಿಸಿದ್ದರೂ ತಾನು ಪಟ್ಟಕ್ಕೆರಲು ತಡವಾಗುತ್ತಿರುವುದು ಅವರ ಚಿಂತೆಗೆ ಕಾರಣವಾಗಿದೆ. ಹೈಕಮಾಂಡ್ ಮುಖ್ಯಮಂತ್ರಿಯನ್ನೇ ಬದಲಾವಣೆ ಮಾಡಿಬಿಟ್ಟರೆ ಏನು ಮಾಡುವುದು ಎಂಬುದು 76 ವರ್ಷದ ಯಡಿಯೂರಪ್ಪನವರ ಅನುಮಾನ.

ಹೈಕಮಾಂಡ್ ಅನುಮತಿ ನೀಡುವವರೆಗೂ ಸರ್ಕಾರ ರಚನೆಯ ಪ್ರಕ್ರಿಯೆ ನಿಂತಲ್ಲೇ ನಿಲ್ಲಲ್ಲಿದೆ.. ಒಟ್ಟಿಗೆ ಅಷ್ಟೆಲ್ಲಾ ಅರ್ಜೆಂಟ್ ಮಾಡಿದವರಿಗೆ ಈಗ ತಾವು ಕಾಲ ತಳ್ಳುವಂತ ಪರಿಸ್ಥಿತಿ ಬಂದೊದಗಿದೆ. ಇದೆಲ್ಲದರ ನೋವು ಅನುಭವಿಸುತ್ತಿರುವವರು ಮಾತ್ರ ಜನಸಾಮಾನ್ಯರು. ಸ್ಪೀಕರ್ ರವರು ಇದನ್ನು ಸೂಚ್ಯವಾಗಿ ಹೇಳಿದರು. ಬೇಗ ಹೊಸ ಸರ್ಕಾರ ರಚನೆಯಾಗಬೇಕು, ನಾನು ಯಾವಾಗ ಬೇಕಾದರೂ ಸದನ ನಡೆಸಲು ಸಿದ್ದನಿದ್ದೇನೆ ಏಕೆಂದರೆ ತಿಂಗಳ ಕೊನೆ ಆಗಿರುವುದರಿಂದ ಸರ್ಕಾರಿ ನೌಕರರಿಗೆ ಸಂಬಳ ಹಾಕುವುದು ಸಹ ಕಷ್ಟವಾಗಬಹುದು ಎಂಬ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಕರ್ತವ್ಯದ ವೇಳೆ ಶಿಕ್ಷಕಿಗೆ ಹಾರ್ಟ್ ಅಟ್ಯಾಕ್: ಚಿಕಿತ್ಸೆ ಫಲಿಸದೇ ಸಾವು

ಕೇಂದ್ರ ಚುನಾವಣಾ ಆಯೋಗವು ರಾಜ್ಯದಲ್ಲಿ ನಡೆಸುತ್ತಿರುವ ಮತದಾರರ ಪಟ್ಟಿಯ 'ವಿಶೇಷ ಸಮಗ್ರ ಪರಿಷ್ಕರಣೆ' (SIR) ಕೆಲಸದ ಹೆಸರಿನಲ್ಲಿ ಶಿಕ್ಷಕರ ಮೇಲೆ ಹೇರುತ್ತಿರುವ ಅತಿಯಾದ ಮಾನಸಿಕ ಹಾಗೂ ದೈಹಿಕ ಒತ್ತಡಕ್ಕೆ ಮತ್ತೊಬ್ಬ ಶಿಕ್ಷಕಿ ಬಲಿಯಾಗಿದ್ದಾರೆ. ಬೆಂಗಳೂರಿನ...

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ, ಮುಲ್ಲಾನಿಗೂ ನೀಟ್‌ಗೂ ಏನು ಸಂಬಂಧ: ಸಿ.ಟಿ ರವಿ ವಿವಾದಾತ್ಮಕ ಹೇಳಿಕೆ

ದೇಶಾದ್ಯಂತ ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ವಿದ್ಯಾರ್ಥಿ ಮತ್ತು ಯುವಜನ ಸಂಘಟನೆಗಳು ಬೃಹತ್ ಪ್ರತಿಭಟನೆ ನಡೆಸುತ್ತಿವೆ. ಈ ನಡುವೆ ವಿದ್ಯಾರ್ಥಿಗಳ ಹೋರಾಟವನ್ನು ಕುಹಕವಾಡಿರುವ ವಿಧಾನ ಪರಿಷತ್ ಬಿಜೆಪಿ...

ಪ್ರತಿಭಟನೆಯನ್ನು ಹತ್ತಿಕ್ಕಲು ಅಕ್ಕಾಡಕ್ಕಿಳಿದಿವೆ ಹಿಂದುತ್ವವಾದಿ ಸೋಷಿಯಲ್ ಮೀಡಿಯಾ ಇನ್ಫ್ಲುಯೆನ್ಸರ್ಸ್‌ ಮತ್ತು ಉಗ್ರ ಗೂಂಡಾ ಪಡೆ

ದೆಹಲಿಯ ಜಂತರ್ ಮಂತರ್‌ನಲ್ಲಿ ಜೂನ್ 20ರಂದು ಶುರುವಾಗಿದ್ದ ಈ ಆಂದೋಲನ ಇದೀಗ ದೇಶಾದ್ಯಂತ ತೀವ್ರ ಸ್ವರೂಪ ಪಡೆದುಕೊಂಡಿದೆ. ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಸಿಜೆಪಿ ಪಟ್ಟು ಹಿಡಿದಿದ್ದು, ಇಂದು...

ಜಿರಳೆಗಳನ್ನು ಸಾಯಿಸಿ ಎಂದು ವಿವಾದಾತ್ಮಕ ಪೋಸ್ಟ್‌ ಹಾಕಿದ ಪ್ರಜ್ಞಾ ಸಿಂಗ್ ಠಾಕೂರ್

ಮಾಜಿ ಬಿಜೆಪಿ ಸಂಸದೆ ಪ್ರಜ್ಞಾ ಸಿಂಗ್ ಠಾಕೂರ್ ಅವರು ದೇಶದಿಂದ ಜಿರಳೆಗಳನ್ನು ಶಾಶ್ವತವಾಗಿ ನಿರ್ಮೂಲನೆ ಮಾಡಲು ವ್ಯವಸ್ಥೆ ಮಾಡುವಂತೆ ದೇಶದ ನಾಯಕರಿಗೆ ಮನವಿ ಮಾಡಿದ್ದಾರೆ. X (ಟ್ವಿಟರ್) ನಲ್ಲಿ ಮಾಡಿದ ಪೋಸ್ಟ್‌ನಲ್ಲಿ, 2008 ರ...

ಸೋನಮ್ ವಾಂಗ್ಚುಕ್ ಮತ್ತು ಸರ್ಕಾರದ ಡೀಲ್‌ನಲ್ಲಿ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಅಂಶವೇ ಇಲ್ಲ

ಕೇಂದ್ರದ ಮೋದಿ ಸರ್ಕಾರ ತನ್ನ ಮೂರು ಪ್ರಮುಖ ಬೇಡಿಕೆಗಳನ್ನು ಈಡೇರಿಸಲು ಒಪ್ಪಿಕೊಂಡ ನಂತರ, ಪರಿಸರ ಹೋರಾಟಗಾರ ಸೋನಮ್ ವಾಂಗ್ಚುಕ್ ಜುಲೈ 23ರ ಗುರುವಾರ ತಮ್ಮ 26 ದಿನಗಳ ಸುದೀರ್ಘ ಉಪವಾಸ ಸತ್ಯಾಗ್ರಹವನ್ನು ಕೊನೆಗೊಳಿಸಿದ್ದಾರೆ....

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...