Homeಮುಖಪುಟ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

ಬಿಜೆಪಿ ‘ಕಾಂಗ್ರೆಸ್ ಮುಕ್ತ ಭಾರತ್’ಕ್ಕೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ಕ್ಕೆ ಅಲ್ಲ ಏಕೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬುಧವಾರ ಮೊದಲ ಬಾರಿಗೆ ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿಯ ನಡುವಿನ ನೇರಾನೇರ ಹಣಾಹಣಿ ಎಂದು ಬಿಂಬಿತವಾದ ಈ ಚುನಾವಣೆಯಲ್ಲಿ ಕಾಂಗ್ರೆಸ್-ಎಡಪಕ್ಷಗಳೂ ಇದ್ದು ಇದು ತ್ರಿಕೋನ ಸ್ಪರ್ಧೆ ಎಂಬುದನ್ನು ಮನದಟ್ಟು ಮಾಡಲು ಯತ್ನಿಸಿದ್ದಾರೆ. ಹಾಗಾಗಿ ಈ ಚುನಾವಣೆ ತತ್ವದ ಮೇಲೆ ನಡೆಯುವ ಹೋರಾಟವಾಗಲಿದೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳು ಮುಗಿದಿವೆ. ಇಷ್ಟು ದಿನ ಬಂಗಾಳಕ್ಕೆ ಕಾಲಿಡದ ಅವರು ತಡವಾಗಿ ಪ್ರಚಾರಕ್ಕೆ ಇಳಿದಿದ್ದು ಬಹಳಷ್ಟು ಜನರಲ್ಲಿ ಆಶ್ಚರ್ಯ ಮೂಡಿಸಿದೆ.

ಬಂಗಾಳದಲ್ಲಿ ಅವರ ಮತ್ತು ಇತರ ಹಿರಿಯ ನಾಯಕರ ಅನುಪಸ್ಥಿತಿಯಲ್ಲಿ ಹಲವು ಊಹಾಪೋಹಗಳು ಎದ್ದಿದ್ದವು. ಮತದಾನದ ನಂತರದ ಸಂದರ್ಭದಲ್ಲಿ ಕಾಂಗ್ರೆಸ್ ಟಿಎಂಸಿ ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎಂಬ ಕಾರಣಕ್ಕಾಗಿ ಮಮತಾ ಬ್ಯಾನರ್ಜಿಯವರನ್ನು ಟೀಕಿಸುವುದನ್ನು ತಪ್ಪಿಸಲು ಈ ತಂತ್ರ ಮಾಡಿದರು ಎಂಬ ಸಂದೇಹಗಳು ಉಂಟಾಗಿದ್ದವು. ಆದರೆ ಇಂತಹ ಊಹಾಪೋಹಗಳಿಗೆ ಬುಧವಾರ ತೆರೆಎಳೆದ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿ ಎರಡರ ಮೇಲೂ ದಾಳಿ ನಡೆಸಿದ್ದಾರೆ.

“ನೀವು ತೃಣಮೂಲಕ್ಕೆ ಒಂದು ಅವಕಾಶವನ್ನು ನೀಡಿದ್ದೀರಿ. ಆದರೆ ಅವರು ವಿಫಲರಾದರು. ಮಮತಾಜೀ ರಸ್ತೆಗಳು, ಕಾಲೇಜುಗಳನ್ನು ನಿರ್ಮಿಸಿದ್ದಾರೆಯೇ? ಜನರು ಉದ್ಯೋಗಕ್ಕಾಗಿ ಸಾಹಸ ಮಾಡಬೇಕಾಗಿದೆ … ಉದ್ಯೋಗ ಪಡೆಯಲು ನೀವು ‘ಕಟ್ ಮನಿ’ (ಲಂಚ) ಪಾವತಿಸಬೇಕಾದ ಏಕೈಕ ರಾಜ್ಯ ಇದು‘ ಎಂದು ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ನಡೆದ ಪ್ರಚಾರಸಭೆಯಲ್ಲಿ ರಾಹುಲ್ ಹೇಳಿದ್ದಾರೆ.

ಬಿಜೆಪಿ ‘ಕಾಂಗ್ರೆಸ್-ಮುಕ್ತ ಭಾರತ್’ ಗೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ ಅಲ್ಲ ಎಂದು ಅವರು ಮತದಾರರಿಗೆ ನೆನಪಿಸಿದ ಅವರು, “ನಾವು ಎಂದಿಗೂ ಬಿಜೆಪಿ ಮತ್ತು ಆರ್‌ಎಸ್‌ಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನಮ್ಮ ಹೋರಾಟ ಕೇವಲ ರಾಜಕೀಯ ಮಾತ್ರವಲ್ಲ ಸೈದ್ಧಾಂತಿಕವೂ ಆಗಿದೆ. ಆದರೆ ಮಮತಾಜಿಗೆ ಇದು ಕೇವಲ ರಾಜಕೀಯ ಹೋರಾಟವಾಗಿದೆ… ಅವರು ಬಿಜೆಪಿಯ ಮಾಜಿ ಮಿತ್ರಪಕ್ಷವಾಗಿದ್ದಾರೆ. (ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಟಿಎಂಸಿ ಭಾಗಿಯಾಗಿತ್ತು ಮತ್ತು ಮಮತಾ ಆಗ ಸಚಿವೆಯಾಗಿದ್ದರು)

“ಇನ್ನು ಬಿಜೆಪಿ ಬಂಗಾಳದ ಸಂಸ್ಕೃತಿ ಮತ್ತು ಪರಂಪರೆಯನ್ನು ನಾಶಮಾಡಲು ಬಯಸಿದೆ. ‘ದ್ವೇಷ, ಹಿಂಸೆ ಮತ್ತು ವಿಭಜಕ ರಾಜಕಾರಣವನ್ನು ಹೊರತುಪಡಿಸಿ ಬಿಜೆಪಿಯಿಂದ ಏನನ್ನೂ ನೀಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

“ಅವರು ‘ಸೋನಾರ್ ಬಾಂಗ್ಲಾ’ (ಸುವರ್ಣ ಬಂಗಾಳ) ದಂತಹ ವಿಷಯಗಳನ್ನು ಹೇಳುತ್ತಾರೆ. ಆದರೆ ಅವರು ಜನರನ್ನು ಧರ್ಮ, ಜಾತಿ ಮತ್ತು ಭಾಷೆಯ ಆಧಾರದ ಮೇಲೆ ಮಾತ್ರ ವಿಭಜಿಸುತ್ತಾರೆ. ಅಸ್ಸಾಂನಲ್ಲಿ ಅವರು ಇದನ್ನೇ ಮಾಡುತ್ತಿದ್ದಾರೆ. ತಮಿಳುನಾಡಿನಲ್ಲೂ ಈ ಪ್ರಯತ್ನ ಮಾಡುತ್ತಿದ್ದಾರೆ” ಎಂದು ರಾಹುಲ್ ಆರೋಪಿಸಿದ್ದಾರೆ.

ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಮೋದಿ ಮತ್ತು ಮಮತಾ ಇಬ್ಬರೂ ವಿಫಲರಾಗಿದ್ದಾರೆ. “ಪ್ರಧಾನಿ ಮೋದಿ ಅವರು ‘ಭಾಯಿಯೋ ಬೆಹನೋ, ತಟ್ಟೆ ಬಡಿಯಿರಿ ಕೊರೋನಾ ಹೋಗುತ್ತದೆ ಎನ್ನುತ್ತಾರೆ. ಅವರು ಗಂಟೆ ಬಾರಿಸಲು, ಮೊಬೈಲ್ ಟಾರ್ಚ್ ಆನ್ ಮಾಡಿ ಬೆಳಗಲೂ ಕೂಡ ಹೇಳಿದರು. ಈ ವ್ಯಕ್ತಿ ಭಾರತದ ಪ್ರಧಾನಿ … ಕಾರ್ಮಿಕರಿಗೆ ಸಹಾಯ ಮಾಡುವ ಬದಲು ಅವರಿಗೆ ಗಂಟೆ ಬಾರಿಸಲು ಪ್ರಧಾನಿ ಹೇಳಿದರು’ ಎಂದು ರಾಹುಲ್ ವಾಗ್ದಾಳಿ ನಡೆಸಿದರು.

“ಈ ದಿನಗಳಲ್ಲಿ ನೀವು ಎಲ್ಲಿದ್ದೀರಿ ಪಿಎಂ ಮೋದಿ? ಈಗ ಮತ್ತೆ ನೀವು ಕೋವಿಡ್ ಕರೆತಂದು ಓಡಿಹೋಗಿದ್ದೀರಿ. ಎಲ್ಲಾ ಜನರಿಗೆ ಲಸಿಕೆ ನೀಡಿದ್ದರೆ, ಹೊಸ ಪ್ರಕರಣಗಳು ಇರುತ್ತಿರಲಿಲ್ಲ” ಎಂದು ಅವರು ಹೇಳಿದರು.

“ನಿಮಗೆ ಗೊತ್ತಾ… ಅವರು ರಾಜ್ಯಕ್ಕೆ ಸಾಕಷ್ಟು ಜನರನ್ನು ಕರೆತಂದಿದ್ದಾರೆ. ಚುನಾವಣಾ ಪ್ರಚಾರದ ಹೆಸರಿನಲ್ಲಿ ಅವರು ಅನೇಕ ಹೊರಗಿನವರನ್ನು ಇಲ್ಲಿಗೆ ತಂದರು ಮತ್ತು ರೋಗವನ್ನು ಇಲ್ಲಿ ಹರಡಿ ಓಡಿಹೋದರು. ಈಗ ಅವರು ಹೇಳುತ್ತಾರೆ…. ನಮಗೆ ಮತ! ನೀಡಿ ಎಂದು ಮುಖ್ಯಮಂತ್ರಿ ಕೆರಳಿದ್ದನ್ನು ರಾಹುಲ್ ನೆನಪಿಸಿದರು.

ಅಧೀರ್ ರಂಜನ್ ಚೌಧರಿ ನೇತೃತ್ವದ ಬಂಗಾಳ ಕಾಂಗ್ರೆಸ್, ರಾಜ್ಯದ 294 ಸ್ಥಾನಗಳ ಪೈಕಿ 96 ಸ್ಥಾನಗಳಲ್ಲಿ ಎಡಪಂಥೀಯರು ಮತ್ತು ಜನಪ್ರಿಯ ಮುಸ್ಲಿಂ ಧರ್ಮಗುರು ನೇತೃತ್ವದ ಭಾರತೀಯ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಜೊತೆ ಸೇರಿ ಸ್ಪರ್ಧೆ ಮಾಡುತ್ತಿದೆ.

ಅಧಿರ್ ಚೌಧರಿ ಅವರು ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಜೊತೆ ಯಾವುದೇ ಸಂದರ್ಭದಲ್ಲೂ ಬೆಂಬಲಿಸುವುದನ್ನು ದೃಢವಾಗಿ ತಳ್ಳಿಹಾಕಿದ್ದಾರೆ. ಬಿಜೆಪಿಯನ್ನು ಸೋಲಿಸಲು ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದು ಕಾಂಗ್ರೆಸ್ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಆರ್‌ಜೆಡಿ ಮಮತಾರಿಗೆ ಬೆಂಬಲ ನೀಡಿವೆ.


ಇದನ್ನೂ ಓದಿ: ವಿದೇಶಿ ಲಸಿಕೆಗಳ ಅನುಮೋದನೆ ಬಗ್ಗೆ ಕೇಂದ್ರಕ್ಕೆ ‘ಟಾಂಗ್’‌ ನೀಡಿದ ರಾಹುಲ್ ಗಾಂಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...