Homeಮುಖಪುಟ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

ಬಿಜೆಪಿ ‘ಕಾಂಗ್ರೆಸ್ ಮುಕ್ತ ಭಾರತ್’ಕ್ಕೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ಕ್ಕೆ ಅಲ್ಲ ಏಕೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬುಧವಾರ ಮೊದಲ ಬಾರಿಗೆ ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿಯ ನಡುವಿನ ನೇರಾನೇರ ಹಣಾಹಣಿ ಎಂದು ಬಿಂಬಿತವಾದ ಈ ಚುನಾವಣೆಯಲ್ಲಿ ಕಾಂಗ್ರೆಸ್-ಎಡಪಕ್ಷಗಳೂ ಇದ್ದು ಇದು ತ್ರಿಕೋನ ಸ್ಪರ್ಧೆ ಎಂಬುದನ್ನು ಮನದಟ್ಟು ಮಾಡಲು ಯತ್ನಿಸಿದ್ದಾರೆ. ಹಾಗಾಗಿ ಈ ಚುನಾವಣೆ ತತ್ವದ ಮೇಲೆ ನಡೆಯುವ ಹೋರಾಟವಾಗಲಿದೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳು ಮುಗಿದಿವೆ. ಇಷ್ಟು ದಿನ ಬಂಗಾಳಕ್ಕೆ ಕಾಲಿಡದ ಅವರು ತಡವಾಗಿ ಪ್ರಚಾರಕ್ಕೆ ಇಳಿದಿದ್ದು ಬಹಳಷ್ಟು ಜನರಲ್ಲಿ ಆಶ್ಚರ್ಯ ಮೂಡಿಸಿದೆ.

ಬಂಗಾಳದಲ್ಲಿ ಅವರ ಮತ್ತು ಇತರ ಹಿರಿಯ ನಾಯಕರ ಅನುಪಸ್ಥಿತಿಯಲ್ಲಿ ಹಲವು ಊಹಾಪೋಹಗಳು ಎದ್ದಿದ್ದವು. ಮತದಾನದ ನಂತರದ ಸಂದರ್ಭದಲ್ಲಿ ಕಾಂಗ್ರೆಸ್ ಟಿಎಂಸಿ ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎಂಬ ಕಾರಣಕ್ಕಾಗಿ ಮಮತಾ ಬ್ಯಾನರ್ಜಿಯವರನ್ನು ಟೀಕಿಸುವುದನ್ನು ತಪ್ಪಿಸಲು ಈ ತಂತ್ರ ಮಾಡಿದರು ಎಂಬ ಸಂದೇಹಗಳು ಉಂಟಾಗಿದ್ದವು. ಆದರೆ ಇಂತಹ ಊಹಾಪೋಹಗಳಿಗೆ ಬುಧವಾರ ತೆರೆಎಳೆದ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿ ಎರಡರ ಮೇಲೂ ದಾಳಿ ನಡೆಸಿದ್ದಾರೆ.

“ನೀವು ತೃಣಮೂಲಕ್ಕೆ ಒಂದು ಅವಕಾಶವನ್ನು ನೀಡಿದ್ದೀರಿ. ಆದರೆ ಅವರು ವಿಫಲರಾದರು. ಮಮತಾಜೀ ರಸ್ತೆಗಳು, ಕಾಲೇಜುಗಳನ್ನು ನಿರ್ಮಿಸಿದ್ದಾರೆಯೇ? ಜನರು ಉದ್ಯೋಗಕ್ಕಾಗಿ ಸಾಹಸ ಮಾಡಬೇಕಾಗಿದೆ … ಉದ್ಯೋಗ ಪಡೆಯಲು ನೀವು ‘ಕಟ್ ಮನಿ’ (ಲಂಚ) ಪಾವತಿಸಬೇಕಾದ ಏಕೈಕ ರಾಜ್ಯ ಇದು‘ ಎಂದು ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ನಡೆದ ಪ್ರಚಾರಸಭೆಯಲ್ಲಿ ರಾಹುಲ್ ಹೇಳಿದ್ದಾರೆ.

ಬಿಜೆಪಿ ‘ಕಾಂಗ್ರೆಸ್-ಮುಕ್ತ ಭಾರತ್’ ಗೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ ಅಲ್ಲ ಎಂದು ಅವರು ಮತದಾರರಿಗೆ ನೆನಪಿಸಿದ ಅವರು, “ನಾವು ಎಂದಿಗೂ ಬಿಜೆಪಿ ಮತ್ತು ಆರ್‌ಎಸ್‌ಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನಮ್ಮ ಹೋರಾಟ ಕೇವಲ ರಾಜಕೀಯ ಮಾತ್ರವಲ್ಲ ಸೈದ್ಧಾಂತಿಕವೂ ಆಗಿದೆ. ಆದರೆ ಮಮತಾಜಿಗೆ ಇದು ಕೇವಲ ರಾಜಕೀಯ ಹೋರಾಟವಾಗಿದೆ… ಅವರು ಬಿಜೆಪಿಯ ಮಾಜಿ ಮಿತ್ರಪಕ್ಷವಾಗಿದ್ದಾರೆ. (ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಟಿಎಂಸಿ ಭಾಗಿಯಾಗಿತ್ತು ಮತ್ತು ಮಮತಾ ಆಗ ಸಚಿವೆಯಾಗಿದ್ದರು)

“ಇನ್ನು ಬಿಜೆಪಿ ಬಂಗಾಳದ ಸಂಸ್ಕೃತಿ ಮತ್ತು ಪರಂಪರೆಯನ್ನು ನಾಶಮಾಡಲು ಬಯಸಿದೆ. ‘ದ್ವೇಷ, ಹಿಂಸೆ ಮತ್ತು ವಿಭಜಕ ರಾಜಕಾರಣವನ್ನು ಹೊರತುಪಡಿಸಿ ಬಿಜೆಪಿಯಿಂದ ಏನನ್ನೂ ನೀಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

“ಅವರು ‘ಸೋನಾರ್ ಬಾಂಗ್ಲಾ’ (ಸುವರ್ಣ ಬಂಗಾಳ) ದಂತಹ ವಿಷಯಗಳನ್ನು ಹೇಳುತ್ತಾರೆ. ಆದರೆ ಅವರು ಜನರನ್ನು ಧರ್ಮ, ಜಾತಿ ಮತ್ತು ಭಾಷೆಯ ಆಧಾರದ ಮೇಲೆ ಮಾತ್ರ ವಿಭಜಿಸುತ್ತಾರೆ. ಅಸ್ಸಾಂನಲ್ಲಿ ಅವರು ಇದನ್ನೇ ಮಾಡುತ್ತಿದ್ದಾರೆ. ತಮಿಳುನಾಡಿನಲ್ಲೂ ಈ ಪ್ರಯತ್ನ ಮಾಡುತ್ತಿದ್ದಾರೆ” ಎಂದು ರಾಹುಲ್ ಆರೋಪಿಸಿದ್ದಾರೆ.

ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಮೋದಿ ಮತ್ತು ಮಮತಾ ಇಬ್ಬರೂ ವಿಫಲರಾಗಿದ್ದಾರೆ. “ಪ್ರಧಾನಿ ಮೋದಿ ಅವರು ‘ಭಾಯಿಯೋ ಬೆಹನೋ, ತಟ್ಟೆ ಬಡಿಯಿರಿ ಕೊರೋನಾ ಹೋಗುತ್ತದೆ ಎನ್ನುತ್ತಾರೆ. ಅವರು ಗಂಟೆ ಬಾರಿಸಲು, ಮೊಬೈಲ್ ಟಾರ್ಚ್ ಆನ್ ಮಾಡಿ ಬೆಳಗಲೂ ಕೂಡ ಹೇಳಿದರು. ಈ ವ್ಯಕ್ತಿ ಭಾರತದ ಪ್ರಧಾನಿ … ಕಾರ್ಮಿಕರಿಗೆ ಸಹಾಯ ಮಾಡುವ ಬದಲು ಅವರಿಗೆ ಗಂಟೆ ಬಾರಿಸಲು ಪ್ರಧಾನಿ ಹೇಳಿದರು’ ಎಂದು ರಾಹುಲ್ ವಾಗ್ದಾಳಿ ನಡೆಸಿದರು.

“ಈ ದಿನಗಳಲ್ಲಿ ನೀವು ಎಲ್ಲಿದ್ದೀರಿ ಪಿಎಂ ಮೋದಿ? ಈಗ ಮತ್ತೆ ನೀವು ಕೋವಿಡ್ ಕರೆತಂದು ಓಡಿಹೋಗಿದ್ದೀರಿ. ಎಲ್ಲಾ ಜನರಿಗೆ ಲಸಿಕೆ ನೀಡಿದ್ದರೆ, ಹೊಸ ಪ್ರಕರಣಗಳು ಇರುತ್ತಿರಲಿಲ್ಲ” ಎಂದು ಅವರು ಹೇಳಿದರು.

“ನಿಮಗೆ ಗೊತ್ತಾ… ಅವರು ರಾಜ್ಯಕ್ಕೆ ಸಾಕಷ್ಟು ಜನರನ್ನು ಕರೆತಂದಿದ್ದಾರೆ. ಚುನಾವಣಾ ಪ್ರಚಾರದ ಹೆಸರಿನಲ್ಲಿ ಅವರು ಅನೇಕ ಹೊರಗಿನವರನ್ನು ಇಲ್ಲಿಗೆ ತಂದರು ಮತ್ತು ರೋಗವನ್ನು ಇಲ್ಲಿ ಹರಡಿ ಓಡಿಹೋದರು. ಈಗ ಅವರು ಹೇಳುತ್ತಾರೆ…. ನಮಗೆ ಮತ! ನೀಡಿ ಎಂದು ಮುಖ್ಯಮಂತ್ರಿ ಕೆರಳಿದ್ದನ್ನು ರಾಹುಲ್ ನೆನಪಿಸಿದರು.

ಅಧೀರ್ ರಂಜನ್ ಚೌಧರಿ ನೇತೃತ್ವದ ಬಂಗಾಳ ಕಾಂಗ್ರೆಸ್, ರಾಜ್ಯದ 294 ಸ್ಥಾನಗಳ ಪೈಕಿ 96 ಸ್ಥಾನಗಳಲ್ಲಿ ಎಡಪಂಥೀಯರು ಮತ್ತು ಜನಪ್ರಿಯ ಮುಸ್ಲಿಂ ಧರ್ಮಗುರು ನೇತೃತ್ವದ ಭಾರತೀಯ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಜೊತೆ ಸೇರಿ ಸ್ಪರ್ಧೆ ಮಾಡುತ್ತಿದೆ.

ಅಧಿರ್ ಚೌಧರಿ ಅವರು ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಜೊತೆ ಯಾವುದೇ ಸಂದರ್ಭದಲ್ಲೂ ಬೆಂಬಲಿಸುವುದನ್ನು ದೃಢವಾಗಿ ತಳ್ಳಿಹಾಕಿದ್ದಾರೆ. ಬಿಜೆಪಿಯನ್ನು ಸೋಲಿಸಲು ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದು ಕಾಂಗ್ರೆಸ್ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಆರ್‌ಜೆಡಿ ಮಮತಾರಿಗೆ ಬೆಂಬಲ ನೀಡಿವೆ.


ಇದನ್ನೂ ಓದಿ: ವಿದೇಶಿ ಲಸಿಕೆಗಳ ಅನುಮೋದನೆ ಬಗ್ಗೆ ಕೇಂದ್ರಕ್ಕೆ ‘ಟಾಂಗ್’‌ ನೀಡಿದ ರಾಹುಲ್ ಗಾಂಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...