Homeಮುಖಪುಟ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

ಬಿಜೆಪಿ ‘ಕಾಂಗ್ರೆಸ್ ಮುಕ್ತ ಭಾರತ್’ಕ್ಕೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ಕ್ಕೆ ಅಲ್ಲ ಏಕೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬುಧವಾರ ಮೊದಲ ಬಾರಿಗೆ ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿಯ ನಡುವಿನ ನೇರಾನೇರ ಹಣಾಹಣಿ ಎಂದು ಬಿಂಬಿತವಾದ ಈ ಚುನಾವಣೆಯಲ್ಲಿ ಕಾಂಗ್ರೆಸ್-ಎಡಪಕ್ಷಗಳೂ ಇದ್ದು ಇದು ತ್ರಿಕೋನ ಸ್ಪರ್ಧೆ ಎಂಬುದನ್ನು ಮನದಟ್ಟು ಮಾಡಲು ಯತ್ನಿಸಿದ್ದಾರೆ. ಹಾಗಾಗಿ ಈ ಚುನಾವಣೆ ತತ್ವದ ಮೇಲೆ ನಡೆಯುವ ಹೋರಾಟವಾಗಲಿದೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳು ಮುಗಿದಿವೆ. ಇಷ್ಟು ದಿನ ಬಂಗಾಳಕ್ಕೆ ಕಾಲಿಡದ ಅವರು ತಡವಾಗಿ ಪ್ರಚಾರಕ್ಕೆ ಇಳಿದಿದ್ದು ಬಹಳಷ್ಟು ಜನರಲ್ಲಿ ಆಶ್ಚರ್ಯ ಮೂಡಿಸಿದೆ.

ಬಂಗಾಳದಲ್ಲಿ ಅವರ ಮತ್ತು ಇತರ ಹಿರಿಯ ನಾಯಕರ ಅನುಪಸ್ಥಿತಿಯಲ್ಲಿ ಹಲವು ಊಹಾಪೋಹಗಳು ಎದ್ದಿದ್ದವು. ಮತದಾನದ ನಂತರದ ಸಂದರ್ಭದಲ್ಲಿ ಕಾಂಗ್ರೆಸ್ ಟಿಎಂಸಿ ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎಂಬ ಕಾರಣಕ್ಕಾಗಿ ಮಮತಾ ಬ್ಯಾನರ್ಜಿಯವರನ್ನು ಟೀಕಿಸುವುದನ್ನು ತಪ್ಪಿಸಲು ಈ ತಂತ್ರ ಮಾಡಿದರು ಎಂಬ ಸಂದೇಹಗಳು ಉಂಟಾಗಿದ್ದವು. ಆದರೆ ಇಂತಹ ಊಹಾಪೋಹಗಳಿಗೆ ಬುಧವಾರ ತೆರೆಎಳೆದ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿ ಎರಡರ ಮೇಲೂ ದಾಳಿ ನಡೆಸಿದ್ದಾರೆ.

“ನೀವು ತೃಣಮೂಲಕ್ಕೆ ಒಂದು ಅವಕಾಶವನ್ನು ನೀಡಿದ್ದೀರಿ. ಆದರೆ ಅವರು ವಿಫಲರಾದರು. ಮಮತಾಜೀ ರಸ್ತೆಗಳು, ಕಾಲೇಜುಗಳನ್ನು ನಿರ್ಮಿಸಿದ್ದಾರೆಯೇ? ಜನರು ಉದ್ಯೋಗಕ್ಕಾಗಿ ಸಾಹಸ ಮಾಡಬೇಕಾಗಿದೆ … ಉದ್ಯೋಗ ಪಡೆಯಲು ನೀವು ‘ಕಟ್ ಮನಿ’ (ಲಂಚ) ಪಾವತಿಸಬೇಕಾದ ಏಕೈಕ ರಾಜ್ಯ ಇದು‘ ಎಂದು ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ನಡೆದ ಪ್ರಚಾರಸಭೆಯಲ್ಲಿ ರಾಹುಲ್ ಹೇಳಿದ್ದಾರೆ.

ಬಿಜೆಪಿ ‘ಕಾಂಗ್ರೆಸ್-ಮುಕ್ತ ಭಾರತ್’ ಗೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ ಅಲ್ಲ ಎಂದು ಅವರು ಮತದಾರರಿಗೆ ನೆನಪಿಸಿದ ಅವರು, “ನಾವು ಎಂದಿಗೂ ಬಿಜೆಪಿ ಮತ್ತು ಆರ್‌ಎಸ್‌ಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನಮ್ಮ ಹೋರಾಟ ಕೇವಲ ರಾಜಕೀಯ ಮಾತ್ರವಲ್ಲ ಸೈದ್ಧಾಂತಿಕವೂ ಆಗಿದೆ. ಆದರೆ ಮಮತಾಜಿಗೆ ಇದು ಕೇವಲ ರಾಜಕೀಯ ಹೋರಾಟವಾಗಿದೆ… ಅವರು ಬಿಜೆಪಿಯ ಮಾಜಿ ಮಿತ್ರಪಕ್ಷವಾಗಿದ್ದಾರೆ. (ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಟಿಎಂಸಿ ಭಾಗಿಯಾಗಿತ್ತು ಮತ್ತು ಮಮತಾ ಆಗ ಸಚಿವೆಯಾಗಿದ್ದರು)

“ಇನ್ನು ಬಿಜೆಪಿ ಬಂಗಾಳದ ಸಂಸ್ಕೃತಿ ಮತ್ತು ಪರಂಪರೆಯನ್ನು ನಾಶಮಾಡಲು ಬಯಸಿದೆ. ‘ದ್ವೇಷ, ಹಿಂಸೆ ಮತ್ತು ವಿಭಜಕ ರಾಜಕಾರಣವನ್ನು ಹೊರತುಪಡಿಸಿ ಬಿಜೆಪಿಯಿಂದ ಏನನ್ನೂ ನೀಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

“ಅವರು ‘ಸೋನಾರ್ ಬಾಂಗ್ಲಾ’ (ಸುವರ್ಣ ಬಂಗಾಳ) ದಂತಹ ವಿಷಯಗಳನ್ನು ಹೇಳುತ್ತಾರೆ. ಆದರೆ ಅವರು ಜನರನ್ನು ಧರ್ಮ, ಜಾತಿ ಮತ್ತು ಭಾಷೆಯ ಆಧಾರದ ಮೇಲೆ ಮಾತ್ರ ವಿಭಜಿಸುತ್ತಾರೆ. ಅಸ್ಸಾಂನಲ್ಲಿ ಅವರು ಇದನ್ನೇ ಮಾಡುತ್ತಿದ್ದಾರೆ. ತಮಿಳುನಾಡಿನಲ್ಲೂ ಈ ಪ್ರಯತ್ನ ಮಾಡುತ್ತಿದ್ದಾರೆ” ಎಂದು ರಾಹುಲ್ ಆರೋಪಿಸಿದ್ದಾರೆ.

ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಮೋದಿ ಮತ್ತು ಮಮತಾ ಇಬ್ಬರೂ ವಿಫಲರಾಗಿದ್ದಾರೆ. “ಪ್ರಧಾನಿ ಮೋದಿ ಅವರು ‘ಭಾಯಿಯೋ ಬೆಹನೋ, ತಟ್ಟೆ ಬಡಿಯಿರಿ ಕೊರೋನಾ ಹೋಗುತ್ತದೆ ಎನ್ನುತ್ತಾರೆ. ಅವರು ಗಂಟೆ ಬಾರಿಸಲು, ಮೊಬೈಲ್ ಟಾರ್ಚ್ ಆನ್ ಮಾಡಿ ಬೆಳಗಲೂ ಕೂಡ ಹೇಳಿದರು. ಈ ವ್ಯಕ್ತಿ ಭಾರತದ ಪ್ರಧಾನಿ … ಕಾರ್ಮಿಕರಿಗೆ ಸಹಾಯ ಮಾಡುವ ಬದಲು ಅವರಿಗೆ ಗಂಟೆ ಬಾರಿಸಲು ಪ್ರಧಾನಿ ಹೇಳಿದರು’ ಎಂದು ರಾಹುಲ್ ವಾಗ್ದಾಳಿ ನಡೆಸಿದರು.

“ಈ ದಿನಗಳಲ್ಲಿ ನೀವು ಎಲ್ಲಿದ್ದೀರಿ ಪಿಎಂ ಮೋದಿ? ಈಗ ಮತ್ತೆ ನೀವು ಕೋವಿಡ್ ಕರೆತಂದು ಓಡಿಹೋಗಿದ್ದೀರಿ. ಎಲ್ಲಾ ಜನರಿಗೆ ಲಸಿಕೆ ನೀಡಿದ್ದರೆ, ಹೊಸ ಪ್ರಕರಣಗಳು ಇರುತ್ತಿರಲಿಲ್ಲ” ಎಂದು ಅವರು ಹೇಳಿದರು.

“ನಿಮಗೆ ಗೊತ್ತಾ… ಅವರು ರಾಜ್ಯಕ್ಕೆ ಸಾಕಷ್ಟು ಜನರನ್ನು ಕರೆತಂದಿದ್ದಾರೆ. ಚುನಾವಣಾ ಪ್ರಚಾರದ ಹೆಸರಿನಲ್ಲಿ ಅವರು ಅನೇಕ ಹೊರಗಿನವರನ್ನು ಇಲ್ಲಿಗೆ ತಂದರು ಮತ್ತು ರೋಗವನ್ನು ಇಲ್ಲಿ ಹರಡಿ ಓಡಿಹೋದರು. ಈಗ ಅವರು ಹೇಳುತ್ತಾರೆ…. ನಮಗೆ ಮತ! ನೀಡಿ ಎಂದು ಮುಖ್ಯಮಂತ್ರಿ ಕೆರಳಿದ್ದನ್ನು ರಾಹುಲ್ ನೆನಪಿಸಿದರು.

ಅಧೀರ್ ರಂಜನ್ ಚೌಧರಿ ನೇತೃತ್ವದ ಬಂಗಾಳ ಕಾಂಗ್ರೆಸ್, ರಾಜ್ಯದ 294 ಸ್ಥಾನಗಳ ಪೈಕಿ 96 ಸ್ಥಾನಗಳಲ್ಲಿ ಎಡಪಂಥೀಯರು ಮತ್ತು ಜನಪ್ರಿಯ ಮುಸ್ಲಿಂ ಧರ್ಮಗುರು ನೇತೃತ್ವದ ಭಾರತೀಯ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಜೊತೆ ಸೇರಿ ಸ್ಪರ್ಧೆ ಮಾಡುತ್ತಿದೆ.

ಅಧಿರ್ ಚೌಧರಿ ಅವರು ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಜೊತೆ ಯಾವುದೇ ಸಂದರ್ಭದಲ್ಲೂ ಬೆಂಬಲಿಸುವುದನ್ನು ದೃಢವಾಗಿ ತಳ್ಳಿಹಾಕಿದ್ದಾರೆ. ಬಿಜೆಪಿಯನ್ನು ಸೋಲಿಸಲು ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದು ಕಾಂಗ್ರೆಸ್ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಆರ್‌ಜೆಡಿ ಮಮತಾರಿಗೆ ಬೆಂಬಲ ನೀಡಿವೆ.


ಇದನ್ನೂ ಓದಿ: ವಿದೇಶಿ ಲಸಿಕೆಗಳ ಅನುಮೋದನೆ ಬಗ್ಗೆ ಕೇಂದ್ರಕ್ಕೆ ‘ಟಾಂಗ್’‌ ನೀಡಿದ ರಾಹುಲ್ ಗಾಂಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...