Homeಮುಖಪುಟ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

ಬಿಜೆಪಿ ‘ಕಾಂಗ್ರೆಸ್ ಮುಕ್ತ ಭಾರತ್’ಕ್ಕೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ಕ್ಕೆ ಅಲ್ಲ ಏಕೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬುಧವಾರ ಮೊದಲ ಬಾರಿಗೆ ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿಯ ನಡುವಿನ ನೇರಾನೇರ ಹಣಾಹಣಿ ಎಂದು ಬಿಂಬಿತವಾದ ಈ ಚುನಾವಣೆಯಲ್ಲಿ ಕಾಂಗ್ರೆಸ್-ಎಡಪಕ್ಷಗಳೂ ಇದ್ದು ಇದು ತ್ರಿಕೋನ ಸ್ಪರ್ಧೆ ಎಂಬುದನ್ನು ಮನದಟ್ಟು ಮಾಡಲು ಯತ್ನಿಸಿದ್ದಾರೆ. ಹಾಗಾಗಿ ಈ ಚುನಾವಣೆ ತತ್ವದ ಮೇಲೆ ನಡೆಯುವ ಹೋರಾಟವಾಗಲಿದೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳು ಮುಗಿದಿವೆ. ಇಷ್ಟು ದಿನ ಬಂಗಾಳಕ್ಕೆ ಕಾಲಿಡದ ಅವರು ತಡವಾಗಿ ಪ್ರಚಾರಕ್ಕೆ ಇಳಿದಿದ್ದು ಬಹಳಷ್ಟು ಜನರಲ್ಲಿ ಆಶ್ಚರ್ಯ ಮೂಡಿಸಿದೆ.

ಬಂಗಾಳದಲ್ಲಿ ಅವರ ಮತ್ತು ಇತರ ಹಿರಿಯ ನಾಯಕರ ಅನುಪಸ್ಥಿತಿಯಲ್ಲಿ ಹಲವು ಊಹಾಪೋಹಗಳು ಎದ್ದಿದ್ದವು. ಮತದಾನದ ನಂತರದ ಸಂದರ್ಭದಲ್ಲಿ ಕಾಂಗ್ರೆಸ್ ಟಿಎಂಸಿ ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎಂಬ ಕಾರಣಕ್ಕಾಗಿ ಮಮತಾ ಬ್ಯಾನರ್ಜಿಯವರನ್ನು ಟೀಕಿಸುವುದನ್ನು ತಪ್ಪಿಸಲು ಈ ತಂತ್ರ ಮಾಡಿದರು ಎಂಬ ಸಂದೇಹಗಳು ಉಂಟಾಗಿದ್ದವು. ಆದರೆ ಇಂತಹ ಊಹಾಪೋಹಗಳಿಗೆ ಬುಧವಾರ ತೆರೆಎಳೆದ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿ ಎರಡರ ಮೇಲೂ ದಾಳಿ ನಡೆಸಿದ್ದಾರೆ.

“ನೀವು ತೃಣಮೂಲಕ್ಕೆ ಒಂದು ಅವಕಾಶವನ್ನು ನೀಡಿದ್ದೀರಿ. ಆದರೆ ಅವರು ವಿಫಲರಾದರು. ಮಮತಾಜೀ ರಸ್ತೆಗಳು, ಕಾಲೇಜುಗಳನ್ನು ನಿರ್ಮಿಸಿದ್ದಾರೆಯೇ? ಜನರು ಉದ್ಯೋಗಕ್ಕಾಗಿ ಸಾಹಸ ಮಾಡಬೇಕಾಗಿದೆ … ಉದ್ಯೋಗ ಪಡೆಯಲು ನೀವು ‘ಕಟ್ ಮನಿ’ (ಲಂಚ) ಪಾವತಿಸಬೇಕಾದ ಏಕೈಕ ರಾಜ್ಯ ಇದು‘ ಎಂದು ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ನಡೆದ ಪ್ರಚಾರಸಭೆಯಲ್ಲಿ ರಾಹುಲ್ ಹೇಳಿದ್ದಾರೆ.

ಬಿಜೆಪಿ ‘ಕಾಂಗ್ರೆಸ್-ಮುಕ್ತ ಭಾರತ್’ ಗೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ ಅಲ್ಲ ಎಂದು ಅವರು ಮತದಾರರಿಗೆ ನೆನಪಿಸಿದ ಅವರು, “ನಾವು ಎಂದಿಗೂ ಬಿಜೆಪಿ ಮತ್ತು ಆರ್‌ಎಸ್‌ಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನಮ್ಮ ಹೋರಾಟ ಕೇವಲ ರಾಜಕೀಯ ಮಾತ್ರವಲ್ಲ ಸೈದ್ಧಾಂತಿಕವೂ ಆಗಿದೆ. ಆದರೆ ಮಮತಾಜಿಗೆ ಇದು ಕೇವಲ ರಾಜಕೀಯ ಹೋರಾಟವಾಗಿದೆ… ಅವರು ಬಿಜೆಪಿಯ ಮಾಜಿ ಮಿತ್ರಪಕ್ಷವಾಗಿದ್ದಾರೆ. (ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಟಿಎಂಸಿ ಭಾಗಿಯಾಗಿತ್ತು ಮತ್ತು ಮಮತಾ ಆಗ ಸಚಿವೆಯಾಗಿದ್ದರು)

“ಇನ್ನು ಬಿಜೆಪಿ ಬಂಗಾಳದ ಸಂಸ್ಕೃತಿ ಮತ್ತು ಪರಂಪರೆಯನ್ನು ನಾಶಮಾಡಲು ಬಯಸಿದೆ. ‘ದ್ವೇಷ, ಹಿಂಸೆ ಮತ್ತು ವಿಭಜಕ ರಾಜಕಾರಣವನ್ನು ಹೊರತುಪಡಿಸಿ ಬಿಜೆಪಿಯಿಂದ ಏನನ್ನೂ ನೀಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

“ಅವರು ‘ಸೋನಾರ್ ಬಾಂಗ್ಲಾ’ (ಸುವರ್ಣ ಬಂಗಾಳ) ದಂತಹ ವಿಷಯಗಳನ್ನು ಹೇಳುತ್ತಾರೆ. ಆದರೆ ಅವರು ಜನರನ್ನು ಧರ್ಮ, ಜಾತಿ ಮತ್ತು ಭಾಷೆಯ ಆಧಾರದ ಮೇಲೆ ಮಾತ್ರ ವಿಭಜಿಸುತ್ತಾರೆ. ಅಸ್ಸಾಂನಲ್ಲಿ ಅವರು ಇದನ್ನೇ ಮಾಡುತ್ತಿದ್ದಾರೆ. ತಮಿಳುನಾಡಿನಲ್ಲೂ ಈ ಪ್ರಯತ್ನ ಮಾಡುತ್ತಿದ್ದಾರೆ” ಎಂದು ರಾಹುಲ್ ಆರೋಪಿಸಿದ್ದಾರೆ.

ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಮೋದಿ ಮತ್ತು ಮಮತಾ ಇಬ್ಬರೂ ವಿಫಲರಾಗಿದ್ದಾರೆ. “ಪ್ರಧಾನಿ ಮೋದಿ ಅವರು ‘ಭಾಯಿಯೋ ಬೆಹನೋ, ತಟ್ಟೆ ಬಡಿಯಿರಿ ಕೊರೋನಾ ಹೋಗುತ್ತದೆ ಎನ್ನುತ್ತಾರೆ. ಅವರು ಗಂಟೆ ಬಾರಿಸಲು, ಮೊಬೈಲ್ ಟಾರ್ಚ್ ಆನ್ ಮಾಡಿ ಬೆಳಗಲೂ ಕೂಡ ಹೇಳಿದರು. ಈ ವ್ಯಕ್ತಿ ಭಾರತದ ಪ್ರಧಾನಿ … ಕಾರ್ಮಿಕರಿಗೆ ಸಹಾಯ ಮಾಡುವ ಬದಲು ಅವರಿಗೆ ಗಂಟೆ ಬಾರಿಸಲು ಪ್ರಧಾನಿ ಹೇಳಿದರು’ ಎಂದು ರಾಹುಲ್ ವಾಗ್ದಾಳಿ ನಡೆಸಿದರು.

“ಈ ದಿನಗಳಲ್ಲಿ ನೀವು ಎಲ್ಲಿದ್ದೀರಿ ಪಿಎಂ ಮೋದಿ? ಈಗ ಮತ್ತೆ ನೀವು ಕೋವಿಡ್ ಕರೆತಂದು ಓಡಿಹೋಗಿದ್ದೀರಿ. ಎಲ್ಲಾ ಜನರಿಗೆ ಲಸಿಕೆ ನೀಡಿದ್ದರೆ, ಹೊಸ ಪ್ರಕರಣಗಳು ಇರುತ್ತಿರಲಿಲ್ಲ” ಎಂದು ಅವರು ಹೇಳಿದರು.

“ನಿಮಗೆ ಗೊತ್ತಾ… ಅವರು ರಾಜ್ಯಕ್ಕೆ ಸಾಕಷ್ಟು ಜನರನ್ನು ಕರೆತಂದಿದ್ದಾರೆ. ಚುನಾವಣಾ ಪ್ರಚಾರದ ಹೆಸರಿನಲ್ಲಿ ಅವರು ಅನೇಕ ಹೊರಗಿನವರನ್ನು ಇಲ್ಲಿಗೆ ತಂದರು ಮತ್ತು ರೋಗವನ್ನು ಇಲ್ಲಿ ಹರಡಿ ಓಡಿಹೋದರು. ಈಗ ಅವರು ಹೇಳುತ್ತಾರೆ…. ನಮಗೆ ಮತ! ನೀಡಿ ಎಂದು ಮುಖ್ಯಮಂತ್ರಿ ಕೆರಳಿದ್ದನ್ನು ರಾಹುಲ್ ನೆನಪಿಸಿದರು.

ಅಧೀರ್ ರಂಜನ್ ಚೌಧರಿ ನೇತೃತ್ವದ ಬಂಗಾಳ ಕಾಂಗ್ರೆಸ್, ರಾಜ್ಯದ 294 ಸ್ಥಾನಗಳ ಪೈಕಿ 96 ಸ್ಥಾನಗಳಲ್ಲಿ ಎಡಪಂಥೀಯರು ಮತ್ತು ಜನಪ್ರಿಯ ಮುಸ್ಲಿಂ ಧರ್ಮಗುರು ನೇತೃತ್ವದ ಭಾರತೀಯ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಜೊತೆ ಸೇರಿ ಸ್ಪರ್ಧೆ ಮಾಡುತ್ತಿದೆ.

ಅಧಿರ್ ಚೌಧರಿ ಅವರು ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಜೊತೆ ಯಾವುದೇ ಸಂದರ್ಭದಲ್ಲೂ ಬೆಂಬಲಿಸುವುದನ್ನು ದೃಢವಾಗಿ ತಳ್ಳಿಹಾಕಿದ್ದಾರೆ. ಬಿಜೆಪಿಯನ್ನು ಸೋಲಿಸಲು ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದು ಕಾಂಗ್ರೆಸ್ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಆರ್‌ಜೆಡಿ ಮಮತಾರಿಗೆ ಬೆಂಬಲ ನೀಡಿವೆ.


ಇದನ್ನೂ ಓದಿ: ವಿದೇಶಿ ಲಸಿಕೆಗಳ ಅನುಮೋದನೆ ಬಗ್ಗೆ ಕೇಂದ್ರಕ್ಕೆ ‘ಟಾಂಗ್’‌ ನೀಡಿದ ರಾಹುಲ್ ಗಾಂಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...

ಸರ್ಕಾರದ 100 ದಿನ: ಪ್ರಚಾರದ ಸ್ವರೂಪವನ್ನೇ ಬದಲಿಸಿದ ಸರ್ಕಾರಿ ಜಾಹೀರಾತು

ಸಾಂಪ್ರದಾಯಿಕ ಪತ್ರಿಕಾ ಜಾಹೀರಾತುಗಳು, ಬ್ಯಾನರ್‌ಗಳು ಹಾಗೂ ಸರ್ಕಾರಿ ಕಾರ್ಯಕ್ರಮಗಳ ನಡುವೆ ಪ್ರಸಾರವಾಗುತ್ತಿದ್ದ ಜಾಹೀರಾತುಗಳ ಕಾಲವೀಗ ಬದಲಾಗಿದೆ. ಪ್ರಜೆಗಳ ಮನಸ್ಸನ್ನು ತಲುಪಲು ಅಧಿಕಾರದಲ್ಲಿರುವವರು ಆಯ್ದುಕೊಳ್ಳುವ ಮಾರ್ಗಗಳು ದಿನದಿಂದ ದಿನಕ್ಕೆ ರೂಪಾಂತರಗೊಳ್ಳುತ್ತಿವೆ. ಇದಕ್ಕೆ ಜ್ವಲಂತ ನಿದರ್ಶನ...

‘ಉಮರ್ ಖಾಲಿದ್ ಒಬ್ಬ ದೇಶಭಕ್ತ..’; ಸಾಕ್ಷ್ಯಚಿತ್ರ ಪ್ರದರ್ಶನ ವಿರೋಧಿಸಿದ ಎಬಿವಿಪಿ ವಿರುದ್ಧ ಹರಿಪ್ರಸಾದ್ ವಾಗ್ದಾಳಿ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯುನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು) ಹೋರಾಟಗಾರ ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನವನ್ನು ವಿರೋಧಿಸಿದ್ದಕ್ಕಾಗಿ ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಬಿಕೆ ಹರಿಪ್ರಸಾದ್ ಅವರು ಮಂಗಳವಾರ...

ಜಂತರ್ ಮಂತರ್ ಹಲ್ಲೆ ಪ್ರಕರಣ: ಎಸ್‌ಸಿ/ಎಸ್‌ಟಿ, ಪೋಕ್ಸೊ ಕಾಯ್ದೆಯಡಿ ಬಂಧಿಸಲಾಗಿದ್ದ ಆರೋಪಿ ಸ್ವತಂತ್ರ ಭಾರದ್ವಾಜ್‌ಗೆ ಮಧ್ಯಂತರ ಜಾಮೀನು

ನವದೆಹಲಿ: ಜಂತರ್ ಮಂತರ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಸ್ವತಂತ್ರ ಭಾರದ್ವಾಜ್‌ಗೆ ದೆಹಲಿಯ ಪಟಿಯಾಲ ಹೌಸ್ ನ್ಯಾಯಾಲಯ ಮೂರು ವಾರಗಳ ಮಧ್ಯಂತರ ಜಾಮೀನು ಮಂಜೂರು ಮಾಡಿದೆ....

ವಿಡಿಯೋದಲ್ಲಿ ‘ಅಸ್ಸಲಾಮು ಅಲೈಕುಮ್’ – ‘ಇನ್ಶಾ ಅಲ್ಲಾ’ ಎಂದಿದ್ದಕ್ಕೆ ಐಪಿಎಸ್ ಅಧಿಕಾರಿ ವರ್ಗಾವಣೆ

'ಅಸ್ಸಲಾಮು ಅಲೈಕುಮ್' ಮತ್ತು 'ಇನ್ಶಾ ಅಲ್ಲಾ' ಎಂದಿದ್ದಕ್ಕೆ ಬಲಪಂಥೀಯ ಸಂಘಟನೆಯೊಂದು ಪಶ್ಚಿಮ ಬಂಗಾಳದ ಗೃಹ ಕಾರ್ಯದರ್ಶಿಗೆ ದೂರು ನೀಡಿದ ಬೆನ್ನಲ್ಲೇ, ಭಾರತೀಯ ಪೊಲೀಸ್ ಸೇವೆ (ಐಪಿಎಸ್) ಅಧಿಕಾರಿ ಬುಷ್ರಾ ಬಾನೋ ಅವರನ್ನು ವರ್ಗಾವಣೆ...

ಪಾನ್ ಮಸಾಲಾ ಜಾಹೀರಾತು ವಿವಾದ: ಶಾರುಖ್, ಅಜಯ್ , ಶ್ರಾಫ್‌ ಅರ್ಜಿ ವಜಾಗೊಳಿಸಿದ ದೆಹಲಿ ಹೈಕೋರ್ಟ್‌

ವಿಮಲ್ ಇಲಾಯಚಿ ಹೆಸರಿನಲ್ಲಿ ನಿಷೇಧಿತ ಪಾನ್ ಮಸಾಲಾ ಉತ್ಪನ್ನದ ಪರೋಕ್ಷ ಪ್ರಚಾರ ನಡೆಸಿದ ಆರೋಪಕ್ಕೆ ಸಂಬಂಧಿಸಿದಂತೆ ಬಾಲಿವುಡ್ ನಟರಾದ ಶಾರುಖ್ ಖಾನ್, ಅಜಯ್ ದೇವಗನ್ ಹಾಗೂ ಟೈಗರ್ ಶ್ರಾಫ್ ಅವರಿಗೆ ಮಹಾರಾಷ್ಟ್ರ ಆಹಾರ...

“ಏಕರೂಪತೆಯು ಸಮಾನತೆಯಲ್ಲ”: 21 ಎನ್‌ಡಿಎ ಆಡಳಿತದ ರಾಜ್ಯಗಳಲ್ಲಿ ಯುಸಿಸಿ ಜಾರಿ ಕುರಿತ ಅಮಿತ್ ಶಾ ಘೋಷಣೆಗೆ ವಿಪಕ್ಷಗಳ ಕಿಡಿ

2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆಯನ್ನು (ಯುಸಿಸಿ) ಜಾರಿಗೊಳಿಸಲಾಗುವುದು ಎಂದು ಅಮಿತ್ ಶಾ ಘೋಷಿಸಿದ ಬೆನ್ನಲ್ಲೇ, ವಿಪಕ್ಷಗಳು ಬಿಜೆಪಿ ತನ್ನ...

ಉತ್ತರ ಪ್ರದೇಶ| ಫಿರೋಜಾಬಾದ್ ಖಾಕಿ ದೌರ್ಜನ್ಯ; ಪೊಲೀಸರ ಭೂಟು ಕಾಲಿನ ಒದೆತಕ್ಕೆ ಗರ್ಭಿಣಿ ಸಾವು

ಉತ್ತರ ಪ್ರದೇಶದ ಫಿರೋಜಾಬಾದ್‌ನ ಶಿಕೋಹಾಬಾದ್ ಪ್ರದೇಶದಲ್ಲಿ ಕಳ್ಳತನ ಪ್ರಕರಣದ ಶಂಕಿತ ಆರೋಪಿಯೊಬ್ಬನನ್ನು ಬಂಧಿಸಲು ಬಂದಿದ್ದ ಪೊಲೀಸರು ಆತನ ಗರ್ಭಿಣಿ ಹೆಂಡತಿಗೆ ಒದ್ದಿದ್ದರಿಂದ ಆಕೆ ಮೃತಪಟ್ಟಿದ್ದು, ಈ ಘಟನೆಗೆ ಸಂಬಂಧಿಸಿದಂತೆ ಇಬ್ಬರು ಸಬ್‌ಇನ್ಸ್‌ಪೆಕ್ಟರ್‌ಗಳು ಸೇರಿದಂತೆ...

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...