Homeಮುಖಪುಟ‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

‘ಬಿಜೆಪಿಯು ಟಿಎಂಸಿ ಮುಕ್ತ ಭಾರತಕ್ಕೆ ಕರೆ ನೀಡುವುದಿಲ್ಲ ಏಕೆ’: ರಾಹುಲ್ ಗಾಂಧಿ ಪ್ರಶ್ನೆ

- Advertisement -
- Advertisement -

ಬಿಜೆಪಿ ‘ಕಾಂಗ್ರೆಸ್ ಮುಕ್ತ ಭಾರತ್’ಕ್ಕೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ಕ್ಕೆ ಅಲ್ಲ ಏಕೆ ಎಂದು ಕಾಂಗ್ರೆಸ್ ಮುಖಂಡ ರಾಹುಲ್ ಗಾಂಧಿ ಪ್ರಶ್ನಿಸಿದ್ದಾರೆ.

ಬುಧವಾರ ಮೊದಲ ಬಾರಿಗೆ ಪಶ್ಚಿಮ ಬಂಗಾಳ ಚುನಾವಣಾ ಪ್ರಚಾರದಲ್ಲಿ ಕಾಣಿಸಿಕೊಂಡ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿಯ ನಡುವಿನ ನೇರಾನೇರ ಹಣಾಹಣಿ ಎಂದು ಬಿಂಬಿತವಾದ ಈ ಚುನಾವಣೆಯಲ್ಲಿ ಕಾಂಗ್ರೆಸ್-ಎಡಪಕ್ಷಗಳೂ ಇದ್ದು ಇದು ತ್ರಿಕೋನ ಸ್ಪರ್ಧೆ ಎಂಬುದನ್ನು ಮನದಟ್ಟು ಮಾಡಲು ಯತ್ನಿಸಿದ್ದಾರೆ. ಹಾಗಾಗಿ ಈ ಚುನಾವಣೆ ತತ್ವದ ಮೇಲೆ ನಡೆಯುವ ಹೋರಾಟವಾಗಲಿದೆ ಎಂದು ಅವರು ಹೇಳಿದ್ದಾರೆ.

ಪಶ್ಚಿಮ ಬಂಗಾಳದಲ್ಲಿ ಎಂಟು ಹಂತದಲ್ಲಿ ಮತದಾನ ನಡೆಯುತ್ತಿದ್ದು, ಈಗಾಗಲೇ ನಾಲ್ಕು ಹಂತಗಳು ಮುಗಿದಿವೆ. ಇಷ್ಟು ದಿನ ಬಂಗಾಳಕ್ಕೆ ಕಾಲಿಡದ ಅವರು ತಡವಾಗಿ ಪ್ರಚಾರಕ್ಕೆ ಇಳಿದಿದ್ದು ಬಹಳಷ್ಟು ಜನರಲ್ಲಿ ಆಶ್ಚರ್ಯ ಮೂಡಿಸಿದೆ.

ಬಂಗಾಳದಲ್ಲಿ ಅವರ ಮತ್ತು ಇತರ ಹಿರಿಯ ನಾಯಕರ ಅನುಪಸ್ಥಿತಿಯಲ್ಲಿ ಹಲವು ಊಹಾಪೋಹಗಳು ಎದ್ದಿದ್ದವು. ಮತದಾನದ ನಂತರದ ಸಂದರ್ಭದಲ್ಲಿ ಕಾಂಗ್ರೆಸ್ ಟಿಎಂಸಿ ಜೊತೆ ಮೈತ್ರಿ ಮಾಡಿಕೊಳ್ಳಬಹುದು ಎಂಬ ಕಾರಣಕ್ಕಾಗಿ ಮಮತಾ ಬ್ಯಾನರ್ಜಿಯವರನ್ನು ಟೀಕಿಸುವುದನ್ನು ತಪ್ಪಿಸಲು ಈ ತಂತ್ರ ಮಾಡಿದರು ಎಂಬ ಸಂದೇಹಗಳು ಉಂಟಾಗಿದ್ದವು. ಆದರೆ ಇಂತಹ ಊಹಾಪೋಹಗಳಿಗೆ ಬುಧವಾರ ತೆರೆಎಳೆದ ರಾಹುಲ್ ಗಾಂಧಿ, ಟಿಎಂಸಿ ಮತ್ತು ಬಿಜೆಪಿ ಎರಡರ ಮೇಲೂ ದಾಳಿ ನಡೆಸಿದ್ದಾರೆ.

“ನೀವು ತೃಣಮೂಲಕ್ಕೆ ಒಂದು ಅವಕಾಶವನ್ನು ನೀಡಿದ್ದೀರಿ. ಆದರೆ ಅವರು ವಿಫಲರಾದರು. ಮಮತಾಜೀ ರಸ್ತೆಗಳು, ಕಾಲೇಜುಗಳನ್ನು ನಿರ್ಮಿಸಿದ್ದಾರೆಯೇ? ಜನರು ಉದ್ಯೋಗಕ್ಕಾಗಿ ಸಾಹಸ ಮಾಡಬೇಕಾಗಿದೆ … ಉದ್ಯೋಗ ಪಡೆಯಲು ನೀವು ‘ಕಟ್ ಮನಿ’ (ಲಂಚ) ಪಾವತಿಸಬೇಕಾದ ಏಕೈಕ ರಾಜ್ಯ ಇದು‘ ಎಂದು ಉತ್ತರ ದಿನಾಜ್ಪುರ ಜಿಲ್ಲೆಯಲ್ಲಿ ನಡೆದ ಪ್ರಚಾರಸಭೆಯಲ್ಲಿ ರಾಹುಲ್ ಹೇಳಿದ್ದಾರೆ.

ಬಿಜೆಪಿ ‘ಕಾಂಗ್ರೆಸ್-ಮುಕ್ತ ಭಾರತ್’ ಗೆ ಕರೆ ನೀಡುತ್ತದೆಯೇ ಹೊರತು ‘ಟಿಎಂಸಿ-ಮುಕ್ತ ಭಾರತ್’ ಅಲ್ಲ ಎಂದು ಅವರು ಮತದಾರರಿಗೆ ನೆನಪಿಸಿದ ಅವರು, “ನಾವು ಎಂದಿಗೂ ಬಿಜೆಪಿ ಮತ್ತು ಆರ್‌ಎಸ್‌ಎಸ್ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ನಮ್ಮ ಹೋರಾಟ ಕೇವಲ ರಾಜಕೀಯ ಮಾತ್ರವಲ್ಲ ಸೈದ್ಧಾಂತಿಕವೂ ಆಗಿದೆ. ಆದರೆ ಮಮತಾಜಿಗೆ ಇದು ಕೇವಲ ರಾಜಕೀಯ ಹೋರಾಟವಾಗಿದೆ… ಅವರು ಬಿಜೆಪಿಯ ಮಾಜಿ ಮಿತ್ರಪಕ್ಷವಾಗಿದ್ದಾರೆ. (ಅಟಲ್ ಬಿಹಾರಿ ವಾಜಪೇಯಿ ಸರ್ಕಾರದಲ್ಲಿ ಟಿಎಂಸಿ ಭಾಗಿಯಾಗಿತ್ತು ಮತ್ತು ಮಮತಾ ಆಗ ಸಚಿವೆಯಾಗಿದ್ದರು)

“ಇನ್ನು ಬಿಜೆಪಿ ಬಂಗಾಳದ ಸಂಸ್ಕೃತಿ ಮತ್ತು ಪರಂಪರೆಯನ್ನು ನಾಶಮಾಡಲು ಬಯಸಿದೆ. ‘ದ್ವೇಷ, ಹಿಂಸೆ ಮತ್ತು ವಿಭಜಕ ರಾಜಕಾರಣವನ್ನು ಹೊರತುಪಡಿಸಿ ಬಿಜೆಪಿಯಿಂದ ಏನನ್ನೂ ನೀಡಲು ಸಾಧ್ಯವಿಲ್ಲ” ಎಂದು ರಾಹುಲ್ ಗಾಂಧಿ ಬಿಜೆಪಿ ವಿರುದ್ಧ ಕಿಡಿಕಾರಿದ್ದಾರೆ.

“ಅವರು ‘ಸೋನಾರ್ ಬಾಂಗ್ಲಾ’ (ಸುವರ್ಣ ಬಂಗಾಳ) ದಂತಹ ವಿಷಯಗಳನ್ನು ಹೇಳುತ್ತಾರೆ. ಆದರೆ ಅವರು ಜನರನ್ನು ಧರ್ಮ, ಜಾತಿ ಮತ್ತು ಭಾಷೆಯ ಆಧಾರದ ಮೇಲೆ ಮಾತ್ರ ವಿಭಜಿಸುತ್ತಾರೆ. ಅಸ್ಸಾಂನಲ್ಲಿ ಅವರು ಇದನ್ನೇ ಮಾಡುತ್ತಿದ್ದಾರೆ. ತಮಿಳುನಾಡಿನಲ್ಲೂ ಈ ಪ್ರಯತ್ನ ಮಾಡುತ್ತಿದ್ದಾರೆ” ಎಂದು ರಾಹುಲ್ ಆರೋಪಿಸಿದ್ದಾರೆ.

ಸಾಂಕ್ರಾಮಿಕ ರೋಗ ನಿರ್ವಹಣೆಯಲ್ಲಿ ಮೋದಿ ಮತ್ತು ಮಮತಾ ಇಬ್ಬರೂ ವಿಫಲರಾಗಿದ್ದಾರೆ. “ಪ್ರಧಾನಿ ಮೋದಿ ಅವರು ‘ಭಾಯಿಯೋ ಬೆಹನೋ, ತಟ್ಟೆ ಬಡಿಯಿರಿ ಕೊರೋನಾ ಹೋಗುತ್ತದೆ ಎನ್ನುತ್ತಾರೆ. ಅವರು ಗಂಟೆ ಬಾರಿಸಲು, ಮೊಬೈಲ್ ಟಾರ್ಚ್ ಆನ್ ಮಾಡಿ ಬೆಳಗಲೂ ಕೂಡ ಹೇಳಿದರು. ಈ ವ್ಯಕ್ತಿ ಭಾರತದ ಪ್ರಧಾನಿ … ಕಾರ್ಮಿಕರಿಗೆ ಸಹಾಯ ಮಾಡುವ ಬದಲು ಅವರಿಗೆ ಗಂಟೆ ಬಾರಿಸಲು ಪ್ರಧಾನಿ ಹೇಳಿದರು’ ಎಂದು ರಾಹುಲ್ ವಾಗ್ದಾಳಿ ನಡೆಸಿದರು.

“ಈ ದಿನಗಳಲ್ಲಿ ನೀವು ಎಲ್ಲಿದ್ದೀರಿ ಪಿಎಂ ಮೋದಿ? ಈಗ ಮತ್ತೆ ನೀವು ಕೋವಿಡ್ ಕರೆತಂದು ಓಡಿಹೋಗಿದ್ದೀರಿ. ಎಲ್ಲಾ ಜನರಿಗೆ ಲಸಿಕೆ ನೀಡಿದ್ದರೆ, ಹೊಸ ಪ್ರಕರಣಗಳು ಇರುತ್ತಿರಲಿಲ್ಲ” ಎಂದು ಅವರು ಹೇಳಿದರು.

“ನಿಮಗೆ ಗೊತ್ತಾ… ಅವರು ರಾಜ್ಯಕ್ಕೆ ಸಾಕಷ್ಟು ಜನರನ್ನು ಕರೆತಂದಿದ್ದಾರೆ. ಚುನಾವಣಾ ಪ್ರಚಾರದ ಹೆಸರಿನಲ್ಲಿ ಅವರು ಅನೇಕ ಹೊರಗಿನವರನ್ನು ಇಲ್ಲಿಗೆ ತಂದರು ಮತ್ತು ರೋಗವನ್ನು ಇಲ್ಲಿ ಹರಡಿ ಓಡಿಹೋದರು. ಈಗ ಅವರು ಹೇಳುತ್ತಾರೆ…. ನಮಗೆ ಮತ! ನೀಡಿ ಎಂದು ಮುಖ್ಯಮಂತ್ರಿ ಕೆರಳಿದ್ದನ್ನು ರಾಹುಲ್ ನೆನಪಿಸಿದರು.

ಅಧೀರ್ ರಂಜನ್ ಚೌಧರಿ ನೇತೃತ್ವದ ಬಂಗಾಳ ಕಾಂಗ್ರೆಸ್, ರಾಜ್ಯದ 294 ಸ್ಥಾನಗಳ ಪೈಕಿ 96 ಸ್ಥಾನಗಳಲ್ಲಿ ಎಡಪಂಥೀಯರು ಮತ್ತು ಜನಪ್ರಿಯ ಮುಸ್ಲಿಂ ಧರ್ಮಗುರು ನೇತೃತ್ವದ ಭಾರತೀಯ ಸೆಕ್ಯುಲರ್ ಫ್ರಂಟ್ (ಐಎಸ್‌ಎಫ್) ಜೊತೆ ಸೇರಿ ಸ್ಪರ್ಧೆ ಮಾಡುತ್ತಿದೆ.

ಅಧಿರ್ ಚೌಧರಿ ಅವರು ಮಮತಾ ಬ್ಯಾನರ್ಜಿ ಮತ್ತು ತೃಣಮೂಲ ಕಾಂಗ್ರೆಸ್ ಜೊತೆ ಯಾವುದೇ ಸಂದರ್ಭದಲ್ಲೂ ಬೆಂಬಲಿಸುವುದನ್ನು ದೃಢವಾಗಿ ತಳ್ಳಿಹಾಕಿದ್ದಾರೆ. ಬಿಜೆಪಿಯನ್ನು ಸೋಲಿಸಲು ಮಮತಾ ಬ್ಯಾನರ್ಜಿ ವಿರೋಧ ಪಕ್ಷಗಳಿಗೆ ಕರೆ ನೀಡಿದ್ದು ಕಾಂಗ್ರೆಸ್ ಮಿತ್ರಪಕ್ಷಗಳಾದ ಶಿವಸೇನೆ, ಎನ್‌ಸಿಪಿ ಮತ್ತು ಆರ್‌ಜೆಡಿ ಮಮತಾರಿಗೆ ಬೆಂಬಲ ನೀಡಿವೆ.


ಇದನ್ನೂ ಓದಿ: ವಿದೇಶಿ ಲಸಿಕೆಗಳ ಅನುಮೋದನೆ ಬಗ್ಗೆ ಕೇಂದ್ರಕ್ಕೆ ‘ಟಾಂಗ್’‌ ನೀಡಿದ ರಾಹುಲ್ ಗಾಂಧಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...