HomeಮುಖಪುಟBJP ಇನ್ನೂ ಯಾಕೆ ಸಾವರ್ಕರ್‌‌ಗೆ ಭಾರತ ರತ್ನ ನೀಡಿಲ್ಲ: ಶಿವಸೇನೆ ಪ್ರಶ್ನೆ

BJP ಇನ್ನೂ ಯಾಕೆ ಸಾವರ್ಕರ್‌‌ಗೆ ಭಾರತ ರತ್ನ ನೀಡಿಲ್ಲ: ಶಿವಸೇನೆ ಪ್ರಶ್ನೆ

ಸಾವರ್ಕರ್ ಅವರನ್ನು ಅವಮಾನಿಸಿದ ಕಾಂಗ್ರೆಸ್ ಜೊತೆ ಶಿವಸೇನೆ ಮೈತ್ರಿ ಮಾಡಿಕೊಂಡಿದೆ ಎಂದು ಬಿಜೆಪಿ ನಾಯಕರು ಹಿಂದುತ್ವ ಕುರಿತು ಶಿವಸೇನೆಯನ್ನು ತರಾಟೆಗೆ ಪಡೆದಿದ್ದರು.

- Advertisement -
- Advertisement -

ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ತನ್ನ ಹಿಂದಿನ ಮೈತ್ರಿ ಪಕ್ಷವಾದ ಬಿಜೆಪಿ ಮೇಲೆ ಹಿಂದುತ್ವದ ಬಗ್ಗೆ ವಾಗ್ದಾಳಿ ನಡೆಸಿದ್ದರು, ಇದೀಗ ಮತ್ತೇ ಉಭಯ ಪಕ್ಷಗಳ ನಡುವೆ ವಾಗ್ದಾಳಿ ಮುಂದುವರೆದಿದ್ದು, ಇದೀಗ ಶಿವಸೇನೆಯ ಸಂಸದ ಸಂಜಯ್ ರಾವತ್‌, ಬಿಜೆಪಿ ಸಾವರ್ಕರ್‌ಗೆ ಇನ್ನೂ ಯಾಕೆ ಭಾರತ ರತ್ನ ನೀಡಿಲ್ಲ? ಎಂದು ಪ್ರಶ್ನಿಸಿದ್ದಾರೆ.

ಸಾವರ್ಕರ್ ಅವರನ್ನು ಅವಮಾನಿಸಿದ ಕಾಂಗ್ರೆಸ್ ಜೊತೆ ಶಿವಸೇನೆ ಮೈತ್ರಿ ಮಾಡಿಕೊಂಡಿದೆ ಎಂದು ಬಿಜೆಪಿ ನಾಯಕರು ಹಿಂದುತ್ವ ಕುರಿತು ಶಿವಸೇನೆಯನ್ನು ತರಾಟೆಗೆ ಪಡೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿದ ಶಿವಸೇನೆ, ಬಿಜೆಪಿ ನೇತೃತ್ವದ ಕೇಂದ್ರ ಸರ್ಕಾರವು ದೇಶದ ಅತ್ಯುನ್ನತ ನಾಗರಿಕ ಗೌರವವಾದ ಭಾರತ ರತ್ನವನ್ನು ಸಾವರ್ಕರ್‌ಗೆ ಏಕೆ ನೀಡುತ್ತಿಲ್ಲ ಕೇಳಿದೆ.

ಇದನ್ನೂ ಓದಿ: ಅರ್ನಾಬ್ ಗೋಸ್ವಾಮಿ ಕೈಮುಗಿದು ಕ್ಷಮೆಯಾಚಿಸಲಿ: ಶಿವಸೇನೆ ಮುಖಂಡನ ಆಗ್ರಹ

“ಶಿವಸೇನೆಯ ದಸರಾ ರ್‍ಯಾಲಿಯಲ್ಲಿ ಮುಖ್ಯಮಂತ್ರಿ ಉದ್ಧವ್ ಠಾಕ್ರೆ ಸಾವರ್ಕರ್ ಹಿಂದುತ್ವದ ಬಗ್ಗೆ ಪಾಠ ಮಾಡಿದರು. ರ್‍ಯಾಲಿಯಲ್ಲಿ ಸಾವರ್ಕರ್‌ ಬಗ್ಗೆ ಒಂದೇ ಒಂದು ಪ್ರಶಂಸೆ ಯಾಕೆ ಆಡಲಿಲ್ಲ ಎಂಬುದು ಪ್ರಶ್ನೆ. ಬಹುಶಃ, ಸಾವರ್ಕರ್ ವಿರುದ್ಧ ಪದೇ ಪದೇ ಅವಹೇಳನಕಾರಿ ಹೇಳಿಕೆಗಳನ್ನು ಬಳಸುತ್ತಿರುವ ತನ್ನ ಹೊಸ ಸ್ನೇಹಿತರ ಬಗ್ಗೆ ಅವರು ಹೆದರುತ್ತಿದ್ದಾರೆ” ಎಂದು ಬಿಜೆಪಿ ವಕ್ತಾರ ರಾಮ್ ಕದಮ್ ಹೇಳಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಶಿವಸೇನೆ ಮುಖ್ಯ ವಕ್ತಾರ ಸಂಜಯ್ ರಾವತ್, ”ಸಾವರ್ಕರ್ ಬಗ್ಗೆ ಪಕ್ಷದ ನಿಲುವಿನಲ್ಲಿ ಯಾವುದೇ ಬದಲಾವಣೆ ಇಲ್ಲ. ಅವರನ್ನು ಅವಮಾನಿಸಲು ಅನುಚಿತವಾದ ಕಾಮೆಂಟ್ ಮಾಡಿದಾಗಲೆಲ್ಲಾ ನಾವು ಸಾವರ್ಕರ್‌ ಪರವಾಗಿ ನಿಂತಿದ್ದೇವೆ. ನಾವು ಯಾವಾಗಲೂ ಅವರೊಂದಿಗೆ ಭಾವನಾತ್ಮಕ ಸಂಪರ್ಕವನ್ನು ಹೊಂದಿದ್ದೇವೆ. ನಮ್ಮನ್ನು ಟೀಕಿಸುವವರು ಈಗ ಆರು ವರ್ಷದಿಂದ ಅಧಿಕಾರದಲ್ಲಿದ್ದಾರೆ, ಅವರಿಗೆ ಭಾರತ್ ರತ್ನವನ್ನು ಯಾಕೆ ನೀಡಲಿಲ್ಲ ಎಂದು ಉತ್ತರಿಸಬೇಕು” ಎಂದು ಹೇಳಿದರು.

ಮುಖ್ಯಮಂತ್ರಿಯಾದ ನಂತರ ನೀಡಿದ ಮೊಲದ ದಸರಾ ರ್‍ಯಾಲಿಯಲ್ಲಿ ಮಾತನಾಡಿದ ಉದ್ದವ್ ಠಾಕ್ರೆ, ತನ್ನ ತಂದೆ ಬಾಲಾಸಾಹೇಬ್ ಠಾಕ್ರೆ ಅವರ ಹಿಂದುತ್ವವೆಂದರೆ ಘಂಟೆಗಳು ಮತ್ತು ಪಾತ್ರೆಗಳನ್ನು ಬಡಿಯುವುದಲ್ಲ ಎಂದು ಅವರು ಬಿಜೆಪಿಯನ್ನು ಟೀಕಿಸಿದ್ದರು.

ಇದನ್ನೂ ಓದಿ: ಉಚಿತ ಕೊರೊನಾ ಲಸಿಕೆ ವಿವಾದ: ಬಿಹಾರೇತರ ರಾಜ್ಯದವರು ಬಾಂಗ್ಲಾದೇಶದವರೇ- ಶಿವಸೇನೆ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...